24 September 2012

ಇಸ್ಲಾಮಿನಡಿ ಭಾರತ......














ಜಗತ್ತಿನ ಇತಿಹಾಸದಲ್ಲಿ ಬಹುಸಂಖ್ಯಾತ ಪರಧರ್ಮೀಯರನ್ನ ಇಸ್ಲಾಂ ಅನುಯಾಯಿಗಳು ಧೀರ್ಘಾವಧಿಯವರೆಗೆ ನಿರಂಕುಶವಾಗಿ ಆಳಿದ್ದು ಬಹುಷಃ ಸ್ಪೇನ್ ಹೊರತು ಪಡಿಸಿದರೆ ಅದು ಕೇವಲ ಭಾರತದಲ್ಲಿಯೆ. ಕ್ರೈಸ್ತ ಮತಾವಲಂಬಿಗಳ ಸ್ಪೇನ್ ಕ್ರಿಸ್ತಶಕ 711ರಿಂದ ಸರಿಸುಮಾರು ಎಂಟು ಶತಮಾನಗಳ ಕಾಲ ಇಸ್ಲಾಂ ಜಗತ್ತಿನ ಭಾಗವಾಗಿತ್ತು ಅನ್ನುವುದು ಇಂದಿಗೂ ಮುಸ್ಲಿಂ ಜಗತ್ತಿಗೆ ಕಡುಹೆಮ್ಮೆಯ ವಿಚಾರ. ಆದರೆ ಕ್ರಿಸ್ತಶಕ 1492ರಲ್ಲಿ ಈ ನಿರಂಕುಶತೆಗೆ ಲಗಾಮು ಬಿದ್ದು ಸ್ಪೇನ್ ಮರಳಿ ಕ್ಯಾಥೊಲಿಕ್ ಪಂಥಾನುಯಾಯಿಗಳ ತೆಕ್ಕೆಗೆ ಜಾರಿದ್ದು ಹಾಗು ಅವರು ಇಸ್ಲಾಮಿ ಕಾಲಮಾನದ ಕರುಹು ಉಳಿಯದಂತೆ "ಇಸ್ಲಾಮಿ ಸ್ಪೇನ್"ನ ಎಲ್ಲಾ ಪಳೆಯುಳಿಕೆಗಳನ್ನ ನಿರ್ದಾಕ್ಷಿಣ್ಯವಾಗಿ ಕ್ಯಾಥೊಲಿಕ್ ಧರ್ಮಾಂಧತೆಯಿಂದಲೆ ಬುಡಸಹಿತ ಕಿತ್ತು ಹಾಕಿದ್ದನ್ನ ಮಾತ್ರ ಜಾಣತನದಿಂದ ನೆನಪಿಸಿಕೊಳ್ಳಲು ಮರೆಯುತ್ತಾರೆ! ಇದೇನೆ ಇದ್ದರೂ ಈ ಹೊತ್ತಲ್ಲಿ ಹಿಂದಿರುಗಿ ನೋಡಿದಾಗ ಏಳು ಶತಮಾನಗಳ ಕಾಲ ಭಾರತವನ್ನು ಆಳಿ ಅನಂತರ ಇಲ್ಲಿಯೆ ಬೀಡು ಬಿಟ್ಟ ಇಸ್ಲಾಮಿನಿಂದ ಭಾರತ ಪಡೆದುಕೊಂಡದ್ದೇನು? ಅದರ ಕೊನೆಯ ನಿಶಾನಿಯನ್ನೂ ಇನ್ನಿಲ್ಲವಾಗಿಸಿ ಸ್ಪೇನ್ ಕಳೆದು ಕೊಂಡದ್ದೇನು? ಅನ್ನುವುದನ್ನ ಸುಲಭವಾಗಿ ಅಂದಾಜಿಸಬಹುದು.


 ಕುತ್ಬುದ್ದೀನ್ ಐಬಕನಿಂದ ಮೊದಲುಗೊಂಡು ಗುಲಾಮಿ ಸಂತತಿ- ಖಿಲ್ಜಿ ಸಂತತಿ- ತುಘಲಕ್ ಸಂತತಿ- ಸಯ್ಯದ್ ಸಂತತಿ- ಲೋಧಿ ಸಂತತಿ ಹಾಗೂ ಕಟ್ಟಕಡೆಯಲ್ಲಿ ಮೊಘಲರ ಸಂತತಿಯ ಕೊನೆಯ ಬಾದಶಹ ಎರಡನೆ ಬಹದ್ದೂರ್'ಷಾನವರೆಗೂ ಇಸ್ಲಾಂ ಭಾರತೀಯ ನೆಲದಲ್ಲಿ ನಿರಂಕುಶ ಅಟ್ಟಹಾಸವನ್ನ ಮೆರೆದದ್ದು ಅಳಿಸಿ ಹಾಕಲಾಗದ ಐತಿಹಾಸಿಕ ಸತ್ಯ. ಈ ಏಳುನೂರು ವರ್ಷಗಳಲ್ಲಿ ಭಾರತೀಯ ಉಪಖಂಡದ ಬಹುಭಾಗ ದೆಹಲಿ ಗದ್ದುಗೆಯ ನೆರಳಿನಲ್ಲಿತ್ತು. ಹಿಂದೂ ಕೃತಿ- ಸಂಸ್ಕೃತಿಗಳು ಇಸ್ಲಾಮಿ ಕ್ರಿಯಾಶೀಲತೆಯಿಂದ ಅನೇಕ ಉತ್ತಮ ಅಂಶಗಳನ್ನು ಕಡಪಡೆದುಕೊಂಡವು. ವಿಶೇಷವಾಗಿ ಭಾಷೆಯ ದೃಷ್ಟಿಯಿಂದ ಗಮನಾರ್ಹ ಹೊಸತನಗಳು ಗೋಚರಿಸಿದವು. ಸಂಗೀತದಲ್ಲಿ ಅರಬ್ ಮೂಲದ ವಿದೇಶಿ ತಂತಿವಾದ್ಯಗಳು ಇಲ್ಲಿನ ಸಾಂಪ್ರದಾಯಿಕ ವಾದ್ಯಗಳ ಜೊತೆಯಾಗಿ ಇಲ್ಲಿನ ಮೂಲ ಸಂಗೀತದ ಮೆರುಗು ಹೆಚ್ಚಿತು. ಸಾಹಿತ್ಯವೂ ಸಮೃದ್ಧವಾಗಿ ವಿಕಸಿಸಿತು. ಖವ್ವಾಲಿ- ಗಜಲ್ ಅಮದಾದರೆ ಕಥಕ್- ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅವಿಷ್ಕರಣೆಯಾಗಿ ಭಾರತೀಯ ಸಾಂಸ್ಕೃತಿಕ ಜಗತ್ತು ಹೊಸತನವನ್ನ ಹೊತ್ತುಕೊಳ್ಳುವಂತಾಯಿತು. ಸಂಗೀತ- ಸಾಹಿತ್ಯ ಮಹಮದ್ ಪೈಗಂಬರನ ಉಕ್ತ ದೈವವಾಣಿಯ ಪ್ರಕಾರ ಇಸ್ಲಾಮಿ ಅನುಯಾಯಿಗಳಿಗೆ ಹರಾಮ್ ಎಂದು ಖುರಾನ್ ಹೇಳುವುದರಿಂದ ಅರೆಬ್ಬಿಯಾದಲ್ಲಿ ಅದರ ವಿಕಸನದ ಸ್ಥಿತಿ ಅಕ್ಷರಶಃ ಕೋಮಾಸ್ಥಿತಿಯಲ್ಲಿತ್ತು.


ವಾಸ್ತವವಾಗಿ ಮಹಮದನಿಂದ ಬಹಳ ಹಿಂದೆ ಹುಟ್ಟಿದ್ದ ಪ್ರವಾದಿ ದಾವೂದನಿಗೆ ಅಲ್ಲಾ ದಯಪಾಲಿಸಿದ್ದು ಉದಾರವಾಗಿ ಉತ್ತಮ ಕಂಠ ಮಾಧುರ್ಯವನ್ನು. ಈ ಅಲ್ಲಾನ ಕಾರುಣ್ಯ ತನ್ನ ಮಹಿಮೆಗಳನ್ನು ಸ್ತುತಿಸಿ ಹಾಡಲ್ಲಿಕ್ಕೆಯೆ ಅನ್ನೋದು ಇಸ್ಲಾಂ ಮತಪಂಡಿತರಿಗೆ ಅರ್ಥವಾಗಲಾರದ್ದೇನಲ್ಲ. ಆದರೂ ಖುರಾನಿನ ಮಹಮದ್ ಕಾಲುವೆಯಾಗಿ ಹರಿದ ಅಲ್ಲಾನ ವಾಣಿಗಳನ್ನ ಬೇಕಾಬಿಟ್ಟಿ ವಿಶ್ಲೇಷಿಸಿ ಗೀತ- ಸಂಗೀತವನ್ನು ಇಸ್ಲಾಂ ನಿಷೇಧಿಸಿದೆ ಎಂದೇ ಬಲವಾಗಿ ಪ್ರತಿಪಾದಿಸಿ ಆಧುನಿಕ ಪ್ರಪಂಚದಲ್ಲೂ ತಮ್ಮ ಹಾಸ್ಯಾಸ್ಪದ ಮತಾಂಧತೆ ಮೆರೆಯುತ್ತಾರೆ. ಮರುಭೂಮಿಯ ಇಸ್ಲಾಮಿಕ್ ಸಂಸ್ಕೃತಿಯಲ್ಲಿ ಹರಾಮ್ ಎಂದು ಸಾರಲ್ಪಟ್ಟಿದ್ದ ಗೀತ- ಸಂಗೀತ- ಮೂರ್ತ ಶಿಲ್ಪ ಕಲೆಗಳಿಗೆ ಭಾರತದ ನೆಲದಲ್ಲಿ ಇಸ್ಲಾಮಿ ಕ್ರಿಯಾಶೀಲರಿಗೆ ಹೊಸಗಾಳಿ ಸಿಕ್ಕಂತಾಗಿ ತಮ್ಮ ಪ್ರತಿಭೆಯನ್ನೆಲ್ಲ ಅವರು ಮುಕ್ತವಾಗಿ ಇಲ್ಲಿ ಪ್ರದರ್ಶಿಸಿ ತಮ್ಮ ಪ್ರತಿಭೆಯ ಸಾಮರ್ಥ್ಯವನ್ನ ಇನ್ನೂ ಹೆಚ್ಚು ವಿಸ್ತರಿಸಿಕೊಳ್ಳಲು ಅವಕಾಶವಾಯಿತು. ಇನ್ನು ವಾಸ್ತುಶಿಲ್ಪದ ಕಥೆಯೂ ಹೆಚ್ಚು ಕಡಿಮೆ ಅಂತದ್ದೆ. ಮರಳುಗಾಡಿನ ನೆಲದಲ್ಲಿ ಧಾರ್ಮಿಕ ಹಾಗೂ ಪ್ರಾಕೃತಿಕ ನಿರ್ಬಂಧಕ್ಕೆ ಒಳಗಾಗಿದ್ದ ಅವರ ಸೌಂದರ್ಯಪ್ರಜ್ಞೆಗೆ ಭಾರತ ಒಂದು ತೆರೆದ ವೇದಿಕೆಯಂತಾಗಿ ತಡೆಯಿಲ್ಲದೆ ಅವರ ಪ್ರತಿಭೆ ಇಲ್ಲಿ ಪ್ರಕಾಶಿಸತೊಡಗಿತು. ಸ್ಪೇನ್'ನಲ್ಲಿನ ಇಸ್ಲಾಮಿ ವಾಸ್ತುಶಿಲ್ಪವೂ ಇದರ ಮುಂದೆ ಮಂಕು ಅನ್ನುವುದನ್ನು ನಾವು ಮರೆಯುವಂತಿಲ್ಲ. ವಾಸ್ತುಶಿಲ್ಪ ಶಾಸ್ತ್ರದಲ್ಲಿ ಹೊಸ ಇಂಡೋ-ಇಸ್ಲಾಮಿಕ್ ಶೈಲಿಯ ಕಟ್ಟಡಗಳು ಭಾರತೀಯ ಉಪಖಂಡದ ಉದ್ದಗಲಕ್ಕೂ ತಲೆಯೆತ್ತಿ ನಿಲ್ಲುವಂತಾಯಿತು. ವಿಸ್ಮಯಕಾರಿ ವಾಸ್ತು ಶಿಲ್ಪದ ಬಿಜಾಪುರದ ಗೋಲಗುಮ್ಮಟ, ಇಬ್ರಾಹಿಂ ರೋಜಾ ಹಾಗೂ ಬಾರಾ ಕಮಾಲ್, ಗೋಲ್ಕೊಂಡಾದ ಚಾರ್'ಮಿನಾರ್. ಲಾಹೋರಿನ ಲಾಲ್ ಮಸ್ಜಿದ್, ಗುಲಬರ್ಗಾದ ಬುಲಂದ್ ದರ್ವಾಜಾ, ದೆಹಲಿಯ ಕೆಂಪು ಕೋಟೆ, ಶ್ರೀನಗರದ ಶಾಲಿಮಾರ್ ಹೂದೋಟ ಇವೆಲ್ಲ ಇಸ್ಲಾಮಿ ಕ್ರಿಯಾಶೀಲರಿಂದ ಭಾರತೀಯತೆಗೆ ಸಂದ ವಿಶೇಷ ಕೊಡುಗೆಗಳು. ಹೀಗಾಗಿ ಕೇವಲ ಸಾಂಸ್ಕೃತಿಕ ನೆಲೆಗಟ್ಟಿನಿಂದ ಅವಲೋಕಿಸಿದ್ದೆ ಹೌದಾದರೆ ಇದಲ್ಲದರಿಂದ ಭಾರತ ಬಹಳಷ್ಟು ಪಡೆದುಕೊಂಡಿತೆ ವಿನಃ ಕಳಕೊಂಡದ್ದು ನಗಣ್ಯ.


ಆದರೆ ಈ ಮಾತು ಕೇವಲ ಕ್ರಿಯಾಶೀಲ ಕಲೆಗಳಿಗೆ ಸೀಮಿತ ಅನ್ನೋದು ಗಮನಾರ್ಹ ಅಂಶ. ಜೊತೆಗೆ ಅನೇಕ ಮೂಲ ಹಿಂದೂ ದೇಗುಲಗಳನ್ನ ನೆಲಸಮಗೊಳಿಸಿ ಅಲ್ಲಿನ ನೆಲೆಗಟ್ಟುಗಳನ್ನೆ ಉಳಿಸಿಕೊಂಡು ಅವವೇ ಕಂಭ ಭೋದಿಗೆಗಳನ್ನ ಬಳಸಿ ಹೊಸ ಇಸ್ಲಾಮಿ ಆರಾಧನಾ ಸ್ಥಳಗಳನ್ನ ಕಟ್ಟಿ ಕೊಳ್ಳಲಾಯಿತು. ಸದರಿ ದೇವಸ್ಥಾನಗಳ ಆರಾಧನಾ ಮೂರ್ತಿಗಳನ್ನ ಪ್ರಜ್ಞಾಪೂರ್ವಕವಾಗಿ ಪರಿವರ್ತಿತ ಮಸೀದಿಯ ಮೆಟ್ಟಿಲುಗಳಾಗಿ ನೆಲಕ್ಕೆ ಹಾಸಲಾಯಿತು. "ಗ್ಯಾನವ್ಯಾಪಿ ಮಸೀದಿ"ಯಾಗಿ ಪರಿವರ್ತಿತವಾದ ಕಾಶಿಯ ವಿಶ್ವನಾಥ ದೇಗುಲ ( ಚಿತ್ರಗಳಲ್ಲಿ ಗಮನಿಸಿ ) ಹಾಗೂ "ತಾಜ್ ಮಹಲಾ"ಗಿ ಪರಿವರ್ತಿತವಾದ ಆಗ್ರಾದ ತೇಜೋ ಮಹಲ್ ಇದಕ್ಕೆ ಎರಡು ಅತ್ಯುತ್ತಮ ಉದಾಹಾರಣೆಗಳು ಅದೆ ಕಾಲಕ್ಕೆ ಒತ್ತಾಯದ ಸರಣಿ ಮತಾಂತರಗಳು, ಅದಕ್ಕೆ ಒಪ್ಪದ ಮೂಲಧರ್ಮೀಯರ ಮೇಲೆ ನಿರಂತರವಾಗಿ ಎಸಗಲಾದ ಜಜಿಯಾದಂತಹ ಖುರಾನ್ ಸಮ್ಮತಿತ ದೌರ್ಜನ್ಯ ಗಳು ನಡೆದೇ ನಡೆದವು. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಚೀಲರು ಎಂಬ ಚಿತ್ರದುರ್ಗ ಸೀಮೆಯ ಬೇಡರ ಸಾಮೂಹಿಕ ಮತಾಂತರ ಹಾಗೂ ದಕ್ಷಿಣಕನ್ನಡ ಜೆಲ್ಲೆಯಂಚಿಂದ ಹಿಡಿದು ಮಲಬಾರಿನವರೆಗೂ ನಡೆದ ಬೆಸ್ತಕುಲದ ಮರಕ್ಕಲರ ಬಲವಂತದ ಮತಾಂತರಗಳು ಅತ್ಯಂತ ಹೇಯವಾಗಿದ್ದವು. ಸನಾತನ ಧಾರ್ಮಿಕ ಶ್ರದ್ಧಾಕೇಂದ್ರಗಳ ಧ್ವಂಸ ಹಾಗು ಮಸೀದಿಗಳಾಗಿ ಅವುಗಳ ಪರಿವರ್ತನೆ (ಉದಾಹಾರಣೆಗೆ ಕಾಶಿಯ ವಿಶ್ವನಾಥ ಮಂದಿರ ಗ್ಯಾನವ್ಯಾಪಿ ಮಸೀದಿಯಾದದ್ದು- ಅವಧದ ರಾಮಲಲ್ಲಾನ ದೇವಾಲಯ ಬಾಬರಿ ಮಸೀದಿಯಾದದ್ದು- ರಾವಳಪಿಂಡಿಯ ಕಟಾಸರಾಜ ದೇಗುಲದ ನಿರ್ಮೂಲನೆ- ಆಗ್ರಾದ ತೇಜೋಮಂದಿರದ ತಾಜ್'ಮಹಲ್ ಪರಿವರ್ತನೆ- ಮಥುರೆಯ ಕೃಷ್ಣ ದೇಗುಲ ಇಸ್ಲಾಮಿ ಶ್ರದ್ಧಾಕೇಂದ್ರವಾಗಿದ್ದನ್ನು ಗಮನಿಸಬಹುದು) ಕಾಶಿ, ಮಥುರಾ, ಅಯೋಧ್ಯ, ಸೋಮನಾಥ, ಢಾಕಾ, ಗೊಲ್ಕಂಡಾ, ಕೇರಳದ ಕೊಚ್ಚಿನ್ ಪ್ರಾಂತ್ಯದ ಒಳನಾಡುಗಳಲ್ಲಿ, ಕಾಶ್ಮೀರದ ಸರ್ವಜ್ಞಪೀಠದ (ಸದ್ಯ ಪಾಕ್ ಆಕ್ರಮಿತ ಕಾಶ್ಮೀರದ ಭೂಭಾಗದಲ್ಲಿದೆ) ದೇವಾಲಯಗಳ ಮೇಲಿನ ಉದ್ದೇಶಪೂರ್ವಕ ಧಾಳಿ ಇವೆಲ್ಲ ಮತಾಂಧತೆಯ ಅತಿರೇಕಗಳಾಗಿದ್ದವು ಎನ್ನುವುದನ್ನು ಮರೆಯುವ ಹಾಗಿಲ್ಲ. ಇಸ್ಲಾಂ ಶ್ರೇಷ್ಠ ಅನ್ನುವ ಅದನ್ನ ಅವಲಂಬಿಸಿದ ಅನುಯಾಯಿಗಳ ನಂಬಿಕೆಯನ್ನ ಒಪ್ಪೋಣ ಹಾಗೂ ಗೌರವಿಸೋಣ. ಆದರೆ ಇನ್ನಿತರ ಧರ್ಮಗಳು ಹೀನ ಅನ್ನೋದು ಮಾತ್ರ ಮತಾಂಧತೆಯಲ್ಲದೆ ಮತ್ತಿನ್ನೇನು? ನೈಸರ್ಗಿಗ ನ್ಯಾಯ ಇಸ್ಲಾಮಿನ ಅನುಯಾಯಿಗಳಿಗೊಂದು ಹಾಗೂ ಇನ್ನಿತರಿಗೊಂದು ಅನ್ನೋದು ಕುರಾನಿನ ಪ್ರಕಾರವೇ ಆದರೂ ಅದು ಅತಾರ್ಕಿಕ.


ಇದೆ ಗೊಂದಲ ಒಬ್ಬ ಸಾಮಾನ್ಯ ಹಿಂದುವಿನ ಮನಸಿನಲ್ಲಿ ಮುಸ್ಲಿಂ ಸುದೀರ್ಘ ಆಳ್ವಿಕೆಯ ಕಾಲದ ಉದ್ದಕ್ಕೂ ಮುಳ್ಳಾಡಿಸುತ್ತಲೆ ಇತ್ತು. ಕ್ರಿಸ್ತಶಕ 1498ರಲ್ಲಿ ವಾಸ್ಕೋ-ಡಾ-ಗಾಮನ ನೇತೃತ್ವದಲ್ಲಿ ಭಾರತಕ್ಕೆ ಅಡಿಯಿಟ್ಟ ಯುರೋಪಿಯನ್ ವ್ಯಾಪಾರಿಗಳು ಮುಂದೆ ಇಡಿ ದೇಶವನ್ನೆ ರಾಜಕೀಯವಾಗಿ ಪ್ರಭಾವಿಸುವ ಮಟ್ಟಿಗೆ ಬೆಳೆದು, ಕಡೆಗೊಮ್ಮೆ ಕ್ರಿಸ್ತಶಕ 1622ರಲ್ಲಿ ಭಾರತ ಉಪಖಂಡ ಹೊಕ್ಕ ವಣಿಕರ ಸೋಗಿನ ಬ್ರಿಟಿಶ್ ಅತಿಕ್ರಮಣಕಾರರು ಕ್ರಮೇಣ ಬಲಿತು ಕ್ರಿಸ್ತಶಕ 1857 ರಲ್ಲಿ ಮೊಘಲರ ಕೊನೆಯ ನಾಮ್-ಕೆ-ವಾಸ್ತೆ ಬಾದಶಹನನ್ನು ಮಾಂಡಲೆಯ ಸೆರೆಮನೆಗೆ ಗಡಿಪಾರು ಮಾಡಿ ದೇಶದ ಆಡಳಿತದ ಚುಕ್ಕಾಣಿ ಹಿಡಿದುಕೊಳ್ಳುವ ಮೂಲಕ ಭಾರತೀಯ ಇಸ್ಲಾಮಿ ಸಾಮ್ರಾಜ್ಯಶಾಹಿಯ ಸೂರ್ಯ ಕೊನೆಗೂ ಮುಳುಗಿದ. ಆದರೆ ಕತ್ತಲಾದ ನಂತರವೂ ಅಲ್ಲಲ್ಲಿ ತಾರೆಗಳು ಹೊಳೆಯುವಂತೆ ಮೊಗಲ್ ಸಾಮಂತ ಸರದಾರರು ದೇಶದ ಅಲ್ಲಲ್ಲಿ ಒಂದೊ ಪ್ರಬಲ ಬ್ರಿಟಿಷರ ಸ್ನೇಹ ಸಾಧಿಸಿಯೋ ಇಲ್ಲವೆ ವೈರ ಕಟ್ಟಿಕೊಂಡೊ ಸ್ವತಂತ್ರವಾಗಿ, ತಮ್ಮ ಆಳ್ವಿಕೆಯನ್ನ ದೇಶ ರಾಜಕೀಯವಾಗಿ ಕ್ರಿಸ್ತಶಕ 1947ರಲ್ಲಿ ಬ್ರಿಟೀಷರಿಂದ ಸ್ವಾತಂತ್ರ ಪಡೆದ ಎರಡುವರ್ಷಗಳ ನಂತರದವರೆಗೂ ಉಳಿಸಿಕೊಂಡೆ ಬಂದರು. ಆಗಲೂ ಅವರಲ್ಲಿ ಕೆಲವರು ತಮ್ಮ ಧರ್ಮನಿಷ್ಠೆಗೆ ಅನುಸಾರವಾಗಿ ಸನಾತನ ಧರ್ಮಾನುಯಾಯಿಗಳ ಮೇಲೆ ಜಿದ್ದು ಸಾಧಿಸುವಂತೆ ನಡೆದುಕೊಂಡದ್ದೂ ಇತ್ತು. ಉದಾಹರಣೆಗೆ ಅಲ್ಪಾವಧಿಗೆ ಮೈಸೂರನ್ನು ಆಳಿದ ಟಿಪ್ಪೂ ಸುಲ್ತಾನ ಬಹಿರಂಗವಾಗಿ ಹಿಂದೂ ಶ್ರದ್ಧಾಕೇಂದ್ರವಾಗಿದ್ದ ಶೃಂಗೇರಿ ಶಾರದಾ ಪೀಠಕ್ಕೆ ಉದಾರ ದೇಣಿಗೆ ನೀಡುತ್ತಿದ್ದ ಅನ್ನುವುದು ಹೌದಾದರೂ (ಹಿಂದೂಗಳೇ ಆಗಿದ್ದ ಮರಾಠರು ಸಂಪತ್ತು ದೋಚುವ ದುರಾಸೆಯಿಂದ ಶೃಂಗೇರಿಗೆ ಧಾಳಿಯಿಟ್ಟು ಮೂಲ ಶಾರದೆಮೂರ್ತಿಯನ್ನೆ ದ್ವಂಸ ಮಾಡಿ ಬರ್ಭರವಾಗಿ ಲೂಟಿ ಎಸಗಿದ್ದ ದಿನಗಳವು), ಅದೆ ಟಿಪ್ಪು ಮಲಬಾರ್ ಹಾಗೂ ಕೊಡಗಿನಲ್ಲಿ ಒತ್ತಾಯದಿಂದ ಕತ್ತಿ ಮೊನೆಯಂಚಲ್ಲಿ ಎಸಗಿದ್ದ ಮತಾಂತರಗಳನ್ನ ಮರೆಯುವುದು ಹೇಗೆ?


ಶೃಂಗೇರಿಗೆ ಹಾಗೂ ನಂಜನಗೂಡಿಗೆ ಅವನ ದಾನ ತನ್ನ ಬಹುಸಂಖ್ಯಾತ ಹಿಂದೂ ಪ್ರಜೆಗಳನ್ನ ರಾಜಕೀಯವಾಗಿ ಓಲೈಸಲು ಅವರ ಶ್ರದ್ಧಾಕೇಂದ್ರಗಳನ್ನ ಆತ್ಮೀಯವಾಗಿಟ್ಟುಕೊಳ್ಳುವ ಸರಳ- ಶುದ್ಧ ರಾಜಕೀಯ ನಡೆಯಾಗಿತ್ತು ಅನ್ನುವುದು ಸ್ಪಷ್ಟ. ಹಾಗೆಯೆ ಮತಾಂತರಗಳೂ ಕಟ್ಟರ್ ಇಸ್ಲಾಮಿಯಾಗಿ ಅವನ ಧರ್ಮಶ್ರದ್ಧೆ ವಿಧಿಸಿದ್ದ ಕರ್ತವ್ಯವೂ ಆಗಿತ್ತು. ನಮ್ಮ ಇಂದಿನ ಸಾಮಾಜಿಕ ಸಂಹಿತೆ ಹಾಗೂ ಕಾನೂನಿನ ಹಿನ್ನೆಲೆಯಲ್ಲಿ ಇತಿಹಾಸದ ಘಟನಾವಳಿಗಳನ್ನ ಒರೆಗೆ ಹಚ್ಚುವುದರಿಂದ ಆಗುವ ಎಡವಟ್ಟುಗಳು ಇವು ಅನ್ನೋದು ಸ್ಪಷ್ಟ. ಈಗಿನ ಜಾತ್ಯಾತೀತತೆಯ ಕಲ್ಪನೆಯೂ ಇದ್ದಿರದಿದ್ದ ಅಂದಿನ ಸಾಮಾಜಿಕ ಪರಿಸ್ಥಿತಿಗೆ ಬಹುಷಃ ಅದು ತಪ್ಪೆನಿಸುತ್ತಿರಲಿಲ್ಲವೇನೊ. ಆದರೆ ಇಂದಿನ ನಾಗರೀಕ ಕಾನೂನಿನ ಅಡಿಯಲ್ಲಿ ಅದು ಪ್ರಮಾದವಾಗಿ ಗೋಚರಿಸುತ್ತದೆ.


 ( ನಾಳೆಗೆ... )

No comments: