09 November 2008

ನನಗೆ ಹಿಡಿಸಿದ ಕೆಲವು ನಿಜಗಳು......

ನಮ್ಮ ದೇಶದ ರೈತರ ಶಕ್ತಿಯನ್ನು ವ್ರತ್ತಿಪರ ನಿರ್ವಹಣೆಯೊಂದಿಗೆ ಕಲೆಹಾಕಿದರೆ ಏನಾಗಬಹುದು? ಅವರು ಏನನ್ನು ತಾನೆ ಸಾಧಿಸುವುದು ಅಸಾಧ್ಯ? ಭಾರತ ಏನನ್ನು ತಾನೆ ಹೊಂದಲಾರದು? ಆದರೆ ಇದನ್ನೆಲ್ಲಾ ಆಗ ಮಾಡುವ ಮುನ್ನ ಬಾರ್ಬರ ವಾರ್ಡ್ ಹೇಳಿದ "ಪಾಲ್ಗೊಂಡ,ಪೂರ್ಣ ಸಹಕಾರದ ನಿಜವಾದ ಅಸ್ತಿಭಾರ ಹಾಕಬೇಕು".ಪಟ್ಟಣ ಮತ್ತು ಹಳ್ಳಿಗಳ ನಡುವೆ,ಕೈಗಾರಿಕೆ ಮತ್ತು ಕ್ರಷಿಗಳ ನಡುವೆ ಇರುವ ದಟ್ಟವಾದ ವ್ಯತ್ಯಾಸವನ್ನು ಸರಿಪಡಿಸಬೇಕಾದರೆ ರೈತರನ್ನು ಸಂಗಟಿಸುವುದು ಅತ್ಯಗತ್ಯವಾಗಿದೆ. ಅದನ್ನೇ ಗಮನದಲ್ಲಿಟ್ಟುಕೊಂಡು "ಆನಂದ್"ನಲ್ಲಿ ನಮ್ಮ ಜನರನ್ನು ತೀರ್ಮಾನ ತೆಗೆದುಕೊಳ್ಳುವ ಕಾರ್ಯವಿಧಾನಗಳಲ್ಲಿ ತೊಡಗಿಸಿಕೊಳ್ಳುವ ವ್ಯವಸ್ಧೆಗಳನ್ನು ರೂಪಿಸುವ ಅಗತ್ಯತೆ ನಮಗೆ ಕಂಡುಬಂತು.ಜನ ಸಾಮಾನ್ಯರ ಮಟ್ಟದಲ್ಲಿ ನಾವು ಪ್ರಜಾಪ್ರಭುತ್ವವನ್ನು ಹೊಂದಿಲ್ಲವಾದರೆ ದೆಲ್ಲಿಯಲ್ಲಿ ಅದು ಇದ್ದು ಏನು ಪ್ರಯೋಜನ ತಮ್ಮತಮ್ಮ ವಿವಾದಗಳನ್ನು ಬಗೆಹರಿಸಿಕೊಳ್ಳುವುದನ್ನು ನಮ್ಮ ಭಾವಿ ನಾಯಕರು ಕಲಿಯುವ ಶಾಲೆ ಹಳ್ಳಿಯ ಸಹಕಾರಿ ಸಂಘಗಳಲ್ಲದೆ ಮತ್ತೆಲ್ಲಿ? ನಿರ್ವಹಣೆ ಮತ್ತು ವ್ಯಾಪಾರ ವಹಿವಾಟು ಗಳ ಸ್ನಾತಕೋತ್ತರ ತರಬೇತಿಯನ್ನು ಚುನಾಯಿತ ಪ್ರತಿನಿಧಿಗಳಿಗೆ ನೀಡುವ ಕಾಲೇಜುಗಳು ತಾಲೂಕು ಅಥವಾ ಜಿಲ್ಲಾ ಯೂನಿಯನ್ಗಳೇ ಅಲ್ಲವೇ?

ದೆಹಲಿಯಲ್ಲಿ ಫ್ಲೈ ಓವರ್ ಗಳನ್ನು ಕಟ್ಟುವುದು ತಪ್ಪಲ್ಲ,ನಮ್ಮ ಹಳ್ಳಿಗಳಿಗೆ ಸಂಪರ್ಕ ರಸ್ತೆಗಳನ್ನು ನಾಡಿನುದ್ದಕ್ಕೂ ನಾವು ನಿರ್ಮಿಸದಿರುವುದು ತಪ್ಪು.ನಮ್ಮ ರಾಜಧಾನಿ ಬಣ್ಣ ಬಣ್ಣದ ಬೆಳಗು ಸೂಸುವ ಕಾರಂಜಿಗಳನ್ನು ಹೊಂದಿರುವುದು ಎಂದೂ ತಪ್ಪಲ್ಲ,ಏನೇ ಆದರೂ ದೆಹಲಿ ಸುಂದರವಾಗಿರಲೇ ಬೇಕು.ಆದರೂ ನಾವು ನಮ್ಮ ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ವ್ಯವಸ್ಧೆ ಮಾಡದಿರುವುದು ಅನ್ಯಾಯ.ಮುಂಬಯಿಯಲ್ಲಿ ಆಧುನಿಕ ಖಾಸಗಿ ಆಸ್ಪತ್ರೆ ಇರುವುದಾಗಲಿ ಇಲ್ಲವೇ ಏಮ್ಸ್ ದೆಹಲಿಯಲ್ಲಿರುವುದಾಗಲಿ ತಪ್ಪೇನೂ ಅಲ್ಲ,ಆದರೆ ಹಳ್ಳಿಯ ಬಡವನ ಆಗತಾನೆ ಜನಿಸಿದ ಮಗುವಿಗೆ ಸಂಭಾವ್ಯ ಕುರುಡು ತಪ್ಪಿಸಲು ಎರಡೇ ಎರಡು ಹನಿ ಔಷಧಿ ವ್ಯವಸ್ಥೆ ಮಾಡದಿರುವುದು ಪರಮ ಘಾತುಕತನ.ಇದ್ದಕ್ಕೆ ಕೇವಲ ಮುತುವರ್ಜಿ ಸಾಕೆ ಸಾಕು,ಹಣದ ಅಗತ್ಯ ತೀರಾ ಕಡಿಮೆ ಆದರೂ ಪಂಚತಾರಾ ಆಸ್ಪತ್ರೆಗಳನ್ನು ಕೋಟ್ಯಾಂತರ ಖರ್ಚು ಮಾಡಿ ಮಹಾನಗರಗಳಲ್ಲಿ ಕಟ್ಟಲು ಮುಂದಾಗುತ್ತೇವೆ.ಹೀಗೆ ಆಗುತ್ತಿರುವುದಾದರೂ ಏಕೆ? ಏಕೆಂದರೆ ನೀತಿ ನಿರೂಪಿಸುವ ಅಧಿಕಾರ ನಮ್ಮ ಗಣ್ಯರ ಕೈಯಲ್ಲಿ ಇದ್ದು ಮತ್ತು ಸ್ವಾಭಾವಿಕವಾಗಿಯೋ ಇಲ್ಲವೇ ಅವರ ಅರಿವಿಗೆ ಬಾರದೆ ನಿರೂಪಿಸುವ ಕಾನೂನುಗಳೆಲ್ಲ ಅವರಿಗೆ ಹಾಗು ನಮ್ಮಂತವರಿಗೆ ಅನುಕೂಲವಾಗುವಂತೆಯೇ ಇರುತ್ತದೆ.ಹೀಗಾಗಿ ನಾಚಿಕೆಯೇ ಇಲ್ಲದೆ ಎಲ್ಲರಿಗೂ ಸೇರಿದ ಸಂಪತ್ತುಗಳನ್ನು ನಾವಷ್ಟೇ ಅನುಭವಿಸುತ್ತಿದ್ದೇವೆ.ದುರಂತವೆಂದರೆ ಇದರ ಅರಿವೇ ನಮಗಿಲ್ಲ!
-ವರ್ಗೀಸ್ ಕುರಿಯನ್ (ಅಮೂಲ್ ಯಶಸ್ಸಿನ ರೂವಾರಿ)

No comments: