ನೆನಪುಗಳ ಭಾರಕ್ಕೆ ಹೃದಯ ಒಡೆದು ಹೋಗುತಿದೆ, 
ಒಲವ ಆಳದ ಬಾವಿಗೆ ಶರಣಾದ ಭಾವಗಳು ಆತ್ಮಹತ್ಯೆ ಮಾಡಿಕೊಳ್ಳುತಿವೆ/ 
ಈಗಂತೂ ಹೀಗೆಯೆ ಬದುಕುವ ಅಭ್ಯಾಸ ರೂಢಿಯಾಗಿದೆ, 
ನೀ ದೂರಾದರು...ಚೂರಾದರು ನಿನ್ನ ನೆನಪು ನನ್ನೋಳಗಿನ್ನೂ ಬಾಕಿಯಿದೆ// 
ಒಲವಿನ ಕಾಡಿಗೆಯಿಂದ....ನಾಳೆಗಳ ಕಾಗದದ ಮೇಲೆ, 
ನಿನ್ನ ಕೈಯಿಂದಲೇ ನನ್ನ ಹಣೆಬರಹ ಬರೆದು ಬಿಡು/ 
ಅಳಿಸಲಾಗದ ಶಾಯಿ ಎಲ್ಲಾದರೂ ಸಿಕ್ಕೀತು.....ಹುಡುಕಿ ತರುತೀನಿ ಸ್ವಲ್ಪ ಕಾಯಿ, 
ಅಕ್ಕರೆಯ ನಾಲ್ಕು ಸಾಲುಗಳನ್ನೂ ಸೇರಿಸಿದ ಪದಗಳಿಂದಲೆ..... 
ಅದೃಷ್ಟದ ಕವನ ಹರಿಸಿಬಿಡು//
31 August 2010
Subscribe to:
Post Comments (Atom)
 
 
No comments:
Post a Comment