ಕಣ್ಣೀರ ಮಳೆ ಹರಿಸುವುದರಿಂದ ಅದೃಷ್ಟ ಬದಲಾಗುವಂತಿದ್ದರೆ, 
ಈ ಪ್ರಪಂಚದಲ್ಲಿ ಸ್ಮಶಾನಗಳೇ ಇರುತ್ತಿರಲಿಲ್ಲ... 
ಅಲ್ಲಿ ಯಾವುದೆ ಕನಸುಗಳು ಸಮಾಧಿಗಿಳಿಯುತ್ತಿರಲಿಲ್ಲ/ 
ಈ ಎರಡು ಕೈಗಳಷ್ಟೇ ನನ್ನವು... 
ಅದರ ಮೇಲೆ ಮೂಡಿರುವ ರೇಖೆಗಳಲ್ಲಿ ದುರಾದೃಷ್ಟವ ಕೊರೆದಿರೊ ವಿಧಿ, 
ನೀನು...ನಿನ್ನ ನೆನಪು// 
ಕಳೆದು ಹೋದ ಒಲವನ್ನ ಮತ್ತೆ ಮತ್ತೆ ನೆನಪಿಸಿಕೊಳ್ಳುವಾಗ, 
ಒಂದೊ ಮದಿರೆಯಿಂದ ಗಂಟಲು ಹಸಿಯಾಗಿರಬೇಕು.... 
ಇಲ್ಲವೆ ನಿದಿರೆ ಮರೆತ ಕಣ್ಣುಗಳು ಪಸೆಯಾಗಿರಬೇಕು/ 
ಮೊದಲನೆಯದರಲ್ಲಿ ನನಗೆ ಆಸಕ್ತಿಯಿಲ್ಲ, 
ಎರಡನೆಯದರಿಂದ ನನಗೆ ಮುಕ್ತಿಯೆ ಇಲ್ಲ//
11 September 2010
Subscribe to:
Post Comments (Atom)
 
 
No comments:
Post a Comment