ಇತರರಿಗೆ ವಿಕ್ಷಿಪ್ತವೆನಿಸುವ ಅನೇಕ ಒಳ ಆಸೆಗಳು ನನ್ನೊಳಗಿವೆ.ಉದಾಹಾರಣೆಗೆ ಶತಾಬ್ದಿ ಎಕ್ಷ್ ಪ್ರೆಸ್ನಲ್ಲಿ ಭಿಕ್ಷೆ ಬೇಡಬೇಕು! ರಾಜಧಾನಿ ಎಕ್ಷ್ ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಎಲ್ಲ ಮಜಾ ಅನುಭವಿಸುತ್ತಲೆ ಪ್ರಯಾಣಿಸಬೇಕು! ಪಾಸ್ಪೋರ್ಟ್ ವೀಸಾದ ಹಂಗಿಲ್ಲದೆ ದರಿದ್ರ ಅಮೇರಿಕಾದಲ್ಲಿ ಅಂಡಲೆಯಬೇಕು ಹೀಗೆ...ಇದೇ ಸರಣಿಯ ಭಾಗವಾಗಿ ಬೀದಿ ಬದಿಯ ಫುಟ್ಪಾತ್ ದೇವರಲ್ಲಿ ಮೂರ್ಕಾಸಿನ ನಂಬಿಕೆ ಇಲ್ಲದಿದ್ದರೂ ಇವತ್ತು ಆದಷ್ಟು ದೇವಸ್ಥಾನ ಸುತ್ತಿ ಕೃಷ್ಣಯ್ಯ ಶೆಟ್ಟಿ ಅಂಡ್ ಕೋ ಪ್ರಾಯೋಜಿತ ಲಡ್ಡು ತಿನ್ನಬೇಕಂತ ಅನ್ಕೊಂಡಿದ್ದೇನೆ.ದೇವರಲ್ಲಿ ನಂಬಿಕೆ ಇಲ್ದಿದ್ರೇನು ಶೆಟ್ಟರ ಲಡ್ಡುವನ್ನ ಮನಪೂರ್ವಕ ನಂಬುತ್ತೇನೆ!ಚಿಕ್ಕಂದಿನಲ್ಲಿ ನಮ್ಮೂರ ಗಣಪತಿಕಟ್ಟೆಯ ತಂತ್ರಿಗಳ ಸಂಕಷ್ಟಿ ಪ್ರಸಾದಕ್ಕೂ ಹೀಗೆ ಶರಣಾಗ್ತಿದ್ದೆ.
shubhastya sheegram :)
ReplyDeletethanku thanku
ReplyDelete