ಅದಾಗಲೆ ಎರಡೆರಡು ಮದುವೆಯಾಗಿದ್ದು ಎರಡು ಗಂಡು ಹಾಗೂ ಒಂದು ಗಂಡು ಮಗುವನ್ನು ಹೊಂದಿದ್ದ ಖತೀಜ ಮಹಮದ್ ಮೇಲೆ ಅನುರಾಗ ಬೆಳೆಸಿಕೊಂಡು ವಿವಾಹ ಪ್ರಸ್ತಾಪವನ್ನು ಮುಂದಿಟ್ಟಳು.ಆದರೆ ಅವರಿಬ್ಬರ ನಡುವಿನ ಅಂತಸ್ತಿನ ವ್ಯತ್ಯಾಸದ ದೆಸೆಯಿಂದ ಅವಳನ್ನು ಮರುವಿವಾಹವಾಗಲು ಅಷ್ಟರಲ್ಲಿ ಯತ್ನಿಸಿ ಸೋತಿದ್ದ ಖುರೈಷಿ ಗಣ್ಯರಿಂದ ಈ ಮದುವೆಗೆ ಭಾರಿವಿರೋಧ ವ್ಯಕ್ತವಾಯಿತು.ಸಾಲದ್ದಕ್ಕೆ ಸುಂದರಿ ವಿಧವೆ ಖತೀಜಳ ಮುದಿತಂದೆ ಈ ಮದುವೆಗೆ ತನ್ನ ಅಸಮ್ಮತಿ ಪ್ರಕಟಿಸಿದ.ಇದರ ಹಿಂದಿನ ಹುನ್ನಾರ ಗ್ರಹಿಸಿದ ಖತೀಜ ಮದುವೆಗೆ ಮಹಮದ್'ನ ಸಮ್ಮತಿ ದೊರೆತ ನಂತರ ಉಪಾಯವಾಗಿ ಒಂದುದಿನ ಮನೆಗೆ ತನ್ನ ತಂದೆ ಹಾಗೂ ಬುಡಕಟ್ಟಿನ ಗಣ್ಯರನ್ನು ಊಟಕ್ಕಾಗಿ ಆಹ್ವಾನಿಸಿ ಅವರಿಗಾಗಿಯೆ ವಿಶೇಷವಾಗಿ ದನ ಕಡಿಸಿ ಅದರ ಮಾಂಸ ಹಾಗೂ ಮದ್ಯದ ಸಮಾರಾಧನೆಯನ್ನೆ ನಡೆಸಿ,ಅವರೆಲ್ಲ ಮತ್ತಿನಲ್ಲಿ ತೇಲುತ್ತಿದ್ದಾಗ ಕಾಟಾಚಾರಕ್ಕೆ ಅವರೆಲ್ಲರ ಸಮ್ಮತಿ ಪಡೆದು ಅಂದೆ ವಿವಾಹ ನೆರವೇರಿಸಿ ಕೊಂಡುಬಿಟ್ಟಳು! ನಶೆ ಇಳಿದು ಸ್ಮೃತಿ ತಿಳಿಯಾದ ಬಳಿಕ ನಡೆದ ಎಲ್ಲಾ ವಿದ್ಯಾಮಾನವನ್ನರಿತ ಖತೀಜಳ ತಂದೆ ಈ ವಿವಾಹವನ್ನ ವಿರೋಧಿಸಿ ಕಾಲುಕೆರೆದು ಜಗಳಕ್ಕೆ ನಿಂತ.ಆದರೆ ಬುಡಕಟ್ಟಿನ ಮುಖಂಡರ ಸಮಯಸ್ಪೂರ್ತಿಯಿಂದ ಜಗಳ ರಕ್ತಪಾತಕ್ಕೆ ತಿರುಗುವ ಮೊದಲೆ ಸಂಧಾನ-ಸಮಾಧಾನದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂತು.ಹೀಗೆ ನಲವತ್ತು ವರ್ಷದ ಸುಂದರಿ-ಸಿರಿವಂತ ವಿಧವೆ ಖತೀಜ ಇಪ್ಪತ್ತೈದರ ಚಲುವ ತರುಣ ಮಹಮದ್'ನ ಮಡದಿಯಾದಳು.
ಸುಖಮಯವಾಗಿ ಮುಂದಿನ ಹನ್ನೆರಡುವರ್ಷ ಸಾಗಿದ ಅವರ ಸಂಸಾರದ ಫಲವಾಗಿ ಎಂಟು ಗಂಡು ಮಕ್ಕಳೂ.ನಾಲ್ಕು ಹೆಣ್ಣುಮಕ್ಕಳೂ ಜನ್ಮತಾಳಿದರು.ಆದರೆ ದುರದೃಷ್ಟದಿಂದ ಯಾವೊಂದು ಗಂಡು ಮಗುವೂ ಬದುಕುಳಿಯಲಿಲ್ಲ.ಮದುವೆಯ ನಂತರ ಮಡದಿಯ ಅಂತಸ್ತಿಗೆ ತಕ್ಕ ಹಾಗೆ ಮಹಮದ್ ಕುರಿಕಾಯದೆ ಹೆಂಡತಿಯ ವ್ಯಾಪಾರದಲ್ಲಿ ಸಕ್ರಿಯನಾಗಿ ತೊಡಗಿಕೊಂಡ.'ದೇವರು ಕರುಣಾಮಯಿ ;ತನ್ನನ್ನು ನಂಬಿದವರನ್ನೆಂದೂ ಕೈಬಿಡದೆ ಅವರ ವ್ಯವಹಾರಗಳಲ್ಲಿ ವೃದ್ಧಿ ತರುವ ಆತ...ಅವಿಶ್ವಾಸಿಗಳಿಗೆ ನಷ್ಟವನ್ನಷ್ಟೆ ಕೊಡುತ್ತಾನೆ' ಎನ್ನುತ್ತಾ ಆತ ವ್ಯಾಪಾರಕ್ಕೆ ಒಂದು ಧಾರ್ಮಿಕ ಘನತೆಯನ್ನು ಆರೋಪಿಸಿ ಮೋಸ-ವಂಚನೆಗಳನ್ನ ಹಿಡಿತಕ್ಕೆ ತಂದ.
ಹೀಗೆ ಸುಖಮಯವಾಗಿದ್ದ ಮಹಮದ್ ವಯಕ್ತಿಕ ಜೀವನಕ್ಕೆ ಕುತ್ತು ಬಂದದ್ದು ಮದುವೆಯ ಹದಿಮೂರನೆ ವರ್ಷಕ್ಕೆ ಒದಗಿಬಂದ ಕಾಬಾದ ಮರುನಿರ್ಮಾಣ ಕಾರ್ಯದಿಂದ.ಆಗ ಆತನಿಗೆ ಮೂವತ್ತೆಂಟು ವರ್ಷ ವಯಸ್ಸಾಗಿತ್ತು.ಪ್ರಾಕೃತಿಕವಾಗಿ ವಿರಳ ಮಳೆ ಕಾಣುತ್ತಿದ್ದ ಅರೇಬಿಯದಲ್ಲಿ ಕ್ರಿಸ್ತಶಕ 605ರಲ್ಲಿ ಕುಂಭದ್ರೋಣ ವರ್ಷಧಾರೆ ಸುರಿದು ಪ್ರವಾಹ ಬೀದಿಗಳಲ್ಲಿ ಉಕ್ಕಿ ಹರಿಯಿತು.ಕಾಬಾ ಗುಡಿ ಸಹಜವಾಗಿ ಜಖಂ ಆಯಿತು.ಹೀಗಾಗಿ ಗುಡಿಯ ದುರಸ್ತಿ ನಡೆಸಿ ಇನ್ನಷ್ಟು ಎತ್ತರದ ಗೋಡೆ ಹಾಗೂ ಛಾವಣಿ ನಿರ್ಮಿಸಲು ಖುರೈಷಿಗಳು ತೀರ್ಮಾನಿಸಿದರು.ಅವರ ಅದೃಷ್ಟಕ್ಕೆ ಆ ಮಳೆಗಾಲದಲ್ಲಿ ಎದ್ದಿದ್ದ ಬಿರುಗಾಳಿಗೆ ಸಿಲುಕಿ ಕೆಂಪುಸಮುದ್ರದ ದಡಕ್ಕೆ ಬಂದು ಅಪ್ಪಳಿಸಿ ಪತನವಾದ ಗ್ರೀಕ್ ವ್ಯಾಪಾರಿ ನೌಕೆಯೊಂದು ವರದಾನದಂತೆ ಒದಗಿಬಂತು.ಇದರ ಖಚಿತ ಸುದ್ದಿ ತಿಳಿದ ಖುರೈಷಿಗಳ ಮುಖಂಡ ಅಲ್ ವಾಲಿದ್ ಅಲ್ಲಿಗೆ ಧಾವಿಸಿ ನೌಕೆಯ ಅಳಿದುಳಿದ ನಿರುಪಯುಕ್ತ ಮರ ಹಾಗೂ ಲೋಹಗಳ ಅವಶೇಷಗಳನ್ನು ಖರೀದಿಸಿದ.ಮೆಕ್ಖಾ ಸಮೀಪದ ಕೆಂಪುಕಲ್ಲುಗಳ ಕಣಿವೆಯಿಂದ ಕಲ್ಲುಗಳನ್ನೂ ತರಿಸಿ ಬಾಕುನ್ ಎಂಬ ರೋಮನ್ ವಾಸ್ತುಶಿಲ್ಪಿಯ ಮಾರ್ಗದರ್ಶನದೊಂದಿಗೆ ಹೊಸ ಕಾಬಾದ ನಿರ್ಮಾಣ ಕಾರ್ಯ ಆರಂಭಿಸಿದ.ಗೋಡೆಗಳು ಮೇಲೆದ್ದು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದಾಗ 'ಪವಿತ್ರ ಕಪ್ಪುಶಿಲೆ'ಯನ್ನು ಎಲ್ಲಿ,ಹೇಗೆ,ಯಾರು ಇರಿಸಬೇಕು? ಎಂಬ ನೈತಿಕ ಪ್ರಶ್ನೆ ಉದ್ಭವವಾಯ್ತು.ಈ ಶಿಲೆ ಆರು ಇಂಚು ಎತ್ತರ ಹಾಗೂ ಎಂಟಿಂಚು ಅಗಲವಾಗಿತ್ತು,ಭಕ್ತಾದಿಗಳ ಶ್ರದ್ಧಾಭಕ್ತಿಗೆ ಅದು ಒಳಗಾಗಿತ್ತು ಎನ್ನುತ್ತಾನೆ ವಿಲ್ ಡ್ಯೂರಂಟ್.ಆ ಶಿಲೆಯ ಹಣೆಬರಹ ನಿರ್ಧರಿಸುವುದು ತಮ್ಮ ಹಕ್ಕೆಂದು ಕೆಲವು ಖುರೈಸಿ ಗಣ್ಯರು ಗದ್ದಲ ತೆಗೆದರು.ಇನ್ನಿತರರು ತಮ್ಮ ಹಕ್ಕು ಮಂಡಿಸಿ ಅದನ್ನು ಬಲವಾಗಿಯೆ ವಿರೋಧಿಸಿದರು.ಈ ವಾದ ವಿವಾದ ತಾರಕಕ್ಕೇರಿ ಹೊಯ್'ಕೈ ನಡೆದು ಮತ್ತೆ ರಕ್ತದೋಕುಳಿಯಾಡುವ ಎಲ್ಲಾ ಸೂಚನೆಗಳು ಕಂಡುಬಂದಾಗ ಖುರೈಷಿಗಳಲ್ಲೆ ಹಿರಿಯನಾಗಿದ್ದವನೊಬ್ಬ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸಂಧಾನ ಸೂತ್ರವನ್ನೇರ್ಪಡಿಸಿದ.ಅದು ಹೀಗಿತ್ತು 'ಇಂದು ಯಾವ ವ್ಯಕ್ತಿ ಮೊತ್ತ ಮೊದಲನೆಯವನಾಗಿ ಕಾಬಾದ ಒಳಕ್ಕೆ ಹೊರಗಿನಿಂದ ಬರುತ್ತಾನೊ, ಅವನಿಗೆ ಈ ಸಮಸ್ಯೆಗೆ ಪರಿಹಾರ ಸೂಚಿಸುವ ಅಥವಾ ಅವನಿಗೆ ಕರಿಶಿಲೆಯನ್ನ ಸೂಕ್ತ ಸ್ಥಳದಲ್ಲಿರಿಸುವ ಅಧಿಕಾರ ನೀಡೋಣ" ಅನ್ನುವುದಾಗಿತ್ತು.ನೆರೆದಿದ್ದವರ ಸಮ್ಮತಿ ಆ ಸೂತ್ರಕ್ಕೆ ದೊರಕುತ್ತಿದ್ದಾಗಲೆ ಮಹಮದ್ ಮೊದಲನೆಯವನಾಗಿ ಗುಡಿಯ ಒಳ ಪ್ರವೇಶಿಸಿದ್ದು ಎಲ್ಲರ ಕಣ್ಣಿಗೂ ಬಿತ್ತು! ಆವಾಗ ಎಲ್ಲರೂ 'ಅಲ್ ಅಮೀನ್' ಮೊದಲು ಬಂದ,ಹೀಗಾಗಿ ಅವನು ಸೂಚಿಸುವ ಸೂತ್ರಕ್ಕೆ ನಮ್ಮ ಸಮ್ಮತಿಯಿದೆ ಎಂದು ಸಾಮೂಹಿಕವಾಗಿ ಕೂಗಿದರು.
ಅತ್ಯಂತ ಸಾವಧಾನ ಚಿತ್ತದಿಂದ ಮಹಮದ್ ಈ ಕಾರ್ಯಭಾರವನ್ನು ಒಪ್ಪಿಕೊಂಡು ಕಾರ್ಯಪ್ರವೃತ್ತನಾದ.ತಾನು ಹೂದ್ದಿದ್ದ ಬಟ್ಟೆಯನ್ನು ನೆಲಕ್ಕೆ ಹಾಸಿ ಕಪ್ಪುಶಿಲೆಯನ್ನು ಅದರ ಮೇಲಿರಿಸಿ ಖುರೈಷಿಗಳ ನಾಲ್ಕೂ ಗುಂಪಿನ ಸದಸ್ಯರನ್ನು ಕರೆದು ಬಟ್ಟೆಯ ನಾಲ್ಕು ತುದಿಗಳನ್ನು ಅವರಿಂದ ಎತ್ತಿಸಿ ಅವರೆಲ್ಲರೂ ಕೂಡಿ ಕಪ್ಪುಶಿಲೆಯನ್ನು ಗೋಡೆಯ ಬದಿಗೆ ಅಂಟಿಸುವಂತೆ ಮಾಡಿದ.ತಾನೂ ಸ್ವತಹ ಈ ಕಾರ್ಯದಲ್ಲಿ ಅವರೊಂದಿಗೆ ಸಹಕರಿಸಿದ.ಹೀಗಾಗಿ ಕಟ್ಟಡದ ಕಾರ್ಯ ಸುಗಮವಾಗಿ ಸಾಗುವಂತಾಯಿತು.ಇದೆ ಸಂದರ್ಭದಲ್ಲಿ ಒಂದು ಘಟನೆ ನಡೆಯಿತು.ಈ ಕಾರ್ಯ ಸಾಗುವಾಗ ಭಯ ಭಕ್ತಿಯಿಂದ ಖುರೈಶಿಗಳು ತಮ್ಮ ಒಳವಸ್ತ್ರವನ್ನು ತೆಗೆದು ಹೆಗಲ ಮೇಲೆ ಇಳಿಬಿಟ್ಟುಕೊಂಡಿದ್ದರು.ಮಹಮದನೂ ಹಾಗೆಯೆ ಮಾಡಿದ್ದವ ಕೊನೆಯಲ್ಲಿ ಎಡವಿ ಮುಖ ಕೆಳಗಾಗಿ ನೆಲಕ್ಕೆ ಬಿದ್ದ.ಆಗ "ನಿನ್ನ ಗುಪ್ತಾಂಗವನ್ನು ಇನ್ಯಾರಿಗೂ ತೋರಿಸಬೇಡ" ಎಂಬ ಒಂದು ಅಶರೀರವಾಣಿ ಅವನಿಗೆ ಕೇಳಿಸಿದಂತಾಯಿತು.ಆದರಿಂದ ಅಂದಿನಿಂದ ಅದನ್ನು ಯಾರೊಬ್ಬರೂ ಕಾಣಲಿಲ್ಲ ಅನ್ನುತ್ತಾನೆ ಇತಿಹಾಸಕಾರ ಅಲ್-ಮುಬಾರಕಿ.
ಈ ಸಮಸ್ಯೆ ಸುರಳಿತವಾಗಿ ನೆಲೆಕಂಡರೂ ಮೆಕ್ಕಾದಲ್ಲಿ ಸೂಕ್ತ ಅಧಿಕಾರ ಕೇಂದ್ರದ ಅಭಾವ ಎದ್ದುಕಾಣುತ್ತಿತ್ತು.ಖುರೈಷಿಗಳ ಒಳ ಪಂಗಡಗಳಲ್ಲೆ ವಿಪರೀತ ಕಚ್ಚಾಟವಿದ್ದರೂ ಅದೊಂದು ಬಗೆಯ ಸಾಮರಸ್ಯವೂ ಅವರಲ್ಲಿದ್ದು ವ್ಯಾಪಾರ-ವ್ಯವಹಾರಗಳಿಗೆ ಅದರಿಂದ ಅಡ್ಡಿಯಾಗದೆ ಮೆಕ್ಕಾ ಆರ್ಥಿಕವಾಗಿ ಬಲಗೊಂಡಿತ್ತು.ಉದ್ದಿಮೆದಾರರು ದೂರದ ಸಿರಿಯಾ,ನೆರೆಯ ಇರಾಕ್ ನಡುವೆ ವ್ಯಾಪಾರ ಸಂವರ್ಧನೆ ಸಾಧಿಸಿದ್ದರು.ಕ್ರಿಸ್ತ ಶಕ 606ರಲ್ಲಿ ಪರ್ಶಿಯಾದೊಂದಿಗೆ ವ್ಯಾಪಾರಿ ಸಂಬಂಧಗಳು ಅಬು ಸಫ್ಯಾನನ ಮುಂದಾಳುತ್ವದಲ್ಲಿ ಧೃಡಗೊಂಡವು.ಹೀಗೆ ಮೆಕ್ಕಾ ಉನ್ನತಿಯತ್ತ ಸಾಗುತ್ತಿದ್ದರೆ ಇತ್ತ ಮಹಮದ್'ನ ವೈವಾಹಿಕ ಜೀವನದಲ್ಲೂ ಶಾಂತಿ ನೆಲೆಸಿತ್ತು.ಮೂವರು ಹೆಣ್ಣು ಮಕ್ಕಳಿಗೆ ವಿವಾಹ ಯೋಗ ಕೂಡಿಬಂದಿತ್ತು. ಮೊದಲನೆಯವಳಾದ ಜನಾಬ್'ಳನ್ನು ಖತೀಜಳ ತಂಗಿಯ ಮಗನಿಗೆ ಕೊಟ್ಟು ಲಗ್ನ ಕುದುರಿಸಲಾಯಿತು (ಗಮನಿಸಿ ಅರಬ್ಬಿಗಳಲ್ಲಿ ಸೋದರಿಕೆಯ ಒಳವಿವಾಹಗಳು ನಿಶಿದ್ಧವಾಗಿರಲಿಲ್ಲ).ಇನ್ನಿಬ್ಬರು ಹೆಣ್ಣುಮಕ್ಕಳಾದ ರೋಶಿಯಾ ಹಾಗು ಉಮ್'ಕುಲ್'ಸುಮ್'ರನ್ನು ಅಬು ಲಹಾಬ್'ನ ಮಕ್ಕಳಾದ ಓತ್ವಾ ಹಾಗೂ ಒಬೈಬಾರಿಗೆ ಕೊಟ್ಟು ಲಗ್ನ ನೆರವೇರಿಸಲಾಯಿತು.
ಮಹಮದ್ ತನ್ನ ಎಳೆಮಗ ಕಾಸಿಂ ಮರಣ ಹೊಂದಿದ ಮೇಲೆ ಅಬು ತಾಲಿಬ್'ನ ಐದು ವರ್ಷದ ಮಗ ಆಲಿಯನ್ನು ದತ್ತಕಕ್ಕೆ ತೆಗೆದುಕೊಳ್ಳುತ್ತಾನೆ.ಅಬು ತಾಲಿಬ್ ಕಡುಬಡತನದಲ್ಲಿದ್ದುದ್ದರಿಂದ ಮಹಮದ್ ಮಗುವನ್ನು ತನ್ನ ಆಶ್ರಯಕ್ಕೆ ತೆಗೆದುಕೊಂಡು ಅವನ ಸಂಕಟವನ್ನು ಕೊಂಚ ನಿವಾರಿಸಿದನು.ಇದೆ ಅಲಿ ಮುಂದೆ ಮಹಮದನಿಗೆ ಪ್ರಾಮಾಣಿಕನಾಗಿದ್ದುಕೊಂಡು ಆತನ ಧರ್ಮಾಭಿಮಾನಿಯಾಗಿ ಮೆರೆಯಲಾರಂಭಿಸಿದ.
ಅದೆ ಸಮಯದಲ್ಲಿ ಆಲಿಯಂತೆಯೇ ತನ್ನ ಕುಟುಂಬಕ್ಕೆ ಪರಕೀಯನಾಗಿದ್ದ ಹಾರಿಥಾ ಎಂಬ ವ್ಯಕ್ತಿಯ ಮಗನಾದ ಜೈದ್'ಎಂಬಾತನನ್ನೂ ಹೀಗೆಯೆ ದತ್ತು ತೆಗೆದುಕೊಳ್ಳಲಾಯಿತು.ಹಾರಿಥಾ ವಾಸ್ತವವಾಗಿ ಸಿರಿಯನ್ ಕ್ರೈಸ್ತ ಬುಡಕಟ್ಟಿಗೆ ಸೇರಿದ್ದ.ಜೈದ್ ಇನ್ನೂ ಮಗುವಾಗಿದ್ದಾಗಲೆ ಅರಬ್ಬಿ ದರೋಡೆಗಾರರ ಕೈಸೇರಿ ಗುಲಾಮಗಿರಿಗೆ ತಳ್ಳಲ್ಪಟ್ಟಿದ್ದ ಹಾಗೂ ಖತೀಜಳಿಗೆ ಗುಲಾಮನಾಗಿ ಮಾರಲ್ಪಟ್ಟಿದ್ದ.ಲಗ್ನದ ನಂತರ ಆಕೆಯ ಕೊಡುಗೆಯಾಗಿ ಜೈದ್ ಮಹಮದ್'ನಿಗೆ ಸಂದಿದ್ದ.ಮಹಮದ್ ಆತನನ್ನು ಗುಲಾಮನಾಗಿ ಪರಿಗಣಿಸದೆ ತನ್ನ ಒಡಹುಟ್ಟಿದವನಂತೆ ಕಂಡು ಕಡೆಗೊಮ್ಮೆ ತನ್ನ ದತ್ತು ಮಗನನ್ನಾಗಿ ಸ್ವೀಕರಿಸಿದ.
ಆದರೆ ಕಾಲಕ್ರಮೇಣ ಹಾರಿಥಾನಿಗೆ ಕಳೆದು ಹೋಗಿದ್ದ ತನ್ನ ಮಗನ ಸುಳಿವು ಸಿಕ್ಕು ಆತ ಮಗನನ್ನು ಗುಲಾಮಗಿರಿಯಿಂದ ಬಿಡಿಸಿಕೊಳ್ಳಲು ಮೆಕ್ಕಾಗೆ ಧಾವಿಸಿದ.ಅದಕ್ಕಾಗಿ ಮಹಮದನಿಗೆ ಅಪಾರ ಒತ್ತೆಹಣ ನೀಡಲು ಆತ ತಯಾರಿದ್ದರೂ ಮಹಮದ್ ಅದನ್ನು ಒಪ್ಪದೆ ಜೈದ್'ನಿಗೆ ತಂದೆಯೊಂದಿಗೆ ಸಾಗುವ ಅಥವಾ ಸ್ವತಂತ್ರವಾಗಿ ಬಾಳುವ ಹಕ್ಕನ್ನು ನೀಡಿದ.ಜೈದ್ ಮಾತ್ರ ತಂದೆಯೊಂದಿಗೆ ಸಾಗಲು ನಿರಾಕರಿಸಿ ಮಹಮದನೆ ತನ್ನ ತಂದೆ-ತಾಯಿಯೆಂದು ಘೋಷಿಸಿಕೊಂಡು ಅಲ್ಲೆ ಉಳಿಯುವ ನಿರ್ಧಾರ ಪ್ರಕಟಿಸಿದ.ಅವನ ಈ ನಡೆಯಿಂದ ವಿಪರೀತ ಹರ್ಷಿತನಾದ ಮಹಮದ್ ಜೈದನ್ನು ಕಾಬಾದ ಕರಿಶಿಲೆಯ ಸಾಕ್ಷಿಯಾಗಿ ತನ್ನ ಉತ್ತರಾಧಿಕಾರಿಯೆಂದು ಪ್ರಮಾಣ ಮಾಡಿದ.ಅಂದಿನಿಂದ ಜೈದ್'ನನ್ನು 'ಜೈದ್ ಇಬ್ನ ಮಹಮದ್' ಅಂದರೆ ಮಹಮದನ ಮಗ ಜೈದ್ ಎಂದು ಗುರುತಿಸಲಾಯಿತು.ಮಹಮದನ ಇಚ್ಛೆಯ ಪ್ರಕಾರವೆ ಜೈದ್ ಮುಂದೆ ಉಮ್ ಐಮನ್ ಎಂಬ ಕೆಲಸದವಳೊಬ್ಬಳನ್ನು ವಿವಾಹವಾಗಬೇಕಾಯಿತು.ಇತಿಹಾಸಕಾರ ಮ್ಯೂರನ ಪ್ರಕಾರ ಆಕೆಯ ವಯಸ್ಸು ಜೈದನ ವಯಸ್ಸಿನ ಎರಡರಷ್ಟಾಗಿತ್ತು.ಹೀಗಿದ್ದರೂ ಅವರ ವೈವಾಹಿಕ ಬದುಕಿಗೆ ಅದರಿಂದೇನೂ ತೊಂದರೆಯಾಗಲಿಲ್ಲ.'ಒಸಾಮಾ'ನೆಂಬ ಮಗ ಅವರಿಗೆ ಹುಟ್ಟಿದ.
(ಇನ್ನೂ ಇದೆ...)
17 October 2011
16 October 2011
ವಲಿ.....(ಭಾಗ-1)
ಒಂದೊಮ್ಮೆ ಮೊಹಮದ್'ನ ತಾತ ಅಬ್ದುಲ್ ಮುತ್ತಾಲಿಬ್ ಇಪ್ಪತ್ತನಾಲ್ಕು ವರ್ಷದ ತನ್ನ ಎಳೆಮಗ ಅಬ್ದುಲ್ಲಾನನ್ನು ಜೊತೆಗೆ ಕರೆದುಕೊಂಡು ದೂರದ ಸಂಬಂಧಿ ವಾಹಬ್'ನ ಮನೆಗೆ ಅತಿಥಿಯಾಗಿ ಹೋಗಬೇಕಾಯಿತು.ಅಲ್ಲಿ ವಹಾಬ್'ನ ಸಹೋದರಿಯ ಮಗಳಾದ ಅಮೀನಾಳನ್ನು ಕಂಡು ಸಂಪ್ರೀತನಾದ ಆತ ಆಕೆಯನ್ನು ತನ್ನ ಮಗನಿಗೆ ತಂದುಕೊಳ್ಳಲು ಪ್ರಸ್ತಾಪಿಸಿದ.ಅದಕ್ಕೊಪ್ಪಿದ ವಹಾಬ್ ಈ ವಿವಾಹ ನೆರವೇರಿಸಿಕೊಟ್ಟ,ಜೊತೆಗೆ ಅದಾಗಲೆ ಎಪ್ಪತ್ತರ ಆಸುಪಾಸಿನಲ್ಲಿದ್ದ ಮುತ್ತಾಲಿಬ್ ತಾನು ಸ್ವತಃ ವಹಾಬನ ಸ್ವಂತ ಮಗಳಾದ ಹಲಾಹಳನ್ನು ವಿವಾಹವಾದ! ತಂದೆ-ಮಕ್ಕಳಿಬ್ಬರೂ ಅಕ್ಕ-ತಂಗಿಯರನ್ನೆ ಮದುವೆಯಾದ ನಂತರ ಕೆಲಕಾಲ ಅಲ್ಲಿಯೆ ನೆಲಸಿದರು.ಅಮೀನ ಗರ್ಭವತಿಯಾದಳು.ಅದೇ ಸಮಯಕ್ಕೆ ಆಕೆಯ ಪತಿ ಅಬ್ದುಲ್ಲಾ ವ್ಯಾಪಾರದ ನಿಮಿತ್ತ ಸಿರಿಯಾದ ಕಡೆ ಸಾಗಬೇಕಾಯಿತು.ದುರಾದೃಷ್ಟವಶಾತ್ ಆತ ಅಲ್ಲಿಂದ ಮರಳುವಾಗ ಅನಾರೋಗ್ಯಕ್ಕೆ ತುತ್ತಾಗಿ ಅಸುನೀಗಿದ.ಮಗನ ಸಾವಿನ ಸುದ್ದಿ ಮುತ್ತಾಲಿಬನನ್ನು ಬಹುವಾಗಿ ಕಾಡಿಸಿತು.ಆತ ತನ್ನೊಂದಿಗೆ ಉಳಿದಿದ್ದ ಇನ್ನೊಬ್ಬ ಮಗನನ್ನು ಮುಂದಿನ ಉತ್ತರಕ್ರಿಯೆಗಳಿಗಾಗಿ ಮದೀನಕ್ಕೆ ಕಳುಹಿಸಿದ.ಆತ ಮದೀನ ತಲುಪಲು ತಿಂಗಳೆ ತಗುಲಿತು.ಅಲ್ಲಿ ಅಬ್ದುಲ್ಲ ಮರಣ ಹೊಂದುವಾಗ ಕೇವಲ ಐದು ಒಂಟೆಗಳನ್ನೂ,ಕೆಲವು ಮೇಕೆಗಳನ್ನೂ ಹಾಗೂ ಓರ್ವ ಗುಲಾಮಳನ್ನಷ್ಟೆ ಬಿಟ್ಟುಹೋಗಿದ್ದ.
ಕ್ರಿಸ್ತಶಕ 570ರ ಅಗೊಸ್ತು 20ರಂದು ಮಹಮದ್'ನಿಗೆ ಜನ್ಮ ನೀಡುವಾಗ ಅಮೀನಳ ಪಾಲಿಗೆ ಬಂದ ಆಸ್ತಿಯೆಂದರೆ ಇವಿಷ್ಟೆ.ಮಗುವಿನ ಜನನದ ಸುದ್ದಿ ಅರಿತ ಮಾವ ಮುತ್ತಾಲಿಬ್ ಬಂದು ಮೊಮ್ಮಗನನ್ನು ಮುದ್ದಾಡಿ ಕಾಬಾಕ್ಕೆ ಮಗುವನ್ನೊಯ್ದು,ದೇವರಿಗೆ ಕೃತಜ್ಞತೆ ಸಲ್ಲಿಸಿ ಅಲ್ಲಿಯೆ ಕಂದನಿಗೆ 'ಮಹಮದ್' ಎಂದು ನಾಮಕರಣ ಮಾಡಿಬಿಟ್ಟ (ಅರಬ್ಬಿಯಲ್ಲಿ ಮಹಮದ್ ಎಂದರೆ ಕೊಂಡಾಡುವ ಎನ್ನುವ ಅರ್ಥ ಬರುತ್ತದೆ). ಮಹಮದ್ ಹುಟ್ಟಿದ ಆ ವರ್ಷ ಅರಬ್ಬಿಯನ್ ಪಂಚಾಗದ ಪ್ರಕಾರ ಆನೆಯವರ್ಷವಾಗಿತ್ತು.
ಅರೇಬಿಯಾದ ಉತ್ತಮ ಕುಲದವರ ವಾಡಿಕೆಯಂತೆ ಹುಟ್ಟಿದ ಮಗುವಿಗೆ ದಾದಿಯಿಂದ ಮೊಲೆಯೂದಿಸುವ ವ್ಯವಸ್ಥೆ ಮಾಡಲಾಯಿತು.ಇದಕ್ಕಾಗಿ ಥುವೈಬಾ ಎಂಬ ಗುಲಾಮಳ ಕೈಗೆ ಮಗುವನ್ನ ದಾಟಿಸಲಾಯಿತು.ಸ್ವಲ್ಪ ಸಮಯದ ನಂತರ ಹಲೀಮಾ ಎಂಬ ಇನ್ನೊಬ್ಬ ದಾದಿಯನ್ನೂ ಅದಕ್ಕಾಗಿ ನೇಮಿಸಿಕೊಳ್ಳಲಾಯಿತು.'ಬೆನ್ ಸಾದ್' ಬುಡಕಟ್ಟಿನವಳಾದ ಈ ದಾದಿಯ ಎದೆಹಾಲು ಕುಡಿದು ಬೆಳೆದ ಮೊಹಮದ್ ಐದು ವರ್ಷ ಪ್ರಾಯದವನಾದ.ಮರುಭೂಮಿಯ ಭೀಕರ ವಾತಾವರಣದಲ್ಲೂ ಮಗುವಿನ ಆರೋಗ್ಯ ಸ್ಥಿರವಾಗಿರಲಿ ಎನ್ನುವ ಕಾರಣದಿಂದ ತಾಯಿ ಅಮೀನಾ ಈ ವ್ಯವಸ್ಥೆ ಮಾಡಿದ್ದಳು.
ಆರನೆ ವಯಸ್ಸಿನಲ್ಲಿ ಮಗುವನ್ನ ತನ್ನೊಂದಿಗೆ ಬಂಧುಗಳಿಗೆ ತೋರಿಸಲು ಅಮೀನಾ ಮದೀನಕ್ಕೆ ಕರೆದೊಯ್ದಳು.ಅಲ್ಲಿ ಗಂಡನ ಮನೆ ಹಾಗು ಆತನ ಸಮಾಧಿಯ ದರ್ಶನವನ್ನ ಮಗುವಿಗೆ ಮಾಡಿಸಿದಳು.ಒಂದು ತಿಂಗಳು ಅಲ್ಲಿಯೆ ಉಳಿದು ಮರುಪಯಣಕ್ಕಾಗಿ ಮಗು ಹಾಗು ಗುಲಾಮಳಾದ ಲುಮ್' ಐಮನಳೊಂದಿಗೆ ಒಂಟೆಯೇರಿದ ಅಮೀನಾ ವಾತಾವರಣದ ವೈಪರೀತ್ಯದಿಂದ ತೀವ್ರ ಅಸ್ವಸ್ಥಲಾಗಿ ನಡುದಾರಿಯಲ್ಲೆ ಮರಣಿಸಿದಳು.ಆಕೆ ಅಸುನೀಗಿದ 'ಅಲ್-ಅಬ್ಬಾ'ದಲ್ಲಿಯೆ ಆಕೆಯನ್ನ ಮಣ್ಣುಮಾಡಲಾಯಿತು.ಹೀಗೆ ಎಳೆಯ ಪ್ರಾಯದಲ್ಲಿಯೆ ಮಹಮದ್ ತಬ್ಬಲಿಯಾಗಬೇಕಾಯಿತು.ಗುಲಾಮಳಾದ ಲುಮ್-ಐಮನ್ ಮೆಕ್ಕಾಗೆ ಮಗುವನ್ನು ಕರೆದುಕೊಂಡು ಹೋದಳು.ಮುಂದೆ ಆಕೆಯೆ ಮಹಮದ್'ನ ಸಾಕುತಾಯಿಯಾಗಿ ದೇಖಾರೇಕಿ ನೋಡಿಕೊಂಡು ಬೆಳಸಿದಳು.
ಅದರ ಖರ್ಚನ್ನೆಲ್ಲ ತಾತ ಅಬ್ದುಲ್ ಮುತ್ತಾಲಿಬ್ ವಹಿಸಿಕೊಂಡ.ಅದಾಗಲೆ ಎಂಬತ್ತು ವರ್ಷದ ಆಸುಪಾಸಿನಲ್ಲಿದ್ದ ಆತ ಮೊಮ್ಮಗನನ್ನು ಬಲು ಮುದ್ದಿನಿಂದಲೆ ಸಾಕಿ ಬೆಳೆಸಿದ.ಆದರೆ ವೃದ್ದಾಪ್ಯದ ಕಾರಣ ಮುಂದಿನ ಎರಡುವರ್ಷಗಳಲ್ಲಿ ಆತನೂ ಮರಣಿಸಿದ್ದರಿಂದ ಅಜ್ಜನ ಮುಚ್ಚಟೆ-ಪ್ರೀತಿ-ವಿಶ್ವಾಸಗಳನ್ನು ಕಂಡುಂಡಿದ್ದ ಮಹಮದ್ ಆಘಾತಗೊಂಡ.ಆತನ ಮನಸ್ಸಿನ ಮೇಲೆ ಈ ಸಾವು ಗಾಢ ಪರಿಣಾಮಬೀರಿತು.ಹೀಗಾಗಿ ಆತನ ಹೊಣೆಗಾರಿಕೆ ದೊಡ್ಡಪ್ಪ ಅಬು ತಾಲಿಬ್'ಗೆ ಸೇರಿತು.ತನ್ನ ತಂದೆಯಷ್ಟೆ ಕರುಣಾಮಯಿಯಾಗಿದ್ದ ಆತ ಮುಂದಿನ ತಾರುಣ್ಯದವರೆಗೆ ಮಹಮದನನ್ನು ಒಲವಿನಿಂದಲೆ ಸಾಕಿ ಬೆಳೆಸಿದ.
ಮುಂದೆ ಅಬು-ತಾಲಿಬ್ ವ್ಯಾಪಾರಕ್ಕಾಗಿ ಸಿರಿಯಾದತ್ತ ಪ್ರಯಾಣಿಸಬೇಕಾಗಿ ಬಂದಾಗ ಆಗಿನ್ನೂ ಹನ್ನೆರಡರ ಹರೆಯದಲ್ಲಿದ್ದ ಮಹಮದ್ ಮನೆಯಲ್ಲಿ ಒಂಟಿಯಾಗಿರಬಯಸದೆ ಹಠ ಹೂಡಿ ತಾನೂ ಅವನೊಂದಿಗೆ ತೆರಳುತ್ತಾನೆ.ಈ ಪ್ರಯಾಣ ಆತನ ಬದುಕಲ್ಲಿ ಆರಂಭಿಕ ಅನುಭವ ತರುತ್ತದೆ.ಸಿರಿಯಾದಲ್ಲಿ ಆತ ಕ್ರೈಸ್ತರ ಹಾಗೂ ಯಹೂದಿಗಳ ಸಂಪರ್ಕಕ್ಕೆ ಬಂದ.ಮುಖ್ಯವಾಗಿ ಆತನಿಗೆ ಅಲ್ಲಿ ಯಹೂದಿಗಳ ಭಾಷೆ,ಸಂಸ್ಕೃತಿ,ರೀತಿನೀತಿ,ಕಟ್ಟಳೆ-ರಿವಾಜು,ಬದುಕಿನ ನಿಯಮಗಳೆಲ್ಲದರ ಪರಿಚಯವಾಯಿತು ಎಂದಿದ್ದಾನೆ ಇತಿಹಾಸಕಾರ ಮೂಯಿರ್.
'ಒಕಾಜಾ' ಅಕಾಲದ ಅರೇಬಿಯಾದ ಪ್ರಸಿದ್ಧ ಸಂತೆ ಕೂಡುವ ವ್ಯಾಪಾರಿ ಸ್ಥಳವಾಗಿತ್ತು.ಬೆನಿ ಹವಾಜಿನ್ ಹಾಗೂ ಖುರೈಷಿಗಳು ಅಲ್ಲಿ ವ್ಯಾಪಾರಕ್ಕಾಗಿ ಪ್ರತಿವರ್ಷಕ್ಕೊಮ್ಮೆ ಸೇರುವ ಪರಿಪಾಠವಿತ್ತು ವಾಸ್ತವವಾಗಿ ಇವರಿಬ್ಬರಲ್ಲೂ ಜನಾಂಗೀಯ ದ್ವೇಷದ ಭವ್ಯಹಿನ್ನೆಲೆ ಇದ್ದುದ್ದರಿಂದ ಪರಸ್ಪರ ನೆತ್ತರು ಹರಿಸಿ ಅವರು ಕಾದಾಡುತ್ತಿದ್ದರು.ಎರಡೂ ಬುಡಕಟ್ಟಿನ ಹಿರಿಯರು ಈ ಅನಗತ್ಯ ವೈರತ್ವದಿಂದ ಸತ್ತವರ ಕುಟುಂಬಗಳಿಗೆ 'ಪರಿಹಾರ' ನೀಡುವ ಮೂಲಕ ಪರಿಸ್ಥಿತಿಯನ್ನು ಹಿಡಿತಕ್ಕೆ ತರಲು ಹೆಣಗುತ್ತಿದ್ದರು.ಅವರಲ್ಲಿ ಪರಸ್ಪರ ಇದ್ದ ಈರ್ಷ್ಯೆ-ಪ್ರತಿಕಾರದ ಸ್ವಭಾವಗಳ ಬಗ್ಗೆ ಒಂದು ರಂಜನೀಯ ಕತೆ ಚಾಲ್ತಿಯಲ್ಲಿದೆ .'ಕಿನಾನಾ' ಬುಡಕಟ್ಟಿಗೆ ಸೇರಿದ ಒಬ್ಬ ವ್ಯಕ್ತಿ ಹವಾಜಿನ್ ಬುಡಕಟ್ಟಿನ ಸಾಲಗಾರನಿಂದ ಸಾಲ ಪಡೆದು ಅದನ್ನು ಹಿಂದಿರುಗಿಸದಿದ್ದಾಗ ಇದೆ 'ಒಕಾಜ್' ಸಂತೆಯ ಪ್ರಮುಖ ಸ್ಥಳದಲ್ಲಿ ಕೂತು ತನ್ನ ಬಳಿ ಒಂದು ಮಂಗವನ್ನು ಕಟ್ಟಿಹಾಕಿಕೊಂಡು "ಯಾರು ನನಗೆ ಇಂತಹದ್ದೆ ಒಂದು ಮಂಗವನ್ನು ನೀಡುತ್ತಾರೊ ಅವರಿಗೆ ಸಾಲ ಕೊಂಡವನ ಮೇಲೆ ನನಗಿರುವ ಹಕ್ಕನ್ನು ಬಿಟ್ಟು ಕೊಡುತ್ತೇನೆ!' ಎಂದು ಕೂಗಿಕೂಗಿ ಹೇಳಿದ.ಅವನ ಧ್ವನಿಯಲ್ಲಿ 'ಕಿನಾನಾ' ಪಂಗಡದ ಬಗ್ಗೆ ಇದ್ದ ಹೀಯಾಳಿಕೆಯನ್ನ ಕೇಳಿ ಕೆರಳಿದ ಆಗುಂತಕನೊಬ್ಬ ತಕ್ಷಣವೆ ಕೈಗತ್ತಿಯಿಂದ ಆ ಮಂಗದ ಕುತ್ತಿಗೆ ಕಡಿದು ಹಾಕಿದ...ಮುಂದೆ ಎರಡುದಿನ ಬಿಡದೆ ನಡೆದ ಕಾಳಗಕ್ಕೆ ಇಷ್ಟು ಕಾರಣ ಧಾರಾಳ ಸಾಕಾಯಿತು!.
ಇಂತಹ ದುರದೃಷ್ಟಕರ ಘಟನೆಗಳನ್ನು ಮರುಕಳಿಸದಂತಾಗಿಸಲು ಎರಡೂ ಗುಂಪಿನ ಹಿರಿಯರು ಅಲ್ಲಿಗೆ ವ್ಯಾಪಾರಕ್ಕೆ ಬರುವಯಾರೂ ಮಾರಣಾಂತಿಕ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ತರುವಂತಿಲ್ಲವೆಂದೂ,ಬಳಿಯಿರುವುದನ್ನು ಮೆಕ್ಕಾದ ಅಬ್ದುಲ್ಲ ಇಬ್ನ ಜುಡಾನನ ಬಳಿ ಒತ್ತೆಯಿಸಿ ನಿರಾಯುಧರಾಗಿ ಬರುವಂತೆ ಕಾನೂನನ್ನೆ ಜಾರಿ ಮಾಡಿದರು.ಹೀಗಾಗಿ ಮುಂದೆ ಬಹುಕಾಲ ಅಲ್ಲಿನ ಶಾಂತಿಯನ್ನ ಕಾಪಾಡಿಕೊಳ್ಳುವುದು ಸಾಧ್ಯವಾಯಿತು,ಆದರೆ ಕ್ರಿಸ್ತಶಕ 580ರಲ್ಲಿ ಅಲ್ಲೊಂದು ಕೊಲೆಯಾಯಿತು,'ಅಲ್ ಹಿರಾ' ಪ್ರಾಂತ್ಯದ ರಾಜಕುಮಾರ ವ್ಯಾಪಾರಕ್ಕಾಗಿ ಅಲ್ಲಿಗೊಂದು ಕ್ಯಾರವಾನನ್ನು ಆ ಹಂಗಾಮಿನಲ್ಲಿ ಕಳುಹಿಸಿದ್ದ.ಅವನ ಬಗ್ಗೆ ಈರ್ಷ್ಯೆಯಿದ್ದ ಖುರೈಶಿಗಳಲ್ಲೊಬ್ಬ ಆ ಕ್ಯಾರವಾನನ್ನು ಲೂಟಿಹೊಡೆಯಲಿಕ್ಕಾಗಿ ಹವಾಜಿನರ ಆ ಕ್ಯಾರವಾನಿನ ಮುಖಂಡನನ್ನು ಹತ್ಯೆ ಮಾಡಿ ಸಂಪತ್ತನ್ನು ದೋಚಿದ.ಈ ಸುದ್ದಿ ತಿಳಿದ ಖುರೈಶಿಗಳೆಲ್ಲ ಮೆಕ್ಕಾದಲ್ಲಿ ಒಂದಾದರು ಅವರಿಗೆ ಮುಂದಾಗುವ ಅನಾಹುತದ ಮುನ್ಸೂಚನೆ ಸಿಕ್ಕಿತು.ಅವರ ಎಣಿಕೆಯಂತೆ ಹವಾಜಿನರು ಖುರೈಷಿಗಳ ಬೆನ್ನು ಹತ್ತಿದರು.ಆದರೆ ಅವರಾಗಲೆ ಮೆಕ್ಕಾದಲ್ಲಿದ್ದುದ್ದರಿಂದ ಪವಿತ್ರ ಸ್ಥಳದಲ್ಲಿ ಕಾದಾಡಲಾಗದೆ ಕೈಚೆಲ್ಲ ಬೇಕಾಯಿತು.ಹೀಗಾಗಿ ಮರುವರ್ಷ ಒಕಾಜ್'ನಲ್ಲೆ ಕಾದಾಡಲು ಆಮಂತ್ರಣ ನೀಡಿ ಹವಾಜಿನರು ಅಲ್ಲಿಂದ ನಿರ್ಗಮಿಸಿದರು.ಈ ಆಮಂತ್ರಣವನ್ನು ಒಪ್ಪಿದ ಖುರೈಷಿಗಳು ಮರುವರ್ಷ ತಪ್ಪದೆ ಬಂದು ಜೀವದ ಹಂಗು ಬಿಟ್ಟು ಹವಾಜಿನರೊಂದಿಗೆ ಕಾದಾಡಿದರು.ಹೀಗೆ ನಾಲ್ಕುವರ್ಷ ಕದನ ನಡೆದರೂ ಯಾರೊಬ್ಬರೂ ಗೆಲ್ಲದೆ,ಯಾರೊಬ್ಬರೂ ಸೋಲದೆ ಕಡೆಗೆ ಸಂಧಾನ ಅನಿವಾರ್ಯವಾಯಿತು! ಹವಾಜಿನರಲ್ಲೆ ಹೆಚ್ಚಿನ ಪ್ರಾಣ ಹಾನಿಯಾಗಿದ್ದರಿಂದ ಅವರಿಗೆ 'ರಕ್ತಹಣ' (blood money) ವನ್ನು ನೀಡುವ ನಿಯಮಕ್ಕನುಸಾರವಾಗಿ ಖುರೈಷಿಗಳು ತಮ್ಮ ಜನರನ್ನು ಅವರ ಬಳಿ ಒತ್ತೆಯಿತ್ತರು.ಅವರಲ್ಲಿ ಮುಂದೆ ಮಹಮದ್'ನ ನೆಂಟ ಹಾಗೂ ವೈರಿಯಾಗಿದ್ದ ಅಬು ಸಫ್ಯಾನನೂ ಒಬ್ಬನಾಗಿದ್ದ.ಈ ಕದನದಲ್ಲಿ ಖುರೈಷಿಗಳ ಪೈಕಿ ಎಲ್ಲಾ ಪಂಗಡದವರೂ ಪಾಲ್ಗೊಂಡಿದ್ದರು.ಉಮೈಯ್ಯಾ ಹಾಗೂ ಹಾಶಿಮ್ ಕುಟುಂಬದವರು ಅವರಲ್ಲಿ ಪ್ರಮುಖರಾಗಿದ್ದರು.ಈ ಕಾದಾಟದಲ್ಲಿ ಮಹಮದ್ ನೇರವಾಗಿ ಕತ್ತಿ ಹಿಡಿದು ಕಾದಾಡದಿದ್ದರೂ ರಣರಂಗದಲ್ಲಿ ಬತ್ತಳಿಕೆಯಿಂದ ನೆಲಕ್ಕೆ ಬಿದ್ದ ಬಾಣಗಳನ್ನು ಆಯುವ ಕೆಲಸ ಮಾಡಿ ಯೋಧರಿಗೆ ನೆರವಾದ.
ಈ 'ಅಪವಿತ್ರ ಯುದ್ಧ' ನಾಲ್ಕುವರ್ಷ ನಡೆದು ಶಾಂತಿ ನೆಲೆಸಿದ ನಂತರ ಮಹಮದ್ ಬುಡಕಟ್ಟಿನ ಕುರಿ-ಮೇಕೆಗಳನ್ನು ಊರ ಹೊರಗಿನ ಕಣಿವೆಗಳಲ್ಲಿ ಮೇಯಿಸುವ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ.ಗುಡ್ಡಬೆಟ್ಟಗಳಿಂದ ಆವೃತವಾಗಿದ್ದ ಈ ಪರಿಸರದಲ್ಲಿ ತನ್ನ ಸ್ವಭಾವಕ್ಕನುಗುಣವಾಗಿ ಏಕಾಂತದಲ್ಲಿ ಪ್ರಾಕೃತಿಕ ಸೌಂದರ್ಯ ಆಸ್ವಾದಿಸುತ್ತಾ,ಅಲ್ಲಿನ ಮೌನದಲ್ಲಿ ಲೀನವಾಗುವ -ಕಣಿವೆಯ ಭವ್ಯತೆಯನ್ನು ಅವಲೋಕಿಸಿ ಅನುಭವಿಸುವ ನಿರಾಯಾಸದ ಅವಕಾಶ ಮಹಮದನಿಗೆ ಒದಗಿ ಬಂತು.
ಒಂಟಿಯಾಗಿ ಕುರಿಮಂದೆಯೊಂದಿಗೆ ಹಗಲು ರಾತ್ರಿ ಕಳೆದರೂ ಮಹಮದ್ ಯವ್ವನದ ಸಹಜ ಆಕರ್ಷಣೆಗಳಿಗೆ ಬಲಿಯಾಗದೆ ತನ್ನ ಸದ್-ಚಾರಿತ್ರ್ಯವನ್ನು ಕಾಪಾಡಿಕೊಂಡು ಬಂದನು.ಉಚ್ಛರೀತಿಯ ನಡತೆಹೊಂದಿದ್ದ ಆತ ಮೆಲು ಮಾತಿನ-ನಾಜೂಕಿನ ನಡೆ ಹೊಂದಿದ್ದ ವ್ಯಕ್ತಿಯಾಗಿ ಗುರುತಿಸಲ್ಪಟ್ಟನು.ಗಾಂಭೀರ್ಯದ ರೀತಿಯಲ್ಲಿ ಪಳಗಿದ್ದ ಆತ ಏಕಾಗ್ರಚಿತ್ತನಾಗಿ ತನ್ನದೆ ಭಾವಪ್ರಪಂಚದಲ್ಲಿ ಮುಳುಗಿ ಹೋಗಿರುತ್ತಿದ್ದ.ಅವನ ಇವೆ ಗುಣಗಳಿಂದ ಮೆಕ್ಕಾ ನಿವಾಸಿಗಳಿಂದ ಮಹಮದ್ 'ಅಲ್-ಅಮೀನ್' ಎಂದು ಹೊಗಳಿಸಿಕೊಂಡ.ಹಾಗೆಂದರೆ ಅರಬ್ಬಿಯಲ್ಲಿ 'ಶ್ರದ್ಧಾಳು' ಎಂದರ್ಥ.ಹೀಗೆ ಯವ್ವನವನ್ನು ದೊಡ್ಡಪ್ಪ ಅಬುತಾಲಿಬನ ಮನೆಯಲ್ಲೆ ಕಳೆದ ಆತ ಮುಂದೆ ಅವನ ಸಂಸಾರದ ಸದಸ್ಯರ ಸಂಖ್ಯೆ ಹೆಚ್ಚಾಗಿ,ಸಂಸಾರ ನಿರ್ವಹಣೆಯ ಖರ್ಚು ಹೆಚ್ಚಾದುದರಿಂದ ತಾನೂ ದೊಡ್ಡಪ್ಪನ ಹೊಣೆಗೆ ಹೆಗಲುಕೊಡುವ ಅನಿವಾರ್ಯತೆ ಹುಟ್ಟಿತು.ಹೀಗಾಗಿ ಉದ್ಯೋಗದ ನಿಮಿತ್ತ ಮಹಮದನನ್ನು ಅಬು-ತಾಲಿಬ್ ಸಿರಿಯಾದ ಕಡೆ ಸಾಗುವ ಒಂದು ಕ್ಯಾರವಾನ್'ಗೆ ಸೇರಿಸಿದ.ಆ ಕ್ಯಾರವಾನ್ ಖತೀಜಾ ಎಂಬ ಸಿರಿವಂತ ವಿಧವೆಗೆ ಸೇರಿತ್ತು.ಮೊಹಮದ್ ಆ ಕ್ಯಾರವಾನಿನ ಭಾಗವಾದ,ತಾನು ಹದಿಮೂರುವರ್ಷಗಳ ಹಿಂದೆ ದೊಡ್ಡಪ್ಪನೊಂದಿಗೆ ಸಾಗಿದ ದಾರಿಯಲ್ಲೆ ಮತ್ತೆ ಈಗಲೂ ಆತ ಸಾಗಬೇಕಾಯಿತು.ಕ್ಯಾರವಾನ್ ಸಿರಿಯಾದ ರಾಜಧಾನಿ 'ಡಮಾಸ್ಕಸ್' ಸಮೀಪದ ಬೋಸ್ರಾದಲ್ಲಿ ಲಂಗರು ಹಾಕಿತು.ಮಹಮದ್ ಚಾಕಚಾಕ್ಯತೆಯಿಂದ ಉತ್ತಮ ವ್ಯಾಪಾರವನ್ನೆ ಮಾಡಿ ಲಾಭದೊಂದಿಗೆ ಮರಳಿ ಸ್ವದೇಶದತ್ತ ಹೆಜ್ಜೆ ಹಾಕಿದ.
ಆಗಲೆ ಬೋಸರಾ ಪಟ್ಟಣದಲ್ಲಿದ್ದ ಸಿರಿಯನ್ ಕ್ರೈಸ್ತರ ಸಂಪರ್ಕ ಮಹಮದನಿಗೆ ಆಗಿ ಅವರಿಂದ ಪ್ರಭಾವ ಹೊಂದುವಂತಾಯಿತು.ಅವರ ಪೂಜಾರಿ,ಸನ್ಯಾಸಿಗಳ ಹಾಗೂ ಉಚ್ಚವರ್ಗದವರೊಂದಿಗೆ ಧಾರ್ಮಿಕ ಚರ್ಚೆ-ವಿಚಾರ ವಿನಿಮಯ ನಡೆಯಲು ಅದು ಕಾರಣವಾಯಿತು.ಇದರ ಪರಿಣಾಮವನ್ನು ಮುಂದಿನ ಮಹಮದನ ಧರ್ಮಭೋದನೆಗಳಲ್ಲಿ ಕಾಣಬಹುದಾಗಿದೆ.ಮೆಕ್ಕಾಗೆ ಹಿಂದಿರುಗಿದ ಮೊಹಮದ್ ಖತೀಜಾಳಿಗೆ ವ್ಯಾಪಾರದ ಪ್ರಾಮಾಣಿಕ ಲೆಕ್ಖದ ವರದಿ ಒಪ್ಪಿಸಿದ.ಹೀಗೆ ಆತ ಆಕೆಯ ಮನಗೆದ್ದ.
(ಇನ್ನೂ ಇದೆ...)
ಕ್ರಿಸ್ತಶಕ 570ರ ಅಗೊಸ್ತು 20ರಂದು ಮಹಮದ್'ನಿಗೆ ಜನ್ಮ ನೀಡುವಾಗ ಅಮೀನಳ ಪಾಲಿಗೆ ಬಂದ ಆಸ್ತಿಯೆಂದರೆ ಇವಿಷ್ಟೆ.ಮಗುವಿನ ಜನನದ ಸುದ್ದಿ ಅರಿತ ಮಾವ ಮುತ್ತಾಲಿಬ್ ಬಂದು ಮೊಮ್ಮಗನನ್ನು ಮುದ್ದಾಡಿ ಕಾಬಾಕ್ಕೆ ಮಗುವನ್ನೊಯ್ದು,ದೇವರಿಗೆ ಕೃತಜ್ಞತೆ ಸಲ್ಲಿಸಿ ಅಲ್ಲಿಯೆ ಕಂದನಿಗೆ 'ಮಹಮದ್' ಎಂದು ನಾಮಕರಣ ಮಾಡಿಬಿಟ್ಟ (ಅರಬ್ಬಿಯಲ್ಲಿ ಮಹಮದ್ ಎಂದರೆ ಕೊಂಡಾಡುವ ಎನ್ನುವ ಅರ್ಥ ಬರುತ್ತದೆ). ಮಹಮದ್ ಹುಟ್ಟಿದ ಆ ವರ್ಷ ಅರಬ್ಬಿಯನ್ ಪಂಚಾಗದ ಪ್ರಕಾರ ಆನೆಯವರ್ಷವಾಗಿತ್ತು.
ಅರೇಬಿಯಾದ ಉತ್ತಮ ಕುಲದವರ ವಾಡಿಕೆಯಂತೆ ಹುಟ್ಟಿದ ಮಗುವಿಗೆ ದಾದಿಯಿಂದ ಮೊಲೆಯೂದಿಸುವ ವ್ಯವಸ್ಥೆ ಮಾಡಲಾಯಿತು.ಇದಕ್ಕಾಗಿ ಥುವೈಬಾ ಎಂಬ ಗುಲಾಮಳ ಕೈಗೆ ಮಗುವನ್ನ ದಾಟಿಸಲಾಯಿತು.ಸ್ವಲ್ಪ ಸಮಯದ ನಂತರ ಹಲೀಮಾ ಎಂಬ ಇನ್ನೊಬ್ಬ ದಾದಿಯನ್ನೂ ಅದಕ್ಕಾಗಿ ನೇಮಿಸಿಕೊಳ್ಳಲಾಯಿತು.'ಬೆನ್ ಸಾದ್' ಬುಡಕಟ್ಟಿನವಳಾದ ಈ ದಾದಿಯ ಎದೆಹಾಲು ಕುಡಿದು ಬೆಳೆದ ಮೊಹಮದ್ ಐದು ವರ್ಷ ಪ್ರಾಯದವನಾದ.ಮರುಭೂಮಿಯ ಭೀಕರ ವಾತಾವರಣದಲ್ಲೂ ಮಗುವಿನ ಆರೋಗ್ಯ ಸ್ಥಿರವಾಗಿರಲಿ ಎನ್ನುವ ಕಾರಣದಿಂದ ತಾಯಿ ಅಮೀನಾ ಈ ವ್ಯವಸ್ಥೆ ಮಾಡಿದ್ದಳು.
ಆರನೆ ವಯಸ್ಸಿನಲ್ಲಿ ಮಗುವನ್ನ ತನ್ನೊಂದಿಗೆ ಬಂಧುಗಳಿಗೆ ತೋರಿಸಲು ಅಮೀನಾ ಮದೀನಕ್ಕೆ ಕರೆದೊಯ್ದಳು.ಅಲ್ಲಿ ಗಂಡನ ಮನೆ ಹಾಗು ಆತನ ಸಮಾಧಿಯ ದರ್ಶನವನ್ನ ಮಗುವಿಗೆ ಮಾಡಿಸಿದಳು.ಒಂದು ತಿಂಗಳು ಅಲ್ಲಿಯೆ ಉಳಿದು ಮರುಪಯಣಕ್ಕಾಗಿ ಮಗು ಹಾಗು ಗುಲಾಮಳಾದ ಲುಮ್' ಐಮನಳೊಂದಿಗೆ ಒಂಟೆಯೇರಿದ ಅಮೀನಾ ವಾತಾವರಣದ ವೈಪರೀತ್ಯದಿಂದ ತೀವ್ರ ಅಸ್ವಸ್ಥಲಾಗಿ ನಡುದಾರಿಯಲ್ಲೆ ಮರಣಿಸಿದಳು.ಆಕೆ ಅಸುನೀಗಿದ 'ಅಲ್-ಅಬ್ಬಾ'ದಲ್ಲಿಯೆ ಆಕೆಯನ್ನ ಮಣ್ಣುಮಾಡಲಾಯಿತು.ಹೀಗೆ ಎಳೆಯ ಪ್ರಾಯದಲ್ಲಿಯೆ ಮಹಮದ್ ತಬ್ಬಲಿಯಾಗಬೇಕಾಯಿತು.ಗುಲಾಮಳಾದ ಲುಮ್-ಐಮನ್ ಮೆಕ್ಕಾಗೆ ಮಗುವನ್ನು ಕರೆದುಕೊಂಡು ಹೋದಳು.ಮುಂದೆ ಆಕೆಯೆ ಮಹಮದ್'ನ ಸಾಕುತಾಯಿಯಾಗಿ ದೇಖಾರೇಕಿ ನೋಡಿಕೊಂಡು ಬೆಳಸಿದಳು.
ಅದರ ಖರ್ಚನ್ನೆಲ್ಲ ತಾತ ಅಬ್ದುಲ್ ಮುತ್ತಾಲಿಬ್ ವಹಿಸಿಕೊಂಡ.ಅದಾಗಲೆ ಎಂಬತ್ತು ವರ್ಷದ ಆಸುಪಾಸಿನಲ್ಲಿದ್ದ ಆತ ಮೊಮ್ಮಗನನ್ನು ಬಲು ಮುದ್ದಿನಿಂದಲೆ ಸಾಕಿ ಬೆಳೆಸಿದ.ಆದರೆ ವೃದ್ದಾಪ್ಯದ ಕಾರಣ ಮುಂದಿನ ಎರಡುವರ್ಷಗಳಲ್ಲಿ ಆತನೂ ಮರಣಿಸಿದ್ದರಿಂದ ಅಜ್ಜನ ಮುಚ್ಚಟೆ-ಪ್ರೀತಿ-ವಿಶ್ವಾಸಗಳನ್ನು ಕಂಡುಂಡಿದ್ದ ಮಹಮದ್ ಆಘಾತಗೊಂಡ.ಆತನ ಮನಸ್ಸಿನ ಮೇಲೆ ಈ ಸಾವು ಗಾಢ ಪರಿಣಾಮಬೀರಿತು.ಹೀಗಾಗಿ ಆತನ ಹೊಣೆಗಾರಿಕೆ ದೊಡ್ಡಪ್ಪ ಅಬು ತಾಲಿಬ್'ಗೆ ಸೇರಿತು.ತನ್ನ ತಂದೆಯಷ್ಟೆ ಕರುಣಾಮಯಿಯಾಗಿದ್ದ ಆತ ಮುಂದಿನ ತಾರುಣ್ಯದವರೆಗೆ ಮಹಮದನನ್ನು ಒಲವಿನಿಂದಲೆ ಸಾಕಿ ಬೆಳೆಸಿದ.
ಮುಂದೆ ಅಬು-ತಾಲಿಬ್ ವ್ಯಾಪಾರಕ್ಕಾಗಿ ಸಿರಿಯಾದತ್ತ ಪ್ರಯಾಣಿಸಬೇಕಾಗಿ ಬಂದಾಗ ಆಗಿನ್ನೂ ಹನ್ನೆರಡರ ಹರೆಯದಲ್ಲಿದ್ದ ಮಹಮದ್ ಮನೆಯಲ್ಲಿ ಒಂಟಿಯಾಗಿರಬಯಸದೆ ಹಠ ಹೂಡಿ ತಾನೂ ಅವನೊಂದಿಗೆ ತೆರಳುತ್ತಾನೆ.ಈ ಪ್ರಯಾಣ ಆತನ ಬದುಕಲ್ಲಿ ಆರಂಭಿಕ ಅನುಭವ ತರುತ್ತದೆ.ಸಿರಿಯಾದಲ್ಲಿ ಆತ ಕ್ರೈಸ್ತರ ಹಾಗೂ ಯಹೂದಿಗಳ ಸಂಪರ್ಕಕ್ಕೆ ಬಂದ.ಮುಖ್ಯವಾಗಿ ಆತನಿಗೆ ಅಲ್ಲಿ ಯಹೂದಿಗಳ ಭಾಷೆ,ಸಂಸ್ಕೃತಿ,ರೀತಿನೀತಿ,ಕಟ್ಟಳೆ-ರಿವಾಜು,ಬದುಕಿನ ನಿಯಮಗಳೆಲ್ಲದರ ಪರಿಚಯವಾಯಿತು ಎಂದಿದ್ದಾನೆ ಇತಿಹಾಸಕಾರ ಮೂಯಿರ್.
'ಒಕಾಜಾ' ಅಕಾಲದ ಅರೇಬಿಯಾದ ಪ್ರಸಿದ್ಧ ಸಂತೆ ಕೂಡುವ ವ್ಯಾಪಾರಿ ಸ್ಥಳವಾಗಿತ್ತು.ಬೆನಿ ಹವಾಜಿನ್ ಹಾಗೂ ಖುರೈಷಿಗಳು ಅಲ್ಲಿ ವ್ಯಾಪಾರಕ್ಕಾಗಿ ಪ್ರತಿವರ್ಷಕ್ಕೊಮ್ಮೆ ಸೇರುವ ಪರಿಪಾಠವಿತ್ತು ವಾಸ್ತವವಾಗಿ ಇವರಿಬ್ಬರಲ್ಲೂ ಜನಾಂಗೀಯ ದ್ವೇಷದ ಭವ್ಯಹಿನ್ನೆಲೆ ಇದ್ದುದ್ದರಿಂದ ಪರಸ್ಪರ ನೆತ್ತರು ಹರಿಸಿ ಅವರು ಕಾದಾಡುತ್ತಿದ್ದರು.ಎರಡೂ ಬುಡಕಟ್ಟಿನ ಹಿರಿಯರು ಈ ಅನಗತ್ಯ ವೈರತ್ವದಿಂದ ಸತ್ತವರ ಕುಟುಂಬಗಳಿಗೆ 'ಪರಿಹಾರ' ನೀಡುವ ಮೂಲಕ ಪರಿಸ್ಥಿತಿಯನ್ನು ಹಿಡಿತಕ್ಕೆ ತರಲು ಹೆಣಗುತ್ತಿದ್ದರು.ಅವರಲ್ಲಿ ಪರಸ್ಪರ ಇದ್ದ ಈರ್ಷ್ಯೆ-ಪ್ರತಿಕಾರದ ಸ್ವಭಾವಗಳ ಬಗ್ಗೆ ಒಂದು ರಂಜನೀಯ ಕತೆ ಚಾಲ್ತಿಯಲ್ಲಿದೆ .'ಕಿನಾನಾ' ಬುಡಕಟ್ಟಿಗೆ ಸೇರಿದ ಒಬ್ಬ ವ್ಯಕ್ತಿ ಹವಾಜಿನ್ ಬುಡಕಟ್ಟಿನ ಸಾಲಗಾರನಿಂದ ಸಾಲ ಪಡೆದು ಅದನ್ನು ಹಿಂದಿರುಗಿಸದಿದ್ದಾಗ ಇದೆ 'ಒಕಾಜ್' ಸಂತೆಯ ಪ್ರಮುಖ ಸ್ಥಳದಲ್ಲಿ ಕೂತು ತನ್ನ ಬಳಿ ಒಂದು ಮಂಗವನ್ನು ಕಟ್ಟಿಹಾಕಿಕೊಂಡು "ಯಾರು ನನಗೆ ಇಂತಹದ್ದೆ ಒಂದು ಮಂಗವನ್ನು ನೀಡುತ್ತಾರೊ ಅವರಿಗೆ ಸಾಲ ಕೊಂಡವನ ಮೇಲೆ ನನಗಿರುವ ಹಕ್ಕನ್ನು ಬಿಟ್ಟು ಕೊಡುತ್ತೇನೆ!' ಎಂದು ಕೂಗಿಕೂಗಿ ಹೇಳಿದ.ಅವನ ಧ್ವನಿಯಲ್ಲಿ 'ಕಿನಾನಾ' ಪಂಗಡದ ಬಗ್ಗೆ ಇದ್ದ ಹೀಯಾಳಿಕೆಯನ್ನ ಕೇಳಿ ಕೆರಳಿದ ಆಗುಂತಕನೊಬ್ಬ ತಕ್ಷಣವೆ ಕೈಗತ್ತಿಯಿಂದ ಆ ಮಂಗದ ಕುತ್ತಿಗೆ ಕಡಿದು ಹಾಕಿದ...ಮುಂದೆ ಎರಡುದಿನ ಬಿಡದೆ ನಡೆದ ಕಾಳಗಕ್ಕೆ ಇಷ್ಟು ಕಾರಣ ಧಾರಾಳ ಸಾಕಾಯಿತು!.
ಇಂತಹ ದುರದೃಷ್ಟಕರ ಘಟನೆಗಳನ್ನು ಮರುಕಳಿಸದಂತಾಗಿಸಲು ಎರಡೂ ಗುಂಪಿನ ಹಿರಿಯರು ಅಲ್ಲಿಗೆ ವ್ಯಾಪಾರಕ್ಕೆ ಬರುವಯಾರೂ ಮಾರಣಾಂತಿಕ ಶಸ್ತ್ರಾಸ್ತ್ರಗಳನ್ನು ಅಲ್ಲಿಗೆ ತರುವಂತಿಲ್ಲವೆಂದೂ,ಬಳಿಯಿರುವುದನ್ನು ಮೆಕ್ಕಾದ ಅಬ್ದುಲ್ಲ ಇಬ್ನ ಜುಡಾನನ ಬಳಿ ಒತ್ತೆಯಿಸಿ ನಿರಾಯುಧರಾಗಿ ಬರುವಂತೆ ಕಾನೂನನ್ನೆ ಜಾರಿ ಮಾಡಿದರು.ಹೀಗಾಗಿ ಮುಂದೆ ಬಹುಕಾಲ ಅಲ್ಲಿನ ಶಾಂತಿಯನ್ನ ಕಾಪಾಡಿಕೊಳ್ಳುವುದು ಸಾಧ್ಯವಾಯಿತು,ಆದರೆ ಕ್ರಿಸ್ತಶಕ 580ರಲ್ಲಿ ಅಲ್ಲೊಂದು ಕೊಲೆಯಾಯಿತು,'ಅಲ್ ಹಿರಾ' ಪ್ರಾಂತ್ಯದ ರಾಜಕುಮಾರ ವ್ಯಾಪಾರಕ್ಕಾಗಿ ಅಲ್ಲಿಗೊಂದು ಕ್ಯಾರವಾನನ್ನು ಆ ಹಂಗಾಮಿನಲ್ಲಿ ಕಳುಹಿಸಿದ್ದ.ಅವನ ಬಗ್ಗೆ ಈರ್ಷ್ಯೆಯಿದ್ದ ಖುರೈಶಿಗಳಲ್ಲೊಬ್ಬ ಆ ಕ್ಯಾರವಾನನ್ನು ಲೂಟಿಹೊಡೆಯಲಿಕ್ಕಾಗಿ ಹವಾಜಿನರ ಆ ಕ್ಯಾರವಾನಿನ ಮುಖಂಡನನ್ನು ಹತ್ಯೆ ಮಾಡಿ ಸಂಪತ್ತನ್ನು ದೋಚಿದ.ಈ ಸುದ್ದಿ ತಿಳಿದ ಖುರೈಶಿಗಳೆಲ್ಲ ಮೆಕ್ಕಾದಲ್ಲಿ ಒಂದಾದರು ಅವರಿಗೆ ಮುಂದಾಗುವ ಅನಾಹುತದ ಮುನ್ಸೂಚನೆ ಸಿಕ್ಕಿತು.ಅವರ ಎಣಿಕೆಯಂತೆ ಹವಾಜಿನರು ಖುರೈಷಿಗಳ ಬೆನ್ನು ಹತ್ತಿದರು.ಆದರೆ ಅವರಾಗಲೆ ಮೆಕ್ಕಾದಲ್ಲಿದ್ದುದ್ದರಿಂದ ಪವಿತ್ರ ಸ್ಥಳದಲ್ಲಿ ಕಾದಾಡಲಾಗದೆ ಕೈಚೆಲ್ಲ ಬೇಕಾಯಿತು.ಹೀಗಾಗಿ ಮರುವರ್ಷ ಒಕಾಜ್'ನಲ್ಲೆ ಕಾದಾಡಲು ಆಮಂತ್ರಣ ನೀಡಿ ಹವಾಜಿನರು ಅಲ್ಲಿಂದ ನಿರ್ಗಮಿಸಿದರು.ಈ ಆಮಂತ್ರಣವನ್ನು ಒಪ್ಪಿದ ಖುರೈಷಿಗಳು ಮರುವರ್ಷ ತಪ್ಪದೆ ಬಂದು ಜೀವದ ಹಂಗು ಬಿಟ್ಟು ಹವಾಜಿನರೊಂದಿಗೆ ಕಾದಾಡಿದರು.ಹೀಗೆ ನಾಲ್ಕುವರ್ಷ ಕದನ ನಡೆದರೂ ಯಾರೊಬ್ಬರೂ ಗೆಲ್ಲದೆ,ಯಾರೊಬ್ಬರೂ ಸೋಲದೆ ಕಡೆಗೆ ಸಂಧಾನ ಅನಿವಾರ್ಯವಾಯಿತು! ಹವಾಜಿನರಲ್ಲೆ ಹೆಚ್ಚಿನ ಪ್ರಾಣ ಹಾನಿಯಾಗಿದ್ದರಿಂದ ಅವರಿಗೆ 'ರಕ್ತಹಣ' (blood money) ವನ್ನು ನೀಡುವ ನಿಯಮಕ್ಕನುಸಾರವಾಗಿ ಖುರೈಷಿಗಳು ತಮ್ಮ ಜನರನ್ನು ಅವರ ಬಳಿ ಒತ್ತೆಯಿತ್ತರು.ಅವರಲ್ಲಿ ಮುಂದೆ ಮಹಮದ್'ನ ನೆಂಟ ಹಾಗೂ ವೈರಿಯಾಗಿದ್ದ ಅಬು ಸಫ್ಯಾನನೂ ಒಬ್ಬನಾಗಿದ್ದ.ಈ ಕದನದಲ್ಲಿ ಖುರೈಷಿಗಳ ಪೈಕಿ ಎಲ್ಲಾ ಪಂಗಡದವರೂ ಪಾಲ್ಗೊಂಡಿದ್ದರು.ಉಮೈಯ್ಯಾ ಹಾಗೂ ಹಾಶಿಮ್ ಕುಟುಂಬದವರು ಅವರಲ್ಲಿ ಪ್ರಮುಖರಾಗಿದ್ದರು.ಈ ಕಾದಾಟದಲ್ಲಿ ಮಹಮದ್ ನೇರವಾಗಿ ಕತ್ತಿ ಹಿಡಿದು ಕಾದಾಡದಿದ್ದರೂ ರಣರಂಗದಲ್ಲಿ ಬತ್ತಳಿಕೆಯಿಂದ ನೆಲಕ್ಕೆ ಬಿದ್ದ ಬಾಣಗಳನ್ನು ಆಯುವ ಕೆಲಸ ಮಾಡಿ ಯೋಧರಿಗೆ ನೆರವಾದ.
ಈ 'ಅಪವಿತ್ರ ಯುದ್ಧ' ನಾಲ್ಕುವರ್ಷ ನಡೆದು ಶಾಂತಿ ನೆಲೆಸಿದ ನಂತರ ಮಹಮದ್ ಬುಡಕಟ್ಟಿನ ಕುರಿ-ಮೇಕೆಗಳನ್ನು ಊರ ಹೊರಗಿನ ಕಣಿವೆಗಳಲ್ಲಿ ಮೇಯಿಸುವ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ.ಗುಡ್ಡಬೆಟ್ಟಗಳಿಂದ ಆವೃತವಾಗಿದ್ದ ಈ ಪರಿಸರದಲ್ಲಿ ತನ್ನ ಸ್ವಭಾವಕ್ಕನುಗುಣವಾಗಿ ಏಕಾಂತದಲ್ಲಿ ಪ್ರಾಕೃತಿಕ ಸೌಂದರ್ಯ ಆಸ್ವಾದಿಸುತ್ತಾ,ಅಲ್ಲಿನ ಮೌನದಲ್ಲಿ ಲೀನವಾಗುವ -ಕಣಿವೆಯ ಭವ್ಯತೆಯನ್ನು ಅವಲೋಕಿಸಿ ಅನುಭವಿಸುವ ನಿರಾಯಾಸದ ಅವಕಾಶ ಮಹಮದನಿಗೆ ಒದಗಿ ಬಂತು.
ಒಂಟಿಯಾಗಿ ಕುರಿಮಂದೆಯೊಂದಿಗೆ ಹಗಲು ರಾತ್ರಿ ಕಳೆದರೂ ಮಹಮದ್ ಯವ್ವನದ ಸಹಜ ಆಕರ್ಷಣೆಗಳಿಗೆ ಬಲಿಯಾಗದೆ ತನ್ನ ಸದ್-ಚಾರಿತ್ರ್ಯವನ್ನು ಕಾಪಾಡಿಕೊಂಡು ಬಂದನು.ಉಚ್ಛರೀತಿಯ ನಡತೆಹೊಂದಿದ್ದ ಆತ ಮೆಲು ಮಾತಿನ-ನಾಜೂಕಿನ ನಡೆ ಹೊಂದಿದ್ದ ವ್ಯಕ್ತಿಯಾಗಿ ಗುರುತಿಸಲ್ಪಟ್ಟನು.ಗಾಂಭೀರ್ಯದ ರೀತಿಯಲ್ಲಿ ಪಳಗಿದ್ದ ಆತ ಏಕಾಗ್ರಚಿತ್ತನಾಗಿ ತನ್ನದೆ ಭಾವಪ್ರಪಂಚದಲ್ಲಿ ಮುಳುಗಿ ಹೋಗಿರುತ್ತಿದ್ದ.ಅವನ ಇವೆ ಗುಣಗಳಿಂದ ಮೆಕ್ಕಾ ನಿವಾಸಿಗಳಿಂದ ಮಹಮದ್ 'ಅಲ್-ಅಮೀನ್' ಎಂದು ಹೊಗಳಿಸಿಕೊಂಡ.ಹಾಗೆಂದರೆ ಅರಬ್ಬಿಯಲ್ಲಿ 'ಶ್ರದ್ಧಾಳು' ಎಂದರ್ಥ.ಹೀಗೆ ಯವ್ವನವನ್ನು ದೊಡ್ಡಪ್ಪ ಅಬುತಾಲಿಬನ ಮನೆಯಲ್ಲೆ ಕಳೆದ ಆತ ಮುಂದೆ ಅವನ ಸಂಸಾರದ ಸದಸ್ಯರ ಸಂಖ್ಯೆ ಹೆಚ್ಚಾಗಿ,ಸಂಸಾರ ನಿರ್ವಹಣೆಯ ಖರ್ಚು ಹೆಚ್ಚಾದುದರಿಂದ ತಾನೂ ದೊಡ್ಡಪ್ಪನ ಹೊಣೆಗೆ ಹೆಗಲುಕೊಡುವ ಅನಿವಾರ್ಯತೆ ಹುಟ್ಟಿತು.ಹೀಗಾಗಿ ಉದ್ಯೋಗದ ನಿಮಿತ್ತ ಮಹಮದನನ್ನು ಅಬು-ತಾಲಿಬ್ ಸಿರಿಯಾದ ಕಡೆ ಸಾಗುವ ಒಂದು ಕ್ಯಾರವಾನ್'ಗೆ ಸೇರಿಸಿದ.ಆ ಕ್ಯಾರವಾನ್ ಖತೀಜಾ ಎಂಬ ಸಿರಿವಂತ ವಿಧವೆಗೆ ಸೇರಿತ್ತು.ಮೊಹಮದ್ ಆ ಕ್ಯಾರವಾನಿನ ಭಾಗವಾದ,ತಾನು ಹದಿಮೂರುವರ್ಷಗಳ ಹಿಂದೆ ದೊಡ್ಡಪ್ಪನೊಂದಿಗೆ ಸಾಗಿದ ದಾರಿಯಲ್ಲೆ ಮತ್ತೆ ಈಗಲೂ ಆತ ಸಾಗಬೇಕಾಯಿತು.ಕ್ಯಾರವಾನ್ ಸಿರಿಯಾದ ರಾಜಧಾನಿ 'ಡಮಾಸ್ಕಸ್' ಸಮೀಪದ ಬೋಸ್ರಾದಲ್ಲಿ ಲಂಗರು ಹಾಕಿತು.ಮಹಮದ್ ಚಾಕಚಾಕ್ಯತೆಯಿಂದ ಉತ್ತಮ ವ್ಯಾಪಾರವನ್ನೆ ಮಾಡಿ ಲಾಭದೊಂದಿಗೆ ಮರಳಿ ಸ್ವದೇಶದತ್ತ ಹೆಜ್ಜೆ ಹಾಕಿದ.
ಆಗಲೆ ಬೋಸರಾ ಪಟ್ಟಣದಲ್ಲಿದ್ದ ಸಿರಿಯನ್ ಕ್ರೈಸ್ತರ ಸಂಪರ್ಕ ಮಹಮದನಿಗೆ ಆಗಿ ಅವರಿಂದ ಪ್ರಭಾವ ಹೊಂದುವಂತಾಯಿತು.ಅವರ ಪೂಜಾರಿ,ಸನ್ಯಾಸಿಗಳ ಹಾಗೂ ಉಚ್ಚವರ್ಗದವರೊಂದಿಗೆ ಧಾರ್ಮಿಕ ಚರ್ಚೆ-ವಿಚಾರ ವಿನಿಮಯ ನಡೆಯಲು ಅದು ಕಾರಣವಾಯಿತು.ಇದರ ಪರಿಣಾಮವನ್ನು ಮುಂದಿನ ಮಹಮದನ ಧರ್ಮಭೋದನೆಗಳಲ್ಲಿ ಕಾಣಬಹುದಾಗಿದೆ.ಮೆಕ್ಕಾಗೆ ಹಿಂದಿರುಗಿದ ಮೊಹಮದ್ ಖತೀಜಾಳಿಗೆ ವ್ಯಾಪಾರದ ಪ್ರಾಮಾಣಿಕ ಲೆಕ್ಖದ ವರದಿ ಒಪ್ಪಿಸಿದ.ಹೀಗೆ ಆತ ಆಕೆಯ ಮನಗೆದ್ದ.
(ಇನ್ನೂ ಇದೆ...)
15 October 2011
ಮರಳುಗಾಡಿನ ಮರ್ಮರ...(ಭಾಗ -4)
ಇಸ್ಮಾಯಿಲ್'ನ ವಂಶಸ್ಥರಲ್ಲಿ ಅವರ್ ಬಿನ್ ಲುಹಾಯಿ ಪ್ರಸಿದ್ಧನಾಗಿದ್ದ.ಬಲು ಧರ್ಮಿಷ್ಠನಾಗಿದ್ದ ಆತ ತನ್ನ ಉದಾರ ದಾನ-ಧರ್ಮಗಳ ಕಾರಣದಿಂದ ಜನಾನುರಾಗಿಯಾಗಿದ್ದ.ಈ ಜನಪ್ರಿಯತೆಗೆ ಮಾರುಹೋದ ಅಲ್ಲಿನ ಬುಡಕಟ್ಟಿನವರು ಅವನನ್ನೆ ತಮ್ಮ ರಾಜನನ್ನಾಗಿ ಘೋಷಿಸಿಕೊಂಡರು.ಮೆಕ್ಕಾ ಹಾಗು ಅಲ್ಲಿನ ಕಾಬಾ ಅವನ ಆಳ್ವಿಕೆಗೆ ಒಳಪಟ್ಟಿತ್ತು.ಮಧ್ಯಪ್ರಾಚ್ಯದ ದೇಶಗಳಾದ ಸಿರಿಯಾ,ಲೆಬೆನಾನ್ ಹಾಗೂ ಪ್ಯಾಲಸ್ತೈನ್'ಗಳನ್ನು ಸಂದರ್ಶಿಸಿದ ಆತ ಅಲ್ಲಿನ ವಿಗ್ರಹಾರಾಧನೆಗಳಿಂದ ಅತ್ಯಂತ ಪ್ರಭಾವಿತನಾಗಿ ಅಲ್ಲಿಂದ ಮರಳುವಾಗ ತನ್ನ ಜೊತೆಯಲ್ಲಿಯೆ ಮೆಕ್ಕಾಗೆ ಒಂದು ವಿಗ್ರಹ ತಂದ.'ಹುಬಾಬ್' ಎಂದು ಆತ ಅದನ್ನು ಕರೆದು ಕಾಬಾದಲ್ಲಿ ಅದನ್ನ ಪ್ರತಿಷ್ಠಾಪಿಸಿದ.ತನ್ನ ಜನರಿಗೆ ಅದನ್ನ ಆರಾಧಿಸಲು ಆತ ಕರೆನೀಡಿದ.ತಮ್ಮ ರಾಜನ ಆಗ್ರಹಕ್ಕೆ ಮಣಿದ ಬುಡಕಟ್ಟಿನ ಮಂದಿ ಮತ್ತೆ ಹಳೆಯ ವಿಗ್ರಹಾರಾಧನೆಗೆ ಮರಳಿದರು.
ಇಸ್ಲಾಮಿಕ್ ನಂಬಿಕೆಗಳ ಪ್ರಕಾರ ಅಬ್ರಾಹಂ ಹಾಗೂ ಇಸ್ಮಾಯಿಲ್ ಕಾಬಾವನ್ನು ನಿರ್ಮಿಸಿದ ಬಳಿಕ ಅದರ ಒಡೆತನವನ್ನು "ಜೋರ್'ಹೂಮ್" ಬುಡಕಟ್ಟಿನವರು ತಮ್ಮ ವಶಕ್ಕೆ ತೆಗೆದುಕೊಂಡರು.ಆದರೆ ಅವರ ದುಂಡಾವರ್ತಿ ನಡೆ ಹೆಚ್ಚಿದ್ದರಿಂದ ಮೆಕ್ಕಾದ ಖುರೈಷಿ ಪಂಗಡದವರು ಅವರನ್ನು ಅಲ್ಲಿಂದ ಹೊಡೆದೋಡಿಸಬೇಕಾಯಿತು.ಖುರೈಷಿಗಳಲ್ಲಿ ಹುಲುಲ್ ಹಾಗೂ ಅರಾಮ್ ಎಂಬ ಎರಡು ಪಂಗಡಗಳಿದ್ದವು.ಅಲ್ಲದೆ 'ಬಾನ್ ಕಿನಾನಾಹ್' ಎನ್ನುವಲ್ಲಿಂದ ವಲಸೆ ಬಂದಿದ್ದ ಅನೇಕ ಕುಟುಂಬಗಳೂ ಮೆಕ್ಕಾದಲ್ಲಿ ವಾಸವಿದ್ದವು.ಖುರೈಷಿಗಳ 'ಕಹುಜಾಹ್ನ್' ಎಂಬಾತ ಕಾಬಾದ ಪಾರುಪತ್ಯ ವಹಿಸಿಕೊಂಡ.ಅನಂತರದ ಪಾರುಪತ್ಯದ ಜವಾಬ್ದಾರಿ ಅವನ ಸಂತತಿಯವರಿಗೆ ಸಂದಿತು.ಅವರು ಮುಂದೆ ಹಲೀಲ್ ಬಿನ್ ಹುಬೈಷಾ ಎಂಬಾತನಿಗೆ ಅದನ್ನ ವಹಿಸಿಕೊಟ್ಟರು.ಈ ಹಲೀಲ್'ನ ಮಗಳನ್ನು ಕುಸೈ ಬಿನ್ ಕಿಲಾಬ್ ಎಂಬಾತ ಲಗ್ನವಾಗಿ ಹಲೀಲ್ ಮರಣ ಹೊಂದಿದ ಬಳಿಕ ಬುಡಕಟ್ಟಿನ ಇತರ ಆಕ್ಷಾಂಶಿಗಳೊಂದಿಗೆ ಕಾದಾಡಿ ಕಾಬಾದ ಪಾರುಪತ್ಯಕ್ಕೆ ಪ್ರಯತ್ನಿಸಿದ.ಅಂತಿಮವಾಗಿ ಒಪ್ಪಂದವೊಂದು ಜರುಗಿ ಖುರೈಶಿಗಳಿಗೆ ಅಲ್ಲಿ ಹೆಚ್ಚಿನ ಅಧಿಕಾರ ಇರುವುದಾಗಿ ತೀರ್ಮಾನ ಹೊರಬಿದ್ದು ಅವನಿಗೆ ಕಾಬಾದ ಪಾರುಪತ್ಯವನ್ನ ಅವರ ಸಮ್ಮತಿ ಪಡೆದು ವಹಿಸಲಾಯ್ತು.ಅವನು ಕ್ರಮೇಣ ತನ್ನವರನ್ನಲ್ಲಿಗೆ ಬರಮಾಡಿಕೊಂಡು ಮುಂದೆ ತಾನೆ ಅಲ್ಲಿನ ರಾಜ ಎಂದು ಕರೆದುಕೊಂಡ!
ಕುಸೈನ ಆಡಳಿತದಲ್ಲಿ ಕಾಬಾಕ್ಕೆ ಬರುವ ಯಾತ್ರಿಕರಿಗೆ ನೀರು ನೀಡುವ ಪವಿತ್ರ ಕಾರ್ಯ ,'ಎನ್-ನದ್ವಾ' ಸಭಾಂಗಣದ ಯಜಮಾನಿಕೆ,ಯುದ್ಧ ದ್ವಜದ ಸ್ವಾಧೀನತೆ ಅವನ ಬಳಿಯೆ ಇತ್ತು.ಅವನ ನಂತರ ಅವನ ನಾಲ್ವರು ಮಕ್ಕಳು ಸೌಹಾರ್ದತೆಯಿಂದ ಭಿನ್ನಾಭಿಪ್ರಾಯಕ್ಕೆ ಎಡೆ ಮಾಡಿಕೊಡದಂತೆ ತಂದೆ ಹಾಕಿಕೊಟ್ಟಿದ್ದ ದಾರಿಯಲ್ಲೆ ಆಡಳಿತದ ಯಜಮಾನಿಕೆ ನಡೆಸಿದರು.ಆನಂತರ ಅವನ ಸಹೋದರರ ಮಕ್ಕಳ ಕೈಮೇಲಾಗಿ ಖುರೈಶಿಯರ ಅಬ್ಬೆ ಮುನಾಫನ ಮಗ ಅಲ್-ಮುತ್ತಲಿಬ್ ಪ್ರಮುಖನಾಗಿ ಹೊಮ್ಮಿದ.ಅವನ ನಂತರ ಮೆಕ್ಕಾ ಅವನ ತಮ್ಮ ಹಾಶೀಮನ ಕೈಸೇರಿತು.ಆದರೆ ಉಮಯ್ಯ ಎಂಬಾತ ಚಿಕ್ಕಪ್ಪನ ಮೇಲೆ ಹಕ್ಕಿಗಾಗಿ ವಾಜ್ಯ ಹೂಡಿದ.ಇದು ಪ್ರಕೋಪಕ್ಕೆ ತಿರುಗಿ ಹೋರಾಟ ನಡೆದರೂ ಹಾಶೀಮನದೆ ಮೇಲುಗೈಯಾಯಿತು.ಕ್ರಿಸ್ತಶಕ 510ರಲ್ಲಿ ಹಾಶೀಮ್ ಸತ್ತ ನಂತರ ಅವನ ಮಗ ಅಬ್ದುಲ್ ಮುತ್ತಾಲಿಬ್ ಬೆಳಕಿಗೆ ಬಂದ.ಇವನಿಗೆ ಒಟ್ಟು ಹನ್ನೆರಡು ಗಂಡು ಹಾಗು ಆರು ಹೆಣ್ಣು ಮಕ್ಕಳಿದ್ದರು.ಮುಂದೆ ಪ್ರವಾದಿ ಎಂದೆನಿಸಿದ ಮಹಮದ್ದನ ತಂದೆ ಅಬ್ದುಲ್ಲಾ ಇವರಲ್ಲೊಬ್ಬ.ಆತ ನಂತರ 'ಖುರಾಯಿಶ್' ಬುಡಕಟ್ಟಿನ 'ಸುಹ್ರಾ' ಮನೆತನದ ಅಮೀನಾ ಎನ್ನುವ ಕನ್ಯೆಯನ್ನ ವಿವಾಹ ಮಾಡಿಕೊಂಡ,ಇವರ ಒಬ್ಬನೆ ಮಗ ಮಹಮದ್.ದಾಖಲೆಗಳ ಪ್ರಕಾರ ಮಹಮದ್ ಜನಿಸಿದ್ದು ಕ್ರಿಸ್ತಶಕ 571ರಲ್ಲಿ.ಈ ಕಾಲಘಟ್ಟದಲ್ಲಿ ಮೆಕ್ಕಾದ ಮೇಲಿನ ಹಕ್ಕಿಗಾಗಿ ಆಗಾಗ ಹಾಶಿಮ್ ಹಾಗು ಉಮಯ್ಯಾನ ಸಂತತಿಯವರು ಕಾದಾಡುತ್ತಲೆ ಇದ್ದರು.ಅಲ್ಲಿನ ಶೇಖ್ ಪದವಿ ಗಳಿಸಿದ ಹಶೀಂ ಕುಲದವರು ಉಮೈದರನ್ನು ಅವಕಾಶ ಸಿಕ್ಕಾಗಲೆಲ್ಲ ಹೀಯಾಳಿಸಿ-ಕೆಣಕಿ ಈರ್ಷ್ಯೆಯಿಂದ ಅವರ ಸ್ಥಾನಮಾನಗಳಿಗೆ ಧಕ್ಕೆ ತರುತ್ತಲೆಯಿದ್ದರು.ಜೋರ್'ಹೂಮ್' ಬುಡಕಟ್ಟಿನವರು ಕಾದಾಟದಲ್ಲಿ ಸೋತ ನಂತರ ಮೆಕ್ಕಾದ ಒಡೆತನ ಖುಜಾಹ ಬುಡಕಟ್ಟಿಗೆ ಸರಿದಾಗ ಅವರು ಅಲ್ಲಿನ ಪವಿತ್ರ ಕಪ್ಪುಶಿಲೆ 'ಮುಕಾಂ ಇಬ್ರಾಹಿಮ್'ನ್ನು ಹಾಗೂ ಜುಮ್ ಜುಮ್ ಬಾವಿಯನ್ನೂ ಯಾರಿಗೂ ಸಿಗದಂತೆ ಹುಗಿದು ಮೆಕ್ಕಾವನ್ನು ತ್ಯಜಿಸಿ ಹೋದರು.ಕ್ರಮೇಣ ಕುಸೈ ಬಿನ್ ಕಿಲಾಬನ ಕಾಲಕ್ಕೆ ಮತ್ತೆ ಮೆಕ್ಕಾ ಮೆರಗು ಪಡೆಯಿತು.ಖುರೈಷಿಗಳು ಬಂದು ಅಲ್ಲಿ ನೆಲೆಯೂರಿದರು.ಆದರೆ ಅಬ್ದುಲ್ ಮುತ್ತಾಲಿಬನ ಕಾಲದವರೆಗೂ ಜುಮ್ ಜುಮ್ ಬಾವಿ ಪತ್ತೆಯೆ ಆಗಿರಲಿಲ್ಲ.ಮಹಮದ್'ನ ಅಜ್ಜ ಅಬ್ದುಲ್ ಮುತ್ತಲಿಬ್'ನಿಗೆ ಒಂದು ರಾತ್ರೆ ಬಿದ್ದ ಕನಸು ಅದರ ಕುರುಹನ್ನು ತೋರಿಸಿತು .ಆಪ್ರಕಾರವೆ ನೆಲ ಅಗೆದ ಅವನಿಗೆ ಬಾವಿ ಗೋಚರಿಸಿತು.ಇನ್ನೂ ನೆಲ ಅಗೆದಾಗ ಅಪಾರ ಶಸ್ತ್ರಾಸ್ತ್ರ ಹಾಗೂ ಚಿನ್ನಾಭರಣಗಳೂ ಅಲ್ಲಿ ದೊರೆತವು.ಇದರ ವಾಸನೆ ಹಿಡಿದ ಖುರೈಷಿಗಳು ಸಂಪತ್ತಿನ ಹಂಚಿಕೆಗೆ ಕೋರಿದರು,ಆದರೆ ಅಬ್ದುಲ್ ಮುತ್ತಾಲಿಬ್ ನಿರಾಕರಿಸಿದ.ಆದರೆ ಆತ ಸಮಸ್ಯೆಯ ಪರಿಹಾರಕ್ಕೆ ಮಧ್ಯವರ್ತಿಯೋಬ್ಬನ ನೇಮಕಕ್ಕೆ ಒಪ್ಪಿಕೊಂಡ! ಅದೆ ಸಮಯಕ್ಕೆ ಒಂದು ವಿಚಿತ್ರವಾದ ಹರಕೆಯನ್ನೂ ಹೊತ್ತ.
ಅದೇನೆಂದರೆ ದೇವರು ತನಗೆ ಹತ್ತು ಮಕ್ಕಳನ್ನು ಕರುಣಿಸಿದರೆ ಅವರಲ್ಲಿ ಒಬ್ಬನನ್ನು ಆತ ವಯಸ್ಸಿಗೆ ಬಂದ ಕೂಡಲೆ ಕಾಬಾದ ಗುಡಿಗೆ ಬಲಿನೀಡುವೆ! ಎಂಬುದಾಗಿತ್ತು.ಅದೆ ಪ್ರಕಾರ ಅವನಿಗೆ ಸಾಲಾಗಿ ಹತ್ತು ಮಕ್ಕಳಾದವು.ಅವರಲ್ಲಿ ಅಬ್ದುಲ್ಲ ಎಂಬಾತನಿದ್ದ,ಅವನೆ ಮುಂದೆ ಮಹಮದ್'ನ ತಂದೆಯಾದದ್ದು.ಮಕ್ಕಳಿಗೆ ಈ ವಿಷಯ ಅರುಹಿದ ಮುತ್ತಲಿಬ್,ಅವರು ತಂದೆಯ ಹರಕೆ ಪೂರೈಸಲು ಸಿದ್ಧರಾದರು.ಆದರೆ ಯಾರನ್ನ ಬಲಿ ನೀಡೋದು ಎಂಬ ಪ್ರಶ್ನೆ ಉದ್ಭವಿಸಿತು.
ಅದಕ್ಕೆ ಪರಿಹಾರವಾಗಿ ಕಾಬಾದ 'ಹುಬುಲ್' ವಿಗ್ರಹದ ಮುಂದೆ ಹತ್ತೂ ಜನರ ಹೆಸರು ಬರೆದ ಪ್ರತ್ಯೇಕ ಬಾಣಗಳನ್ನಿಟ್ಟು ಅಲ್ಲಿನ ಪೂಜಾರಿಯಿಂದ ಒಂದನ್ನು ಎತ್ತಿಸಲಾಯಿತು.ಸಂಪ್ರದಾಯದ ಪ್ರಕಾರ ಅದನ್ನ ಬಿಲ್ಲಿಗೆ ಹೂಡಿ ಹೊಡೆದಾದ ನಂತರ ನೋಡಿದಾಗ ಅದು ಅಬ್ದುಲ್ಲಾನ ಹೆಸರಿನದಾಗಿತ್ತು! ಅವನ ಬಗ್ಗೆ ಕನಿಕರಗೊಂಡ ಖುರೈಷಿಗಳು ಮುತ್ತಲಿಬ್ ಬಲಿ ನೀಡಲು ಒರೆಯಿಂದ ಕತ್ತಿ ತೆಗೆದಾಗಲೆ ಅವನನ್ನ ತಡೆದರು.ಹೀಗಾದರೆ ಹರಕೆ ಪೂರೈಕೆ ಹೇಗೆಂದು ಆತ ಕೇಳಿದಾಗ,ಅಬ್ದುಲ್ಲಾನ ಬದಲು ಹತ್ತು ಒಂಟೆ ಬಲಿನೀಡಲು ಸೂಚಿಸಲಾಯಿತು.ಅವರ ಸೂಚನೆಯಂತೆ ಒಂಟೆಗಳನ್ನು ಪ್ರತಿನಿಧಿಸುವ ಹೆಸರುಗಳ ಒಟ್ಟಿಗೆ ಅಬ್ದುಲ್ಲಾನ ಹೆಸರಿನ ಚೀಟಿ ಇಟ್ಟು ಎತ್ತಿದಾಗ ಅಬ್ದುಲ್ಲನ ಚೀಟಿಯೆ ಬಂತು! ಹೀಗೆ ಹತ್ತರ ಸಂಖ್ಯೆಗಳಲ್ಲಿ ಒಂಟೆಗಳ ಸಂಖ್ಯೆ ಹೆಚ್ಚಿಸುತ್ತಾ ಹೋದಾಗಲೂ ದುರಾದೃಷ್ಟವಶಾತ್ ಅಬ್ದುಲ್ಲಾನ ಹೆಸರೆ ಮತ್ತೆ ಮತ್ತೆ ಬಂತು! ಕಡೆಗೆ ಅವನ ಹೆಸರು ತಪ್ಪಿದ ಚೀಟಿ ಮೇಲೇಳುವಾಗ ಒಂಟೆಗಳ ಸಂಖ್ಯೆ ನೂರು ಮುಟ್ಟಿತ್ತು.ಹೀಗಾಗಿ ಆ ನೂರೂ ಒಂಟೆಗಳನ್ನ ಬಲಿನೀಡಿ ಮುತ್ತಲಿಬ್ ತನ್ನ ಹರಕೆ ಮುಟ್ಟಿಸಿದ.ಹೀಗಾಗಿ ಮುಂದೆ ಮಹಮದ್ ತಾನು 'ಎರಡು ಬಲಿದಾನಗೈದವರ ಮಗ" ಎಂದು ಹೇಳಿಕೊಳ್ಳಲು ಇದೆ ಕಾರಣ.
ಮೆಕ್ಕವನ್ನ ಯಾವ ಅಧಿಕೃತ ಸರಕಾರಗಳೂ ಎಂದೂ ಆಳಿರಲಿಲ್ಲ.ಅದು ಆಗಾಗ ಬುಡಕಟ್ಟುಗಳ ಅಧೀನದಲ್ಲಷ್ಟೆ ಇತ್ತು.ಅವಕ್ಕೂ ಅವುಗಳದ್ದೆ ಆದ ರೀತಿನೀತಿ,ನಡೆನುಡಿಗಳಿದ್ದವು.ಕ್ಷುಲ್ಲಕ ಕಾರಣಕ್ಕೂ ರಕ್ತಚಲ್ಲಿ ಕಾದಾಡುವ ಹಾಗೂ ಪ್ರತಿಕಾರಕ್ಕಾಗಿ ಹಾತೊರೆಯುವ ಅರಬ್ಬರ ಗುಣ ಇಂದಿಗೂ ಅಷ್ಟೆ ಪ್ರಖರವಾಗಿರುವುದನ್ನು ಕಾಣಬಹುದಾಗಿದೆ.
ಒಂದು ಬಾರಿ ಒಬ್ಬನ ರಕ್ತ ಚಲ್ಲಿದಾಗ ಆ ವ್ಯಕ್ತಿಯ ಕುಟುಂಬ,ಬುಡಕಟ್ಟು,ಪಂಗಡ,ಜನಾಂಗದ ಉಳಿದವರು ಅವನನ್ನು ಕೊಲೆ ಮಾಡಿದ ವ್ಯಕ್ತಿಯನ್ನು ಅಥವಾ ಅವನ ಬುಡಕಟ್ಟನ್ನು ಪ್ರತಿಕಾರದ ಸಲುವಾಗಿ ಬೇಟೆಯಾಡುವುದು ಅಂದೂ ಸಾಮಾನ್ಯವಾಗಿತ್ತು,ಇಂದೂ ಸಾಮಾನ್ಯವಾಗಿಯೆ ಉಳಿದುಬಂದಿದೆ! ಹಾಗೊಂದುವೇಳೆ ಎದುರಾಳಿಗಳು ಬಲಿಷ್ಠರಾಗಿದ್ದಾಗ ಕೆಲಕಾಲ ಹಿಂದಡಿ ಇಡಲಾಗುತ್ತಿತ್ತಾದರೂ ಒಂದೊಮ್ಮೆ ಅವಕಾಶ ಸಿಕ್ಕರೆ ಪ್ರತಿಕಾರ ತೀರಿಸಿಕೊಳ್ಳುವುದು ತಮ್ಮ ಜನ್ಮಸಿದ್ಧ ಹಕ್ಕೆಂದೆ ಅಲ್ಲಿ ಬಗೆಯಲಾಗುತ್ತಿತ್ತು.ಅದಕ್ಕೆ ಅಗತ್ಯವಾಗಿ ಇನ್ನೊಬ್ಬ ಬಲವಂತನ ನೆರವನ್ನು ಪಡೆಯಲಾಗುತ್ತಿತ್ತು.ಅಂತಹ ಒಬ್ಬ ಬಲವಂತನೆ ಪ್ರವಾದಿ ಮಹಮದ್ ಪೂರ್ವಜ ಕೂಸೈ.ಕ್ರಿಸ್ತಶಕ 400ರ ಕಾಲಕ್ಕೆ ಈತ ಪ್ರಶ್ನಾತೀತನಾಗಿರಲು ಜನಬೆಂಬಲಿತ ಈತನ ಬಾಹುಬಲವೆ ಕಾರಣ ಎಂದರೂ ತಪ್ಪಿಲ್ಲ.
(ನಿರೂಪಣೆ ಇಲ್ಲಿಗೆ ಮುಗಿಯಿತು...ಇನ್ನು ಪ್ರವಾದಿಯ ಕಥೆ ಶುರು...)
ಇಸ್ಲಾಮಿಕ್ ನಂಬಿಕೆಗಳ ಪ್ರಕಾರ ಅಬ್ರಾಹಂ ಹಾಗೂ ಇಸ್ಮಾಯಿಲ್ ಕಾಬಾವನ್ನು ನಿರ್ಮಿಸಿದ ಬಳಿಕ ಅದರ ಒಡೆತನವನ್ನು "ಜೋರ್'ಹೂಮ್" ಬುಡಕಟ್ಟಿನವರು ತಮ್ಮ ವಶಕ್ಕೆ ತೆಗೆದುಕೊಂಡರು.ಆದರೆ ಅವರ ದುಂಡಾವರ್ತಿ ನಡೆ ಹೆಚ್ಚಿದ್ದರಿಂದ ಮೆಕ್ಕಾದ ಖುರೈಷಿ ಪಂಗಡದವರು ಅವರನ್ನು ಅಲ್ಲಿಂದ ಹೊಡೆದೋಡಿಸಬೇಕಾಯಿತು.ಖುರೈಷಿಗಳಲ್ಲಿ ಹುಲುಲ್ ಹಾಗೂ ಅರಾಮ್ ಎಂಬ ಎರಡು ಪಂಗಡಗಳಿದ್ದವು.ಅಲ್ಲದೆ 'ಬಾನ್ ಕಿನಾನಾಹ್' ಎನ್ನುವಲ್ಲಿಂದ ವಲಸೆ ಬಂದಿದ್ದ ಅನೇಕ ಕುಟುಂಬಗಳೂ ಮೆಕ್ಕಾದಲ್ಲಿ ವಾಸವಿದ್ದವು.ಖುರೈಷಿಗಳ 'ಕಹುಜಾಹ್ನ್' ಎಂಬಾತ ಕಾಬಾದ ಪಾರುಪತ್ಯ ವಹಿಸಿಕೊಂಡ.ಅನಂತರದ ಪಾರುಪತ್ಯದ ಜವಾಬ್ದಾರಿ ಅವನ ಸಂತತಿಯವರಿಗೆ ಸಂದಿತು.ಅವರು ಮುಂದೆ ಹಲೀಲ್ ಬಿನ್ ಹುಬೈಷಾ ಎಂಬಾತನಿಗೆ ಅದನ್ನ ವಹಿಸಿಕೊಟ್ಟರು.ಈ ಹಲೀಲ್'ನ ಮಗಳನ್ನು ಕುಸೈ ಬಿನ್ ಕಿಲಾಬ್ ಎಂಬಾತ ಲಗ್ನವಾಗಿ ಹಲೀಲ್ ಮರಣ ಹೊಂದಿದ ಬಳಿಕ ಬುಡಕಟ್ಟಿನ ಇತರ ಆಕ್ಷಾಂಶಿಗಳೊಂದಿಗೆ ಕಾದಾಡಿ ಕಾಬಾದ ಪಾರುಪತ್ಯಕ್ಕೆ ಪ್ರಯತ್ನಿಸಿದ.ಅಂತಿಮವಾಗಿ ಒಪ್ಪಂದವೊಂದು ಜರುಗಿ ಖುರೈಶಿಗಳಿಗೆ ಅಲ್ಲಿ ಹೆಚ್ಚಿನ ಅಧಿಕಾರ ಇರುವುದಾಗಿ ತೀರ್ಮಾನ ಹೊರಬಿದ್ದು ಅವನಿಗೆ ಕಾಬಾದ ಪಾರುಪತ್ಯವನ್ನ ಅವರ ಸಮ್ಮತಿ ಪಡೆದು ವಹಿಸಲಾಯ್ತು.ಅವನು ಕ್ರಮೇಣ ತನ್ನವರನ್ನಲ್ಲಿಗೆ ಬರಮಾಡಿಕೊಂಡು ಮುಂದೆ ತಾನೆ ಅಲ್ಲಿನ ರಾಜ ಎಂದು ಕರೆದುಕೊಂಡ!
ಕುಸೈನ ಆಡಳಿತದಲ್ಲಿ ಕಾಬಾಕ್ಕೆ ಬರುವ ಯಾತ್ರಿಕರಿಗೆ ನೀರು ನೀಡುವ ಪವಿತ್ರ ಕಾರ್ಯ ,'ಎನ್-ನದ್ವಾ' ಸಭಾಂಗಣದ ಯಜಮಾನಿಕೆ,ಯುದ್ಧ ದ್ವಜದ ಸ್ವಾಧೀನತೆ ಅವನ ಬಳಿಯೆ ಇತ್ತು.ಅವನ ನಂತರ ಅವನ ನಾಲ್ವರು ಮಕ್ಕಳು ಸೌಹಾರ್ದತೆಯಿಂದ ಭಿನ್ನಾಭಿಪ್ರಾಯಕ್ಕೆ ಎಡೆ ಮಾಡಿಕೊಡದಂತೆ ತಂದೆ ಹಾಕಿಕೊಟ್ಟಿದ್ದ ದಾರಿಯಲ್ಲೆ ಆಡಳಿತದ ಯಜಮಾನಿಕೆ ನಡೆಸಿದರು.ಆನಂತರ ಅವನ ಸಹೋದರರ ಮಕ್ಕಳ ಕೈಮೇಲಾಗಿ ಖುರೈಶಿಯರ ಅಬ್ಬೆ ಮುನಾಫನ ಮಗ ಅಲ್-ಮುತ್ತಲಿಬ್ ಪ್ರಮುಖನಾಗಿ ಹೊಮ್ಮಿದ.ಅವನ ನಂತರ ಮೆಕ್ಕಾ ಅವನ ತಮ್ಮ ಹಾಶೀಮನ ಕೈಸೇರಿತು.ಆದರೆ ಉಮಯ್ಯ ಎಂಬಾತ ಚಿಕ್ಕಪ್ಪನ ಮೇಲೆ ಹಕ್ಕಿಗಾಗಿ ವಾಜ್ಯ ಹೂಡಿದ.ಇದು ಪ್ರಕೋಪಕ್ಕೆ ತಿರುಗಿ ಹೋರಾಟ ನಡೆದರೂ ಹಾಶೀಮನದೆ ಮೇಲುಗೈಯಾಯಿತು.ಕ್ರಿಸ್ತಶಕ 510ರಲ್ಲಿ ಹಾಶೀಮ್ ಸತ್ತ ನಂತರ ಅವನ ಮಗ ಅಬ್ದುಲ್ ಮುತ್ತಾಲಿಬ್ ಬೆಳಕಿಗೆ ಬಂದ.ಇವನಿಗೆ ಒಟ್ಟು ಹನ್ನೆರಡು ಗಂಡು ಹಾಗು ಆರು ಹೆಣ್ಣು ಮಕ್ಕಳಿದ್ದರು.ಮುಂದೆ ಪ್ರವಾದಿ ಎಂದೆನಿಸಿದ ಮಹಮದ್ದನ ತಂದೆ ಅಬ್ದುಲ್ಲಾ ಇವರಲ್ಲೊಬ್ಬ.ಆತ ನಂತರ 'ಖುರಾಯಿಶ್' ಬುಡಕಟ್ಟಿನ 'ಸುಹ್ರಾ' ಮನೆತನದ ಅಮೀನಾ ಎನ್ನುವ ಕನ್ಯೆಯನ್ನ ವಿವಾಹ ಮಾಡಿಕೊಂಡ,ಇವರ ಒಬ್ಬನೆ ಮಗ ಮಹಮದ್.ದಾಖಲೆಗಳ ಪ್ರಕಾರ ಮಹಮದ್ ಜನಿಸಿದ್ದು ಕ್ರಿಸ್ತಶಕ 571ರಲ್ಲಿ.ಈ ಕಾಲಘಟ್ಟದಲ್ಲಿ ಮೆಕ್ಕಾದ ಮೇಲಿನ ಹಕ್ಕಿಗಾಗಿ ಆಗಾಗ ಹಾಶಿಮ್ ಹಾಗು ಉಮಯ್ಯಾನ ಸಂತತಿಯವರು ಕಾದಾಡುತ್ತಲೆ ಇದ್ದರು.ಅಲ್ಲಿನ ಶೇಖ್ ಪದವಿ ಗಳಿಸಿದ ಹಶೀಂ ಕುಲದವರು ಉಮೈದರನ್ನು ಅವಕಾಶ ಸಿಕ್ಕಾಗಲೆಲ್ಲ ಹೀಯಾಳಿಸಿ-ಕೆಣಕಿ ಈರ್ಷ್ಯೆಯಿಂದ ಅವರ ಸ್ಥಾನಮಾನಗಳಿಗೆ ಧಕ್ಕೆ ತರುತ್ತಲೆಯಿದ್ದರು.ಜೋರ್'ಹೂಮ್' ಬುಡಕಟ್ಟಿನವರು ಕಾದಾಟದಲ್ಲಿ ಸೋತ ನಂತರ ಮೆಕ್ಕಾದ ಒಡೆತನ ಖುಜಾಹ ಬುಡಕಟ್ಟಿಗೆ ಸರಿದಾಗ ಅವರು ಅಲ್ಲಿನ ಪವಿತ್ರ ಕಪ್ಪುಶಿಲೆ 'ಮುಕಾಂ ಇಬ್ರಾಹಿಮ್'ನ್ನು ಹಾಗೂ ಜುಮ್ ಜುಮ್ ಬಾವಿಯನ್ನೂ ಯಾರಿಗೂ ಸಿಗದಂತೆ ಹುಗಿದು ಮೆಕ್ಕಾವನ್ನು ತ್ಯಜಿಸಿ ಹೋದರು.ಕ್ರಮೇಣ ಕುಸೈ ಬಿನ್ ಕಿಲಾಬನ ಕಾಲಕ್ಕೆ ಮತ್ತೆ ಮೆಕ್ಕಾ ಮೆರಗು ಪಡೆಯಿತು.ಖುರೈಷಿಗಳು ಬಂದು ಅಲ್ಲಿ ನೆಲೆಯೂರಿದರು.ಆದರೆ ಅಬ್ದುಲ್ ಮುತ್ತಾಲಿಬನ ಕಾಲದವರೆಗೂ ಜುಮ್ ಜುಮ್ ಬಾವಿ ಪತ್ತೆಯೆ ಆಗಿರಲಿಲ್ಲ.ಮಹಮದ್'ನ ಅಜ್ಜ ಅಬ್ದುಲ್ ಮುತ್ತಲಿಬ್'ನಿಗೆ ಒಂದು ರಾತ್ರೆ ಬಿದ್ದ ಕನಸು ಅದರ ಕುರುಹನ್ನು ತೋರಿಸಿತು .ಆಪ್ರಕಾರವೆ ನೆಲ ಅಗೆದ ಅವನಿಗೆ ಬಾವಿ ಗೋಚರಿಸಿತು.ಇನ್ನೂ ನೆಲ ಅಗೆದಾಗ ಅಪಾರ ಶಸ್ತ್ರಾಸ್ತ್ರ ಹಾಗೂ ಚಿನ್ನಾಭರಣಗಳೂ ಅಲ್ಲಿ ದೊರೆತವು.ಇದರ ವಾಸನೆ ಹಿಡಿದ ಖುರೈಷಿಗಳು ಸಂಪತ್ತಿನ ಹಂಚಿಕೆಗೆ ಕೋರಿದರು,ಆದರೆ ಅಬ್ದುಲ್ ಮುತ್ತಾಲಿಬ್ ನಿರಾಕರಿಸಿದ.ಆದರೆ ಆತ ಸಮಸ್ಯೆಯ ಪರಿಹಾರಕ್ಕೆ ಮಧ್ಯವರ್ತಿಯೋಬ್ಬನ ನೇಮಕಕ್ಕೆ ಒಪ್ಪಿಕೊಂಡ! ಅದೆ ಸಮಯಕ್ಕೆ ಒಂದು ವಿಚಿತ್ರವಾದ ಹರಕೆಯನ್ನೂ ಹೊತ್ತ.
ಅದೇನೆಂದರೆ ದೇವರು ತನಗೆ ಹತ್ತು ಮಕ್ಕಳನ್ನು ಕರುಣಿಸಿದರೆ ಅವರಲ್ಲಿ ಒಬ್ಬನನ್ನು ಆತ ವಯಸ್ಸಿಗೆ ಬಂದ ಕೂಡಲೆ ಕಾಬಾದ ಗುಡಿಗೆ ಬಲಿನೀಡುವೆ! ಎಂಬುದಾಗಿತ್ತು.ಅದೆ ಪ್ರಕಾರ ಅವನಿಗೆ ಸಾಲಾಗಿ ಹತ್ತು ಮಕ್ಕಳಾದವು.ಅವರಲ್ಲಿ ಅಬ್ದುಲ್ಲ ಎಂಬಾತನಿದ್ದ,ಅವನೆ ಮುಂದೆ ಮಹಮದ್'ನ ತಂದೆಯಾದದ್ದು.ಮಕ್ಕಳಿಗೆ ಈ ವಿಷಯ ಅರುಹಿದ ಮುತ್ತಲಿಬ್,ಅವರು ತಂದೆಯ ಹರಕೆ ಪೂರೈಸಲು ಸಿದ್ಧರಾದರು.ಆದರೆ ಯಾರನ್ನ ಬಲಿ ನೀಡೋದು ಎಂಬ ಪ್ರಶ್ನೆ ಉದ್ಭವಿಸಿತು.
ಅದಕ್ಕೆ ಪರಿಹಾರವಾಗಿ ಕಾಬಾದ 'ಹುಬುಲ್' ವಿಗ್ರಹದ ಮುಂದೆ ಹತ್ತೂ ಜನರ ಹೆಸರು ಬರೆದ ಪ್ರತ್ಯೇಕ ಬಾಣಗಳನ್ನಿಟ್ಟು ಅಲ್ಲಿನ ಪೂಜಾರಿಯಿಂದ ಒಂದನ್ನು ಎತ್ತಿಸಲಾಯಿತು.ಸಂಪ್ರದಾಯದ ಪ್ರಕಾರ ಅದನ್ನ ಬಿಲ್ಲಿಗೆ ಹೂಡಿ ಹೊಡೆದಾದ ನಂತರ ನೋಡಿದಾಗ ಅದು ಅಬ್ದುಲ್ಲಾನ ಹೆಸರಿನದಾಗಿತ್ತು! ಅವನ ಬಗ್ಗೆ ಕನಿಕರಗೊಂಡ ಖುರೈಷಿಗಳು ಮುತ್ತಲಿಬ್ ಬಲಿ ನೀಡಲು ಒರೆಯಿಂದ ಕತ್ತಿ ತೆಗೆದಾಗಲೆ ಅವನನ್ನ ತಡೆದರು.ಹೀಗಾದರೆ ಹರಕೆ ಪೂರೈಕೆ ಹೇಗೆಂದು ಆತ ಕೇಳಿದಾಗ,ಅಬ್ದುಲ್ಲಾನ ಬದಲು ಹತ್ತು ಒಂಟೆ ಬಲಿನೀಡಲು ಸೂಚಿಸಲಾಯಿತು.ಅವರ ಸೂಚನೆಯಂತೆ ಒಂಟೆಗಳನ್ನು ಪ್ರತಿನಿಧಿಸುವ ಹೆಸರುಗಳ ಒಟ್ಟಿಗೆ ಅಬ್ದುಲ್ಲಾನ ಹೆಸರಿನ ಚೀಟಿ ಇಟ್ಟು ಎತ್ತಿದಾಗ ಅಬ್ದುಲ್ಲನ ಚೀಟಿಯೆ ಬಂತು! ಹೀಗೆ ಹತ್ತರ ಸಂಖ್ಯೆಗಳಲ್ಲಿ ಒಂಟೆಗಳ ಸಂಖ್ಯೆ ಹೆಚ್ಚಿಸುತ್ತಾ ಹೋದಾಗಲೂ ದುರಾದೃಷ್ಟವಶಾತ್ ಅಬ್ದುಲ್ಲಾನ ಹೆಸರೆ ಮತ್ತೆ ಮತ್ತೆ ಬಂತು! ಕಡೆಗೆ ಅವನ ಹೆಸರು ತಪ್ಪಿದ ಚೀಟಿ ಮೇಲೇಳುವಾಗ ಒಂಟೆಗಳ ಸಂಖ್ಯೆ ನೂರು ಮುಟ್ಟಿತ್ತು.ಹೀಗಾಗಿ ಆ ನೂರೂ ಒಂಟೆಗಳನ್ನ ಬಲಿನೀಡಿ ಮುತ್ತಲಿಬ್ ತನ್ನ ಹರಕೆ ಮುಟ್ಟಿಸಿದ.ಹೀಗಾಗಿ ಮುಂದೆ ಮಹಮದ್ ತಾನು 'ಎರಡು ಬಲಿದಾನಗೈದವರ ಮಗ" ಎಂದು ಹೇಳಿಕೊಳ್ಳಲು ಇದೆ ಕಾರಣ.
ಮೆಕ್ಕವನ್ನ ಯಾವ ಅಧಿಕೃತ ಸರಕಾರಗಳೂ ಎಂದೂ ಆಳಿರಲಿಲ್ಲ.ಅದು ಆಗಾಗ ಬುಡಕಟ್ಟುಗಳ ಅಧೀನದಲ್ಲಷ್ಟೆ ಇತ್ತು.ಅವಕ್ಕೂ ಅವುಗಳದ್ದೆ ಆದ ರೀತಿನೀತಿ,ನಡೆನುಡಿಗಳಿದ್ದವು.ಕ್ಷುಲ್ಲಕ ಕಾರಣಕ್ಕೂ ರಕ್ತಚಲ್ಲಿ ಕಾದಾಡುವ ಹಾಗೂ ಪ್ರತಿಕಾರಕ್ಕಾಗಿ ಹಾತೊರೆಯುವ ಅರಬ್ಬರ ಗುಣ ಇಂದಿಗೂ ಅಷ್ಟೆ ಪ್ರಖರವಾಗಿರುವುದನ್ನು ಕಾಣಬಹುದಾಗಿದೆ.
ಒಂದು ಬಾರಿ ಒಬ್ಬನ ರಕ್ತ ಚಲ್ಲಿದಾಗ ಆ ವ್ಯಕ್ತಿಯ ಕುಟುಂಬ,ಬುಡಕಟ್ಟು,ಪಂಗಡ,ಜನಾಂಗದ ಉಳಿದವರು ಅವನನ್ನು ಕೊಲೆ ಮಾಡಿದ ವ್ಯಕ್ತಿಯನ್ನು ಅಥವಾ ಅವನ ಬುಡಕಟ್ಟನ್ನು ಪ್ರತಿಕಾರದ ಸಲುವಾಗಿ ಬೇಟೆಯಾಡುವುದು ಅಂದೂ ಸಾಮಾನ್ಯವಾಗಿತ್ತು,ಇಂದೂ ಸಾಮಾನ್ಯವಾಗಿಯೆ ಉಳಿದುಬಂದಿದೆ! ಹಾಗೊಂದುವೇಳೆ ಎದುರಾಳಿಗಳು ಬಲಿಷ್ಠರಾಗಿದ್ದಾಗ ಕೆಲಕಾಲ ಹಿಂದಡಿ ಇಡಲಾಗುತ್ತಿತ್ತಾದರೂ ಒಂದೊಮ್ಮೆ ಅವಕಾಶ ಸಿಕ್ಕರೆ ಪ್ರತಿಕಾರ ತೀರಿಸಿಕೊಳ್ಳುವುದು ತಮ್ಮ ಜನ್ಮಸಿದ್ಧ ಹಕ್ಕೆಂದೆ ಅಲ್ಲಿ ಬಗೆಯಲಾಗುತ್ತಿತ್ತು.ಅದಕ್ಕೆ ಅಗತ್ಯವಾಗಿ ಇನ್ನೊಬ್ಬ ಬಲವಂತನ ನೆರವನ್ನು ಪಡೆಯಲಾಗುತ್ತಿತ್ತು.ಅಂತಹ ಒಬ್ಬ ಬಲವಂತನೆ ಪ್ರವಾದಿ ಮಹಮದ್ ಪೂರ್ವಜ ಕೂಸೈ.ಕ್ರಿಸ್ತಶಕ 400ರ ಕಾಲಕ್ಕೆ ಈತ ಪ್ರಶ್ನಾತೀತನಾಗಿರಲು ಜನಬೆಂಬಲಿತ ಈತನ ಬಾಹುಬಲವೆ ಕಾರಣ ಎಂದರೂ ತಪ್ಪಿಲ್ಲ.
(ನಿರೂಪಣೆ ಇಲ್ಲಿಗೆ ಮುಗಿಯಿತು...ಇನ್ನು ಪ್ರವಾದಿಯ ಕಥೆ ಶುರು...)
ಮರಳುಗಾಡಿನ ಮರ್ಮರ...(ಭಾಗ -3)
ಈ ಕಾಬಾ ಗುಡಿಯ ಸ್ಥಾಪನೆ,ಆರಾಧನೆ ಅರೇಬಿಯಾದ ಪುರಾಣ ಕಥೆಗಳಲ್ಲಿ ಬರುವ ಯಹೂದಿ ಹಾಗು ಕ್ರೈಸ್ತರ ಪ್ರವಾದಿ ಅಬ್ರಾಹಂನಿಂದ ಆಯಿತು ಎಂದು ಮುಸ್ಲೀಮರು ನಂಬುತ್ತಾರೆ.ದೇವರು ಅಬ್ರಾಹಂನನ್ನು ಭೂಮಿಗೆ ಕಳುಹಿಸಿ "ದೇವರೊಬ್ಬನೆ ಹಾಗೂ ಅಬ್ರಾಹಂ ಆತನ ಪ್ರತಿನಿಧಿ" ಎಂದು ಸಾರಲು ಆದೇಶಿಸುತ್ತಾನೆ.ಈ ಅಬ್ರಾಹಂನಾದರೋ ಸ್ವತಹ ಪ್ರವಾದಿಯಾಗಿದ್ದರೂ ಕೇವಲ ಮೂರೆ ಬಾರಿ ತನ್ನ ಜೀವನದಲ್ಲಿ ಸುಳ್ಳುಹೇಳಿರುತ್ತಾನೆ.ಎರಡು ಬಾರಿ ದೇವರ ಸಲುವಾಗಿ "ನನಗೆ ಸೌಖ್ಯವಿಲ್ಲ" ಅಂತಲೂ,"ಇಗೋ! ಇದೆ ಆ ಬೃಹತ್ ವಿಗ್ರಹ ಎಸಗಿದೆ!" ಅಂತಲೂ ಹಾಗೂ ಮೂರನೆಬಾರಿ ತನ್ನ ಮಡದಿ ಸಾರಾಳ ದೆಸೆಯಿಂದ ಸುಳ್ಳು ಹೇಳುತ್ತಾನೆ.ಆ ಸುಳ್ಳಿನ ಕಥೆ ಹೀಗಿದೆ.ಅಲೆಮಾರಿಯಾಗಿದ್ದ ಅಬ್ರಾಹಂ ಹೀಗೆ ಸುತ್ತುತ್ತಾ ಪ್ರಜಾಪೀಡಕನಾಗಿದ್ದ ರಾಜನೊಬ್ಬನ ರಾಜ್ಯಕ್ಕೆ ಬಂದಾಗ ಆ ಕಟುಕ ರಾಜ ತನ್ನ ಹೆಂಡತಿಗಾಗಿ ಹಂಬಲಿಸಿಯಾನು ಎಂದರಿತು,ಹೆಂಡತಿಗೆ 'ತಾನು ಅವಳ ಅಣ್ಣನೆಂದು...ಪತಿಯಲ್ಲವೆಂದೂ!' ಹೇಳುವಂತೆ ತಿಳಿಸುತ್ತಾನೆ.ಅವನು ನೆನೆಸಿದಂತೆ ರಾಜದೂತರು ಅವಳನ್ನು ರಾಜನ ಸನ್ನಿಧಿಗೆ ಕೊಂಡೊಯ್ಯುತ್ತಾರೆ.ಅಲ್ಲಿ ಅವಳನ್ನು ಕಂಡು ಮೋಹಿಸುವ ರಾಜ ಅವಳ ಕೈ ಹಿಡಿಯಲು ಧಾವಿಸುತ್ತಾನೆ.ದುರದೃಷ್ಟವಶಾತ್ ಆ ಕೈ ಭದ್ರವಾಗಿ ಅಲ್ಲಿಯೆ ಅಂಟಿಕೊಂಡು ಬಿಡುತ್ತದೆ! ಹೆದರಿದ ರಾಜ "ದಯವಿಟ್ಟು ಕೈ ಬಿಡುಗಡೆಯಾಗುವಂತೆ ದೇವರನ್ನು ಬೇಡಿಕೊ"ಎಂದು ಯಾಚಿಸಲು ಆಕೆ ಬೇಡಿದಾಗ ಕೈ ಬಿಡುಗಡೆಯಾಗುತ್ತದೆ.ನಿಟ್ಟುಸಿರು ಬಿಡುವ ರಾಜ ಅವಳ ದೈವಿಶಕ್ತಿಗೆ ಹೆದರಿ ಅವಳಿಗೊಬ್ಬ ಗುಲಾಮ ಹೆಣ್ಣನ್ನು ಬಳುವಳಿಯಾಗಿ ಕೊಟ್ಟು ತನ್ನ ಆಸ್ಥಾನದಿಂದ ಹೊರಗಟ್ಟುತ್ತಾನೆ.ಇತ್ತ ಪತ್ನಿಯನ್ನ ರಾಜನ ಬಳಿ ಕಳುಹಿಸಿ ದೈವದ ಮೊರೆಹೋಗಿದ್ದ ಅಬ್ರಾಹಂ ಈ ಪರಿ ಆಕೆ ಮರಳಿ ಬಂದಾಗ ಸಂತೋಷಗೊಂಡು ಕೂಡಲೆ ಇರಾಕ್ ಹಾಗು ಸಿರಿಯಾದ ದಿಕ್ಕಿಗೆ ಪ್ರಯಾಣಿಸುತ್ತಾನೆ.
ಹೀಗೆ ಸಾಗುವಾಗ ಗುಲಾಮ ಹೆಣ್ಣು ಹಾಜರಾಳೊಂದಿಗೆ ಅಬ್ರಾಹಂ ನಡೆಸುವ ದೈಹಿಕ ಸಂಬಂಧದಿಂದ 'ಇಸ್ಮಾಯಿಲ್' ಎಂಬ ಬಾಲಕನ ತಂದೆಯಾಗುತ್ತಾನೆ.ಅದರಿಂದ ಸವತಿ ಮಾತ್ಸರ್ಯಕ್ಕೆ ತುತ್ತಾಗುವ ಸಾರಾಳ ಒತ್ತಡ ತಾಳಲಾರದೆ ತಾಯಿ-ಮಗ ಇಬ್ಬರನ್ನೂ ಮೆಕ್ಕಾಗೆ ತಂದು ಬಿಡುತ್ತಾನೆ.ಇತ್ತ ಮರಳಿ ಸಾರಾಳನ್ನ ಬಂದು ಸೇರುವ ಅಬ್ರಾಹಂ ಅವಳಿಂದ ಐಸಾಕ್ ಹಾಗೂ ಜಾಕೊಬ್ ಎಂಬ ಮಕ್ಕಳನ್ನ ಪಡೆಯುತ್ತಾನೆ.
ಅಬ್ರಾಹಂ ಮೆಕ್ಕಾದ ಎತ್ತರ ಪ್ರದೇಶವೊಂದರ ಮರದಡಿ ಹಾಜರ ಮತ್ತು ಇಸ್ಮಾಯಿಲ್ ಇಬ್ಬರನ್ನೂ ಬಿಟ್ಟು ಹೋದನಲ್ಲ,ಜನವಸತಿಯಾಗಲಿ-ಜಲವಸತಿಯಾಗಲಿ ಇಲ್ಲದ ಈ ಬರಡು ಭೂಮಿಯಲ್ಲಿ ಹೀಗೆ ತ್ಯಜಿಸಿ ಹೋಗುವವನನ್ನ ಹಜರಾ ಹಿಂಬಾಲಿಸಿ ಹೋಗುತ್ತಾಳೆ.'ನಮ್ಮನ್ನು ಅನಾಥರಾಗಿ ಈ ಅಪರಿಚಿತ ಸ್ಥಳದಲ್ಲಿ ಬಿಟ್ಟು ಎಲ್ಲಿ ಹೋಗುತ್ತೀಯ?' ಎಂದವಳು ಕೇಳಿದಾಗ ಅವನಿಂದ ಉತ್ತರ ಬರುವುದಿಲ್ಲ.ಆಕೆ ಪುನಃ 'ದೇವರ ಆದೇಶದಂತೆ ನೀನು ಈ ಕೆಲಸ ಮಾಡುತ್ತಿರುವುದಾ?" ಎಂದು ಮರುಪ್ರಶ್ನಿಸಿದಾಗ ಅಬ್ರಾಹಂ "ಹೌದು!" ಎಂದೆ ಉತ್ತರಿಸುತ್ತಾನೆ. 'ಯಾರ ಆಸರೆಯಲ್ಲಿ ನಾವಿರಬೇಕು?' ಎನ್ನುತ್ತಾಳವಳು....ಇವನ ಉತ್ತರ "ದೇವರು!"."ಹೀಗಿದ್ದರೆ ನಾನಿದನ್ನು ಸ್ವೀಕರಿಸುವೆ" ಎನ್ನುವ ಆಕೆ ಹಿಂದಿರುಗುತ್ತಾಳೆ.
ಹೀಗೆ ಹಜರಾ ಮರೆಯಾದ ನಂತರ ಅಬ್ರಾಹಂ ಈಗಿರುವ ಕಾಬಾದ ಕಡೆಗೆ ಮುಖಮಾಡಿ ದೇವರನ್ನು "ನನ್ನ ಹೆಂಡತಿ ಹಜರಾ ಹಾಗು ಮಗು ಇಸ್ಮಾಯಿಲ್'ನನ್ನು ಈ ಪವಿತ್ರ ಕಣಿವೆಯ ಬಳಿ ಬಿಟ್ಟಿದ್ದೇನೆ...ಅವರಿಗೆ ಸುಖ ಸಮೃದ್ಧಿ ದೊರಕಲಿ ಎಂದು ಪ್ರಾರ್ಥಿಸುತ್ತಾನೆ.
ಇತ್ತ ಹಾಜರಾ ತನ್ನೊಂದಿಗೆ ಇದ್ದ ಚರ್ಮದ ಚೀಲದಲ್ಲಿದ್ದ ನೀರನ್ನೆಲ್ಲ ಕುಡಿದಾದ ನಂತರ ತನ್ನ ಮಗುವಿಗೆ ಹಾಲೂಡಿಸುತ್ತಾಳೆ,ಆದರೆ ಅವಳ ದಾಹ ಹೆಚ್ಚುತ್ತದೆ.ಕೂಸನ್ನು ಅಲ್ಲಿಯೆ ಬಿಟ್ಟು ನೀರಿಗಾಗಿ ಹುಡುಕುತ್ತ ಅಲೆದು ಹತ್ತಿರದ 'ಸಾಫಾ' ಗಿರಿಯನ್ನೇರುತ್ತಾಳೆ. ಶಿಖರದ ಮೇಲೇರಿ ದೂರದೂರದವರೆಗೆ ದಿಟ್ಟಿಸಿದರೂ ಜನವಸತಿ ಕಾಣದೆ ಹತಾಶಳಾಗುತ್ತ ಹತ್ತಿರದ ಇನ್ನೊಂದು ಗಿರಿ 'ಮಾರ್ವ'ವನ್ನೇರಿದಾಗ ಅವಳಿಗೊಂದು ಅಶರೀರವಾಣಿ ಕೇಳಿಸುತ್ತದೆ. "ಒಹ್! ನನಗೆ ನೀನು ಕೇಳಿಸುತ್ತಿದ್ದೀಯ! ನನಗೆ ಸಹಾಯಕವಾಗಲು ನಿನ್ನ ಬಳಿ ಏನಿದೆ?" ಎಂದಾಕೆ ದಿಗ್ಭ್ರಮೆಯಿಂದ ಕೇಳಲು ಅವಳಿಗೆ ಕಂಡದ್ದು ಒಬ್ಬ ಯಕ್ಷ.ಮೆಕ್ಕಾದ 'ಜುಮ್ ಜುಮ್' ಎಂಬಲ್ಲಿ ಆತ ತನ್ನ ಹಿಮ್ಮಡಿಯಿಂದ ನೆಲ ಅಗಿಯುತ್ತಿರುವಾಗ ಅಲ್ಲಿ ಜಲಧಾರೆ ಉಕ್ಕುತ್ತದೆ.ಆಗ ತಡ ಮಾಡದೆ ಆ ನೀರನ್ನೆಲ್ಲ ತನ್ನ ತೊಗಲಿನ ಚೀಲಕ್ಕೆ ತುಂಬಿಕೊಳ್ಳುವ ಆಕೆ ಅಲ್ಲಿಯೆ ತಂಗುತ್ತಾಳೆ.ಕಾಲಕ್ರಮೇಣ ನೀರು ಕಂಡ ಪಕ್ಷಿಗಳೂ,ಅದರ ಜಾಡು ಹಿಡಿದ ಬುಡಕಟ್ಟಿನವರೂ ಅಲ್ಲಿ ಬಂದು ತಂಗುತ್ತಾರೆ.ಹೀಗೆ ಹಾಜಿರಾ ನೆಮ್ಮದಿಯ ಬಾಳನ್ನು ಕಾಣುವಂತಾಗುತ್ತದೆ.ಕಾಲಾ ನಂತರ ಅವಳ ಮರಣವಾಗಿ,ವಯಸ್ಕನಾಗುವ ಅವಳ ಮಗನಿಗೆ ಅದೆ ಬುಡಕಟ್ಟಿನವರು ಹೆಣ್ಣುಕೊಟ್ಟು ಮದುವೆ ಮಾಡುತ್ತಾರೆ.ಹೀಗೆ ಅವನ ಸಂಸಾರ ಸಾಗುತ್ತಿರುವಾಗ ಅಬ್ರಾಹಂ ತಾನು ತೊರೆದು ಹೋದ ಕುಟುಂಬವನ್ನ ನೋಡಲು ಬರುತ್ತಾನೆ.ಆದರಾಗ ಇಸ್ಮಾಯಿಲ್ ಮನೆಯಲ್ಲಿರುವುದಿಲ್ಲ.ಅವನು ಅನ್ನ ಸಂಪಾದಿಸಲು ಹೊರಗೆ ಹೋಗಿದ್ದಾನೆನ್ನುವ ಹೆಂಡತಿಗೆ "ನಿನ್ನ ಗಂಡನಿಗೆ ನನ್ನ ವಿಜ್ಞಾಪನೆ ತಿಳಿಸು ಹಾಗೂ ಮನೆಯ ಹೊಸ್ತಿಲನ್ನ ಶೀಘ್ರ ಬದಲಿಸೋಕೆ ಹೇಳು!" ಎನ್ನುವ ಅಬ್ರಾಹಂ ಅಲ್ಲಿಂದ ನಿರ್ಗಮಿಸುತ್ತಾನೆ.ಯಾಥಾವತ್ ಮಾತುಗಳನ್ನ ಗಂಡ ಬಂದಾಗ ಆಕೆ ಅರುಹಿದಾಗ.ಒಡನೆಯೆ ಇಸ್ಮಾಯಿಲ್ " ಒಹ್! ಬಂದಿದ್ದವನು ನನ್ನ ತಂದೆ ಅವನು ನಿನ್ನನ್ನು ತ್ಯಜಿಸಲು ಹೇಳಿದ್ದಾನೆ! ಎಂದವನೆ ಆಕೆಗೆ ವಿಚ್ಚೇದನ ಕೊಟ್ಟು ಇನ್ನೊಬ್ಬಳನ್ನ ಕಟ್ಟಿಕೊಳ್ಳುತ್ತಾನೆ.ಆಕೆ ತವರಿಗೆ ಮರಳುತ್ತಾಳೆ.
ಪುನಃ ಸ್ವಲ್ಪ ಕಾಲದ ನಂತರ ಅಬ್ರಾಹಂ ಮಗನ ಮನೆಗೆ ಬರುತ್ತಾನೆ.ಆತನ ಹೊಸ ಹೆಂಡತಿಯನ್ನ ನೋಡಿ ಸಂಸಾರದ ಸ್ಥಿತಿಗತಿಯನ್ನ ವಿಚಾರಿಸಿದಾಗ ಆಕೆ "ನಾವು ಚೆನ್ನಾಗಿದ್ದೇವೆ" ಎಂದು ತಿಳಿಸುತ್ತಾಳೆ.ಸಂತುಷ್ಟನಾಗುವ ಅಬ್ರಾಹಂ "ಆತನಿಗೆ ನನ್ನ ವಿಜ್ಞಾಪನೆ ತಿಳಿಸು ಹಾಗೂ ಮನೆಯ ಹೊಸ್ತಿಲನ್ನ ಭದ್ರವಾಗಿರಿಸಿಕೊಳ್ಳಲು ತಿಳಿಸು" ಎಂದು ಹೇಳಿ ಮರೆಯಾಗುತ್ತಾನೆ.ಪತಿ ಮನೆಗೆ ಬಂದಾಗ ಅವಳು ಆತನಿಗಿದನ್ನ ತಿಳಿಸಿದಳು.ಆಗ ಇಸ್ಮಾಯಿಲ್ "ಬಂದವನು ನನ್ನ ತಂದೆ! ನಿನ್ನನ್ನ ತ್ಯಜಿಸದೆ ಇಟ್ಟುಕೊಳ್ಳಲು ನನಗೆ ಉಪದೇಶವಾಗಿದೆ" ಎಂದಂದ.ಮುಂದೊಮ್ಮೆ ಮರಳಿ ಅಬ್ರಾಹಂ ಮಗನನ್ನು ಹುಡುಕಿಕೊಂಡು ಬಂದಾಗ ಅವನಿಗೆ ಮಗನ ಸಹಾಯವೂ ಸೇರಿ ಮೊತ್ತ ಮೊದಲಿಗೆ 'ಕಾಬಾ'ದ ಗುಡಿ ಮೇಲೆದ್ದಿತು ಅನ್ನುವುದು ಐತಿಹ್ಯ.
(ಇನ್ನೂ ಇದೆ....)
ಹೀಗೆ ಸಾಗುವಾಗ ಗುಲಾಮ ಹೆಣ್ಣು ಹಾಜರಾಳೊಂದಿಗೆ ಅಬ್ರಾಹಂ ನಡೆಸುವ ದೈಹಿಕ ಸಂಬಂಧದಿಂದ 'ಇಸ್ಮಾಯಿಲ್' ಎಂಬ ಬಾಲಕನ ತಂದೆಯಾಗುತ್ತಾನೆ.ಅದರಿಂದ ಸವತಿ ಮಾತ್ಸರ್ಯಕ್ಕೆ ತುತ್ತಾಗುವ ಸಾರಾಳ ಒತ್ತಡ ತಾಳಲಾರದೆ ತಾಯಿ-ಮಗ ಇಬ್ಬರನ್ನೂ ಮೆಕ್ಕಾಗೆ ತಂದು ಬಿಡುತ್ತಾನೆ.ಇತ್ತ ಮರಳಿ ಸಾರಾಳನ್ನ ಬಂದು ಸೇರುವ ಅಬ್ರಾಹಂ ಅವಳಿಂದ ಐಸಾಕ್ ಹಾಗೂ ಜಾಕೊಬ್ ಎಂಬ ಮಕ್ಕಳನ್ನ ಪಡೆಯುತ್ತಾನೆ.
ಅಬ್ರಾಹಂ ಮೆಕ್ಕಾದ ಎತ್ತರ ಪ್ರದೇಶವೊಂದರ ಮರದಡಿ ಹಾಜರ ಮತ್ತು ಇಸ್ಮಾಯಿಲ್ ಇಬ್ಬರನ್ನೂ ಬಿಟ್ಟು ಹೋದನಲ್ಲ,ಜನವಸತಿಯಾಗಲಿ-ಜಲವಸತಿಯಾಗಲಿ ಇಲ್ಲದ ಈ ಬರಡು ಭೂಮಿಯಲ್ಲಿ ಹೀಗೆ ತ್ಯಜಿಸಿ ಹೋಗುವವನನ್ನ ಹಜರಾ ಹಿಂಬಾಲಿಸಿ ಹೋಗುತ್ತಾಳೆ.'ನಮ್ಮನ್ನು ಅನಾಥರಾಗಿ ಈ ಅಪರಿಚಿತ ಸ್ಥಳದಲ್ಲಿ ಬಿಟ್ಟು ಎಲ್ಲಿ ಹೋಗುತ್ತೀಯ?' ಎಂದವಳು ಕೇಳಿದಾಗ ಅವನಿಂದ ಉತ್ತರ ಬರುವುದಿಲ್ಲ.ಆಕೆ ಪುನಃ 'ದೇವರ ಆದೇಶದಂತೆ ನೀನು ಈ ಕೆಲಸ ಮಾಡುತ್ತಿರುವುದಾ?" ಎಂದು ಮರುಪ್ರಶ್ನಿಸಿದಾಗ ಅಬ್ರಾಹಂ "ಹೌದು!" ಎಂದೆ ಉತ್ತರಿಸುತ್ತಾನೆ. 'ಯಾರ ಆಸರೆಯಲ್ಲಿ ನಾವಿರಬೇಕು?' ಎನ್ನುತ್ತಾಳವಳು....ಇವನ ಉತ್ತರ "ದೇವರು!"."ಹೀಗಿದ್ದರೆ ನಾನಿದನ್ನು ಸ್ವೀಕರಿಸುವೆ" ಎನ್ನುವ ಆಕೆ ಹಿಂದಿರುಗುತ್ತಾಳೆ.
ಹೀಗೆ ಹಜರಾ ಮರೆಯಾದ ನಂತರ ಅಬ್ರಾಹಂ ಈಗಿರುವ ಕಾಬಾದ ಕಡೆಗೆ ಮುಖಮಾಡಿ ದೇವರನ್ನು "ನನ್ನ ಹೆಂಡತಿ ಹಜರಾ ಹಾಗು ಮಗು ಇಸ್ಮಾಯಿಲ್'ನನ್ನು ಈ ಪವಿತ್ರ ಕಣಿವೆಯ ಬಳಿ ಬಿಟ್ಟಿದ್ದೇನೆ...ಅವರಿಗೆ ಸುಖ ಸಮೃದ್ಧಿ ದೊರಕಲಿ ಎಂದು ಪ್ರಾರ್ಥಿಸುತ್ತಾನೆ.
ಇತ್ತ ಹಾಜರಾ ತನ್ನೊಂದಿಗೆ ಇದ್ದ ಚರ್ಮದ ಚೀಲದಲ್ಲಿದ್ದ ನೀರನ್ನೆಲ್ಲ ಕುಡಿದಾದ ನಂತರ ತನ್ನ ಮಗುವಿಗೆ ಹಾಲೂಡಿಸುತ್ತಾಳೆ,ಆದರೆ ಅವಳ ದಾಹ ಹೆಚ್ಚುತ್ತದೆ.ಕೂಸನ್ನು ಅಲ್ಲಿಯೆ ಬಿಟ್ಟು ನೀರಿಗಾಗಿ ಹುಡುಕುತ್ತ ಅಲೆದು ಹತ್ತಿರದ 'ಸಾಫಾ' ಗಿರಿಯನ್ನೇರುತ್ತಾಳೆ. ಶಿಖರದ ಮೇಲೇರಿ ದೂರದೂರದವರೆಗೆ ದಿಟ್ಟಿಸಿದರೂ ಜನವಸತಿ ಕಾಣದೆ ಹತಾಶಳಾಗುತ್ತ ಹತ್ತಿರದ ಇನ್ನೊಂದು ಗಿರಿ 'ಮಾರ್ವ'ವನ್ನೇರಿದಾಗ ಅವಳಿಗೊಂದು ಅಶರೀರವಾಣಿ ಕೇಳಿಸುತ್ತದೆ. "ಒಹ್! ನನಗೆ ನೀನು ಕೇಳಿಸುತ್ತಿದ್ದೀಯ! ನನಗೆ ಸಹಾಯಕವಾಗಲು ನಿನ್ನ ಬಳಿ ಏನಿದೆ?" ಎಂದಾಕೆ ದಿಗ್ಭ್ರಮೆಯಿಂದ ಕೇಳಲು ಅವಳಿಗೆ ಕಂಡದ್ದು ಒಬ್ಬ ಯಕ್ಷ.ಮೆಕ್ಕಾದ 'ಜುಮ್ ಜುಮ್' ಎಂಬಲ್ಲಿ ಆತ ತನ್ನ ಹಿಮ್ಮಡಿಯಿಂದ ನೆಲ ಅಗಿಯುತ್ತಿರುವಾಗ ಅಲ್ಲಿ ಜಲಧಾರೆ ಉಕ್ಕುತ್ತದೆ.ಆಗ ತಡ ಮಾಡದೆ ಆ ನೀರನ್ನೆಲ್ಲ ತನ್ನ ತೊಗಲಿನ ಚೀಲಕ್ಕೆ ತುಂಬಿಕೊಳ್ಳುವ ಆಕೆ ಅಲ್ಲಿಯೆ ತಂಗುತ್ತಾಳೆ.ಕಾಲಕ್ರಮೇಣ ನೀರು ಕಂಡ ಪಕ್ಷಿಗಳೂ,ಅದರ ಜಾಡು ಹಿಡಿದ ಬುಡಕಟ್ಟಿನವರೂ ಅಲ್ಲಿ ಬಂದು ತಂಗುತ್ತಾರೆ.ಹೀಗೆ ಹಾಜಿರಾ ನೆಮ್ಮದಿಯ ಬಾಳನ್ನು ಕಾಣುವಂತಾಗುತ್ತದೆ.ಕಾಲಾ ನಂತರ ಅವಳ ಮರಣವಾಗಿ,ವಯಸ್ಕನಾಗುವ ಅವಳ ಮಗನಿಗೆ ಅದೆ ಬುಡಕಟ್ಟಿನವರು ಹೆಣ್ಣುಕೊಟ್ಟು ಮದುವೆ ಮಾಡುತ್ತಾರೆ.ಹೀಗೆ ಅವನ ಸಂಸಾರ ಸಾಗುತ್ತಿರುವಾಗ ಅಬ್ರಾಹಂ ತಾನು ತೊರೆದು ಹೋದ ಕುಟುಂಬವನ್ನ ನೋಡಲು ಬರುತ್ತಾನೆ.ಆದರಾಗ ಇಸ್ಮಾಯಿಲ್ ಮನೆಯಲ್ಲಿರುವುದಿಲ್ಲ.ಅವನು ಅನ್ನ ಸಂಪಾದಿಸಲು ಹೊರಗೆ ಹೋಗಿದ್ದಾನೆನ್ನುವ ಹೆಂಡತಿಗೆ "ನಿನ್ನ ಗಂಡನಿಗೆ ನನ್ನ ವಿಜ್ಞಾಪನೆ ತಿಳಿಸು ಹಾಗೂ ಮನೆಯ ಹೊಸ್ತಿಲನ್ನ ಶೀಘ್ರ ಬದಲಿಸೋಕೆ ಹೇಳು!" ಎನ್ನುವ ಅಬ್ರಾಹಂ ಅಲ್ಲಿಂದ ನಿರ್ಗಮಿಸುತ್ತಾನೆ.ಯಾಥಾವತ್ ಮಾತುಗಳನ್ನ ಗಂಡ ಬಂದಾಗ ಆಕೆ ಅರುಹಿದಾಗ.ಒಡನೆಯೆ ಇಸ್ಮಾಯಿಲ್ " ಒಹ್! ಬಂದಿದ್ದವನು ನನ್ನ ತಂದೆ ಅವನು ನಿನ್ನನ್ನು ತ್ಯಜಿಸಲು ಹೇಳಿದ್ದಾನೆ! ಎಂದವನೆ ಆಕೆಗೆ ವಿಚ್ಚೇದನ ಕೊಟ್ಟು ಇನ್ನೊಬ್ಬಳನ್ನ ಕಟ್ಟಿಕೊಳ್ಳುತ್ತಾನೆ.ಆಕೆ ತವರಿಗೆ ಮರಳುತ್ತಾಳೆ.
ಪುನಃ ಸ್ವಲ್ಪ ಕಾಲದ ನಂತರ ಅಬ್ರಾಹಂ ಮಗನ ಮನೆಗೆ ಬರುತ್ತಾನೆ.ಆತನ ಹೊಸ ಹೆಂಡತಿಯನ್ನ ನೋಡಿ ಸಂಸಾರದ ಸ್ಥಿತಿಗತಿಯನ್ನ ವಿಚಾರಿಸಿದಾಗ ಆಕೆ "ನಾವು ಚೆನ್ನಾಗಿದ್ದೇವೆ" ಎಂದು ತಿಳಿಸುತ್ತಾಳೆ.ಸಂತುಷ್ಟನಾಗುವ ಅಬ್ರಾಹಂ "ಆತನಿಗೆ ನನ್ನ ವಿಜ್ಞಾಪನೆ ತಿಳಿಸು ಹಾಗೂ ಮನೆಯ ಹೊಸ್ತಿಲನ್ನ ಭದ್ರವಾಗಿರಿಸಿಕೊಳ್ಳಲು ತಿಳಿಸು" ಎಂದು ಹೇಳಿ ಮರೆಯಾಗುತ್ತಾನೆ.ಪತಿ ಮನೆಗೆ ಬಂದಾಗ ಅವಳು ಆತನಿಗಿದನ್ನ ತಿಳಿಸಿದಳು.ಆಗ ಇಸ್ಮಾಯಿಲ್ "ಬಂದವನು ನನ್ನ ತಂದೆ! ನಿನ್ನನ್ನ ತ್ಯಜಿಸದೆ ಇಟ್ಟುಕೊಳ್ಳಲು ನನಗೆ ಉಪದೇಶವಾಗಿದೆ" ಎಂದಂದ.ಮುಂದೊಮ್ಮೆ ಮರಳಿ ಅಬ್ರಾಹಂ ಮಗನನ್ನು ಹುಡುಕಿಕೊಂಡು ಬಂದಾಗ ಅವನಿಗೆ ಮಗನ ಸಹಾಯವೂ ಸೇರಿ ಮೊತ್ತ ಮೊದಲಿಗೆ 'ಕಾಬಾ'ದ ಗುಡಿ ಮೇಲೆದ್ದಿತು ಅನ್ನುವುದು ಐತಿಹ್ಯ.
(ಇನ್ನೂ ಇದೆ....)
ಮರಳುಗಾಡಿನ ಮರ್ಮರ...(ಭಾಗ -2)
ಆರನೆ ಶತಮಾನದಲ್ಲಿ ಅರೇಬಿಯಾದ ನೂರಾರು ಬುಡಕಟ್ಟುಗಳ ಜನರು ಬದುಕಿನ ಬಹುತೇಕ ಆಸರೆ ಕಳೆದುಕೊಂಡು ಅಲೆಮಾರಿಗಳಾಗಿ,ಅಸಂಸ್ಕೃತರಾಗಿ ದೇಶವನ್ನ ಸುತ್ತುವುದು ಸಾಮಾನ್ಯವಾಗಿತ್ತು.ಅವರೆಲ್ಲರೂ ತಮ್ಮತಮ್ಮ ಬುಡಕಟ್ಟುಗಳ ಸಂಸ್ಕೃತಿಗೆ ಬಲವಾಗಿ ಅಂಟಿಕೊಂಡಿದ್ದು ಅಸಹನೆ,ಕೋಪ-ತಾಪ,ನಿಷ್ಠೂರತೆ ಮುಂತಾದ ಗುಣಧರ್ಮಗಳನ್ನು ವಿಪರೀತವಾಗಿ ಬೆಳೆಸಿಕೊಂಡಿದ್ದರು.ಯಾರ ಹಿಡಿತಕ್ಕೂ ಸಿಗದೆ ನಿರ್ಭೀತರಾಗಿ-ಸ್ವತಂತ್ರ ಮನೋಭಾವನೆ ಬೆಳೆಸಿಕೊಂಡಿದ್ದ ಇವರು ಒಂದು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತಿರಲಿಲ್ಲ.ಪ್ರತಿ ಬುಡಕಟ್ಟಿಗೆ 'ಶೇಖ್' ಎಂಬ ನೇತಾರನಿದ್ದರೂ ಅವನಿಂದಲೂ ಗುಂಪಿನ ಎಲ್ಲರನ್ನು ಬಯಸಿದಾಗ ನಿಯಂತ್ರಿಸೋದು ಕಷ್ಟವಾಗುತ್ತಿತ್ತು.ಒಂದು ವಿಚಿತ್ರ ರೀತಿಯ ಅರಬ್ಬರ ವ್ಯಕ್ತಿತ್ವದಲ್ಲಿ ಎದ್ದು ಕಾಣುವಂತಹ ವಿರೋಧಾಭಾಸಗಳು ಕಂಡು ಬರುತ್ತಿದ್ದವು ಎನ್ನುತ್ತಾನೆ ವಿಲ್ ಡ್ಯೂರಾಂಟ್.
ಒಂದುಕಡೆ ಅಸಂಖ್ಯಾತ ಉಪ ಬುಡಕಟ್ಟುಗಳ ಜನರು ಒಂದೆ ಭಾಷೆ,ನಡೆ-ನುಡಿ,ನ್ಯಾಯ ಸೂತ್ರಗಳನ್ನ ಒಪ್ಪಿಕೊಂಡಿದ್ದರೂ ಸಹ ಆಂತರಿಕವಾಗಿ 'ಸ್ವತಂತ್ರ ಮನೋಭಾವ'ವನ್ನೆ ಬೆಳೆಸಿಕೊಂಡು ಸಮಯ ಬಂದಾಗ ಯಾವುದೆ ನೈತಿಕ ನ್ಯಾಯ ಸೂತ್ರಗಳಿಗೆ ಕವಡೆ ಕಿಮ್ಮತ್ತನ್ನೂ ಕೊಡದೆ ಸದಾ ಚಡಪಡಿಸುತ್ತಾ ತಮ್ಮ ತಮ್ಮಲ್ಲೆ ಹೊಡೆದಾಡುತ್ತಿದ್ದು,ಸಣ್ಣಪುಟ್ಟ ಕ್ಷುದ್ರ ಕಾರಣಗಳಿಗೂ ಭೀಕರ ಮಾರಾಮಾರಿ-ಕದನ-ನೆತ್ತರ ಚೆಲ್ಲಾಟ ಸಾಮಾನ್ಯವೆಂಬಂತೆ ನಡೆಯುತ್ತಿದ್ದವು.ರಕ್ತ ಸಂಬಂಧ ಹಾಗೂ ಇನ್ನಿತರ ಯಾವುದೆ ಆಪ್ತ ಸಂಬಂಧಗಳ ಬೇಲಿಯೂ ಆ ಕ್ಷಣ ಅವರೊಳಗಿನ ಪಶು ವರ್ತನೆಯನ್ನು ತಡೆಯುತ್ತಿರಲಿಲ್ಲ.ಯಾವ ರಾಜನ ಚಕ್ರಾಧಿಪತ್ಯಕ್ಕೂ ಒಪ್ಪದೆ,ತಮ್ಮೊಳಗಿನ ನಾಯಕನ ಮುಂದಾಳತ್ವಕ್ಕೂ ಕಿಮ್ಮತ್ತು ಕೊಡದೆ ತಮಗೆ ಬೇಕಾದಂತೆ ಇರೋದು ಅವರ ರೂಢಿಯಾಗಿತ್ತು.ಐಕ್ಯತೆಯಲ್ಲಿ ನಂಬಿಕೆಯಿಡದೆ ಅನೈಕ್ಯತೆಯ ಅನಿಷ್ಟಗಳನ್ನ ಧಾರಾಳವಾಗಿ ಅನುಭವಿಸುತ್ತಿದ್ದ ಅರಬ್ಬರು ವಿರೋಧಾಭಾಸಪೂರಿತ ಜೀವನ ಶೈಲಿಯನ್ನು ಹೊಂದಿದ್ದದು ಸ್ಪಷ್ಟವಾಗಿತ್ತು.ಯಾವುದೆ ನಸರ್ಗಿಕ ತಡೆಗಳಿಲ್ಲದಿದ್ದರೂ ಅರಬ್ಬರ ಸ್ವಾತಂತ್ರ ಕಾಪಾಡಿದ್ದು ಇದೆ ವಿರೋಧಾಭಾಸ ಅನ್ನುವುದು ಇತಿಹಾಸಕಾರರ ಖಚಿತ ಅಭಿಪ್ರಾಯ.ಇಲ್ಲಿನ ಪ್ರತಿಯೊಂದು ಬುಡಕಟ್ಟು ಕೂಡ ಒಬ್ಬ ಪೂರ್ವಿಕನ ಹೆಸರಿನಿಂದ ಗುರುತಿಸಲ್ಪಡುತ್ತಿತ್ತು.ಉದಾಹಾರಣೆಗೆ 'ಬಾನ್ ಫಾಸನ್' ಬುಡಕಟ್ಟಿನವರು ತಾವು 'ಫಾಸನ್' ಎಂಬ ಸಂತತಿಗೆ ಸೇರಿದವರು ಎಂದು ಸಾರಿಕೊಳ್ಳುತ್ತಿದ್ದರು.ಹೀಗೆ ತಮ್ಮ ಬುಡಕಟ್ಟಿನ ಸಂಸ್ಕೃತಿ ಹಾಗೂ ಅಂತಸ್ತಿನ ಬಗ್ಗೆ ಅವರಲ್ಲಿ ಅತೀವ ಹೆಮ್ಮೆಯಿದ್ದು ತಮಗಿಂತ ಕೆಳ ಅಂತಸ್ತಿನ ಪಂಗಡದ ಜೊತೆ ಸಂಬಂಧ ಬೆಳೆಸುವುದರ ಬಗ್ಗೆ ವಿರೋಧ ವ್ಯಕ್ತವಾಗುತ್ತಿತ್ತು.
ಅಲ್ಲಿನ ಒಟ್ಟು ಜನಸಂಖ್ಯೆಯಲ್ಲಿ ಐದನೆ ಮೂರು ಭಾಗದಷ್ಟು ಮಂದಿ ಅಲೆಮಾರಿ ಬಿದೊವಿನ್ (bedowin) ಪಂಗಡದವರಾಗಿದ್ದು ತಮ್ಮ ಜಾನುವಾರುಗಳೊಂದಿಗೆ ಜಲವಸತಿ ಹುಡುಕಿಕೊಂಡು ಅಲೆದಾಡುವ ಪರಿಪಾಠ ಅವರದ್ದಾಗಿತ್ತು.ಕುದುರೆಗಳನ್ನ ಸಾಕಿ ಬೆಳೆಸುವುದು ಅವರ ಅನ್ನಕ್ಕೆ ದಾರಿಯಾಗಿದ್ದರೂ ಒಂಟೆಗಳು ಅವರ ಸರ್ವಸ್ವವಾಗಿದ್ದವು.ಅವರ ಜೀವನದ ಅಂಗವಾಗಿದ್ದ ಒಂಟೆ ಅವರೊಂದಿಗೆ ಹುಟ್ಟಿ ಮರುಭೂಮಿಯ ವೈಪರೇತ್ಯಗಳನ್ನೆಲ್ಲ ಸಹಿಸಿಕೊಂಡು ಸಾವಿನಲ್ಲೂ ಉಪಕಾರಿಯಾಗಿಯೆ ಸಾಯುತ್ತಿತ್ತು.ಉರಿ ಬೇಸಿಗೆಯಲ್ಲಿ ಐದು ದಿನಗಳವರೆಗೆ ನೀರಿಲ್ಲದೆ ಬದುಕುವ ಒಂಟೆ ಚಳಿಗಾಲದಲ್ಲಿ ನೀರಿಲ್ಲದೆ ಇಪ್ಪತೈದು ದಿನ ಸವೆಸಬಲ್ಲದು.ಪೌಷ್ಟಿಕತೆ ಹೆಚ್ಚಿಸುವ ಅದರ ಹಾಲು,ಬೆರಣಿಯಾಗಿ ಇಂಧನವಾಗುವ ಅದರ ಸಗಣಿ,ಸತ್ತರೆ ಆಹಾರವಾಗಬಹುದಾದ ಅದರ ಮಾಂಸ,ಗುಡಾರ-ಉಡುಪು ಇನ್ನಿತರ ನಿತ್ಯೋಪಯೋಗಿ ವಸ್ತುಗಳಾಗುವ ಅದರ ಚರ್ಮ ಹೀಗೆ ಅವರ ಸಮಸ್ತ ಅಗತ್ಯಗಳನ್ನೂ ಪೂರೈಸುವ ಒಂಟೆಯೆಂದರೆ ಅವರಿಗೆ ಅಚ್ಚುಮೆಚ್ಚು.ಅದರಷ್ಟೆ ಅವರೂ ಕಷ್ಟ ಸಹಿಷ್ಣುಗಳಾಗಿದ್ದರು.ಹೋರಾಟ-ಮೋಜು-ಪ್ರೇಮ-ಕಲಹ ಇವಷ್ಟೆ ಅವರ ಬಾಳ್ವೆಯಾಗಿತ್ತು.ಇನ್ನಿತರ ಉಪ ಬುಡಕಟ್ಟುಗಳನ್ನ ಮಣಿಸಿ ಅವರನ್ನ ದೋಚುವುದು ;ಅಂತೆಯೆ ತನ್ನ ಮೇಲೆ ಎರಗುವ ಇತರ ಬುಡಕಟ್ಟುಗಳವರಿಂದ ತನ್ನನ್ನು ಕಾಪಾಡಿಕೊಳ್ಳಲು ಹೆಣಗುವುದು.ತನಗೆ ಅದೆಂದೊ ಒದಗಿದ್ದ ಅವಮಾನಕ್ಕೆ ಪ್ರತಿಕಾರವಾಗಿ ಸೇಡು ತೀರಿಸಿಕೊಳ್ಳುವುದು ಇವೆ ಅವರ ಜೀವನದ ರೀತಿಯಾಗಿತ್ತು.'ಪವಿತ್ರ ದಿನ'ಗಳೆಂದು ಪರಿಗಣಿಸುವ ದಿನಗಳಲ್ಲಿ ಅವರು ವಿಶ್ರಾಮದಲ್ಲಿರುತ್ತಿದ್ದು ಹೋರಾಟದಿಂದ ವಿಮುಖರಾಗುತ್ತಿದ್ದರು.ತಮ್ಮ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿವ ಇತರ ಜನಾಂಗದವರನ್ನ ಬೆದರಿಸಿ-ಲೂಟಿ ಹೊಡೆದುಕಳಿಸಲಾಗುತ್ತಿತ್ತು! ಇವರನ್ನು 'ಕರುಣಾಳು,ಕೊಲೆಗಡುಕ,ಉದಾರಿ,ದುರಾಸಾಪೂರಿತ,ನಂಬಲರ್ಹ,ನಂಬಿಕೆ ದ್ರೋಹಿ ಹಾಗೂ ಎದೆಗಾರಿಕೆಯುಳ್ಳವರು!' ಎಂದು ವಿಚಿತ್ರವಾಗಿ ವಿಲ್ ಡ್ಯೂರಾಂಟ್ ವರ್ಣಿಸಿದ್ದಾನೆ.
ರಾಜಕೀಯ ಸಂಗತಿಗಳಲ್ಲಿ ಹೊಂದಿದ್ದಷ್ಟೆ ಅನೈಕ್ಯತೆಯನ್ನ ಅರಬ್ಬರು ದೇವಾರಾಧನೆಗಳ ವಿಷಯದಲ್ಲೂ ಹೊಂದಿದ್ದರು.ಯಾವ ಸುಧಾರಣೆಗೂ ಸೊಪ್ಪು ಹಾಕದೆ,ಯಹೂದಿ ಹಾಗೂ ಕ್ರೈಸ್ತ ಏಕದೇವತಾರಾಧನೆಯನ್ನ ಒಪ್ಪದೆ ಬಹುದೇವರನ್ನ ನಂಬುತ್ತಾ ವಿಗ್ರಹಾರಾಧನೆಯಲ್ಲಿ ನಂಬಿಕೆಹೊಂದಿದ್ದರು.ಯಾವುದೆ ಬಾಹ್ಯ ಪ್ರಭಾವಗಳು ಈ ನಂಬಿಕೆಯನ್ನ ಸಡಿಲಗೊಳಿಸಿರಲಿಲ್ಲ.ದೇವರೊಂದಿಗೆ ಅವರು ದೆವ್ವಗಳನ್ನೂ ನಂಬುತ್ತಿದ್ದು ಆಗಾಗ ಬಲಿ ನೀಡುವ ಮೂಲಕ,ಕವಿತ್ವ ಪ್ರದರ್ಶನದ ಮೂಲಕ ಹಾಡಿ ನಲಿದು ದೇವರನ್ನ ಒಲಿಸಿಕೊಳ್ಳುವುದು ಅವರಿಗೆ ಅಭ್ಯಾಸವಾಗಿತ್ತು.
ಅರಬ್ಬರ ಆರಾಧನಾ ಸ್ಥಳಗಳಲ್ಲಿ ಪುರಾತನ ಕಾಲದಿಂದಲೂ ಅಸ್ತಿತ್ವದಲ್ಲಿದ್ದ ಮೆಕ್ಕಾದ ವಿಗ್ರಹಾರಾಧನೆಯ ಗುಡಿಯೂ ಒಂದಾಗಿತ್ತು.ಆಯಕಟ್ಟಿನ ಸ್ಥಳದಲ್ಲಿದ್ದರಿಂದ ಮೆಕ್ಕಾ ಕ್ರಿಸ್ತಪೂರ್ವದಿಂದಲೂ ಪ್ರಸಿದ್ಧಿ ಪಡೆದಿತ್ತು ಅನ್ನುವುದು ಇತಿಹಾಸಕಾರರ ನಂಬಿಕೆ.ಮೆಕ್ಕಾ ಒಂದು ಬರಡು ಕಣಿವೆಯಲ್ಲಿದ್ದು ಅದರ ಸುತ್ತಲೂ ಕೆಂಪುಕಲ್ಲಿನ ಪರ್ವತಗಳಿಂದ ಅದು ಸುತ್ತುವರೆದಿದೆ.ಕೆಂಪುಸಮುದ್ರ ಇಲ್ಲಿಗೆ ಕೇವಲ ಐವತ್ತು ಮೈಲಿ ದೂರದಲ್ಲಿದೆ.ಅರೇಬಿಯಾದಿಂದ ಹೊರಸಾಗುವ ಕ್ಯಾರವಾನ್'ಗಳು ಹಾಗೂ ಅರೇಬಿಯಾದ ಒಳ ಪ್ರವೇಶಿಸುವ ಕ್ಯಾರವಾನ್'ಗಳು ಇಲ್ಲಿ ಲಂಗರು ಹಾಕುತ್ತಿದ್ದವು.ಇಂತಹ ಸಾವಿರಾರು ಕ್ಯಾರವಾನ್'ಗಳು ವಿಶ್ರಮಿಸುವ ಸರ್ವಋತು ತಂಗುದಾಣಕ್ಕೆ ಒಂದು ಪೂಜಾಸ್ಥಳದ ಅಗತ್ಯ ಕಂಡುಬರೋದರಲ್ಲಿ ಅಚ್ಚರಿಯೇನಿಲ್ಲ.
ಸದಾ ವಣಿಕರಿಂದ ತುಂಬಿ ತುಳುಕುತ್ತಿದ್ದ ಈ ಸ್ಥಳದಲ್ಲಿ ತಮ್ಮ ಧಾರ್ಮಿಕ ಆಚರಣೆಗಳ ಅನುಸಾರ ಅರಬ್ಬರು ಒಂದು ಗುಡಿ ಕಟ್ಟಿಕೊಂಡಿದ್ದು ಅದನ್ನ 'ಕಾಬಾ' ಎಂದು ಕರೆದುಕೊಂಡಿದ್ದರು.ಇದೊಂದು ಚಚ್ಚೌಕದ ಕಟ್ಟಡವಾಗಿದ್ದು ಒಟ್ಟು ಹತ್ತು ಬಾರಿ ಇದನ್ನ ನಿರ್ಮಿಸಲಾಗಿದೆ ಅನ್ನುವುದು ಮುಸ್ಲೀಮರ ನಂಬಿಕೆ.ಮೊದಲನೆ ಕಟ್ಟಡ ಅನಾದಿಕಾಲದಲ್ಲಿ ದೇವದೂತರ ನಿರ್ಮಿತಿಯಾಗಿದ್ದಾರೆ ಎರಡನೆಯದನ್ನ ಬೈಬಲ್'ನಲ್ಲಿ ಬರುವ ಪ್ರವಾದಿ ಆದಂ ಕಟ್ಟಿದ ಎನ್ನಲಾಗುತ್ತದೆ.ಮೂರನೆಯದನ್ನು ಅವನ ಮಗ ಸೇಥ್,ನಾಲ್ಕನೆಯದನ್ನು ಮೊಮ್ಮಗ ಅಬ್ರಾಹಂ ಹಾಗೂ ಐದನೆಯದನ್ನು ಮರಿಮಗ ಹಗರ್ ಕಟ್ಟಿದ್ದನಂತೆ.ಆರು ಮತ್ತು ಏಳನೆಯದನ್ನು ಇಸ್ಲಾಂ ಪೂರ್ವದ ಖುರೈಷಿ ಬುಡಕಟ್ಟಿನವರು ಕಟ್ಟಿದ್ದಾರೆ ಎಂಟನೆಯದ್ದನ್ನು ಮಹಮದ್ ಕಾಲದಲ್ಲಿ ಮತ್ತವರೆ ಕಟ್ಟಿದ್ದರು.ಕ್ರಿಸ್ತಶಕ 681 ಮತ್ತು 696ರಲ್ಲಿ ಮುಸ್ಲೀಂ ಶ್ರದ್ಧಾಳುಗಳು ಒಂಬತ್ತನೆ ಹಾಗು ಹತ್ತನೆ ಕಟ್ಟಡವನ್ನು ನಿರ್ಮಿಸಿದರು ಎನ್ನಲಾಗುತ್ತದೆ.ಈಗ ಅಲ್ಲಿರುವ ಕಟ್ಟಡ ಅನಂತರದ ದಿನಗಳಲ್ಲಿ ವಿವಿಧ ಖಲೀಫರಿಂದ ನಿರ್ಮಾಣಗೊಂಡಿತು.40 ಅಡಿ ಉದ್ದ ಹಾಗೂ 50 ಅಡಿ ಎತ್ತರ ಹಾಗೂ 35 ಅಡಿ ಅಗಲದ ಚಚ್ಚೌಕದಾಕೃತಿಯ ಕಾಬಾ ತನ್ನ ದಕ್ಷಿಣ ಭಾಗದಲ್ಲಿ ನೆಲದಿಂದ ಐದು ಅಡಿ ಎತ್ತರದಲ್ಲಿ 'ಪವಿತ್ರ ಕರಿಶಿಲೆ'ಯನ್ನ ಹೊಂದಿದೆ.ಮುಸ್ಲೀಮರಿಗೆ ಈ ಕರಿಶಿಲೆ ಪರಮ ಪವಿತ್ರ.ಅದನ್ನು ಸ್ವರ್ಗದಿಂದಲೆ ಪಡೆಯಲಾಗಿದೆ ಎಂದು ನಂಬುವ ಮುಸ್ಲಿಂ ಯಾತ್ರಿಕರು ಶ್ರದ್ಧಾ ಭಕ್ತಿಯಿಂದ ಅದಕ್ಕೆ ಮುತ್ತಿಟ್ಟು ಧನ್ಯರಾಗುತ್ತಾರೆ.
'ಕಾಬಾ' ಕಟ್ಟಡ ದೊಳಗೆ ಇಸ್ಲಾಮಿನ ಉಗಮಕ್ಕೂ ಪೂರ್ವದಲ್ಲಿಯೇ ಒಟ್ಟು 361 ವಿಗ್ರಹಗಳನ್ನು ಆರಾಧಿಸುವ ಪದ್ದತಿಯಿತ್ತು.ಈ ಅನೇಕ ವಿಗ್ರಹಗಳ ಪೈಕಿ 'ಅಲ್ಲಾಹ'ನೂ ಒಬ್ಬನಾಗಿದ್ದ.ಅವನನ್ನು ಕೇವಲ ಮೆಕ್ಕಾ ಮೂಲ ನಿವಾಸಿಗಳು ಆರಾಧಿಸುತ್ತಿದ್ದರು ಅನ್ನುವ ವಿಶ್ಲೇಷಣೆ ವಿಲ್ ಡ್ಯೂರಂಟನದು.
(ಇನ್ನೂ ಇದೆ....)
ಒಂದುಕಡೆ ಅಸಂಖ್ಯಾತ ಉಪ ಬುಡಕಟ್ಟುಗಳ ಜನರು ಒಂದೆ ಭಾಷೆ,ನಡೆ-ನುಡಿ,ನ್ಯಾಯ ಸೂತ್ರಗಳನ್ನ ಒಪ್ಪಿಕೊಂಡಿದ್ದರೂ ಸಹ ಆಂತರಿಕವಾಗಿ 'ಸ್ವತಂತ್ರ ಮನೋಭಾವ'ವನ್ನೆ ಬೆಳೆಸಿಕೊಂಡು ಸಮಯ ಬಂದಾಗ ಯಾವುದೆ ನೈತಿಕ ನ್ಯಾಯ ಸೂತ್ರಗಳಿಗೆ ಕವಡೆ ಕಿಮ್ಮತ್ತನ್ನೂ ಕೊಡದೆ ಸದಾ ಚಡಪಡಿಸುತ್ತಾ ತಮ್ಮ ತಮ್ಮಲ್ಲೆ ಹೊಡೆದಾಡುತ್ತಿದ್ದು,ಸಣ್ಣಪುಟ್ಟ ಕ್ಷುದ್ರ ಕಾರಣಗಳಿಗೂ ಭೀಕರ ಮಾರಾಮಾರಿ-ಕದನ-ನೆತ್ತರ ಚೆಲ್ಲಾಟ ಸಾಮಾನ್ಯವೆಂಬಂತೆ ನಡೆಯುತ್ತಿದ್ದವು.ರಕ್ತ ಸಂಬಂಧ ಹಾಗೂ ಇನ್ನಿತರ ಯಾವುದೆ ಆಪ್ತ ಸಂಬಂಧಗಳ ಬೇಲಿಯೂ ಆ ಕ್ಷಣ ಅವರೊಳಗಿನ ಪಶು ವರ್ತನೆಯನ್ನು ತಡೆಯುತ್ತಿರಲಿಲ್ಲ.ಯಾವ ರಾಜನ ಚಕ್ರಾಧಿಪತ್ಯಕ್ಕೂ ಒಪ್ಪದೆ,ತಮ್ಮೊಳಗಿನ ನಾಯಕನ ಮುಂದಾಳತ್ವಕ್ಕೂ ಕಿಮ್ಮತ್ತು ಕೊಡದೆ ತಮಗೆ ಬೇಕಾದಂತೆ ಇರೋದು ಅವರ ರೂಢಿಯಾಗಿತ್ತು.ಐಕ್ಯತೆಯಲ್ಲಿ ನಂಬಿಕೆಯಿಡದೆ ಅನೈಕ್ಯತೆಯ ಅನಿಷ್ಟಗಳನ್ನ ಧಾರಾಳವಾಗಿ ಅನುಭವಿಸುತ್ತಿದ್ದ ಅರಬ್ಬರು ವಿರೋಧಾಭಾಸಪೂರಿತ ಜೀವನ ಶೈಲಿಯನ್ನು ಹೊಂದಿದ್ದದು ಸ್ಪಷ್ಟವಾಗಿತ್ತು.ಯಾವುದೆ ನಸರ್ಗಿಕ ತಡೆಗಳಿಲ್ಲದಿದ್ದರೂ ಅರಬ್ಬರ ಸ್ವಾತಂತ್ರ ಕಾಪಾಡಿದ್ದು ಇದೆ ವಿರೋಧಾಭಾಸ ಅನ್ನುವುದು ಇತಿಹಾಸಕಾರರ ಖಚಿತ ಅಭಿಪ್ರಾಯ.ಇಲ್ಲಿನ ಪ್ರತಿಯೊಂದು ಬುಡಕಟ್ಟು ಕೂಡ ಒಬ್ಬ ಪೂರ್ವಿಕನ ಹೆಸರಿನಿಂದ ಗುರುತಿಸಲ್ಪಡುತ್ತಿತ್ತು.ಉದಾಹಾರಣೆಗೆ 'ಬಾನ್ ಫಾಸನ್' ಬುಡಕಟ್ಟಿನವರು ತಾವು 'ಫಾಸನ್' ಎಂಬ ಸಂತತಿಗೆ ಸೇರಿದವರು ಎಂದು ಸಾರಿಕೊಳ್ಳುತ್ತಿದ್ದರು.ಹೀಗೆ ತಮ್ಮ ಬುಡಕಟ್ಟಿನ ಸಂಸ್ಕೃತಿ ಹಾಗೂ ಅಂತಸ್ತಿನ ಬಗ್ಗೆ ಅವರಲ್ಲಿ ಅತೀವ ಹೆಮ್ಮೆಯಿದ್ದು ತಮಗಿಂತ ಕೆಳ ಅಂತಸ್ತಿನ ಪಂಗಡದ ಜೊತೆ ಸಂಬಂಧ ಬೆಳೆಸುವುದರ ಬಗ್ಗೆ ವಿರೋಧ ವ್ಯಕ್ತವಾಗುತ್ತಿತ್ತು.
ಅಲ್ಲಿನ ಒಟ್ಟು ಜನಸಂಖ್ಯೆಯಲ್ಲಿ ಐದನೆ ಮೂರು ಭಾಗದಷ್ಟು ಮಂದಿ ಅಲೆಮಾರಿ ಬಿದೊವಿನ್ (bedowin) ಪಂಗಡದವರಾಗಿದ್ದು ತಮ್ಮ ಜಾನುವಾರುಗಳೊಂದಿಗೆ ಜಲವಸತಿ ಹುಡುಕಿಕೊಂಡು ಅಲೆದಾಡುವ ಪರಿಪಾಠ ಅವರದ್ದಾಗಿತ್ತು.ಕುದುರೆಗಳನ್ನ ಸಾಕಿ ಬೆಳೆಸುವುದು ಅವರ ಅನ್ನಕ್ಕೆ ದಾರಿಯಾಗಿದ್ದರೂ ಒಂಟೆಗಳು ಅವರ ಸರ್ವಸ್ವವಾಗಿದ್ದವು.ಅವರ ಜೀವನದ ಅಂಗವಾಗಿದ್ದ ಒಂಟೆ ಅವರೊಂದಿಗೆ ಹುಟ್ಟಿ ಮರುಭೂಮಿಯ ವೈಪರೇತ್ಯಗಳನ್ನೆಲ್ಲ ಸಹಿಸಿಕೊಂಡು ಸಾವಿನಲ್ಲೂ ಉಪಕಾರಿಯಾಗಿಯೆ ಸಾಯುತ್ತಿತ್ತು.ಉರಿ ಬೇಸಿಗೆಯಲ್ಲಿ ಐದು ದಿನಗಳವರೆಗೆ ನೀರಿಲ್ಲದೆ ಬದುಕುವ ಒಂಟೆ ಚಳಿಗಾಲದಲ್ಲಿ ನೀರಿಲ್ಲದೆ ಇಪ್ಪತೈದು ದಿನ ಸವೆಸಬಲ್ಲದು.ಪೌಷ್ಟಿಕತೆ ಹೆಚ್ಚಿಸುವ ಅದರ ಹಾಲು,ಬೆರಣಿಯಾಗಿ ಇಂಧನವಾಗುವ ಅದರ ಸಗಣಿ,ಸತ್ತರೆ ಆಹಾರವಾಗಬಹುದಾದ ಅದರ ಮಾಂಸ,ಗುಡಾರ-ಉಡುಪು ಇನ್ನಿತರ ನಿತ್ಯೋಪಯೋಗಿ ವಸ್ತುಗಳಾಗುವ ಅದರ ಚರ್ಮ ಹೀಗೆ ಅವರ ಸಮಸ್ತ ಅಗತ್ಯಗಳನ್ನೂ ಪೂರೈಸುವ ಒಂಟೆಯೆಂದರೆ ಅವರಿಗೆ ಅಚ್ಚುಮೆಚ್ಚು.ಅದರಷ್ಟೆ ಅವರೂ ಕಷ್ಟ ಸಹಿಷ್ಣುಗಳಾಗಿದ್ದರು.ಹೋರಾಟ-ಮೋಜು-ಪ್ರೇಮ-ಕಲಹ ಇವಷ್ಟೆ ಅವರ ಬಾಳ್ವೆಯಾಗಿತ್ತು.ಇನ್ನಿತರ ಉಪ ಬುಡಕಟ್ಟುಗಳನ್ನ ಮಣಿಸಿ ಅವರನ್ನ ದೋಚುವುದು ;ಅಂತೆಯೆ ತನ್ನ ಮೇಲೆ ಎರಗುವ ಇತರ ಬುಡಕಟ್ಟುಗಳವರಿಂದ ತನ್ನನ್ನು ಕಾಪಾಡಿಕೊಳ್ಳಲು ಹೆಣಗುವುದು.ತನಗೆ ಅದೆಂದೊ ಒದಗಿದ್ದ ಅವಮಾನಕ್ಕೆ ಪ್ರತಿಕಾರವಾಗಿ ಸೇಡು ತೀರಿಸಿಕೊಳ್ಳುವುದು ಇವೆ ಅವರ ಜೀವನದ ರೀತಿಯಾಗಿತ್ತು.'ಪವಿತ್ರ ದಿನ'ಗಳೆಂದು ಪರಿಗಣಿಸುವ ದಿನಗಳಲ್ಲಿ ಅವರು ವಿಶ್ರಾಮದಲ್ಲಿರುತ್ತಿದ್ದು ಹೋರಾಟದಿಂದ ವಿಮುಖರಾಗುತ್ತಿದ್ದರು.ತಮ್ಮ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿವ ಇತರ ಜನಾಂಗದವರನ್ನ ಬೆದರಿಸಿ-ಲೂಟಿ ಹೊಡೆದುಕಳಿಸಲಾಗುತ್ತಿತ್ತು! ಇವರನ್ನು 'ಕರುಣಾಳು,ಕೊಲೆಗಡುಕ,ಉದಾರಿ,ದುರಾಸಾಪೂರಿತ,ನಂಬಲರ್ಹ,ನಂಬಿಕೆ ದ್ರೋಹಿ ಹಾಗೂ ಎದೆಗಾರಿಕೆಯುಳ್ಳವರು!' ಎಂದು ವಿಚಿತ್ರವಾಗಿ ವಿಲ್ ಡ್ಯೂರಾಂಟ್ ವರ್ಣಿಸಿದ್ದಾನೆ.
ರಾಜಕೀಯ ಸಂಗತಿಗಳಲ್ಲಿ ಹೊಂದಿದ್ದಷ್ಟೆ ಅನೈಕ್ಯತೆಯನ್ನ ಅರಬ್ಬರು ದೇವಾರಾಧನೆಗಳ ವಿಷಯದಲ್ಲೂ ಹೊಂದಿದ್ದರು.ಯಾವ ಸುಧಾರಣೆಗೂ ಸೊಪ್ಪು ಹಾಕದೆ,ಯಹೂದಿ ಹಾಗೂ ಕ್ರೈಸ್ತ ಏಕದೇವತಾರಾಧನೆಯನ್ನ ಒಪ್ಪದೆ ಬಹುದೇವರನ್ನ ನಂಬುತ್ತಾ ವಿಗ್ರಹಾರಾಧನೆಯಲ್ಲಿ ನಂಬಿಕೆಹೊಂದಿದ್ದರು.ಯಾವುದೆ ಬಾಹ್ಯ ಪ್ರಭಾವಗಳು ಈ ನಂಬಿಕೆಯನ್ನ ಸಡಿಲಗೊಳಿಸಿರಲಿಲ್ಲ.ದೇವರೊಂದಿಗೆ ಅವರು ದೆವ್ವಗಳನ್ನೂ ನಂಬುತ್ತಿದ್ದು ಆಗಾಗ ಬಲಿ ನೀಡುವ ಮೂಲಕ,ಕವಿತ್ವ ಪ್ರದರ್ಶನದ ಮೂಲಕ ಹಾಡಿ ನಲಿದು ದೇವರನ್ನ ಒಲಿಸಿಕೊಳ್ಳುವುದು ಅವರಿಗೆ ಅಭ್ಯಾಸವಾಗಿತ್ತು.
ಅರಬ್ಬರ ಆರಾಧನಾ ಸ್ಥಳಗಳಲ್ಲಿ ಪುರಾತನ ಕಾಲದಿಂದಲೂ ಅಸ್ತಿತ್ವದಲ್ಲಿದ್ದ ಮೆಕ್ಕಾದ ವಿಗ್ರಹಾರಾಧನೆಯ ಗುಡಿಯೂ ಒಂದಾಗಿತ್ತು.ಆಯಕಟ್ಟಿನ ಸ್ಥಳದಲ್ಲಿದ್ದರಿಂದ ಮೆಕ್ಕಾ ಕ್ರಿಸ್ತಪೂರ್ವದಿಂದಲೂ ಪ್ರಸಿದ್ಧಿ ಪಡೆದಿತ್ತು ಅನ್ನುವುದು ಇತಿಹಾಸಕಾರರ ನಂಬಿಕೆ.ಮೆಕ್ಕಾ ಒಂದು ಬರಡು ಕಣಿವೆಯಲ್ಲಿದ್ದು ಅದರ ಸುತ್ತಲೂ ಕೆಂಪುಕಲ್ಲಿನ ಪರ್ವತಗಳಿಂದ ಅದು ಸುತ್ತುವರೆದಿದೆ.ಕೆಂಪುಸಮುದ್ರ ಇಲ್ಲಿಗೆ ಕೇವಲ ಐವತ್ತು ಮೈಲಿ ದೂರದಲ್ಲಿದೆ.ಅರೇಬಿಯಾದಿಂದ ಹೊರಸಾಗುವ ಕ್ಯಾರವಾನ್'ಗಳು ಹಾಗೂ ಅರೇಬಿಯಾದ ಒಳ ಪ್ರವೇಶಿಸುವ ಕ್ಯಾರವಾನ್'ಗಳು ಇಲ್ಲಿ ಲಂಗರು ಹಾಕುತ್ತಿದ್ದವು.ಇಂತಹ ಸಾವಿರಾರು ಕ್ಯಾರವಾನ್'ಗಳು ವಿಶ್ರಮಿಸುವ ಸರ್ವಋತು ತಂಗುದಾಣಕ್ಕೆ ಒಂದು ಪೂಜಾಸ್ಥಳದ ಅಗತ್ಯ ಕಂಡುಬರೋದರಲ್ಲಿ ಅಚ್ಚರಿಯೇನಿಲ್ಲ.
ಸದಾ ವಣಿಕರಿಂದ ತುಂಬಿ ತುಳುಕುತ್ತಿದ್ದ ಈ ಸ್ಥಳದಲ್ಲಿ ತಮ್ಮ ಧಾರ್ಮಿಕ ಆಚರಣೆಗಳ ಅನುಸಾರ ಅರಬ್ಬರು ಒಂದು ಗುಡಿ ಕಟ್ಟಿಕೊಂಡಿದ್ದು ಅದನ್ನ 'ಕಾಬಾ' ಎಂದು ಕರೆದುಕೊಂಡಿದ್ದರು.ಇದೊಂದು ಚಚ್ಚೌಕದ ಕಟ್ಟಡವಾಗಿದ್ದು ಒಟ್ಟು ಹತ್ತು ಬಾರಿ ಇದನ್ನ ನಿರ್ಮಿಸಲಾಗಿದೆ ಅನ್ನುವುದು ಮುಸ್ಲೀಮರ ನಂಬಿಕೆ.ಮೊದಲನೆ ಕಟ್ಟಡ ಅನಾದಿಕಾಲದಲ್ಲಿ ದೇವದೂತರ ನಿರ್ಮಿತಿಯಾಗಿದ್ದಾರೆ ಎರಡನೆಯದನ್ನ ಬೈಬಲ್'ನಲ್ಲಿ ಬರುವ ಪ್ರವಾದಿ ಆದಂ ಕಟ್ಟಿದ ಎನ್ನಲಾಗುತ್ತದೆ.ಮೂರನೆಯದನ್ನು ಅವನ ಮಗ ಸೇಥ್,ನಾಲ್ಕನೆಯದನ್ನು ಮೊಮ್ಮಗ ಅಬ್ರಾಹಂ ಹಾಗೂ ಐದನೆಯದನ್ನು ಮರಿಮಗ ಹಗರ್ ಕಟ್ಟಿದ್ದನಂತೆ.ಆರು ಮತ್ತು ಏಳನೆಯದನ್ನು ಇಸ್ಲಾಂ ಪೂರ್ವದ ಖುರೈಷಿ ಬುಡಕಟ್ಟಿನವರು ಕಟ್ಟಿದ್ದಾರೆ ಎಂಟನೆಯದ್ದನ್ನು ಮಹಮದ್ ಕಾಲದಲ್ಲಿ ಮತ್ತವರೆ ಕಟ್ಟಿದ್ದರು.ಕ್ರಿಸ್ತಶಕ 681 ಮತ್ತು 696ರಲ್ಲಿ ಮುಸ್ಲೀಂ ಶ್ರದ್ಧಾಳುಗಳು ಒಂಬತ್ತನೆ ಹಾಗು ಹತ್ತನೆ ಕಟ್ಟಡವನ್ನು ನಿರ್ಮಿಸಿದರು ಎನ್ನಲಾಗುತ್ತದೆ.ಈಗ ಅಲ್ಲಿರುವ ಕಟ್ಟಡ ಅನಂತರದ ದಿನಗಳಲ್ಲಿ ವಿವಿಧ ಖಲೀಫರಿಂದ ನಿರ್ಮಾಣಗೊಂಡಿತು.40 ಅಡಿ ಉದ್ದ ಹಾಗೂ 50 ಅಡಿ ಎತ್ತರ ಹಾಗೂ 35 ಅಡಿ ಅಗಲದ ಚಚ್ಚೌಕದಾಕೃತಿಯ ಕಾಬಾ ತನ್ನ ದಕ್ಷಿಣ ಭಾಗದಲ್ಲಿ ನೆಲದಿಂದ ಐದು ಅಡಿ ಎತ್ತರದಲ್ಲಿ 'ಪವಿತ್ರ ಕರಿಶಿಲೆ'ಯನ್ನ ಹೊಂದಿದೆ.ಮುಸ್ಲೀಮರಿಗೆ ಈ ಕರಿಶಿಲೆ ಪರಮ ಪವಿತ್ರ.ಅದನ್ನು ಸ್ವರ್ಗದಿಂದಲೆ ಪಡೆಯಲಾಗಿದೆ ಎಂದು ನಂಬುವ ಮುಸ್ಲಿಂ ಯಾತ್ರಿಕರು ಶ್ರದ್ಧಾ ಭಕ್ತಿಯಿಂದ ಅದಕ್ಕೆ ಮುತ್ತಿಟ್ಟು ಧನ್ಯರಾಗುತ್ತಾರೆ.
'ಕಾಬಾ' ಕಟ್ಟಡ ದೊಳಗೆ ಇಸ್ಲಾಮಿನ ಉಗಮಕ್ಕೂ ಪೂರ್ವದಲ್ಲಿಯೇ ಒಟ್ಟು 361 ವಿಗ್ರಹಗಳನ್ನು ಆರಾಧಿಸುವ ಪದ್ದತಿಯಿತ್ತು.ಈ ಅನೇಕ ವಿಗ್ರಹಗಳ ಪೈಕಿ 'ಅಲ್ಲಾಹ'ನೂ ಒಬ್ಬನಾಗಿದ್ದ.ಅವನನ್ನು ಕೇವಲ ಮೆಕ್ಕಾ ಮೂಲ ನಿವಾಸಿಗಳು ಆರಾಧಿಸುತ್ತಿದ್ದರು ಅನ್ನುವ ವಿಶ್ಲೇಷಣೆ ವಿಲ್ ಡ್ಯೂರಂಟನದು.
(ಇನ್ನೂ ಇದೆ....)
14 October 2011
ಮರಳುಗಾಡಿನ ಮರ್ಮರ...
ಭೂಮಂಡಲದಲ್ಲಿ ಅರೇಬಿಯಾ ಭೂಭಾಗ ಬೃಹತ್ ಮರಳುಗಾಡು ವ್ಯಾಪಿಸಿರುವ ಒಣ ಪ್ರದೇಶ.ಅದರ ಪೂರ್ವದಿಕ್ಕಿನಲ್ಲಿ ಪರ್ಷಿಯನ್ ಕೊಲ್ಲಿ,ಪಶ್ಚಿಮಕ್ಕೆ ಕೆಂಪುಸಮುದ್ರ ಹಾಗೂ ದಕ್ಷಿಣಕ್ಕೆ ಅರಬ್ಬಿಸಮುದ್ರ ಆವರಿಸಿದ್ದು ಅದೊಂದು ಪರ್ಯಾಯದ್ವೀಪವಾಗಿ ಅಸ್ತಿತ್ವದಲ್ಲಿದೆ.ಈ ಪರ್ಯಾಯದ್ವೀಪದ ಪಶ್ಚಿಮ ಭಾಗದಲ್ಲಿ ಕೆಂಪುಸಮುದ್ರಕ್ಕೆ ಅಂಟಿಕೊಂಡಂತೆ ಒರಟು ಕೆಂಪುಮರಳುಗಲ್ಲಿನ ಗಿರಿಶ್ರೇಣಿಗಳು ದಕ್ಷಿಣದಿಂದ ಉತ್ತರದ ಕಡೆಗೆ ಹರಡಿವೆ.ಇದರ ಒಂದು ಭಾಗ ಸಮುದ್ರ ತೀರದಡೆಗೆ ಚಾಚಿದ್ದಾರೆ ಇನ್ನೊಂದು ಭಾಗ ಸಮುದ್ರ ಮಟ್ಟಕ್ಕಿಂತ ಸ್ವಲ್ಪ ತಗ್ಗಿನವರೆಗೂ ಒಳನಾಡಿನತ್ತ ಮೈಲಿಗಳ ದೂರ ವ್ಯಾಪಿಸಿದೆ.ಈ ಗಿರಿಶಿಖರ ಹಾಗೂ ಕೆಂಪುಸಮುದ್ರದ ಮಧ್ಯದಲ್ಲಿರುವ ಪ್ರದೇಶದಲ್ಲಿರುವುದೆ ಇತಿಹಾಸ ಪ್ರಸಿದ್ಧ ಮೆಕ್ಕಾ ಹಾಗು ಮದೀನಾ ನಗರ ಗಳು.
ಅರೇಬಿಯಾ ಒಟ್ಟಾರೆ 1400ಮೈಲಿ ಉದ್ದವಿದ್ದು, 1250ಮೈಲಿ ಅಗಲವಾಗಿದೆ.ಆದರೆ ಈ ವಿಶಾಲಪ್ರದೇಶ ಒಂದೇಒಂದು ದೊಡ್ಡ ನದಿ ಅಥವಾ ಹೊಳೆಯನ್ನ ಹೊಂದಿಲ್ಲದಿರುವುದು ವಿಸ್ಮಯ ಹುಟ್ಟಿಸುತ್ತದೆ.ಅರೇಬಿಕ್ ಭಾಷೆಯಲ್ಲಿ 'ಅರಬ' ಎಂದರೆ ಬರಡು ಎಂದರ್ಥ.ಹೆಸರಿಗೆ ತಕ್ಕಂತೆ ಈ ಪ್ರೆದೇಶ ಒಂದು ಬರಡು ಭೂಮಿಯೆ ಆಗಿದ್ದು ಈ ಎರಡು ನಗರಗಳಿರುವ ಪ್ರದೇಶದಿಂದ ಪೂರ್ವಕ್ಕೆ ಭೂಮಿ ಇಳಿಜಾರಾಗಿದ್ದು ನಡುನಡುವೆ ಕೆಲವೊಮ್ಮೆ 12000ಅಡಿ ಎತ್ತರದ ಪರ್ವತಗಳು ಏರ್ಪಟ್ಟು ಮತ್ತೆ ಕೊಲ್ಲಿಯವರೆಗೂ ಇಳಿಜಾರಾಗಿ ಒಂದು ಬಗೆಯ ವಿಲಕ್ಷಣತೆ ಹೊಂದಿರುವುದು ಒಂದು ವಿಶೇಷ.ಆದರೆ ಇಲ್ಲಿನ ನೈಋತ್ಯ ಭಾಗ ಸಣ್ಣಪುಟ್ಟ ನೀರಿನ ಒರತೆ-ಹಳ್ಳಗಳನ್ನು ಹೊಂದಿದ್ದು ಅಲ್ಲಿನ ಮಣ್ಣಿನ ಫಲವತ್ತತೆಯನ್ನ ಹೆಚ್ಚಿಸುವುದರಲ್ಲಿ ಸಹಕಾರಿಯಾಗಿದೆ.ಉಳಿದಂತೆ ಇನ್ನು ಯಾವ ಭಾಗವೂ ಆ ಭಾಗ್ಯ ಹೊಂದಿರದೆ ಬೆಂಗಾಡಾಗಿ ಕೇವಲ ಅಲ್ಲಲ್ಲಿ ಕಾಣುವ ಓಯಸಿಸ್'ಗಳಿಂದಷ್ಟೆ ನೀರುಂಡು ಕರ್ಜೂರ-ಬಾರ್ಲಿ-ಅಕೇಶಿಯ ಮುಂತಾದ ಸಸ್ಯಗಳನ್ನಷ್ಟೆ ಬೆಳೆದುಕೊಳ್ಳಲು ಶಕ್ತವಾಗಿವೆ.ಈ ಜಲವಸತಿಗಳ ಸುತ್ತ ಜನವಸತಿ ಹಬ್ಬಿದೆ.ಅನಾದಿಕಾಲದಿಂದಲೂ ಇಂತಹ ಓಯಸಿಸ್'ಗಳ ಸುತ್ತ ಏರ್ಪಟ್ಟ ಜನವಸತಿಗಳ ಬುಡಕಟ್ಟಿನ ಮಂದಿಗೆ ಇಲ್ಲಿನ ಉರಿ ಉಷ್ಣಾಂಶವೆ ಮೊದಲ ಶತ್ರು.ಹಗಲಲ್ಲಿ ತಾರಕಕ್ಕೇರುವ ಉಷ್ಣಾಂಶ ಜನರ ರಕ್ತ ಕುದಿಸಿ ಮುಖವನ್ನ ಸುಡಿಸುವಂತಿರುವುದರಿಂದ ಇಲ್ಲಿನ ನಿವಾಸಿಗಳು ಮರಳು ಮಿಶ್ರಿತ ಸುಡುಗಾಳಿಯಿಂದ ತಮ್ಮನ್ನು ಕಾಪಾಡಿಕೊಳ್ಳಲು ಮೈತುಂಬ ನಿಲುವಂಗಿ ಹಾಗೂ ತಲೆಗೆಸುತ್ತಿಕೊಳ್ಳುವ ಬಟ್ಟೆ ಧರಿಸುವುದು ವಾಡಿಕೆ.ಮಳೆ ಎನ್ನುವುದು ಕೇವಲ ನೆನಪಿನ ಮಿತ್ರನಾಗಿದ್ದು,ಉರಿಕೆಂಡದಂತಹ ಸೂರ್ಯನ ಸ್ನೇಹವಿರುವುದರಿಂದ ಆಕಾಶ ವರ್ಷಪೂರ್ತಿ ತಿಳಿಯಾಗಿದ್ದು ಬೀಸುವ ಗಾಳಿ 'ಹೊಳೆಯುವ ದ್ರಾಕ್ಷಾರಸ' (Sparkling Wine) ದಂತೆ ಅನುಭವವಾಗುತ್ತದೆ ಎಂದಿದ್ದಾನೆ ಖ್ಯಾತ ಇತಿಹಾಸಕಾರ ವಿಲ್ ಡ್ಯೂರಾಂಟ್.
ತಮ್ಮದೆ ವಿಶಿಷ್ಟ ಸಂಸ್ಕೃತಿ,ನಡೆ-ನುಡಿ,ಹವ್ಯಾಸಗಳನ್ನ ಹೊಂದಿ ಇವೆಲ್ಲದರ ಕೂಡ ಬಾಳ್ವೆ ನಡೆಸುವುದು ಇಲ್ಲಿನ ಜನರಿಗೆ ಸಾಮಾನ್ಯ ಸಂಗತಿಯಾಗಿತ್ತು.ಆದರೆ ದಿನ ಬಳಕೆಯ ದವಸಧಾನ್ಯಗಳು ಹಾಗೂ ನಿತ್ಯೋಪಯೋಗಿ ಆಹಾರ ವಸ್ತುಗಳಿಗಾಗಿ ದೂರದೇಶದವರೊಂದಿಗೆ ವ್ಯಾಪಾರ ವಾಹಿವಾಟು ಇಟ್ಟುಕೊಳ್ಳುವುದು ಅರಬ್ಬಿಗಳಿಗೆ ತೀರಾ ಅನಿವಾರ್ಯವೆ ಆಗಿತ್ತು.ಹೀಗಾಗಿ ಸಾರ್ಥ (ಕ್ಯಾರವಾನ್) ಕಟ್ಟಿಕೊಂಡು ನೂರಾರು ಮೈಲಿ ಸುತ್ತುವುದನ್ನ ಜೀವನದ ಅಂಗವಾಗಿಸಿಕೊಂಡಿದ್ದ ಅರಬ್ಬಿಗಳು ಒಂಟೆ,ಕುದುರೆಗಳ ಮೇಲೆ ಕೊಂಡ ಸಾಮಾನುಗಳನ್ನ ಹೇರಿಕೊಂಡು ಅವುಗಳ ರಕ್ಷಣೆಗಾಗಿ ಅಂಗರಕ್ಷಕರ ನೆರವಿನಿಂದ ಅಥವಾ ಸ್ವತಃ ತಾವೆ ಶಸ್ತ್ರಸಜ್ಜಿತರಾಗಿ ದಾರಿಗಳ್ಳರೊಂದಿಗೆ ರೋಷಾವೇಶದಿಂದ ಹೋರಾಡುವುದನ್ನು ರೂಢಿಸಿಕೊಂಡಿದ್ದರು ಅರೇಬಿಯಾದ ಉದ್ದಗಲಕ್ಕೂ ಇಂತಹ ಕ್ಯಾರವಾನ್'ಗಳು ಸರ್ವೆಸಾಮಾನ್ಯವಾಗಿದ್ದು,ಅದು ಅಲ್ಲಿನ ನಿವಾಸಿಗಳ ಬದುಕಲ್ಲಿ ಹಾಸು ಹೊಕ್ಕಾಗಿತ್ತು.ಅಲ್ಲಿನ ಭಯಂಕರ ದುರ್ಗಮ ಮರಳುಗಾಡಿನಲ್ಲಿ ಪ್ರಯಾಣಿಸುವುದು ಪ್ರಯಾಸಕರವಾಗಿದ್ದು ಅನಿರೀಕ್ಷಿತ ಅಪಾಯಗಳಿಗೇನೂ ಕೊರತೆಯಿರಲಿಲ್ಲ.ಹೀಗಾಗಿ ಕ್ಯಾರವಾನಿಗರು ತಮ್ಮ ಸ್ವತ್ತುಗಳ ರಕ್ಷಣೆಗಾಗಿ ಕಾಣದ ದೇವರನ್ನ ಮೊರೆ ಹೋಗುವುದು ಸ್ವಾಭಾವಿಕವೆ ಆಗಿತ್ತು.ದಾರಿಯುದ್ದ ಸಿಗುವ ವಿವಿಧ ದೇವತಾರಾಧನ ಸ್ಥಳಗಳಲ್ಲಿ ತಮ್ಮ ಬುಡಕಟ್ಟಿಗೆ ಸೇರಿದ ದೇವರನ್ನ ಶ್ರದ್ಧಾಭಕ್ತಿಯಿಂದ ಆರಾಧಿಸುವುದು,ದೈವ ಕೃಪೆಯನ್ನ ಅಪೇಕ್ಷಿಸಿ ಪ್ರಾರ್ಥಿಸುವುದು ಅವರ ಬಾಳಿನ ಒಂದು ಅವಿಭಾಜ್ಯ ನಡೆಯಾಗಿತ್ತು.
ಅರಬ್ಬಿಗಳೊಂದಿಗೆ ವ್ಯಾಪಾರ ವಾಹಿವಾಟು ಇಟ್ಟುಕೊಂಡಿದ್ದ ಪ್ರಮುಖ ವಿದೇಶಗಳಲ್ಲಿ ಸಿರಿಯಾ ಹಾಗೂ ಪ್ಯಾಲಸ್ತೈನ್ ಪ್ರಮುಖವಾಗಿದ್ದವು.ಇವುಗಳೊಂದಿಗೆ ನೆರೆಯ ಇರಾನ್.ಇರಾಕ್ ಹಾಗೂ ಭಾರತದವರೆಗೂ ಅರಬ್ಬಿ ವಣಿಕರು ಕ್ಯಾರವಾನ್ ನಡೆಸುತಿದ್ದುದೂ ಇತ್ತು.ಅರಬ್ಬರಲ್ಲಿ ಕೆಲವರು ಹೀಗೆ ವ್ಯವಹಾರ ಕೌಶಲ್ಯ ಮೆರೆದರೆ,ಇನ್ನುಳಿದವರು ಹೊರದೇಶಗಳಲ್ಲಿ ಈ ವ್ಯವಹಾರ ಕೌಶಲ್ಯ ಮೆರೆದು ಪ್ರಸಿದ್ಧರೂ ಆಗಿದ್ದರು.ಆದರೆ ಅವರ ಆರ್ಥಿಕ ನೆಮ್ಮದಿಯನ್ನ ಕಲಕಿದ್ದು ವಿದೇಶಿ ವ್ಯಾಪಾರಗಳಲ್ಲಿ ರೋಮನ್ನರ ಅಧಿಪತ್ಯ.ಕ್ರೈಸ್ತ ಮತ ರಾಜಧರ್ಮವಾಗಿ ರೋಮನ್ ಸಾಮ್ರಾಜ್ಯ ಪ್ರವರ್ಧಮಾನಕ್ಕೆ ಬಂದ ಕಾರಣ ಕ್ಯಾರವಾನ್'ಗಳ ಮೇಲೆ ರೋಮನ್ ಸುಂಕಾಧಿಕಾರಿಗಳು ಹೇರಲಾರಂಭಿಸಿದ ದುಬಾರಿ ಶುಲ್ಕ ಹಾಗೂ ವಿಪರೀತ ನಿರ್ಬಂಧಗಳ ಕಾರಣ ಕೆಂಗೆಟ್ಟ ಅನೇಕ ಅರಬ್ಬರು ಮರಳಿ ಮಾತೃಭೂಮಿಗೆ ಬಂದು ಮೆಕ್ಕಾ,ಮದೀನ ಹಾಗೂ ಸಿರಿಯಾ ಸೇರಿದಂತೆ ಮಧ್ಯ ಪ್ರಾಚ್ಯದಾದ್ಯಂತ ಹರಿದು ಹಂಚಿಹೋದರು.
ಗ್ರೀಕನ್ನರಿಂದ 'ಸೇರಾಕೆನಾಯ್' (Serakenoi) ಅಥವಾ "ಸಾರ್'ಸೆನ್ಸ್" ಎಂದು ಕರೆಸಿಕೊಂಡ ಅರೆಬಿಯಾವನ್ನ (ಅರಬ್ಬಿಯಲ್ಲಿ ಹಾಗೆಂದರೆ ಪೂರ್ವದವರು ಎಂದರ್ಥ) ಕ್ರಿಸ್ತಪೂರ್ವ 240ರಲ್ಲಿ ಮೊಗಾನ್ ಎಂಬುವವ ಆಳುತ್ತಿದ್ದ.ಅವನನ್ನು ಬೆಬಿಲೋನಿಯಾದ ರಾಜ ನರಂಸಿನ್ ಸೋಲಿಸಿದ ಬಗೆಗಿನ ಶಿಲಾಶಾಸನವೊಂದು ಲಭ್ಯವಿದೆ.ಅರೇಬಿಯಾದ ಇತರ ಶಾಸನಗಳ ಪ್ರಕಾರ ಕ್ರಿಸ್ತಪೂರ್ವ 800ರಲ್ಲಿ ಅದೆ ಮನೆತನದ ಇಪ್ಪತೈದಕ್ಕೂ ರಾಜರು ಅರೆಬಿಯಾವನ್ನ ಆಳಿದ್ದಾರೆ.
ಇತಿಹಾಸ ಪ್ರಸಿದ್ಧ ರಾಣಿ ಶೀಬಾ ದಕ್ಷಿಣ ಅರೆಬಿಯಾದಲ್ಲಿರುವ ಯಮನ್'ನ ಸಾಬಾದಿಂದ ರಾಜ್ಯಭಾರ ಮಾಡುತ್ತಿದ್ದಳು.ಆಕೆ ಅವಳ ಕಾಲದವನೆ ಆಗಿದ್ದ ರಾಜಾ ಸೋಲೋಮನ್ನನನ್ನು ಕ್ರಿಸ್ತಪೂರ್ವ 950ರಲ್ಲಿ ಭೇಟಿಮಾಡಿದ್ದಳು.ಸಾಬಾದ ರಾಜರು ಮಾರಿಬ್'ನಲ್ಲಿ ಕಾಲಾನಂತರ ರಾಜಧಾನಿಯನ್ನು ಸ್ಥಾಪಿಸಿ ಉಛ್ರಾಯ ಸ್ಥಿತಿಯನ್ನ ತಲುಪಿ,ಉತ್ತಮ ನೌಕಾಪಡೆ ಹೊಂದಿ ದೂರದ ಭಾರತದೊಂದಿಗೆ ಸಮುದ್ರಮಾರ್ಗದ ವ್ಯಾಪಾರ ನಡೆಸುತ್ತಿದ್ದರು.ಕ್ರಮೇಣ ರೋಮನ್ನರ ಪ್ರಾಬಲ್ಯ ಹೆಚ್ಚಿ ಅವರು ಅರೇಬಿಯಾದ ಪ್ರಸಿದ್ಧ ರೇವುಪಟ್ಟಣವಾಗಿರುವ ಏಡನ್'ನ್ನು ಅತಿಕ್ರಮಿಸಿ ಈಜಿಪ್ಟ್ ಹಾಗೂ ಭಾರತದ ಮೇಲಿನ ವ್ಯಾಪಾರದ ಮೇಲೆ ಹತೋಟಿ ಸಾಧಿಸಿತು.
ಏಡನ್ ಬದಲಾಗುತ್ತಿದ್ದ ಕಾಲಮಾನದಲ್ಲಿ ಅರಬ್,ರೋಮನ್ ಹಾಗು ಪರ್ಷಿಯನ್ ಚಕ್ರಾಧಿಪತ್ಯಕ್ಕೆ ಒಳಗಾಗಿದ್ದನ್ನು ಇತಿಹಾಸಕಾರರು ಗುರುತಿಸಿದ್ದಾರೆ.ಕ್ರಿಸ್ತಶಕ ಎರಡನೆ ಶತಮಾನವನ್ನೆ ಗಮನಿಸುವುದಾದರೆ ಸಮೈರಾ ನಗರದ ಸಾನಿಸ್ಸಾಡರು ರೋಮನ್ನರ ಅಧೀನದಲ್ಲಿದ್ದರೆ,ಯುಫ್ರೆಟಿಸ್ ನದಿಯ ದಡದಲ್ಲಿ ಇದ್ದ ಅಲ್-ಹಿರಾ ರಾಜ್ಯ ಪರ್ಶಿಯನ್ನರ ಪ್ರಭಾವದಲ್ಲಿತ್ತು.ಈ ಎರಡೂ ರಾಜ್ಯಗಳು ಕ್ರಿಸ್ತಮತದ ಪ್ರಭಾವಕ್ಕೆ ಒಳಪಟ್ಟಿದ್ದವು.ಕ್ರಿಸ್ತಶಕ ಏಳನೆ ಶತಮಾನದ ವೇಳೆಗೆ ಈ ಎರಡೂ ರಾಜ್ಯಗಳು ತಮ್ಮ ಅಸ್ಥಿತ್ವವನ್ನ ಕಳೆದುಕೊಂಡವು.
ರೋಮ್ ಹಾಗೂ ಪರ್ಷಿಯಾ ಚಕ್ರಾದಿಪತ್ಯಗಳು ಉನ್ನತ ಸ್ಥಿತಿಯಲ್ಲಿದ್ದಾಗ ಇತ್ತ ಅರೇಬಿಯಾ ಕತ್ತಲೆಯತ್ತ ಜಾರತೊಡಗಿತ್ತು.ಕ್ರಿಸ್ತಪೂರ್ವದಲ್ಲಿ ಅಲ್ಲಿದ್ದ ವೈಭವ ಏಳನೆ ಶತಮಾನದಲ್ಲಿ ಅಸ್ತಂಗತವಾಗಿತ್ತು.ಹೊರಪ್ರಪಂಚದ ಮಟ್ಟಿಗೆ ಅರಬ್ಬರು ಅಪ್ರಸ್ತುತರಾಗಿಬಿಟ್ಟಿದ್ದರು.ಹೀಗಾಗಿ ಕಗ್ಗತ್ತಲೆಯ ಆಫ್ರಿಕಾ ಖಂಡದಂತೆ ಅರೇಬಿಯಾ ಪರ್ಯಾಯ ದ್ವೀಪವೂ ಕಗ್ಗತ್ತಲ ದ್ವೀಪವಾಗಿ ಪರಿಣಮಿಸಿತು.
(ಇನ್ನೂ ಇದೆ....)
ಅರೇಬಿಯಾ ಒಟ್ಟಾರೆ 1400ಮೈಲಿ ಉದ್ದವಿದ್ದು, 1250ಮೈಲಿ ಅಗಲವಾಗಿದೆ.ಆದರೆ ಈ ವಿಶಾಲಪ್ರದೇಶ ಒಂದೇಒಂದು ದೊಡ್ಡ ನದಿ ಅಥವಾ ಹೊಳೆಯನ್ನ ಹೊಂದಿಲ್ಲದಿರುವುದು ವಿಸ್ಮಯ ಹುಟ್ಟಿಸುತ್ತದೆ.ಅರೇಬಿಕ್ ಭಾಷೆಯಲ್ಲಿ 'ಅರಬ' ಎಂದರೆ ಬರಡು ಎಂದರ್ಥ.ಹೆಸರಿಗೆ ತಕ್ಕಂತೆ ಈ ಪ್ರೆದೇಶ ಒಂದು ಬರಡು ಭೂಮಿಯೆ ಆಗಿದ್ದು ಈ ಎರಡು ನಗರಗಳಿರುವ ಪ್ರದೇಶದಿಂದ ಪೂರ್ವಕ್ಕೆ ಭೂಮಿ ಇಳಿಜಾರಾಗಿದ್ದು ನಡುನಡುವೆ ಕೆಲವೊಮ್ಮೆ 12000ಅಡಿ ಎತ್ತರದ ಪರ್ವತಗಳು ಏರ್ಪಟ್ಟು ಮತ್ತೆ ಕೊಲ್ಲಿಯವರೆಗೂ ಇಳಿಜಾರಾಗಿ ಒಂದು ಬಗೆಯ ವಿಲಕ್ಷಣತೆ ಹೊಂದಿರುವುದು ಒಂದು ವಿಶೇಷ.ಆದರೆ ಇಲ್ಲಿನ ನೈಋತ್ಯ ಭಾಗ ಸಣ್ಣಪುಟ್ಟ ನೀರಿನ ಒರತೆ-ಹಳ್ಳಗಳನ್ನು ಹೊಂದಿದ್ದು ಅಲ್ಲಿನ ಮಣ್ಣಿನ ಫಲವತ್ತತೆಯನ್ನ ಹೆಚ್ಚಿಸುವುದರಲ್ಲಿ ಸಹಕಾರಿಯಾಗಿದೆ.ಉಳಿದಂತೆ ಇನ್ನು ಯಾವ ಭಾಗವೂ ಆ ಭಾಗ್ಯ ಹೊಂದಿರದೆ ಬೆಂಗಾಡಾಗಿ ಕೇವಲ ಅಲ್ಲಲ್ಲಿ ಕಾಣುವ ಓಯಸಿಸ್'ಗಳಿಂದಷ್ಟೆ ನೀರುಂಡು ಕರ್ಜೂರ-ಬಾರ್ಲಿ-ಅಕೇಶಿಯ ಮುಂತಾದ ಸಸ್ಯಗಳನ್ನಷ್ಟೆ ಬೆಳೆದುಕೊಳ್ಳಲು ಶಕ್ತವಾಗಿವೆ.ಈ ಜಲವಸತಿಗಳ ಸುತ್ತ ಜನವಸತಿ ಹಬ್ಬಿದೆ.ಅನಾದಿಕಾಲದಿಂದಲೂ ಇಂತಹ ಓಯಸಿಸ್'ಗಳ ಸುತ್ತ ಏರ್ಪಟ್ಟ ಜನವಸತಿಗಳ ಬುಡಕಟ್ಟಿನ ಮಂದಿಗೆ ಇಲ್ಲಿನ ಉರಿ ಉಷ್ಣಾಂಶವೆ ಮೊದಲ ಶತ್ರು.ಹಗಲಲ್ಲಿ ತಾರಕಕ್ಕೇರುವ ಉಷ್ಣಾಂಶ ಜನರ ರಕ್ತ ಕುದಿಸಿ ಮುಖವನ್ನ ಸುಡಿಸುವಂತಿರುವುದರಿಂದ ಇಲ್ಲಿನ ನಿವಾಸಿಗಳು ಮರಳು ಮಿಶ್ರಿತ ಸುಡುಗಾಳಿಯಿಂದ ತಮ್ಮನ್ನು ಕಾಪಾಡಿಕೊಳ್ಳಲು ಮೈತುಂಬ ನಿಲುವಂಗಿ ಹಾಗೂ ತಲೆಗೆಸುತ್ತಿಕೊಳ್ಳುವ ಬಟ್ಟೆ ಧರಿಸುವುದು ವಾಡಿಕೆ.ಮಳೆ ಎನ್ನುವುದು ಕೇವಲ ನೆನಪಿನ ಮಿತ್ರನಾಗಿದ್ದು,ಉರಿಕೆಂಡದಂತಹ ಸೂರ್ಯನ ಸ್ನೇಹವಿರುವುದರಿಂದ ಆಕಾಶ ವರ್ಷಪೂರ್ತಿ ತಿಳಿಯಾಗಿದ್ದು ಬೀಸುವ ಗಾಳಿ 'ಹೊಳೆಯುವ ದ್ರಾಕ್ಷಾರಸ' (Sparkling Wine) ದಂತೆ ಅನುಭವವಾಗುತ್ತದೆ ಎಂದಿದ್ದಾನೆ ಖ್ಯಾತ ಇತಿಹಾಸಕಾರ ವಿಲ್ ಡ್ಯೂರಾಂಟ್.
ತಮ್ಮದೆ ವಿಶಿಷ್ಟ ಸಂಸ್ಕೃತಿ,ನಡೆ-ನುಡಿ,ಹವ್ಯಾಸಗಳನ್ನ ಹೊಂದಿ ಇವೆಲ್ಲದರ ಕೂಡ ಬಾಳ್ವೆ ನಡೆಸುವುದು ಇಲ್ಲಿನ ಜನರಿಗೆ ಸಾಮಾನ್ಯ ಸಂಗತಿಯಾಗಿತ್ತು.ಆದರೆ ದಿನ ಬಳಕೆಯ ದವಸಧಾನ್ಯಗಳು ಹಾಗೂ ನಿತ್ಯೋಪಯೋಗಿ ಆಹಾರ ವಸ್ತುಗಳಿಗಾಗಿ ದೂರದೇಶದವರೊಂದಿಗೆ ವ್ಯಾಪಾರ ವಾಹಿವಾಟು ಇಟ್ಟುಕೊಳ್ಳುವುದು ಅರಬ್ಬಿಗಳಿಗೆ ತೀರಾ ಅನಿವಾರ್ಯವೆ ಆಗಿತ್ತು.ಹೀಗಾಗಿ ಸಾರ್ಥ (ಕ್ಯಾರವಾನ್) ಕಟ್ಟಿಕೊಂಡು ನೂರಾರು ಮೈಲಿ ಸುತ್ತುವುದನ್ನ ಜೀವನದ ಅಂಗವಾಗಿಸಿಕೊಂಡಿದ್ದ ಅರಬ್ಬಿಗಳು ಒಂಟೆ,ಕುದುರೆಗಳ ಮೇಲೆ ಕೊಂಡ ಸಾಮಾನುಗಳನ್ನ ಹೇರಿಕೊಂಡು ಅವುಗಳ ರಕ್ಷಣೆಗಾಗಿ ಅಂಗರಕ್ಷಕರ ನೆರವಿನಿಂದ ಅಥವಾ ಸ್ವತಃ ತಾವೆ ಶಸ್ತ್ರಸಜ್ಜಿತರಾಗಿ ದಾರಿಗಳ್ಳರೊಂದಿಗೆ ರೋಷಾವೇಶದಿಂದ ಹೋರಾಡುವುದನ್ನು ರೂಢಿಸಿಕೊಂಡಿದ್ದರು ಅರೇಬಿಯಾದ ಉದ್ದಗಲಕ್ಕೂ ಇಂತಹ ಕ್ಯಾರವಾನ್'ಗಳು ಸರ್ವೆಸಾಮಾನ್ಯವಾಗಿದ್ದು,ಅದು ಅಲ್ಲಿನ ನಿವಾಸಿಗಳ ಬದುಕಲ್ಲಿ ಹಾಸು ಹೊಕ್ಕಾಗಿತ್ತು.ಅಲ್ಲಿನ ಭಯಂಕರ ದುರ್ಗಮ ಮರಳುಗಾಡಿನಲ್ಲಿ ಪ್ರಯಾಣಿಸುವುದು ಪ್ರಯಾಸಕರವಾಗಿದ್ದು ಅನಿರೀಕ್ಷಿತ ಅಪಾಯಗಳಿಗೇನೂ ಕೊರತೆಯಿರಲಿಲ್ಲ.ಹೀಗಾಗಿ ಕ್ಯಾರವಾನಿಗರು ತಮ್ಮ ಸ್ವತ್ತುಗಳ ರಕ್ಷಣೆಗಾಗಿ ಕಾಣದ ದೇವರನ್ನ ಮೊರೆ ಹೋಗುವುದು ಸ್ವಾಭಾವಿಕವೆ ಆಗಿತ್ತು.ದಾರಿಯುದ್ದ ಸಿಗುವ ವಿವಿಧ ದೇವತಾರಾಧನ ಸ್ಥಳಗಳಲ್ಲಿ ತಮ್ಮ ಬುಡಕಟ್ಟಿಗೆ ಸೇರಿದ ದೇವರನ್ನ ಶ್ರದ್ಧಾಭಕ್ತಿಯಿಂದ ಆರಾಧಿಸುವುದು,ದೈವ ಕೃಪೆಯನ್ನ ಅಪೇಕ್ಷಿಸಿ ಪ್ರಾರ್ಥಿಸುವುದು ಅವರ ಬಾಳಿನ ಒಂದು ಅವಿಭಾಜ್ಯ ನಡೆಯಾಗಿತ್ತು.
ಅರಬ್ಬಿಗಳೊಂದಿಗೆ ವ್ಯಾಪಾರ ವಾಹಿವಾಟು ಇಟ್ಟುಕೊಂಡಿದ್ದ ಪ್ರಮುಖ ವಿದೇಶಗಳಲ್ಲಿ ಸಿರಿಯಾ ಹಾಗೂ ಪ್ಯಾಲಸ್ತೈನ್ ಪ್ರಮುಖವಾಗಿದ್ದವು.ಇವುಗಳೊಂದಿಗೆ ನೆರೆಯ ಇರಾನ್.ಇರಾಕ್ ಹಾಗೂ ಭಾರತದವರೆಗೂ ಅರಬ್ಬಿ ವಣಿಕರು ಕ್ಯಾರವಾನ್ ನಡೆಸುತಿದ್ದುದೂ ಇತ್ತು.ಅರಬ್ಬರಲ್ಲಿ ಕೆಲವರು ಹೀಗೆ ವ್ಯವಹಾರ ಕೌಶಲ್ಯ ಮೆರೆದರೆ,ಇನ್ನುಳಿದವರು ಹೊರದೇಶಗಳಲ್ಲಿ ಈ ವ್ಯವಹಾರ ಕೌಶಲ್ಯ ಮೆರೆದು ಪ್ರಸಿದ್ಧರೂ ಆಗಿದ್ದರು.ಆದರೆ ಅವರ ಆರ್ಥಿಕ ನೆಮ್ಮದಿಯನ್ನ ಕಲಕಿದ್ದು ವಿದೇಶಿ ವ್ಯಾಪಾರಗಳಲ್ಲಿ ರೋಮನ್ನರ ಅಧಿಪತ್ಯ.ಕ್ರೈಸ್ತ ಮತ ರಾಜಧರ್ಮವಾಗಿ ರೋಮನ್ ಸಾಮ್ರಾಜ್ಯ ಪ್ರವರ್ಧಮಾನಕ್ಕೆ ಬಂದ ಕಾರಣ ಕ್ಯಾರವಾನ್'ಗಳ ಮೇಲೆ ರೋಮನ್ ಸುಂಕಾಧಿಕಾರಿಗಳು ಹೇರಲಾರಂಭಿಸಿದ ದುಬಾರಿ ಶುಲ್ಕ ಹಾಗೂ ವಿಪರೀತ ನಿರ್ಬಂಧಗಳ ಕಾರಣ ಕೆಂಗೆಟ್ಟ ಅನೇಕ ಅರಬ್ಬರು ಮರಳಿ ಮಾತೃಭೂಮಿಗೆ ಬಂದು ಮೆಕ್ಕಾ,ಮದೀನ ಹಾಗೂ ಸಿರಿಯಾ ಸೇರಿದಂತೆ ಮಧ್ಯ ಪ್ರಾಚ್ಯದಾದ್ಯಂತ ಹರಿದು ಹಂಚಿಹೋದರು.
ಗ್ರೀಕನ್ನರಿಂದ 'ಸೇರಾಕೆನಾಯ್' (Serakenoi) ಅಥವಾ "ಸಾರ್'ಸೆನ್ಸ್" ಎಂದು ಕರೆಸಿಕೊಂಡ ಅರೆಬಿಯಾವನ್ನ (ಅರಬ್ಬಿಯಲ್ಲಿ ಹಾಗೆಂದರೆ ಪೂರ್ವದವರು ಎಂದರ್ಥ) ಕ್ರಿಸ್ತಪೂರ್ವ 240ರಲ್ಲಿ ಮೊಗಾನ್ ಎಂಬುವವ ಆಳುತ್ತಿದ್ದ.ಅವನನ್ನು ಬೆಬಿಲೋನಿಯಾದ ರಾಜ ನರಂಸಿನ್ ಸೋಲಿಸಿದ ಬಗೆಗಿನ ಶಿಲಾಶಾಸನವೊಂದು ಲಭ್ಯವಿದೆ.ಅರೇಬಿಯಾದ ಇತರ ಶಾಸನಗಳ ಪ್ರಕಾರ ಕ್ರಿಸ್ತಪೂರ್ವ 800ರಲ್ಲಿ ಅದೆ ಮನೆತನದ ಇಪ್ಪತೈದಕ್ಕೂ ರಾಜರು ಅರೆಬಿಯಾವನ್ನ ಆಳಿದ್ದಾರೆ.
ಇತಿಹಾಸ ಪ್ರಸಿದ್ಧ ರಾಣಿ ಶೀಬಾ ದಕ್ಷಿಣ ಅರೆಬಿಯಾದಲ್ಲಿರುವ ಯಮನ್'ನ ಸಾಬಾದಿಂದ ರಾಜ್ಯಭಾರ ಮಾಡುತ್ತಿದ್ದಳು.ಆಕೆ ಅವಳ ಕಾಲದವನೆ ಆಗಿದ್ದ ರಾಜಾ ಸೋಲೋಮನ್ನನನ್ನು ಕ್ರಿಸ್ತಪೂರ್ವ 950ರಲ್ಲಿ ಭೇಟಿಮಾಡಿದ್ದಳು.ಸಾಬಾದ ರಾಜರು ಮಾರಿಬ್'ನಲ್ಲಿ ಕಾಲಾನಂತರ ರಾಜಧಾನಿಯನ್ನು ಸ್ಥಾಪಿಸಿ ಉಛ್ರಾಯ ಸ್ಥಿತಿಯನ್ನ ತಲುಪಿ,ಉತ್ತಮ ನೌಕಾಪಡೆ ಹೊಂದಿ ದೂರದ ಭಾರತದೊಂದಿಗೆ ಸಮುದ್ರಮಾರ್ಗದ ವ್ಯಾಪಾರ ನಡೆಸುತ್ತಿದ್ದರು.ಕ್ರಮೇಣ ರೋಮನ್ನರ ಪ್ರಾಬಲ್ಯ ಹೆಚ್ಚಿ ಅವರು ಅರೇಬಿಯಾದ ಪ್ರಸಿದ್ಧ ರೇವುಪಟ್ಟಣವಾಗಿರುವ ಏಡನ್'ನ್ನು ಅತಿಕ್ರಮಿಸಿ ಈಜಿಪ್ಟ್ ಹಾಗೂ ಭಾರತದ ಮೇಲಿನ ವ್ಯಾಪಾರದ ಮೇಲೆ ಹತೋಟಿ ಸಾಧಿಸಿತು.
ಏಡನ್ ಬದಲಾಗುತ್ತಿದ್ದ ಕಾಲಮಾನದಲ್ಲಿ ಅರಬ್,ರೋಮನ್ ಹಾಗು ಪರ್ಷಿಯನ್ ಚಕ್ರಾಧಿಪತ್ಯಕ್ಕೆ ಒಳಗಾಗಿದ್ದನ್ನು ಇತಿಹಾಸಕಾರರು ಗುರುತಿಸಿದ್ದಾರೆ.ಕ್ರಿಸ್ತಶಕ ಎರಡನೆ ಶತಮಾನವನ್ನೆ ಗಮನಿಸುವುದಾದರೆ ಸಮೈರಾ ನಗರದ ಸಾನಿಸ್ಸಾಡರು ರೋಮನ್ನರ ಅಧೀನದಲ್ಲಿದ್ದರೆ,ಯುಫ್ರೆಟಿಸ್ ನದಿಯ ದಡದಲ್ಲಿ ಇದ್ದ ಅಲ್-ಹಿರಾ ರಾಜ್ಯ ಪರ್ಶಿಯನ್ನರ ಪ್ರಭಾವದಲ್ಲಿತ್ತು.ಈ ಎರಡೂ ರಾಜ್ಯಗಳು ಕ್ರಿಸ್ತಮತದ ಪ್ರಭಾವಕ್ಕೆ ಒಳಪಟ್ಟಿದ್ದವು.ಕ್ರಿಸ್ತಶಕ ಏಳನೆ ಶತಮಾನದ ವೇಳೆಗೆ ಈ ಎರಡೂ ರಾಜ್ಯಗಳು ತಮ್ಮ ಅಸ್ಥಿತ್ವವನ್ನ ಕಳೆದುಕೊಂಡವು.
ರೋಮ್ ಹಾಗೂ ಪರ್ಷಿಯಾ ಚಕ್ರಾದಿಪತ್ಯಗಳು ಉನ್ನತ ಸ್ಥಿತಿಯಲ್ಲಿದ್ದಾಗ ಇತ್ತ ಅರೇಬಿಯಾ ಕತ್ತಲೆಯತ್ತ ಜಾರತೊಡಗಿತ್ತು.ಕ್ರಿಸ್ತಪೂರ್ವದಲ್ಲಿ ಅಲ್ಲಿದ್ದ ವೈಭವ ಏಳನೆ ಶತಮಾನದಲ್ಲಿ ಅಸ್ತಂಗತವಾಗಿತ್ತು.ಹೊರಪ್ರಪಂಚದ ಮಟ್ಟಿಗೆ ಅರಬ್ಬರು ಅಪ್ರಸ್ತುತರಾಗಿಬಿಟ್ಟಿದ್ದರು.ಹೀಗಾಗಿ ಕಗ್ಗತ್ತಲೆಯ ಆಫ್ರಿಕಾ ಖಂಡದಂತೆ ಅರೇಬಿಯಾ ಪರ್ಯಾಯ ದ್ವೀಪವೂ ಕಗ್ಗತ್ತಲ ದ್ವೀಪವಾಗಿ ಪರಿಣಮಿಸಿತು.
(ಇನ್ನೂ ಇದೆ....)
13 October 2011
ಈ ನೆಲದ ಇಸ್ಲಾಂ ಕುರಿತ ನನ್ನ ಅಪೇಕ್ಷೆಗಳು....
ಹೀಗೆ ಉಳಿದಿದ್ದ ಶಾಹಿ ಮನೆತನಗಳ ದಖನ್ ಹುಕೂಮತ್ತು,ಆರ್ಕಾಟಿನ ನವಾಬಗಿರಿ,ಢಾಕಾ ನವಾಬಗಿರಿ,ಜುನಾಘಡದ ನವಾಬಗಿರಿ,ಅವಧದ ನವಾಬಗಿರಿ,ಹಿಸ್ಸಾರಿನ ನವಾಬಗಿರಿ,ಭೂಪಾಲದ ನವಾಬಗಿರಿ ಹೀಗೆ ಅಲ್ಲಲ್ಲಿ ಮುಸ್ಲಿಂ ಪಾಳೆಪಟ್ಟು ಸಕ್ರಿಯವಾಗಿತ್ತು.ಅದಾಗಲಷ್ಟೆ ಯುರೋಪಿಯನ್ನರ ಕಿರುಕುಳದ ವಿರುದ್ಧ ಸೆಟೆದು ನಿಲ್ಲಲು ಆರಂಭಿಸಿದ್ದ,ಭಾರತೀಯ ಯುವಮನಸ್ಸುಗಳಲ್ಲಿ ಧರ್ಮಾತೀತವಾಗಿ ಮೂಡಿದ್ದ ರಾಷ್ಟ್ರೀಯತೆಯ ಸ್ಪಷ್ಟ ಮನೋಭಾವ ತಾತ್ಕಾಲಿಕ ಐಕ್ಯತೆಯ ಆಶಾಭಾವ ಮೂಡಿಸಿದ್ದು ಹೌದಾದರೂ.ಒಡೆದು ಆಳುವುದರಲ್ಲಿ ನಿಸ್ಸೀಮರಾದ ಬ್ರಿಟೀಷರು ಇತ್ತಂಡಗಳಲ್ಲಿ ಸುಶುಪ್ತವಾಗಿದ್ದ ಧಾರ್ಮಿಕ ಅಸಹನೆಯನ್ನ ಪ್ರಚೋದಿಸಿದ ಪರಿಣಾಮ ಭಾರತದಲ್ಲಿ ಕೋಮು ಸಮರಗಳ ಸರಣಿಯೆ ನಡೆದುಹೋದವು-ದುರಾದೃಷ್ಟವಶಾತ್ ಇಂದೂ ಎಗ್ಗುಸಿಗ್ಗಿಲ್ಲದೆ ಅದು ನಡೆಯುತ್ತಲೆ ಇವೆ.ಇದರ ದೊಡ್ಡ ಆಘಾತವೆಂದರೆ ಧರ್ಮದ ಹೆಸರಿನಲ್ಲಿ ಆದ ದೇಶದ ವಿಭಜನೆ.ಅದರ ಪಾಶ್ಚಾತ್ ಪರಿಣಾಮಗಳು ಇಂದೂ ಸಹ ದೇಶದ ನೆಮ್ಮದಿಯನ್ನ ಆಗಾಗ ಕದಡುತ್ತಲೆ ಇವೆ.
ಭಾರತೀಯ ಮುಸ್ಲೀಮರಲ್ಲಿ ಶೇಕಡಾ ಐದು ಭಾಗ ಅರಬ್ಬಿ ಬುಡಕಟ್ಟು ಮೂಲದ ಶುದ್ಧರಕ್ತದವರಾಗಿದ್ದರೆ ಉಳಿದವರೆಲ್ಲರೂ ಕಾರಣಾಂತರದಿಂದ ಮತಾಂತರವಾದ ಸನಾತನಧರ್ಮ ಮೂಲದವರೆ ಅನ್ನುವುದು ಸ್ಪಷ್ಟ.ಇದು ಆಯ್ಕೆಯ ಅವರೆಲ್ಲರ ಮತಾಂತರವಾಗಿತ್ತು ಎನ್ನುವ ಇಂದಿನ ಸೋ-ಕಾಲ್ಡ್ ಬುದ್ಧಿಜೀವಿಗಳ ಬುಡಭದ್ರವಿಲ್ಲದ ವಾದಸರಣಿ ಹಾಸ್ಯಾಸ್ಪದ.ಸಮಾಜದ ಮೇಲುವರ್ಗಗಳಲ್ಲಿ ಅಧಿಕಾರದ ಆಸೆಗಾಗಿ ವಿರಳವಾಗಿ ಇದಾಗಿರಬಹುದೇನೋ,ಆದರೆ ಕೆಳವರ್ಗದ ಮಂದಿಗೆ ಅಂತಹ ಯಾವುದೆ ಆಕರ್ಷಣೆಗಳಿರಲಿಲ್ಲ.ಅಲ್ಲದೆ ಶ್ರೇಣೀಕೃತ ವ್ಯವಸ್ಥೆಗೆ ಇತ್ತೀಚಿನವರೆಗೂ ಇದ್ದ ಸಾಮಾಜಿಕ ಸಮ್ಮತಿಯ ಹಿನ್ನೆಲೆಯಲ್ಲಿ ;ಹಿಂದೂ ಜಾತಿಭೇದ ಈ ಪರಿ ಮತಾಂತರಕ್ಕೆ ಪ್ರೋತ್ಸಾಹಿಸಿತು ಅನ್ನುವುದೂ ಕೂಡ ದುರ್ಬಲ ಪೊಳ್ಳುವಾದವೆ ಸರಿ.ಒಮ್ಮೆ ಧರ್ಮಭ್ರಷ್ಟನಾದರೆ ಸಾಕು ಅವನನ್ನ ಹೀನಾಯವಾಗಿ ಕಾಣುವ ಹಾಗೂ ಮರಳಿ ಮಾತೃಧರ್ಮಕ್ಕೆ ಪ್ರವೇಶ ನಿರಾಕರಿಸುವ ಹಿಂದೂ ಸನಾತನ ಧರ್ಮದ ವಿಲಕ್ಷಣತೆಯೆ ಅದರ ಅನೇಕ ಅನುಯಾಯಿಗಳನ್ನ ಕಾಲಕ್ರಮದಲ್ಲಿ ಇಸ್ಲಾಂ ಹಾಗೂ ಕ್ರೈಸ್ತ ಮತಗಳಿಗೆ ಶರತ್ತಿಲ್ಲದೆ ಧಾರೆ ಎರೆದು ಕೊಟ್ಟಿದೆ!
ಅಂದರೆ ಈ ನೆಲದ ಹಿಂದೂಯೇತರ ಧರ್ಮೀಯರ ಧಾರ್ಮಿಕ ಸಭ್ಯತೆ ಈ ಮೂಲಕ ಬದಲಾಗಿದೆಯೆ ಹೊರತು ಅವರ ಭಾರತೀಯ ಸಂಸ್ಕೃತಿಯಲ್ಲ.ಅವರ ಧಾರ್ಮಿಕ ಶ್ರದ್ಧೆ ಅದೇನೆ ಇದ್ದರೂ, ಅವರೂ ಸನಾತನ ಧರ್ಮೀಯರಂತೆ ಇಲ್ಲಿನ ಎಲ್ಲಾ ಹಕ್ಕು-ಭಾದ್ಯತೆಗಳಿಗೆ ಕಟ್ಟು ಬದ್ಧರಾಗಿರಲೇಬೇಕು.ಅವರ ರಕ್ತದಲ್ಲಿ-ವಂಶವಾಹಿಗಳಲ್ಲಿ ಭಾರತೀಯತೆ ಸುಶುಪ್ತವಾಗಿ ಇರುವ ತನಕ ಬಾಹ್ಯ ಭೂಷಣ-ಆಹಾರಗಳಲ್ಲಿ ಇನ್ಯಾವುದೊ ದೇಶದವರನ್ನ ಅನುಕರಿಸುವುದು ಛದ್ಮವೇಷದಂತೆ ಕಾಣಿಸುತ್ತದೆ.ಭಾರತೀಯ ಮುಸ್ಲೀಮರು ಅದನ್ನು ಅರಿತುಕೊಂಡು ಪುಂಡ ಧರ್ಮಭೋದಕರ ಹಾಗೂ ಸ್ವಾರ್ಥಿ ರಾಜಕಾರಣಿಗಳ ಹುನ್ನಾರಕ್ಕೆ ಬಲಿಯಾಗಬಾರದು.
'ಭಾರತದಲ್ಲಿ ನಮಗೆ ಅಲ್ಲಾ ಬೇಕು ;ಆದರೆ ಮುಲ್ಲಾ ಅಲ್ಲ!".ಅರಬ್ ಜಗತ್ತಿನಲ್ಲಿಲ್ಲದ ಭಾರತೀಯ ಇಸ್ಲಾಮಿನ ಕೆಟ್ಟ ಉಪಲಬ್ಡಿ ಮುಲ್ಲಾಗಳು.ಮೂಲ ಇಸ್ಲಾಮಿನ ವ್ಯಾಖ್ಯೆಯನ್ನ ತಿರುಚಿ ವಾಸ್ತವ ಜಗತ್ತಿನಿಂದ ಧರ್ಮಾನುಯಾಯಿಗಳನ್ನ ವಂಚಿಸುವ ಈ ಧರ್ಮಾಂಧರ ದೆಸೆಯಿಂದ ತಲೆಮಾರುಗಳ ಹಿಂದೆ ಧರ್ಮಾಂತರವಾದ ಭಾರತೀಯ ಮುಸ್ಲಿಂ ಮನಸ್ಸುಗಳು ಇಬ್ಬಂದಿತನದಲ್ಲಿ ಸಿಲುಕಿ ಒದ್ದಾಡುವಂತಾಗುತ್ತಿದೆ.'ದೀನ್ ಮೇ ಧಾಡಿ ಹೈ...ಪರ್ ಧಾಡಿ ಮೇ ದೀನ್ ನಹಿ!' ಎನ್ನುವುದು ಭಾರತೀಯ ಮುಸ್ಲಿಂ ಬಾಂಧವರಿಗೆ ಅರ್ಥವಾಗಬೇಕು.ಅಲ್ಲೊಬ್ಬ ಗೋಮುಖ ವ್ಯಾಘ್ರ ಕಸಾಯಿ ಎಸಿ ರೂಮಿನಲ್ಲಿ ಕುಳಿತು ಸದ್ಭಾವನೆಗಾಗಿ ಉಪಾವಾಸ ಮಾಡುವುದು ಈ ಸಮಾಜದ ಸ್ವಾಸ್ಥ್ಯಕ್ಕೆ ಎಷ್ಟು ಅಪಾಯಕಾರಿಯೊ, ಅಷ್ಟೆ ಅಪಾಯ ಕೇವಲ ಬಾಹ್ಯ ತೋರಿಕೆಯ ಧರ್ಮ ಭೋದಿಸುವ ಮುಲ್ಲಾಗಳಿಂದಲೂ ಕಟ್ಟಿಟ್ಟಿದೆ.ಅಷ್ಟಕ್ಕೂ ಮಹಮದ್ ಪೈಗಂಬರ್ ಭೋಧನೆಗಳು ಅರೇಬಿಯಾ ಮರಳುಗಾಡಿನ ಆಕಾಲದ ಖುರೈಶಿ ಬುಡಕಟ್ಟುಗಳ ಆಚರಣೆಗೆ ಅನುಸಾರವಾಗಿತ್ತು.ಅಲ್ಲಿನ ಕಟ್ಟು-ಕಟ್ಟಳೆಗಳು ಭಾರತದ ಮಟ್ಟಿಗೆ ಬಹುಪಾಲು ಅಪ್ರಸ್ತುತ.
ಜಗತ್ತಿನ ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರವಾಗಿರುವ ಇಂಡೋನೇಷಿಯ ಈ ಮಟ್ಟಿಗೆ ಜಗತ್ತಿಗೆ ಮಾದರಿಯಾಗಿದೆ.ಒಂದಾನೊಂದು ಕಾಲದಲ್ಲಿ ಸಂಪೂರ್ಣ ಹಿಂದೂಮಯವಾಗಿದ್ದ ಆ ದೇಶ ಇಂದು ಅದಕ್ಕೆ ತದ್ವಿರುದ್ಧವಾಗಿ ಇಸ್ಲಾಮಿಕರಣಗೊಂಡಿದೆ.ಆದರೆ ಅಲ್ಲಿನ ಜನ ತಮ್ಮ ಸಂಸ್ಕೃತಿಯ ಬಗ್ಗೆ ಕುರುಡಾಗಿಲ್ಲ.ಇಂದಿಗೂ ತಮ್ಮ ಹೆಸರುಗಳಲ್ಲಿ-ನಾಗರೀಕ ಸೇವೆಗಳಲ್ಲಿ ನೆಲದ ಸಂಸ್ಕೃತಿಯ ಕುರುಹುಗಳನ್ನ ಉಳಿಸಿಕೊಂಡು ಬಂದಿದ್ದಾರೆ.ಅವರಿಗೆ ತಮ್ಮ ಪುರಾತನ ಸಂಸ್ಕೃತಿಯ ಬಗ್ಗೆ ಅತೀವ ಹೆಮ್ಮೆಯಿದೆ.ಧರ್ಮಾಚರಣೆ ವಯಕ್ತಿಕ ಮಟ್ಟದ್ದು. ಅದು ಬಹಿರಂಗವಾಗಿ ಗದ್ದಲವೆಬ್ಬಿಸುವ ಮಟ್ಟಕ್ಕೆ ಎಂದೂ ಇಳಿಯಬಾರದು.ಇಸ್ಲಾಂ ಹುಟ್ಟಿದ ಅರಬ್ ಜಗತ್ತಿನಲ್ಲಿಯೆ ನಮಾಜ್ ಕರೆಗೆ ಸೈರನ್ ಕೂಗಿಸುವ ವ್ಯವಸ್ಥೆ ಚಾಲ್ತಿಗೆ ಬಂದಿರುವಾಗ ಇನ್ನೂ ಭಾರತದಲ್ಲಿ 'ಬಾಂಗ್' ಕೂಗುವ ಹಳೆಯ ಪದ್ದತಿಗೆ ಅಂಟಿಕೊಳ್ಳುವುದು ಹೊಸತನವನ್ನು ನಿರಾಕರಿಸಿದಂತೆ.ಅದಕ್ಕೆ ಪೈಪೋಟಿಯಾಗಿ ಸನಾತನ ಅವಿವೇಕಿಗಳೂ ಸಹ ಹೊತ್ತುಗೊತ್ತಿನ ಪರಿವೆಯಿಲ್ಲದೆ "ಎದ್ದೇಳು ಮಂಜುನಾಥಾ" ಎಂದು ಗದ್ದಲವೆಬ್ಬಿಸುತ್ತ ಬೆಳಗ್ಯೆ-ಮಧ್ಯಾಹ್ನ-ಸಂಜೆ ಹೀಗೆ ಅಸಂಬದ್ಧವಾಗಿ ಮಂಜುನಾಥನನ್ನ ಮಲಗಲೂ ಬಿಡದೆ ಬಡಿದೆಬ್ಬಿಸುತ್ತಾರೆ!
ಗೋಮಾಂಸದ ಕುರಿತೂ ಇದೆ ಮಾತನ್ನ ಹೇಳಬಹುದು.ಹಿಂದೂ ಕೆಳವರ್ಗದ ಮಂದಿಯೂ ಕಡಿಮೆ ಬೆಲೆಗೆ ಸಿಗುವ ಕಾರಣ ಗೋಮಾಂಸವನ್ನ ಸೇವಿಸುತ್ತಾರೆ,ಅಂತೆಯೆ ಬಡ ಮುಸ್ಲೀಮರೂ ಸಹ.ಆದರೆ ಅದು ತಮ್ಮ ಧಾರ್ಮಿಕ ಸ್ವಾಭಿಮಾನದ ಸಂಕೇತ ಅಂತ ಮುಸ್ಲೀಮರು ಪರಿಗಣಿಸುವುದು ಕೊನೆಯಾಗಬೇಕು.ಆಹಾರ-ವಿಹಾರ ವ್ಯಕ್ತಿಯ ವಯಕ್ತಿಕ ವಿಚಾರಗಳು.ಕಡೆಯದಾಗಿ ಪರಸ್ಪರ ಅಪನಂಬಿಕೆಗೆ ಹಿಂದೂಗಳ ಕುರಿತ ಮುಸ್ಲೀಮರ ಹುಸಿ ಅಭದ್ರತೆಯ ಸಂಶಯ-ಮುಸ್ಲೀಮರ ಕುರಿತ ಹಿಂದೂಗಳ ದೇಶನಿಷ್ಠೆಯ ಸುಳ್ಳು ಸಂದೇಹ ಇವೆರಡೂ ಕಾರಣ.
ಭಾರತೀಯ ಸಂಸ್ಕೃತಿ ಶ್ರೇಷ್ಠವಾದದ್ದನ್ನೆಲ್ಲ ಸ್ತ್ರೀ ರೂಪಕ್ಕೇರಿಸಿ-ತಾಯಿಯನ್ನಾಗಿ ಆರಾಧಿಸುತ್ತೆ.ಉದಾಹಾರಣೆಗೆ ದೇಶ-ವಿದ್ಯೆ-ಅನ್ನ-ಹಣ ಇವುಗಳನ್ನು ನೋಡಬಹುದು.ಆದರೆ ಧರ್ಮನಿಷ್ಠವಾಗಿ ಇಸ್ಲಾಂ ಪ್ರಕಾರ ನಡೆದುಕೊಂಡ ಅಂದಿನ ಇಸ್ಲಾಮಿ ಆಡಳಿತಗಾರರು ಈ ಭಾವನೆಗಳನ್ನೆ ಕೆಣಕುವಂತೆ ನಡೆದು ಕೊಂಡು ಸನಾತನ ಧರ್ಮೀಯರಾಲ್ಲಿ ಕಸಿವಿಸಿ ತಂದರು.ಹಿಂದೂ ಆರಾಧನಾಕ್ಷೇತ್ರಗಳ ಮೂರ್ತಿಗಳನ್ನ ಮಸೀದಿಗಳ ನೆಲಹಾಸು,ಮೆಟ್ಟಿಲು ಮಾಡಿಕೊಂಡದ್ದು.ಕಾಶ್ಮೀರದಲ್ಲಿ (ಹಿಂದೂ ನಂಬಿಕೆಗಳ ಪ್ರಕಾರ ಅದು ಶಾರದೆಯ ಆವಾಸ...ಅವಳನ್ನ 'ಕಾಶ್ಮೀರ ಪುರವಾಸಿನಿ' ಎಂದು ಕರೆಯಲಾಗುತ್ತೆ) ಆ ನೆಲದ ಭಾಷೆಯ ಸತ್ವವನ್ನೆ ಕಸಿಯಲಾಗಿದೆ.ಕಾಶ್ಮೀರಿ ಭಾಷೆಗೆ ಸ್ವಂತ ಲಿಪಿಯಿದ್ದರೂ ಇಂದು ಅದು ಬಳಕೆಯಲ್ಲಿಲ್ಲ,ಮೊಘಲ್ ಕಾಲದ ಹೇರಿಕೆಯ ಪರಿಣಾಮ ಅರಬ್ಬಿ ಲಿಪಿಯಲ್ಲಿ ಕಾಶ್ಮೀರಿ ಬರೆಯಲಾಗುತ್ತೆ...ತನ್ನ ನಿವಾಸದಲ್ಲೆ ವಿದ್ಯಾಧಿದೇವತೆ ಅನಾಥೆ ಆದದ್ದು ಹೀಗೆ! ಅದು ಇಂದಿಗೂ ಹಾಗೆಯೆ ಮುಂದುವರೆಯ ಬೇಕಿಲ್ಲ.ಧರ್ಮಕ್ಕಿಂತ ದೇಶ ಹಾಗೂ ಭಾಷೆ ಯಾವಾಗಲು ದೊಡ್ಡದು.
ಹಿಂದೂ ಅತಿರೇಕಿಗಳಂತೆ-ಇಸ್ಲಾಂ ಮೂಲಭೂತವಾದಿಗಳಿಗೂ "ಮಾನವ ಧರ್ಮ" ಎಲ್ಲಕಿಂತ ದೊಡ್ಡದು ಎಂಬುದನ್ನು ಒತ್ತಯವಾಗಿಯಾದರೂ ಅರಿವು ಮೂಡಿಸಲೆ ಬೇಕಿರುವುದು ಇಂದಿನ ತುರ್ತು ಅಗತ್ಯ.ಈ ನಿಟ್ಟಿನಲ್ಲಿ ಇಂಡೋನೇಷ್ಯ ನಮಗೆ ಮಾದರಿಯಾಗಬೇಕು.ಈ ದೇಶ ನಮ್ಮೆಲ್ಲರದು ಹಾಗೂ ಎಲ್ಲರೂ ಸಮಾನರು ಅನ್ನುವುದು ಮೊದಲು ಜಾರಿಯಾಗಲು ಅನುವಾಗುವಂತೆ ಶರಿಯತ್ ರದ್ದಾಗಬೇಕು.ಗುರುಕುಲ ಪದ್ಧತಿಯನ್ನ ಮರೆಯಾಗಿಸಿದಂತೆ ಮದರಸಗಳಿಗೂ ಸರಕಾರಿ ರಾಜಾಶ್ರಯ ನಿಂತು ಮುಸ್ಲಿಂ ಮಕ್ಕಳು ಮುಖ್ಯವಾಹಿನಿಯ ಶಾಲೆಗಳಲ್ಲಿ ಉಳಿದೆಲ್ಲರಷ್ಟೆ ಕಲಿತು,ತನ್ನ ಸಮವಯಸ್ಕ ಅನ್ಯ ಕೋಮಿನ ಮಕ್ಕಳಿಗೆ ಪೈಪೋಟಿ ನೀಡುವಂತಾಗಬೇಕು.ಎರಡು ಕಣ್ಣಷ್ಟೇ ಗೋಚರಿಸುವ ಬುರ್ಕಾ ಜಾಹಿರಾತಿನ ವೀನೈಲ್'ಗಳು ಕರಾವಳಿಯ ಹೆದ್ದಾರಿಯ ಇಕ್ಕೆಲಗಳಲ್ಲಿ ಕಾಣುವುದು ನಿಂತಷ್ಟು ಶೀಘ್ರ ಮುಸ್ಲಿಂ ಮಹಿಳೆಯರು ನಿಟ್ಟುಸಿರು ಬಿಟ್ಟಾರು.ಕೊನೆಯ ಖಿಲಾಫತ್ ಅಸ್ತಿತ್ವದಲ್ಲಿದ್ದ ತುರ್ಕಿಯಲ್ಲಿಯೆ ಹೊಸತರದ ಇಸ್ಲಾಮನ್ನ ಜಾರಿಗೆ ತಂದಿರೋವಾಗ ನಮ್ಮಲ್ಲೇಕೆ ಹಳೆಯ ಮರಳುಗಾಡಿನ ಸಂಸ್ಕೃತಿಯ ಮೋಹ? "ಮೊದಲು ಭಾರತೀಯರಾಗೋಣ" ಆಮೇಲೆ ಇದ್ದೆ ಇದೆ ಹಿಂದೂ,ಮುಸ್ಲಿಂ,ಕ್ರೈಸ್ತ,ಸಿಖ್,ಬೌದ್ಧ,ಜೈನರಾಗೋದು.
ಇವತ್ತಿನಿಂದ ಇಸ್ಲಾಂ ಉಗಮದ ಕಥೆ ಇಲ್ಲಿ ಮೂಡಿ ಬರಲಿದೆ.ಆರಂಭದಲ್ಲಿ ಅಂದಿನ ಅರಬ್ ಜಗತ್ತಿನ ವಿಸ್ಕೃತ ಪರಿಚಯ ಮಾಡಿಸುವುದು ಅನಿವಾರ್ಯ.ಬೋರ್ ಎನಿಸಿದರೂ ಅದನ್ನ ಓದದೆ ಇರಬೇಡಿ.ಆ ಮೊದಲ ಕಂತನ್ನ ಓದದಿದ್ದರೆ ಮುಂದಿನ ಕಥೆ ಅಷ್ಟಾಗಿ ಅರ್ಥವಾಗಲಾರದು.ನನ್ನ ದೃಷ್ಟಿಯಲ್ಲಿ ಇಸ್ಲಾಂ ಇಷ್ಟೆ.ನನ್ನ ಸಹೋದರನೊಬ್ಬ ಅದಕ್ಕೆ ಮಾರುಹೊದರೆ ಹೇಗೆಯೋ ಹಾಗೆಯೆ ಇನ್ನುಳಿದ ಮುಸ್ಲೀಮರು ನನ್ನ ಪಾಲಿಗೆ.ಏಕೆಂದರೆ ನಾನವರನ್ನ ಮೊದಲು ನೋಡೋದು ಭಾರತೀಯತೆಯ ಮೋಹರಿನಿಂದ.ಅವರ ಧಾರ್ಮಿಕ ಶ್ರದ್ಧೆ ನನಗೆ ಇಲ್ಲಿಯ ತನಕ ಮುಖಯವಾಗಿಲ್ಲ,ಮುಂದೆಯೂ ಆಗುವುದಿಲ್ಲ.
( ಮುಗಿಯಿತು...)
ಭಾರತೀಯ ಮುಸ್ಲೀಮರಲ್ಲಿ ಶೇಕಡಾ ಐದು ಭಾಗ ಅರಬ್ಬಿ ಬುಡಕಟ್ಟು ಮೂಲದ ಶುದ್ಧರಕ್ತದವರಾಗಿದ್ದರೆ ಉಳಿದವರೆಲ್ಲರೂ ಕಾರಣಾಂತರದಿಂದ ಮತಾಂತರವಾದ ಸನಾತನಧರ್ಮ ಮೂಲದವರೆ ಅನ್ನುವುದು ಸ್ಪಷ್ಟ.ಇದು ಆಯ್ಕೆಯ ಅವರೆಲ್ಲರ ಮತಾಂತರವಾಗಿತ್ತು ಎನ್ನುವ ಇಂದಿನ ಸೋ-ಕಾಲ್ಡ್ ಬುದ್ಧಿಜೀವಿಗಳ ಬುಡಭದ್ರವಿಲ್ಲದ ವಾದಸರಣಿ ಹಾಸ್ಯಾಸ್ಪದ.ಸಮಾಜದ ಮೇಲುವರ್ಗಗಳಲ್ಲಿ ಅಧಿಕಾರದ ಆಸೆಗಾಗಿ ವಿರಳವಾಗಿ ಇದಾಗಿರಬಹುದೇನೋ,ಆದರೆ ಕೆಳವರ್ಗದ ಮಂದಿಗೆ ಅಂತಹ ಯಾವುದೆ ಆಕರ್ಷಣೆಗಳಿರಲಿಲ್ಲ.ಅಲ್ಲದೆ ಶ್ರೇಣೀಕೃತ ವ್ಯವಸ್ಥೆಗೆ ಇತ್ತೀಚಿನವರೆಗೂ ಇದ್ದ ಸಾಮಾಜಿಕ ಸಮ್ಮತಿಯ ಹಿನ್ನೆಲೆಯಲ್ಲಿ ;ಹಿಂದೂ ಜಾತಿಭೇದ ಈ ಪರಿ ಮತಾಂತರಕ್ಕೆ ಪ್ರೋತ್ಸಾಹಿಸಿತು ಅನ್ನುವುದೂ ಕೂಡ ದುರ್ಬಲ ಪೊಳ್ಳುವಾದವೆ ಸರಿ.ಒಮ್ಮೆ ಧರ್ಮಭ್ರಷ್ಟನಾದರೆ ಸಾಕು ಅವನನ್ನ ಹೀನಾಯವಾಗಿ ಕಾಣುವ ಹಾಗೂ ಮರಳಿ ಮಾತೃಧರ್ಮಕ್ಕೆ ಪ್ರವೇಶ ನಿರಾಕರಿಸುವ ಹಿಂದೂ ಸನಾತನ ಧರ್ಮದ ವಿಲಕ್ಷಣತೆಯೆ ಅದರ ಅನೇಕ ಅನುಯಾಯಿಗಳನ್ನ ಕಾಲಕ್ರಮದಲ್ಲಿ ಇಸ್ಲಾಂ ಹಾಗೂ ಕ್ರೈಸ್ತ ಮತಗಳಿಗೆ ಶರತ್ತಿಲ್ಲದೆ ಧಾರೆ ಎರೆದು ಕೊಟ್ಟಿದೆ!
ಅಂದರೆ ಈ ನೆಲದ ಹಿಂದೂಯೇತರ ಧರ್ಮೀಯರ ಧಾರ್ಮಿಕ ಸಭ್ಯತೆ ಈ ಮೂಲಕ ಬದಲಾಗಿದೆಯೆ ಹೊರತು ಅವರ ಭಾರತೀಯ ಸಂಸ್ಕೃತಿಯಲ್ಲ.ಅವರ ಧಾರ್ಮಿಕ ಶ್ರದ್ಧೆ ಅದೇನೆ ಇದ್ದರೂ, ಅವರೂ ಸನಾತನ ಧರ್ಮೀಯರಂತೆ ಇಲ್ಲಿನ ಎಲ್ಲಾ ಹಕ್ಕು-ಭಾದ್ಯತೆಗಳಿಗೆ ಕಟ್ಟು ಬದ್ಧರಾಗಿರಲೇಬೇಕು.ಅವರ ರಕ್ತದಲ್ಲಿ-ವಂಶವಾಹಿಗಳಲ್ಲಿ ಭಾರತೀಯತೆ ಸುಶುಪ್ತವಾಗಿ ಇರುವ ತನಕ ಬಾಹ್ಯ ಭೂಷಣ-ಆಹಾರಗಳಲ್ಲಿ ಇನ್ಯಾವುದೊ ದೇಶದವರನ್ನ ಅನುಕರಿಸುವುದು ಛದ್ಮವೇಷದಂತೆ ಕಾಣಿಸುತ್ತದೆ.ಭಾರತೀಯ ಮುಸ್ಲೀಮರು ಅದನ್ನು ಅರಿತುಕೊಂಡು ಪುಂಡ ಧರ್ಮಭೋದಕರ ಹಾಗೂ ಸ್ವಾರ್ಥಿ ರಾಜಕಾರಣಿಗಳ ಹುನ್ನಾರಕ್ಕೆ ಬಲಿಯಾಗಬಾರದು.
'ಭಾರತದಲ್ಲಿ ನಮಗೆ ಅಲ್ಲಾ ಬೇಕು ;ಆದರೆ ಮುಲ್ಲಾ ಅಲ್ಲ!".ಅರಬ್ ಜಗತ್ತಿನಲ್ಲಿಲ್ಲದ ಭಾರತೀಯ ಇಸ್ಲಾಮಿನ ಕೆಟ್ಟ ಉಪಲಬ್ಡಿ ಮುಲ್ಲಾಗಳು.ಮೂಲ ಇಸ್ಲಾಮಿನ ವ್ಯಾಖ್ಯೆಯನ್ನ ತಿರುಚಿ ವಾಸ್ತವ ಜಗತ್ತಿನಿಂದ ಧರ್ಮಾನುಯಾಯಿಗಳನ್ನ ವಂಚಿಸುವ ಈ ಧರ್ಮಾಂಧರ ದೆಸೆಯಿಂದ ತಲೆಮಾರುಗಳ ಹಿಂದೆ ಧರ್ಮಾಂತರವಾದ ಭಾರತೀಯ ಮುಸ್ಲಿಂ ಮನಸ್ಸುಗಳು ಇಬ್ಬಂದಿತನದಲ್ಲಿ ಸಿಲುಕಿ ಒದ್ದಾಡುವಂತಾಗುತ್ತಿದೆ.'ದೀನ್ ಮೇ ಧಾಡಿ ಹೈ...ಪರ್ ಧಾಡಿ ಮೇ ದೀನ್ ನಹಿ!' ಎನ್ನುವುದು ಭಾರತೀಯ ಮುಸ್ಲಿಂ ಬಾಂಧವರಿಗೆ ಅರ್ಥವಾಗಬೇಕು.ಅಲ್ಲೊಬ್ಬ ಗೋಮುಖ ವ್ಯಾಘ್ರ ಕಸಾಯಿ ಎಸಿ ರೂಮಿನಲ್ಲಿ ಕುಳಿತು ಸದ್ಭಾವನೆಗಾಗಿ ಉಪಾವಾಸ ಮಾಡುವುದು ಈ ಸಮಾಜದ ಸ್ವಾಸ್ಥ್ಯಕ್ಕೆ ಎಷ್ಟು ಅಪಾಯಕಾರಿಯೊ, ಅಷ್ಟೆ ಅಪಾಯ ಕೇವಲ ಬಾಹ್ಯ ತೋರಿಕೆಯ ಧರ್ಮ ಭೋದಿಸುವ ಮುಲ್ಲಾಗಳಿಂದಲೂ ಕಟ್ಟಿಟ್ಟಿದೆ.ಅಷ್ಟಕ್ಕೂ ಮಹಮದ್ ಪೈಗಂಬರ್ ಭೋಧನೆಗಳು ಅರೇಬಿಯಾ ಮರಳುಗಾಡಿನ ಆಕಾಲದ ಖುರೈಶಿ ಬುಡಕಟ್ಟುಗಳ ಆಚರಣೆಗೆ ಅನುಸಾರವಾಗಿತ್ತು.ಅಲ್ಲಿನ ಕಟ್ಟು-ಕಟ್ಟಳೆಗಳು ಭಾರತದ ಮಟ್ಟಿಗೆ ಬಹುಪಾಲು ಅಪ್ರಸ್ತುತ.
ಜಗತ್ತಿನ ಬಹುಸಂಖ್ಯಾತ ಮುಸ್ಲಿಂ ರಾಷ್ಟ್ರವಾಗಿರುವ ಇಂಡೋನೇಷಿಯ ಈ ಮಟ್ಟಿಗೆ ಜಗತ್ತಿಗೆ ಮಾದರಿಯಾಗಿದೆ.ಒಂದಾನೊಂದು ಕಾಲದಲ್ಲಿ ಸಂಪೂರ್ಣ ಹಿಂದೂಮಯವಾಗಿದ್ದ ಆ ದೇಶ ಇಂದು ಅದಕ್ಕೆ ತದ್ವಿರುದ್ಧವಾಗಿ ಇಸ್ಲಾಮಿಕರಣಗೊಂಡಿದೆ.ಆದರೆ ಅಲ್ಲಿನ ಜನ ತಮ್ಮ ಸಂಸ್ಕೃತಿಯ ಬಗ್ಗೆ ಕುರುಡಾಗಿಲ್ಲ.ಇಂದಿಗೂ ತಮ್ಮ ಹೆಸರುಗಳಲ್ಲಿ-ನಾಗರೀಕ ಸೇವೆಗಳಲ್ಲಿ ನೆಲದ ಸಂಸ್ಕೃತಿಯ ಕುರುಹುಗಳನ್ನ ಉಳಿಸಿಕೊಂಡು ಬಂದಿದ್ದಾರೆ.ಅವರಿಗೆ ತಮ್ಮ ಪುರಾತನ ಸಂಸ್ಕೃತಿಯ ಬಗ್ಗೆ ಅತೀವ ಹೆಮ್ಮೆಯಿದೆ.ಧರ್ಮಾಚರಣೆ ವಯಕ್ತಿಕ ಮಟ್ಟದ್ದು. ಅದು ಬಹಿರಂಗವಾಗಿ ಗದ್ದಲವೆಬ್ಬಿಸುವ ಮಟ್ಟಕ್ಕೆ ಎಂದೂ ಇಳಿಯಬಾರದು.ಇಸ್ಲಾಂ ಹುಟ್ಟಿದ ಅರಬ್ ಜಗತ್ತಿನಲ್ಲಿಯೆ ನಮಾಜ್ ಕರೆಗೆ ಸೈರನ್ ಕೂಗಿಸುವ ವ್ಯವಸ್ಥೆ ಚಾಲ್ತಿಗೆ ಬಂದಿರುವಾಗ ಇನ್ನೂ ಭಾರತದಲ್ಲಿ 'ಬಾಂಗ್' ಕೂಗುವ ಹಳೆಯ ಪದ್ದತಿಗೆ ಅಂಟಿಕೊಳ್ಳುವುದು ಹೊಸತನವನ್ನು ನಿರಾಕರಿಸಿದಂತೆ.ಅದಕ್ಕೆ ಪೈಪೋಟಿಯಾಗಿ ಸನಾತನ ಅವಿವೇಕಿಗಳೂ ಸಹ ಹೊತ್ತುಗೊತ್ತಿನ ಪರಿವೆಯಿಲ್ಲದೆ "ಎದ್ದೇಳು ಮಂಜುನಾಥಾ" ಎಂದು ಗದ್ದಲವೆಬ್ಬಿಸುತ್ತ ಬೆಳಗ್ಯೆ-ಮಧ್ಯಾಹ್ನ-ಸಂಜೆ ಹೀಗೆ ಅಸಂಬದ್ಧವಾಗಿ ಮಂಜುನಾಥನನ್ನ ಮಲಗಲೂ ಬಿಡದೆ ಬಡಿದೆಬ್ಬಿಸುತ್ತಾರೆ!
ಗೋಮಾಂಸದ ಕುರಿತೂ ಇದೆ ಮಾತನ್ನ ಹೇಳಬಹುದು.ಹಿಂದೂ ಕೆಳವರ್ಗದ ಮಂದಿಯೂ ಕಡಿಮೆ ಬೆಲೆಗೆ ಸಿಗುವ ಕಾರಣ ಗೋಮಾಂಸವನ್ನ ಸೇವಿಸುತ್ತಾರೆ,ಅಂತೆಯೆ ಬಡ ಮುಸ್ಲೀಮರೂ ಸಹ.ಆದರೆ ಅದು ತಮ್ಮ ಧಾರ್ಮಿಕ ಸ್ವಾಭಿಮಾನದ ಸಂಕೇತ ಅಂತ ಮುಸ್ಲೀಮರು ಪರಿಗಣಿಸುವುದು ಕೊನೆಯಾಗಬೇಕು.ಆಹಾರ-ವಿಹಾರ ವ್ಯಕ್ತಿಯ ವಯಕ್ತಿಕ ವಿಚಾರಗಳು.ಕಡೆಯದಾಗಿ ಪರಸ್ಪರ ಅಪನಂಬಿಕೆಗೆ ಹಿಂದೂಗಳ ಕುರಿತ ಮುಸ್ಲೀಮರ ಹುಸಿ ಅಭದ್ರತೆಯ ಸಂಶಯ-ಮುಸ್ಲೀಮರ ಕುರಿತ ಹಿಂದೂಗಳ ದೇಶನಿಷ್ಠೆಯ ಸುಳ್ಳು ಸಂದೇಹ ಇವೆರಡೂ ಕಾರಣ.
ಭಾರತೀಯ ಸಂಸ್ಕೃತಿ ಶ್ರೇಷ್ಠವಾದದ್ದನ್ನೆಲ್ಲ ಸ್ತ್ರೀ ರೂಪಕ್ಕೇರಿಸಿ-ತಾಯಿಯನ್ನಾಗಿ ಆರಾಧಿಸುತ್ತೆ.ಉದಾಹಾರಣೆಗೆ ದೇಶ-ವಿದ್ಯೆ-ಅನ್ನ-ಹಣ ಇವುಗಳನ್ನು ನೋಡಬಹುದು.ಆದರೆ ಧರ್ಮನಿಷ್ಠವಾಗಿ ಇಸ್ಲಾಂ ಪ್ರಕಾರ ನಡೆದುಕೊಂಡ ಅಂದಿನ ಇಸ್ಲಾಮಿ ಆಡಳಿತಗಾರರು ಈ ಭಾವನೆಗಳನ್ನೆ ಕೆಣಕುವಂತೆ ನಡೆದು ಕೊಂಡು ಸನಾತನ ಧರ್ಮೀಯರಾಲ್ಲಿ ಕಸಿವಿಸಿ ತಂದರು.ಹಿಂದೂ ಆರಾಧನಾಕ್ಷೇತ್ರಗಳ ಮೂರ್ತಿಗಳನ್ನ ಮಸೀದಿಗಳ ನೆಲಹಾಸು,ಮೆಟ್ಟಿಲು ಮಾಡಿಕೊಂಡದ್ದು.ಕಾಶ್ಮೀರದಲ್ಲಿ (ಹಿಂದೂ ನಂಬಿಕೆಗಳ ಪ್ರಕಾರ ಅದು ಶಾರದೆಯ ಆವಾಸ...ಅವಳನ್ನ 'ಕಾಶ್ಮೀರ ಪುರವಾಸಿನಿ' ಎಂದು ಕರೆಯಲಾಗುತ್ತೆ) ಆ ನೆಲದ ಭಾಷೆಯ ಸತ್ವವನ್ನೆ ಕಸಿಯಲಾಗಿದೆ.ಕಾಶ್ಮೀರಿ ಭಾಷೆಗೆ ಸ್ವಂತ ಲಿಪಿಯಿದ್ದರೂ ಇಂದು ಅದು ಬಳಕೆಯಲ್ಲಿಲ್ಲ,ಮೊಘಲ್ ಕಾಲದ ಹೇರಿಕೆಯ ಪರಿಣಾಮ ಅರಬ್ಬಿ ಲಿಪಿಯಲ್ಲಿ ಕಾಶ್ಮೀರಿ ಬರೆಯಲಾಗುತ್ತೆ...ತನ್ನ ನಿವಾಸದಲ್ಲೆ ವಿದ್ಯಾಧಿದೇವತೆ ಅನಾಥೆ ಆದದ್ದು ಹೀಗೆ! ಅದು ಇಂದಿಗೂ ಹಾಗೆಯೆ ಮುಂದುವರೆಯ ಬೇಕಿಲ್ಲ.ಧರ್ಮಕ್ಕಿಂತ ದೇಶ ಹಾಗೂ ಭಾಷೆ ಯಾವಾಗಲು ದೊಡ್ಡದು.
ಹಿಂದೂ ಅತಿರೇಕಿಗಳಂತೆ-ಇಸ್ಲಾಂ ಮೂಲಭೂತವಾದಿಗಳಿಗೂ "ಮಾನವ ಧರ್ಮ" ಎಲ್ಲಕಿಂತ ದೊಡ್ಡದು ಎಂಬುದನ್ನು ಒತ್ತಯವಾಗಿಯಾದರೂ ಅರಿವು ಮೂಡಿಸಲೆ ಬೇಕಿರುವುದು ಇಂದಿನ ತುರ್ತು ಅಗತ್ಯ.ಈ ನಿಟ್ಟಿನಲ್ಲಿ ಇಂಡೋನೇಷ್ಯ ನಮಗೆ ಮಾದರಿಯಾಗಬೇಕು.ಈ ದೇಶ ನಮ್ಮೆಲ್ಲರದು ಹಾಗೂ ಎಲ್ಲರೂ ಸಮಾನರು ಅನ್ನುವುದು ಮೊದಲು ಜಾರಿಯಾಗಲು ಅನುವಾಗುವಂತೆ ಶರಿಯತ್ ರದ್ದಾಗಬೇಕು.ಗುರುಕುಲ ಪದ್ಧತಿಯನ್ನ ಮರೆಯಾಗಿಸಿದಂತೆ ಮದರಸಗಳಿಗೂ ಸರಕಾರಿ ರಾಜಾಶ್ರಯ ನಿಂತು ಮುಸ್ಲಿಂ ಮಕ್ಕಳು ಮುಖ್ಯವಾಹಿನಿಯ ಶಾಲೆಗಳಲ್ಲಿ ಉಳಿದೆಲ್ಲರಷ್ಟೆ ಕಲಿತು,ತನ್ನ ಸಮವಯಸ್ಕ ಅನ್ಯ ಕೋಮಿನ ಮಕ್ಕಳಿಗೆ ಪೈಪೋಟಿ ನೀಡುವಂತಾಗಬೇಕು.ಎರಡು ಕಣ್ಣಷ್ಟೇ ಗೋಚರಿಸುವ ಬುರ್ಕಾ ಜಾಹಿರಾತಿನ ವೀನೈಲ್'ಗಳು ಕರಾವಳಿಯ ಹೆದ್ದಾರಿಯ ಇಕ್ಕೆಲಗಳಲ್ಲಿ ಕಾಣುವುದು ನಿಂತಷ್ಟು ಶೀಘ್ರ ಮುಸ್ಲಿಂ ಮಹಿಳೆಯರು ನಿಟ್ಟುಸಿರು ಬಿಟ್ಟಾರು.ಕೊನೆಯ ಖಿಲಾಫತ್ ಅಸ್ತಿತ್ವದಲ್ಲಿದ್ದ ತುರ್ಕಿಯಲ್ಲಿಯೆ ಹೊಸತರದ ಇಸ್ಲಾಮನ್ನ ಜಾರಿಗೆ ತಂದಿರೋವಾಗ ನಮ್ಮಲ್ಲೇಕೆ ಹಳೆಯ ಮರಳುಗಾಡಿನ ಸಂಸ್ಕೃತಿಯ ಮೋಹ? "ಮೊದಲು ಭಾರತೀಯರಾಗೋಣ" ಆಮೇಲೆ ಇದ್ದೆ ಇದೆ ಹಿಂದೂ,ಮುಸ್ಲಿಂ,ಕ್ರೈಸ್ತ,ಸಿಖ್,ಬೌದ್ಧ,ಜೈನರಾಗೋದು.
ಇವತ್ತಿನಿಂದ ಇಸ್ಲಾಂ ಉಗಮದ ಕಥೆ ಇಲ್ಲಿ ಮೂಡಿ ಬರಲಿದೆ.ಆರಂಭದಲ್ಲಿ ಅಂದಿನ ಅರಬ್ ಜಗತ್ತಿನ ವಿಸ್ಕೃತ ಪರಿಚಯ ಮಾಡಿಸುವುದು ಅನಿವಾರ್ಯ.ಬೋರ್ ಎನಿಸಿದರೂ ಅದನ್ನ ಓದದೆ ಇರಬೇಡಿ.ಆ ಮೊದಲ ಕಂತನ್ನ ಓದದಿದ್ದರೆ ಮುಂದಿನ ಕಥೆ ಅಷ್ಟಾಗಿ ಅರ್ಥವಾಗಲಾರದು.ನನ್ನ ದೃಷ್ಟಿಯಲ್ಲಿ ಇಸ್ಲಾಂ ಇಷ್ಟೆ.ನನ್ನ ಸಹೋದರನೊಬ್ಬ ಅದಕ್ಕೆ ಮಾರುಹೊದರೆ ಹೇಗೆಯೋ ಹಾಗೆಯೆ ಇನ್ನುಳಿದ ಮುಸ್ಲೀಮರು ನನ್ನ ಪಾಲಿಗೆ.ಏಕೆಂದರೆ ನಾನವರನ್ನ ಮೊದಲು ನೋಡೋದು ಭಾರತೀಯತೆಯ ಮೋಹರಿನಿಂದ.ಅವರ ಧಾರ್ಮಿಕ ಶ್ರದ್ಧೆ ನನಗೆ ಇಲ್ಲಿಯ ತನಕ ಮುಖಯವಾಗಿಲ್ಲ,ಮುಂದೆಯೂ ಆಗುವುದಿಲ್ಲ.
( ಮುಗಿಯಿತು...)
Subscribe to:
Posts (Atom)