ಹೊರಗೆ ಹನಿ ಹನಿ ತುಂತುರು ಮಳೆ,ಆಳುವ ಮಂದಿಯ ಕೃಪೆಯಿಂದ ಊರೆಲ್ಲ ಇಳಿಸಂಜೆಯಲ್ಲಿ ನನ್ನಂತೆಯೆ ವಿಷಾದಕ್ಕೆ ಜಾರಿದ ಹಾಗೆ ಕತ್ತಲಲ್ಲಿ ಮುದುಡಿ ಮುಳುಗಿದೆ...ನಿನ್ನ ನೆನಪಿನ ತುಂತುರಲ್ಲಿ ಒಳಗೂ-ಹೊರಗೂ ನೆನೆಯುತ್ತ ಈ ಕತ್ತಲ ಹಾದಿಯನ್ನ ಸವೆಸುತಿದ್ದೇನೆ.ನಿನ್ನನ್ನೆ ಕ್ಷಣಕ್ಷಣಕ್ಕೂ ಮೌನದಲ್ಲೇ ಜಪಿಸುತ್ತಿದ್ದೇನೆ.ಎಷ್ತೋದು ಒಂಟಿಯಾದೆನಲ್ಲ ನಾನು,ಹೋಗಹೋಗ್ತಾ, ನೀನು ಹಾಗೆಯೆ ಹೋಗಲಿಲ್ಲ ;ನನ್ನ ನೆಮ್ಮದಿ,ಖುಷಿ,ಗೆಲುವನ್ನೆಲ್ಲ ಜೊತೆಗೆ ಗಂಟು ಕಟ್ಟಿಕೊಂಡು ದೂರ ಸರಿದೆ.ಮತ್ತೆ ನನ್ನ ಬಾಳಿನ ಬುಟ್ಟಿಯ ತುಂಬಾ ಸಂಕಟದ ಮುಳ್ಳುಗಳನ್ನೆ ಸುರಿದೆ.
ಹುಟ್ಟಿನಿಂದಲೂ ನನಗೇನೆ ದೊಡ್ಡ ಪ್ರಶ್ನೆಯಾಗಿದ್ದ ನನ್ನೊಳಗಿನ ಕೀಳರಿಮೆಯಿಂದ ಕುಗ್ಗಿ ಹೋಗಿದ್ದ ನನಗೂ ಬಾಳಿನ ಸಂಭ್ರಮದ ಅಸಲು ಪರಿಚಯ ಆದದ್ದು ನಿನ್ನಿಂದ.ಕಾರಣವೆ ಇಲ್ಲದ ನಮ್ಮ ಸುತ್ತಾಟಗಳು-ಜಂಟಿ ಪ್ರವಾಸಗಳು-ಕಲಾಕ್ಹೇತ್ರದ ತೀರ್ಥಯಾತ್ರೆಗಳು-ಟೌನ್'ಹಾಲಿನ ಉದ್ದನುದ್ದ ಮೆಟ್ಟಲುಗಳ ಮೇಲೆ ಕೂತು ನಾವು ಹೆಣೆದಿದ್ದ ಕನಸುಗಳ ಜಾತ್ರೆಗಳು-ಇಂಡೋ ಜರ್ಮನ್ ಸಿನಿಮಾ,ಬೆಂಗಳೂರು ಹಬ್ಬ ಅಂತೆಲ್ಲ ನಡೆಸಿದ್ದ ಹುಚ್ಚುಹುಚ್ಚು ಓಡಾಟಗಳು,ಗಾಂಧಿನಗರದ ಸಂದುಗೊಂದುಗಳ ಶ್ರದ್ಧಾಪೂರ್ವಕ ಅನ್ವೇಷಣೆಗಳು...ಓಹ್, ಬಾಳು ಎಷ್ಟೊಂದು ಸೋಗಸಾಗಿತ್ತಲ್ಲ ಆಗೆಲ್ಲ!
ಹೀಗೆ ಅರಿವಿಲ್ಲದೆ ಹೊಸತೊಂದು ಸಂತಸದ ಹಾಡನ್ನ ನಾನು ಹೆಚ್ಚುಹೆಚ್ಚು ಗುನುಗೋಕೆ ಕಾರಣವಾಗಿದ್ದುದು ಕೇವಲ ನೀನು.ನಿನ್ನ ಒಡನಾಟ.ನನ್ನ ಪಾಲಿಗೆ ಆತ್ಮದ ಬಂಧುವೆ ಆಗಿರುವ ನಿನ್ನೊಟ್ಟಿಗೆ ಹಂಚಿಕೊಂಡಿದ್ದ ಬಂಧಕ್ಕೆ ಯಾವುದೊ ಸಂಬಂಧದ ಚೌಕಟ್ಟನ್ನ ತೊಡಿಸಿ 'ಇದಿಷ್ಟೇ' ಅಂತ ವಿವರಿಸೋಕೆ ನನಗಂತೂ ಸಾಧ್ಯವೇ ಇಲ್ಲ.ಬರಡಾಗಿದ್ದ ನನ್ನ ಬಾಳಿನ ಅಂಗಳದಲ್ಲೂ ಸುಗಂಧದ ಹೂಗಳನ್ನರಳಿಸಿದ್ದ ನೀನು ನನ್ನ ಪಾಲಿಗೆ ಆಗಲು ಸಾಧ್ಯವಾದ ಎಲ್ಲವೂ ಆಗಿದ್ದೆ.
ಮೊದಲಿನಿಂದಲೂ ಒಂಟಿತನದಿಂದ ಒಳಗೊಳಗೆ ಮುದುಡಿದ್ದ ನನ್ನ ಮನಸನ್ನೂ ನೀ ಹೊರಜಗತ್ತಿಗೆ ತೆರೆದೆ ನೋಡು.ಎಲ್ಲವೂ ಹೊಸತಾಗಿಯೆ ಕಾನಿಸಿದಂತಾಗಿ.ಅನವಶ್ಯಕವೆಂದೆನಿಸುವ ಮಟ್ಟಿಗಿನ ನಿನ್ನೊಂದಿಗಿನ ಹರಟೆಗಳೂ ಇಷ್ಟವಾಗೊದಕ್ಕೆ ಶುರುವಾಯ್ತು.ಅದಕ್ಕೆ ತಕ್ಕಂತೆ ನನ್ನಷ್ಟೆ ತಿಕ್ಕಲುತಿಕ್ಕಲಾಗಿ ಹೊತ್ತುಗೊತ್ತಿಲ್ಲದೆ ನಾ ಕರೆದಲ್ಲಿಗೆ ನೀನೂ ಸಹ ದೂಸರ ಮಾತಿಲ್ಲದೆ ಹೊರಡುತ್ತಿದ್ದೆ.ಯಾರೂ ಇಲ್ಲ ನನಗಾಗಿ ಅನ್ನುವ ಕತ್ತಲಲ್ಲಿ ನಾನಿದ್ದೀನಿ ಅನ್ನೋ ಬೆಳಕಾಗಿ ನೀ ಗೋಚರಿಸಿದ ಮೇಲೆ ಇನ್ನೇನಿತ್ತು ಹೇಳು? ಆವರೆಗೂ ಶಾಪಗೃಸ್ಥ ಅಶ್ವತ್ಥಾಮನಂತೆ ಮನಸ್ಸು ಪೂರ್ತಿ ತೊನ್ನು ಹಿಡಿಸಿಕೊಂಡ ಅತೃಪ್ತ ಆತ್ಮವಾಗಿ ದಿಕ್ಕುದೆಸೆಯಿಲ್ಲದೆ ಅಲಿಯುತ್ತಿದ್ದ ನಾನು ಅಷ್ಟೂ ವರ್ಷಗಳ ಅಸಲು-ಬಡ್ಡಿ ಸಮೇತ ಮರೀಚಿಕೆಯಾಗಿದ್ದ ಸಣ್ಣಸಣ್ಣ ಖುಷಿಗಳನ್ನೆಲ್ಲ ಬಿಂದಾಸ್ ಲೂಟಿ ಹೊಡೆಯುವ ಉಮೇದಿಗೆ ಏರಿದ್ದೆ.ನನ್ನದೆ ಆದ ಅಹಂಕಾರಗಳು-ನಿನ್ನ ಪುಟ್ಟಪುಟ್ಟ ಈಗೋಗಳು ಇಬ್ಬರಲ್ಲೂ ಸಾವಿರವಿದ್ದರೂ ಅವೆಂದೂ ನಮ್ಮ ಸಾಮಿಪ್ಯಕ್ಕೆ ಅಡ್ಡಿಯಾಗಲಿಲ್ಲ.ಆದರೆ ಒಮ್ಮೆಲೆ ಅದೇನಾಯಿತೊ ನನಗಂತೂ ಒಗಟು .ನಿನ್ನ ಆದ್ಯತೆಗಳು ಬದಲಾದವು ಡಾಲರ್ ಮೋಹವೂ ನಿನ್ನನ್ನ ಅಕಾಲದಲ್ಲಿ ಆವರಿಸಿ ನೀನು ವಿಭಿನ್ನವಾಗಿ ನನಗೆ ಗೋಚರಿಸತೊಡಗಿದ ಮೇಲೆ ಮತ್ತೆ ಮೊದಲಿನ ನಲಿವೆಲ್ಲ ನಿಧಾನವಾಗಿ ಮರೆಸೆರಿದವು.ನೀನು ಅದೆಲ್ಲೊ ಅಮೇರಿಕಾದ ಗಲ್ಲಿಗಳಲ್ಲಿ ಡಾಲರ್'ಹೊಳಪನ್ನ ಕಣ್ಣಲ್ಲಿ ತುಂಬಿಸಿಕೊಳ್ಳುತ್ತಾ ಅದರಲ್ಲೆ ಸಂತಸವ ಹುಡುಕುತ್ತಿದ್ದೀಯ.ನಾನಿನ್ನೂ ನಿನ್ನ ಧಡೀರ್ ಪರಿವರ್ತನೆಯಿಂದ ಇನ್ನೂ ಚೇತರಿಸಿಕೊಳ್ಳಲಾಗದೆ ಇಲ್ಲಿ ನಿನ್ನ ಬಿಂಬವನ್ನೆ ನನ್ನ ಕಂಗಳ ಸ್ಕ್ರೀನ್'ಸೇವರ್ ಮಾಡಿಕೊಂಡು ಅಬ್ಬೇಪಾರಿಯಂತೆ ಅಲಿಯುತ್ತಿದ್ದೇನೆ.ನೀನಗೀಗ ನನ್ನ ಮೇಲೆ ಇರಬೇಕಾದಷ್ಟು ಪ್ರೀತಿ ಇಲ್ಲದಿದ್ದರೂ ಇರಬಾರದಷ್ಟು ಕೋಪ ಮಾತ್ರ ತುಂಬಿದೆ.
ಅದೆಲ್ಲೊ ಅಡಗಿದ್ದ ಮನಸ್ಸಿನ ತೊನ್ನು ಮತ್ತೆ ಮೇಲೆದ್ದು ಬಂದಿವೆ,ಅತೃಪ್ತತೆ ತುಂಬಿ ತುಳುಕಾಡುತ್ತಿದೆ.ಹೊರಪ್ರಪಂಚದ ಮಂದಿಗೆ ಹೊರನೋಟಕ್ಕೆ ವಿಭಿನ್ನವಾಗಿ ಗೋಚರಿಸುವ ನಾನು ಒಳಗೊಳಗೆ ಪ್ರತಿ ನಿಮಿಷವೂ ಸೋಲುತ್ತಿರೋದು ಯಾರಿಗೂ ಗೊತ್ತಾಗದಂತೆ ಇರುತ್ತದೆ ನನ್ನ ಬಾಹ್ಯ ವರ್ತನೆ.ಹೋಲಿಸಿ ನೋಡಿದರೆ ಮೇಲೆ ಕಾಣುವ ನನಗೂ-ಕಳವಳದಲ್ಲಿ ತೇಲುವ ನನ್ನೊಳಗಿನ ನನಗೂ ಚೂರೂ ತಾಳೆಯಾಗದೆ ನನ್ನೊಳಗಿನ ಈ ತಾಕಲಾಟ ಕಂಡವರು 'ಖಂಡಿತ ಇವನಿಗೆ ಹನ್ನೆರಡಾಣೆ ಕಮ್ಮಿಯಾಗಿದೆ' ಎಂದುಕೊಳ್ಳುವುದರಲ್ಲಿಯೂ ಸಂಶಯ ನನಗಿಲ್ಲ.ಆದರೊಂದು ನಿಜ ಹೇಳಲಾ.ನಿನ್ನ ಹೊರತು ನಾನು ಜೀವಂತ ಓಡಾಡಿಕೊಂಡಿರುವ ಹೆಣ ಮಾತ್ರ.ಉಸಿರಾಡುತ್ತಾ ಓಡಾಡುವ ಅದಾಗಲೆ ಸತ್ತ ನನಗೆ ನಿನ್ನ ಹೆಗಲಿನಾಸರೆಯಲ್ಲಷ್ಟೆ ಮುಕ್ತಿ ಪ್ರಾಪ್ತಿಯಾದೀತು.ಈ ಬದುಕೆಂಬ ಕೃತಕ ವೆಂಟಿಲೇಶನ್'ನ ನರಕದಿಂದ ನಾನು ಪಾರಾಗುವ ಮೊದಲಾದರು ನಿನ್ನ ಬೆಚ್ಚಗಿನ ಅಂಗೈಯಲ್ಲಿ ಮತ್ತೆ ನನ್ನ ಕೈ ಸೇರಿಸುವುದೊಂದೆ ನನಗಿರುವ ಆಸೆ.ಆದರೆ ಈ ಆಸೆಯೂ ಇನ್ನುಳಿದ ಎಲ್ಲಾ ಅಸೆಗಳಂತೆ ಬರಿಯ ಆಸೆಯಾಗಿಯೆ ಈಡೇರದೆ ಉಳಿದು ಬಿಡುವ ಖಚಿತತೆ ಇದ್ದರೂ ನಾನು ಕನಸಿಸೋದನ್ನ ಬಿಡಲಾರೆ...ನಿತ್ಯ ನಿನ್ನ ನೆನೆಯೋದನ್ನ ಬಯಸಿದರೂ ನನಗೆ ಬಿಡಲಾಗದಂತೆ ಇದೂನು ಜನ್ಮಕ್ಕಂಟಿದ ಗೀಳಾಗಿಯೆ ಉಳಿದಿರುತ್ತದೆ.ಹಿಂದಿನಂತೆ ನನ್ನೆದೆಯ ಕದತಟ್ಟಿ ಅದನ್ನ ಕೇಳಿಸಿಕೊಳ್ಳೋಕೆ ನೀನಲ್ಲಿರೋಲ್ಲ ಅಷ್ಟೆ.
ಖಾಸಗಿ ಕನವರಿಕೆಗಳನ್ನ ಹೀಗೆ ಜಾಹೀರು ಮಾಡುವಲ್ಲಿಯೂ ನನ್ನದೊಂದು ದೂರದ ಆಸೆಯಿದೆ.ನನ್ನ ಯಾವ ಮಾತಿಗೂ ನಿನ್ನ ಪ್ರತಿಕ್ರಿಯೆಯ ನಿರೀಕ್ಷೆಯಿಲ್ಲ,ಆದರೂ ಮರಳಿ ಬಾರದಂತೆ ನೀನು ನನ್ನ ಪರಿಧಿಯಿಂದ ದೂರ ಸರಿದಿದ್ದರೂ ಕೂಡ ಎಲ್ಲೋ ಒಂದೆಡೆ ಈ ನನ್ನ ಹಪಾಹಪಿ ನಿನ್ನ ಗಮನಕ್ಕೆ ಬರಲಿ.ನಿನ್ನ ಹೊರತು ನಾನು ಪಡುತ್ತಿರುವ ಯಾತನೆ.
23 October 2011
'' ''
ಹೊರಗೆ ಹನಿ ಹನಿ ತುಂತುರು ಮಳೆ,ಆಳುವ ಮಂದಿಯ ಕೃಪೆಯಿಂದ ಊರೆಲ್ಲ ಇಳಿಸಂಜೆಯಲ್ಲಿ ನನ್ನಂತೆಯೆ ವಿಷಾದಕ್ಕೆ ಜಾರಿದ ಹಾಗೆ ಕತ್ತಲಲ್ಲಿ ಮುದುಡಿ ಮುಳುಗಿದೆ...ನಿನ್ನ ನೆನಪಿನ ತುಂತುರಲ್ಲಿ ಒಳಗೂ-ಹೊರಗೂ ನೆನೆಯುತ್ತ ಈ ಕತ್ತಲ ಹಾದಿಯನ್ನ ಸವೆಸುತಿದ್ದೇನೆ.ನಿನ್ನನ್ನೆ ಕ್ಷಣಕ್ಷಣಕ್ಕೂ ಮೌನದಲ್ಲೇ ಜಪಿಸುತ್ತಿದ್ದೇನೆ.ಎಷ್ತೋದು ಒಂಟಿಯಾದೆನಲ್ಲ ನಾನು,ಹೋಗಹೋಗ್ತಾ, ನೀನು ಹಾಗೆಯೆ ಹೋಗಲಿಲ್ಲ ;ನನ್ನ ನೆಮ್ಮದಿ,ಖುಷಿ,ಗೆಲುವನ್ನೆಲ್ಲ ಜೊತೆಗೆ ಗಂಟು ಕಟ್ಟಿಕೊಂಡು ದೂರ ಸರಿದೆ.ಮತ್ತೆ ನನ್ನ ಬಾಳಿನ ಬುಟ್ಟಿಯ ತುಂಬಾ ಸಂಕಟದ ಮುಳ್ಳುಗಳನ್ನೆ ಸುರಿದೆ.
ಹುಟ್ಟಿನಿಂದಲೂ ನನಗೇನೆ ದೊಡ್ಡ ಪ್ರಶ್ನೆಯಾಗಿದ್ದ ನನ್ನೊಳಗಿನ ಕೀಳರಿಮೆಯಿಂದ ಕುಗ್ಗಿ ಹೋಗಿದ್ದ ನನಗೂ ಬಾಳಿನ ಸಂಭ್ರಮದ ಅಸಲು ಪರಿಚಯ ಆದದ್ದು ನಿನ್ನಿಂದ.ಕಾರಣವೆ ಇಲ್ಲದ ನಮ್ಮ ಸುತ್ತಾಟಗಳು-ಜಂಟಿ ಪ್ರವಾಸಗಳು-ಕಲಾಕ್ಹೇತ್ರದ ತೀರ್ಥಯಾತ್ರೆಗಳು-ಟೌನ್'ಹಾಲಿನ ಉದ್ದನುದ್ದ ಮೆಟ್ಟಲುಗಳ ಮೇಲೆ ಕೂತು ನಾವು ಹೆಣೆದಿದ್ದ ಕನಸುಗಳ ಜಾತ್ರೆಗಳು-ಇಂಡೋ ಜರ್ಮನ್ ಸಿನಿಮಾ,ಬೆಂಗಳೂರು ಹಬ್ಬ ಅಂತೆಲ್ಲ ನಡೆಸಿದ್ದ ಹುಚ್ಚುಹುಚ್ಚು ಓಡಾಟಗಳು,ಗಾಂಧಿನಗರದ ಸಂದುಗೊಂದುಗಳ ಶ್ರದ್ಧಾಪೂರ್ವಕ ಅನ್ವೇಷಣೆಗಳು...ಓಹ್, ಬಾಳು ಎಷ್ಟೊಂದು ಸೋಗಸಾಗಿತ್ತಲ್ಲ ಆಗೆಲ್ಲ!
ಹೀಗೆ ಅರಿವಿಲ್ಲದೆ ಹೊಸತೊಂದು ಸಂತಸದ ಹಾಡನ್ನ ನಾನು ಹೆಚ್ಚುಹೆಚ್ಚು ಗುನುಗೋಕೆ ಕಾರಣವಾಗಿದ್ದುದು ಕೇವಲ ನೀನು.ನಿನ್ನ ಒಡನಾಟ.ನನ್ನ ಪಾಲಿಗೆ ಆತ್ಮದ ಬಂಧುವೆ ಆಗಿರುವ ನಿನ್ನೊಟ್ಟಿಗೆ ಹಂಚಿಕೊಂಡಿದ್ದ ಬಂಧಕ್ಕೆ ಯಾವುದೊ ಸಂಬಂಧದ ಚೌಕಟ್ಟನ್ನ ತೊಡಿಸಿ 'ಇದಿಷ್ಟೇ' ಅಂತ ವಿವರಿಸೋಕೆ ನನಗಂತೂ ಸಾಧ್ಯವೇ ಇಲ್ಲ.ಬರಡಾಗಿದ್ದ ನನ್ನ ಬಾಳಿನ ಅಂಗಳದಲ್ಲೂ ಸುಗಂಧದ ಹೂಗಳನ್ನರಳಿಸಿದ್ದ ನೀನು ನನ್ನ ಪಾಲಿಗೆ ಆಗಲು ಸಾಧ್ಯವಾದ ಎಲ್ಲವೂ ಆಗಿದ್ದೆ.
ಮೊದಲಿನಿಂದಲೂ ಒಂಟಿತನದಿಂದ ಒಳಗೊಳಗೆ ಮುದುಡಿದ್ದ ನನ್ನ ಮನಸನ್ನೂ ನೀ ಹೊರಜಗತ್ತಿಗೆ ತೆರೆದೆ ನೋಡು.ಎಲ್ಲವೂ ಹೊಸತಾಗಿಯೆ ಕಾನಿಸಿದಂತಾಗಿ.ಅನವಶ್ಯಕವೆಂದೆನಿಸುವ ಮಟ್ಟಿಗಿನ ನಿನ್ನೊಂದಿಗಿನ ಹರಟೆಗಳೂ ಇಷ್ಟವಾಗೊದಕ್ಕೆ ಶುರುವಾಯ್ತು.ಅದಕ್ಕೆ ತಕ್ಕಂತೆ ನನ್ನಷ್ಟೆ ತಿಕ್ಕಲುತಿಕ್ಕಲಾಗಿ ಹೊತ್ತುಗೊತ್ತಿಲ್ಲದೆ ನಾ ಕರೆದಲ್ಲಿಗೆ ನೀನೂ ಸಹ ದೂಸರ ಮಾತಿಲ್ಲದೆ ಹೊರಡುತ್ತಿದ್ದೆ.ಯಾರೂ ಇಲ್ಲ ನನಗಾಗಿ ಅನ್ನುವ ಕತ್ತಲಲ್ಲಿ ನಾನಿದ್ದೀನಿ ಅನ್ನೋ ಬೆಳಕಾಗಿ ನೀ ಗೋಚರಿಸಿದ ಮೇಲೆ ಇನ್ನೇನಿತ್ತು ಹೇಳು? ಆವರೆಗೂ ಶಾಪಗೃಸ್ಥ ಅಶ್ವತ್ಥಾಮನಂತೆ ಮನಸ್ಸು ಪೂರ್ತಿ ತೊನ್ನು ಹಿಡಿಸಿಕೊಂಡ ಅತೃಪ್ತ ಆತ್ಮವಾಗಿ ದಿಕ್ಕುದೆಸೆಯಿಲ್ಲದೆ ಅಲಿಯುತ್ತಿದ್ದ ನಾನು ಅಷ್ಟೂ ವರ್ಷಗಳ ಅಸಲು-ಬಡ್ಡಿ ಸಮೇತ ಮರೀಚಿಕೆಯಾಗಿದ್ದ ಸಣ್ಣಸಣ್ಣ ಖುಷಿಗಳನ್ನೆಲ್ಲ ಬಿಂದಾಸ್ ಲೂಟಿ ಹೊಡೆಯುವ ಉಮೇದಿಗೆ ಏರಿದ್ದೆ.ನನ್ನದೆ ಆದ ಅಹಂಕಾರಗಳು-ನಿನ್ನ ಪುಟ್ಟಪುಟ್ಟ ಈಗೋಗಳು ಇಬ್ಬರಲ್ಲೂ ಸಾವಿರವಿದ್ದರೂ ಅವೆಂದೂ ನಮ್ಮ ಸಾಮಿಪ್ಯಕ್ಕೆ ಅಡ್ಡಿಯಾಗಲಿಲ್ಲ.ಆದರೆ ಒಮ್ಮೆಲೆ ಅದೇನಾಯಿತೊ ನನಗಂತೂ ಒಗಟು .ನಿನ್ನ ಆದ್ಯತೆಗಳು ಬದಲಾದವು ಡಾಲರ್ ಮೋಹವೂ ನಿನ್ನನ್ನ ಅಕಾಲದಲ್ಲಿ ಆವರಿಸಿ ನೀನು ವಿಭಿನ್ನವಾಗಿ ನನಗೆ ಗೋಚರಿಸತೊಡಗಿದ ಮೇಲೆ ಮತ್ತೆ ಮೊದಲಿನ ನಲಿವೆಲ್ಲ ನಿಧಾನವಾಗಿ ಮರೆಸೆರಿದವು.ನೀನು ಅದೆಲ್ಲೊ ಅಮೇರಿಕಾದ ಗಲ್ಲಿಗಳಲ್ಲಿ ಡಾಲರ್'ಹೊಳಪನ್ನ ಕಣ್ಣಲ್ಲಿ ತುಂಬಿಸಿಕೊಳ್ಳುತ್ತಾ ಅದರಲ್ಲೆ ಸಂತಸವ ಹುಡುಕುತ್ತಿದ್ದೀಯ.ನಾನಿನ್ನೂ ನಿನ್ನ ಧಡೀರ್ ಪರಿವರ್ತನೆಯಿಂದ ಇನ್ನೂ ಚೇತರಿಸಿಕೊಳ್ಳಲಾಗದೆ ಇಲ್ಲಿ ನಿನ್ನ ಬಿಂಬವನ್ನೆ ನನ್ನ ಕಂಗಳ ಸ್ಕ್ರೀನ್'ಸೇವರ್ ಮಾಡಿಕೊಂಡು ಅಬ್ಬೇಪಾರಿಯಂತೆ ಅಲಿಯುತ್ತಿದ್ದೇನೆ.ನೀನಗೀಗ ನನ್ನ ಮೇಲೆ ಇರಬೇಕಾದಷ್ಟು ಪ್ರೀತಿ ಇಲ್ಲದಿದ್ದರೂ ಇರಬಾರದಷ್ಟು ಕೋಪ ಮಾತ್ರ ತುಂಬಿದೆ.
ಅದೆಲ್ಲೊ ಅಡಗಿದ್ದ ಮನಸ್ಸಿನ ತೊನ್ನು ಮತ್ತೆ ಮೇಲೆದ್ದು ಬಂದಿವೆ,ಅತೃಪ್ತತೆ ತುಂಬಿ ತುಳುಕಾಡುತ್ತಿದೆ.ಹೊರಪ್ರಪಂಚದ ಮಂದಿಗೆ ಹೊರನೋಟಕ್ಕೆ ವಿಭಿನ್ನವಾಗಿ ಗೋಚರಿಸುವ ನಾನು ಒಳಗೊಳಗೆ ಪ್ರತಿ ನಿಮಿಷವೂ ಸೋಲುತ್ತಿರೋದು ಯಾರಿಗೂ ಗೊತ್ತಾಗದಂತೆ ಇರುತ್ತದೆ ನನ್ನ ಬಾಹ್ಯ ವರ್ತನೆ.ಹೋಲಿಸಿ ನೋಡಿದರೆ ಮೇಲೆ ಕಾಣುವ ನನಗೂ-ಕಳವಳದಲ್ಲಿ ತೇಲುವ ನನ್ನೊಳಗಿನ ನನಗೂ ಚೂರೂ ತಾಳೆಯಾಗದೆ ನನ್ನೊಳಗಿನ ಈ ತಾಕಲಾಟ ಕಂಡವರು 'ಖಂಡಿತ ಇವನಿಗೆ ಹನ್ನೆರಡಾಣೆ ಕಮ್ಮಿಯಾಗಿದೆ' ಎಂದುಕೊಳ್ಳುವುದರಲ್ಲಿಯೂ ಸಂಶಯ ನನಗಿಲ್ಲ.ಆದರೊಂದು ನಿಜ ಹೇಳಲಾ.ನಿನ್ನ ಹೊರತು ನಾನು ಜೀವಂತ ಓಡಾಡಿಕೊಂಡಿರುವ ಹೆಣ ಮಾತ್ರ.ಉಸಿರಾಡುತ್ತಾ ಓಡಾಡುವ ಅದಾಗಲೆ ಸತ್ತ ನನಗೆ ನಿನ್ನ ಹೆಗಲಿನಾಸರೆಯಲ್ಲಷ್ಟೆ ಮುಕ್ತಿ ಪ್ರಾಪ್ತಿಯಾದೀತು.ಈ ಬದುಕೆಂಬ ಕೃತಕ ವೆಂಟಿಲೇಶನ್'ನ ನರಕದಿಂದ ನಾನು ಪಾರಾಗುವ ಮೊದಲಾದರು ನಿನ್ನ ಬೆಚ್ಚಗಿನ ಅಂಗೈಯಲ್ಲಿ ಮತ್ತೆ ನನ್ನ ಕೈ ಸೇರಿಸುವುದೊಂದೆ ನನಗಿರುವ ಆಸೆ.ಆದರೆ ಈ ಆಸೆಯೂ ಇನ್ನುಳಿದ ಎಲ್ಲಾ ಅಸೆಗಳಂತೆ ಬರಿಯ ಆಸೆಯಾಗಿಯೆ ಈಡೇರದೆ ಉಳಿದು ಬಿಡುವ ಖಚಿತತೆ ಇದ್ದರೂ ನಾನು ಕನಸಿಸೋದನ್ನ ಬಿಡಲಾರೆ...ನಿತ್ಯ ನಿನ್ನ ನೆನೆಯೋದನ್ನ ಬಯಸಿದರೂ ನನಗೆ ಬಿಡಲಾಗದಂತೆ ಇದೂನು ಜನ್ಮಕ್ಕಂಟಿದ ಗೀಳಾಗಿಯೆ ಉಳಿದಿರುತ್ತದೆ.ಹಿಂದಿನಂತೆ ನನ್ನೆದೆಯ ಕದತಟ್ಟಿ ಅದನ್ನ ಕೇಳಿಸಿಕೊಳ್ಳೋಕೆ ನೀನಲ್ಲಿರೋಲ್ಲ ಅಷ್ಟೆ.
ಖಾಸಗಿ ಕನವರಿಕೆಗಳನ್ನ ಹೀಗೆ ಜಾಹೀರು ಮಾಡುವಲ್ಲಿಯೂ ನನ್ನದೊಂದು ದೂರದ ಆಸೆಯಿದೆ.ನನ್ನ ಯಾವ ಮಾತಿಗೂ ನಿನ್ನ ಪ್ರತಿಕ್ರಿಯೆಯ ನಿರೀಕ್ಷೆಯಿಲ್ಲ,ಆದರೂ ಮರಳಿ ಬಾರದಂತೆ ನೀನು ನನ್ನ ಪರಿಧಿಯಿಂದ ದೂರ ಸರಿದಿದ್ದರೂ ಕೂಡ ಎಲ್ಲೋ ಒಂದೆಡೆ ಈ ನನ್ನ ಹಪಾಹಪಿ ನಿನ್ನ ಗಮನಕ್ಕೆ ಬರಲಿ.ನಿನ್ನ ಹೊರತು ನಾನು ಪಡುತ್ತಿರುವ ಯಾತನೆ.
22 October 2011
ವಲಿ....( ಭಾಗ-6)
ಕ್ರಮೇಣ ಖುರಾನಿನ ಸುರಾಗಳು ಉದ್ದವಾಗುತ್ತಾ ಹೋದವು.ಅವುಗಳಲ್ಲಿ ಹೊರಹೊಮ್ಮಿದ ಉಪದೇಶಾಮೃತಗಳಲ್ಲಿ ಪರಸ್ಪರ ವಿರೋಧಾಭಾಸಗಳೂ ಗೋಚರಿಸಲಾರಂಭಿಸಿದವು.ದೈವಪ್ರೇರಣೆಯಿಂದ ಹೊರಹೊಮ್ಮಿದ ಉಪದೇಶದ ಸಾಲುಗಳೆ ಮುಂದೆ ಖಾಯಂ ದೈವವಾಣಿಗಳಾಗಿ ಅಂತಿಮವಾದುದನ್ನೂ ಗುರುತಿಸಬಹುದಾಗಿದೆ ಎನ್ನುತ್ತಾನೆ ಇತಿಹಾಸಕಾರ ಅಲ್ ಮುಬಾರಖಿ.ಅಷ್ಟೆ ಅಲ್ಲದೆ ಅರೇಬಿಯಾದಲ್ಲಿ ಆಕಾಲದಲ್ಲಿ ಪ್ರಚಲಿತವಿದ್ದ ಕೆಲವು ಕವಿತೆಗಳನ್ನು ಹಾಗ್ಹಾಗೆ ಖುರಾನಿನಲ್ಲೂ ಬಳಸಿರುವುದನ್ನು ಈತ ಗುರುತಿಸಿದ್ದಾನೆ! ಇಲ್ಲಿಯವರೆಗೂ ಮಹಮದ್ ದೈವಪ್ರೇರಣೆಯ ಪ್ರಕಾರ ಹೇಳಿದ ಸುರಾಗಳು ಕೇವಲ ದೇವರ ಏಕಸಾಮ್ಯತೆ,ಮಹಮದ್ ಆತನ ಪ್ರವಾದಿ,ಮರಣ ಹೊಂದಿದವರ ಪುನರುತ್ಥಾನ,ಒಳ್ಳೆಯ ಮತ್ತು ಕೆಟ್ಟದರ ಪ್ರತಿಫಲಗಳು ಮುಂತಾದಕ್ಕೆ ಸೀಮಿತವಾಗಿದ್ದವು.ಈಗ ಅದರ ಮುಂದುವರಿಕೆಯಾಗಿ ಪ್ರಾರ್ಥನೆಗೈಯುವುದು,ದಾನ ಮಾಡುವುದು,ತೂಕ ಮತ್ತು ಅಳತೆಗಳಲ್ಲಿ ಪ್ರಾಮಾಣಿಕತೆ,ಸತ್ಯನುಡಿ,ನಡತೆಯ ಪರಿಶುದ್ಧತೆ,ಒಡಂಬಡಿಕೆಗಳ ಪ್ರಾಮಾಣಿಕ ಪರಿಪಾಲನೆ ಮುಂತಾದವುಗಳ ಕುರಿತಾಗಿಯೂ ಸುರಾಗಳು ಹೊರಬಂದವು.ವಿಗ್ರಹಾರಾಧನೆಯನ್ನು ಖಂಡತುಂಡವಾಗಿ ವಿರೋಧಿಸಿ ಮಹಮದ್ ನೀಡಿದ 109/1ರಿಂದ 6ರವರೆಗಿನ ಸುರಾವೂ ಅದೆಕಾಲದಲ್ಲಿ ಹೊರಬಂದದ್ದು ಕೂಡ ಗಮನಾರ್ಹವಾಗಿತ್ತು ಎನ್ನುತ್ತಾನೆ ಇತಿಹಾಸಕಾರ ಕ್ಲೈರ್.ಸ್ವರ್ಗ ಹಾಗೂ ನರಕಗಳ ಕುರಿತು ವಿವರಣೆ ನೀಡುವ ಸುರಾವೂ ಇದೇ ಸಮಯದಲ್ಲಿ ಹೊರಬಂದಿತ್ತು.ಸ್ವರ್ಗ-ನರಕಗಳ ಚಿತ್ರಣ,ಅಲ್ಲಿ ಸಿದ್ಧವಾಗುವ ಸುಖ ಹಾಗೂ ಕಷ್ಟಕಾರ್ಪಣ್ಯಗಳು,ಸ್ವರ್ಗದ ಕಣ್ಮನ ತಣಿಸುವ ತೋಟ-ತೋಪುಗಳು,ನೆಲತೊಳೆಯುತ್ತಾ ವರ್ಷಪೂರ್ತಿ ಹರಿಯುತ್ತಲೆ ಇರುವ ಬತ್ತದ ತೊರೆಗಳು,ಅಲ್ಲಿನ ವನ ಸಮೃದ್ಧಿ,ತೊರೆಗಳ ದಡಗಳಲ್ಲಿ ಅರಳಿ ನಲಿಯುವ ಹೂಗಿಡಗಳು,ಮರಗಳ ನೆರಳಿನಲ್ಲಿ ಎಲ್ಲೆಂದರಲ್ಲಿ ಇರಿಸಿರುವ ಹೂವಿನ ಮೆತ್ತೆ ಹಾಸಿರುವ ಸುಖತೂಲಿಕಾತಲ್ಪಗಳು,ಚಿಮ್ಮುವ ಕಾರಂಜಿಗಳಿಂದ ಉಕ್ಕುವ ಕುಡಿಯುವ ಸಿಹಿನೀರು,ಅಲ್ಲಲ್ಲಿ ಇರಿಸಿರುವ ದ್ರಾಕ್ಷಾರಸಗಳ ಬೆಳ್ಳಿಬಟ್ಟಲುಗಳು,ಎಲ್ಲೆಲ್ಲೂ ಕೈಗೆಟಕುವಂತೆ ನೇತಾಡುತ್ತಿರುವ ಸಿಹಿಫಲಗಳ ಗೊಂಚಲುಗಳು,ಜೊತೆಗೆ ಅಲ್ಲಿಗೆ ಅಡಿಯಿಡುವವರ ಸಕಲಸೇವೆಗೂ ಸದಾಸಿದ್ದವಾಗಿರುವ ಹ್ಯೂರಿ ಎಂಬ ಪಾರದರ್ಶಕ ಸುಂದರಿಯರು,ಎಲ್ಲಕ್ಕಿಂತಲೂ ಹೆಚ್ಚಾಗಿ ಬಯಸಿದಾಗ ಬರಿಸಬಹುದಾದ ಮಳೆ! ಹೀಗೆ ಮರುಭೂಮಿಯ ಒಣಭೂಮಿಯ ನಂಟನ್ನಷ್ಟೇ ಹೊಂದಿದ್ದ ಅರಬರಿಗೆ ಹೊಸತೆನಿಸುವ ಈ ಎಲ್ಲಾ ವಿವರಣೆಗಳನ್ನ ಕೊಡುವುದರ ಮೂಲಕ ಅವರಿಗೆ ಮೋಡಿ ಹಾಕುವತ್ತ ಮಹಮದ್ ಕಾರ್ಯಶೀಲನಾಗಿದ್ದ,ಸುರಾ 9/64 ಸಾಹಿ ಅಲ್ ಬುಖಾರಿ -4/3243 ಈ ಸುರಾವನ್ನ ಅವಲೋಕಿಸಿದಾಗ ಆತನ ವಿವರಣೆ ಹೆಚ್ಚು ಸ್ಪಷ್ಟವಾಗುತ್ತದೆ.ಸ್ವರ್ಗವನ್ನು ಹೀಗೆ ರಂಗುರಂಗಾಗಿ ವರ್ಣಿಸಿ ಆಕರ್ಷಣೆ ಹುಟ್ಟಿಸಿದ ಮಹಮದ್ ನರಕವನ್ನು ಬಲು ಭೀಕರವಾಗಿ ವಿವರಿಸಿದ.ಹೆಜ್ಜೆಹೆಜ್ಜೆಗೂ ಸುಡುವ ಬಿಸಿನೀರಿನ ಬುಗ್ಗೆಗಳು,ಸಿಡಿಯುವ ಬೆಂಕಿ ಹೊಗೆಗಳು ನಿರಂತರ ಹೊರಹೊಮ್ಮುವ ಅಸಹ್ಯದ ಉಸಿರುಗಟ್ಟಿಸುವ ಜಾಗಗಳು.ಸುಡುಬಿಸಿಲಿಂದ ರಕ್ಷಣೆಗೆ ನೆರಳೆ ಇಲ್ಲದ ಸುಡುನೆಲ ಇವೆಲ್ಲವನ್ನೂ ಒಳಗೊಂಡಿತ್ತು ಈತನ ನರಕದ ವಿವರಣೆ.ಇವೆಲ್ಲವನ್ನೂ ಹೆಚ್ಚು ಕಡಿಮೆ ಇಹದಲ್ಲೆ ಅಗತ್ಯಕ್ಕಿಂತ ಹೆಚ್ಚು ಕಂಡುಂಡ ಅನುಭವಿಗಳಾಗಿದ್ದ ಅರಬರಿಗೆ ಸ್ವರ್ಗದ ಸುಖಮಯ ವಿವರಣೆ ಕೇಳುವಾಗಲೆ ಸುಖಾನುಭವ ತಂದದ್ದು ಮಾತ್ರ ಸುಳ್ಳಲ್ಲ.ನರಕದ ಭೀಕರತೆಯ ವಿವರಣೆ ನೀಡುವ ಸುರಾಗಳನ್ನು 32/20/21, 40/24/71/72, 41/24/25, 44/42-49, 78/23-29 ಹಾಗೂ 37/23/2ಗಳಲ್ಲಿ ಗಮನಿಸಬಹುದು.
ಸ್ವರ್ಗ ಮತ್ತು ನರಕಗಳ ವಿವರಣೆಗಳೊಂದಿಗೆ ಮಹಮದ್ ನಿರ್ಣಾಯಕ ದಿನದಂದು ಕಾದಿರುವ ಭಯಂಕರ ತೀರ್ಪಿನ ಬಗ್ಗೆಯೂ ಅರಬರಿಗೆ ದಿಗಿಲು ಹುಟ್ಟಿಸುವ ಸಂದೇಶಗಳನ್ನು ಸಾರಿದ.ಅವನ ಈ ಸಂದೇಶವನ್ನು ಆಲಿಸಿದ ಮೆಕ್ಕಾದ ಮಂದಿ ಸಂದೇಹಗೊಂಡು ಆ ಅಂತಿಮ ದಿನದ ಗಡುವು ಎಂದು ಸಮೀಪಿಸುವುದು ಯಾವಾಗ? ಎಂದು ಪ್ರಶ್ನಿಸಿದಾಗ 'ಅದು ತನಗೆ ಗೊತ್ತಿಲ್ಲ ದೇವರಿಗೆ ಮಾತ್ರ ಗೊತ್ತು!' ಎಂದು ಸುರಾ 27/65 ರ ಮೂಲಕ ಉತ್ತರಿಸಿದ.ಹೀಗೆ ಖುರಾನಿನಲ್ಲಿ ಕಂಡು ಬರುವ ಅನೇಕ ಸಾಲುಗಳ ಬಗ್ಗೆ ಮೆಕ್ಕಾದ ಮಂದಿಯ ಮನದಲ್ಲಿ ಎದ್ದ ಅಪನಂಬಿಕೆ,ಅಸಹನೆಗಳ ಬಗ್ಗೆ ಹಾಗೂ ಸತ್ತು ಮಣ್ಣಾದವರು ಪುನರುತ್ಥಾನದ ದಿನದಂದು ಮತ್ತೆ ಎದ್ದು ಬರುತ್ತಾರೆ ಎಂಬೆಲ್ಲ ಹೇಳಿಕೆಗಳ ವಿರುದ್ಧ ಎದ್ದ ಅವರ ಅಸಹನೆಗಳನ್ನು ತನ್ನದೆ ಆದ ವಾದ,ತರ್ಕ-ವಿಮರ್ಶೆಗಳ ಮೂಲಕ ತೊಡೆದು ಹಾಕಲು ಮಹಮದ್ ಯತ್ನಿಸಿದ.ಸುರಾ 67/24-27 29/1 69ಗಳ ಮೂಲಕ ಕ್ರಮೇಣ ಈ ಬಗ್ಗೆ ಉದ್ರೇಕಕಾರಿಯಾಗಿ ಪ್ರಚೋದನೆ ನೀಡುತ್ತ ತನ್ನನ್ನು ಪ್ರವಾದಿಯೆಂದು ನಂಬಿದ ಮತಬಾಂಧವರನ್ನು ಬಡಿದೆಬ್ಬಿ ಅವರು ಕಾರ್ಯಪ್ರವರ್ತರಾಗುವಂತೆ ಮಾಡಲು ಆತ ಆರಂಭಿಸಿದ.ಇತಿಹಾಸಕಾರ ಸಿಮೊನ್ ವೆಲ್ ಹೀಗೆ ಇನ್ನೊಬ್ಬರನ್ನು ಪ್ರಚೋದನೆಗೆ ಒಳಪಡಿಸಿ ಬಡಿದೆಬ್ಬಿಸುವುದು ಒಂದು ಕಲೆ ಎನ್ನುತ್ತಾನೆ.ಮೆಕ್ಕಾದ ಖುರೈಷಿಗಳ ಕೊನೆಗಾಣದ ಮೊದಲಿಕೆ,ಅಪಹಾಸ್ಯ ಹಾಗು ಕುಚೋದ್ಯದ ನುಡಿಗಳಿಗೂ ಮಹಮದ್ ತನ್ನ ಸುರಾಗಳ ಮೂಲಕವೆ ಇದಿರೇಟು ನೀಡಲಾರಂಭಿಸಿದ.ಸುರಾ 5/57 62,29/1,69ಗಳಲ್ಲಿ ಇವನ್ನು ಧಾರಾಳವಾಗಿ ಗಮನಿಸಬಹುದು.
ವಿರೋಧಿಗಳ ಈ ಎಲ್ಲಾ ಬಿರುನುಡಿಗಳಿಗೆ ಸಹನೆ ಶಾಂತಿಯಿಂದಿರುವಂತೆ ಮಹಮದ್ ಭೋದಿಸಿದ.ನೆಜ್ರಾನ್ ಎಂಬಲ್ಲಿ ಯಹೂದಿಗಳು ಕ್ರೈಸ್ತರನ್ನು ಹಿಂದೆ ಬೆಂಕಿಯ ಹೊಂಡದಲ್ಲಿ ಹಾಕಿ ಜೀವಂತ ಸುಟ್ಟ ಸಂಗತಿಯನ್ನ ಉದಾಹರಿಸುತ್ತಾ ತನ್ನ ಹಿತವಚನಗಳನ್ನು ಅವರು ಒಪ್ಪುವಂತೆ ಸುರಾ 85/1-22 ರಲ್ಲಿ ಸಾರಿದ.'ಇಸ್ಲಾಂ' ಎಂದರೆ ದೇವರಿಗೆ ತನ್ನನ್ನು ತಾನೇ ಸಂಪೂರ್ಣ ಅರ್ಪಿಸಿಕೊಳ್ಳುವುದು ಹಾಗೆ ಮಾಡುವವನೆ ಮತಶ್ರದ್ಧೆಯುಳ್ಳವನು ಅಥವಾ 'ಮುಸ್ಲೀಂ' ಎಂದ.ಯಾರು ತಾನು ಸಾರುವ ಏಕದೈವವಾಣಿಯನ್ನು ಆಲೈಸಿಯೂ ಬಹುದೇವರನ್ನೂ ಗುಟ್ಟಾಗಿ ಆರಾಧಿಸುವರೊ ಅವರೆ 'ಮುಶಿಕೀನ್'ಗಳೆನ್ನಿಸಿಕೊಳ್ಳುವರು.ತನ್ನ ದೈವವಾಣಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಎಲ್ಲರೂ 'ಕಾಫಿರಿನ್'ಗಳೆಂದು ಕರೆಸಿಕೊಳ್ಳುತ್ತಾರೆ.ಈ ಕಾಫಿರಿನ್ ಹಾಗೂ ಮುಶಿಕೀನ್'ಗಳು ಯಾವ ಹಂತದಲ್ಲೂ ತನಗೆ ವಿರೋಧಿಗಳೆ ಎಂದಾತ ಸಾರಿದ.ಈ ಬಗ್ಗೆ ಪ್ರಸಿದ್ಧ ಇತಿಹಾಸಕಾರರಾದ ಅಲ್ ವಾಕಿಡಿ ಹಾಗೂ ಅಲ್ ತಬರಿ ಜೋಡಿ ಹೀಗೊಂದು ಕಥಾರೂಪದ ವಿವರಣೆ ನೀಡುತ್ತಾರೆ.ಅದರಂತೆ ಕ್ರಿಸ್ತಶಕ 615ರ ಸುಮಾರಿಗೆ ತನ್ನ ಬುಡಕಟ್ಟಿನವರ ಆತ್ಮೋದ್ಧಾರ ಮಾಡುವ ಸಲುವಾಗಿ ತಾನು ಆರಂಭಿಸಿದ ನೂತನ ಧರ್ಮದಲ್ಲಿ ಖುರೈಷಿಗಳ ಪ್ರಬಲ ವಿರೋಧದ ಕಾರಣ ಅಂದುಕೊಂಡ ಸಫಲತೆ ಕಂಡುಬಾರದೆ ಇದ್ದುದು,ತನ್ನೆಲ್ಲಾ ಪರಿಶ್ರಮದ ಹೊರತಾಗಿಯೂ ತಾನು ಕೇವಲ ನಲವತ್ತರಿಂದ ಐವತ್ತು ಮಂದಿಯ ಮನವೊಲಿಸಲು ಮಾತ್ರ ಶಕ್ತನಾಗಿದ್ದು,ಅದೆ ಪ್ರಯತ್ನದಲ್ಲಿ ಇಡಿ ಖುರೈಷಿಕುಲವನ್ನೆ ಎದುರು ಹಾಕಿಕೊಂಡದ್ದು ಇವೆಲ್ಲ ಮಹಮದನ ಮನಸ್ಸನ್ನು ತೀವೃವಾಗಿ ಘಾಸಿಗೊಳಿಸಿತು.ಇದೆ ಕಾರಣಕ್ಕೆ ಆತನ ಆತ್ಮ ನಲುಗಿ,ಭಾವನೆಗಳಿಗೆ ಬಲವಾದ ಪೆಟ್ಟುಬಿದ್ದಿತ್ತು.ಹಿಂದೊಮ್ಮೆ ಪ್ರೀತಿಪಾತ್ರರಾಗಿದ್ದ ಖುರೈಷಿ ಮುಖಂಡರ ವೈರತ್ವ ಅವನ ಹೃದಯ ಹಿಂಡಿತ್ತು.ದುಃಖಪೀಡಿತನಾದ ಮಹಮದ್ ಹೀಗಾಗಿ ಅವರೊಂದಿಗೆ ಸಂಧಾನಕ್ಕಾಗಿ ಹಾತೊರೆದ.
ಒಂದು ಮುಂಜಾನೆ ಕಾಬಾದ ಬಳಿ ಖುರೈಷಿ ಪ್ರಮುಖರು ಕೂತು ಅದೇನನ್ನೂ ಚರ್ಚಿಸುತ್ತಿರುವಾಗ ಮಹಮದ್ ಕೂಡ ಅಲ್ಲಿಗೆ ಬಂದು ಅವರ ಸನಿಹದಲ್ಲೆ ಕುಳಿತುಕೊಂಡ.ಅವನು ಅಲ್ಲಿಯೆ ಆಗಷ್ಟೆ ತನಗೆ ಪ್ರೇರಣೆಯಾದ ಹೊಸ ಸುರಾದ ಸಾಲುಗಳನ್ನ ಪಠಿಸತೊಡಗಿದ.ಈ ರೀತಿ ಅವನ ಮಣಮಣ ಸಾಗಿದ್ದಾಗ ಒಂದು ದೆವ್ವ ಅವನ ಹೃದಯವನ್ನು ಹೊಕ್ಕಿತು ಎನ್ನುತ್ತಾರೆ ಅವರಿಬ್ಬರೂ.ಆ ದೆವ್ವ ಅದಾಗಲೆ ಅವನ ಮನದಲ್ಲಿ ಮನೆ ಮಾಡಿದ್ದ ಹೊಂದಾಣಿಕೆಯ ಸೂತ್ರಗಳೂ ಸುರಾದ ಮೂಲಕವೆ ಹೊರ ಬರುವಂತೆ ಮಾಡಿತು.ಅಲ್-ಲಾಟ್ ಸುರಾ 53/52ರ ಪ್ರಕಾರ ಹೆಣ್ಣುದೇವತೆಯರನ್ನೂ ಏಕದೈವದೊಂದಿಗೆ ಆರಾಧಿಸುವಂತೆ ಹೇಳಿ ಬಹುದೇವತಾರಾಧನೆಗಳ ಬಗ್ಗೆ ಅನುಕಂಪದ ನುಡಿಯನ್ನೆ ಹೊರ ಹೊಮ್ಮಿಸಿತಂತೆ.ಉಜ್ವಲ ಸ್ತ್ರೀಯರ ಮಧ್ಯಸ್ಥಿಕೆಯ ಕುರಿತ ಒಂದು ಸಾಲೂ ಈ ಸುರಾದಲ್ಲಿ ಸೇರಿತ್ತು.ಮಹಮದನ ಈ ಹೊಸ ವಿಮರ್ಶಾವಿಧಿ ಆಲಿಸಿದ ಖುರೈಶಿಗಳಿಗೆ ನಿಜಕ್ಕೂ ಆಶ್ಚರ್ಯವಾಯಿತು.ಮಹಮದ್ ತಮ್ಮ ದೇವದೇವತೆಗಳ ಗುಣಗಳನ್ನು ಕೀರ್ತಿಸುವುದನ್ನು ಅವರಂತೂ ನಿರೀಕ್ಷಿಸಿರಲಿಲ್ಲ.ಅದನ್ನು ಕೇಳಿದ್ದೆ ಅಲ್ಲಿಯೆ ಅವರು ನೆಲಕ್ಕೆ ಬಾಗಿ ದೇವರಿಗೆ ಸ್ವಸ್ತಿ ಸಲ್ಲಿಸಿದರು.ಆಗ ಒಕ್ಕೊರಲಿನಿಂದ ಅವರೆಲ್ಲರೂ "ಜನ್ಮವನ್ನು ನೀಡಿ ಅದನ್ನು ಹಿಂತಿರುಗಿ ತೆಗೆದುಕೊಳ್ಳುವವನು ದೇವನೊಬ್ಬನೆ.ಅವನೆ ಸೃಷ್ಟಿಕರ್ತ-ಸಂರಕ್ಷಕ ಎಂಬುದೀಗ ನಮಗೆ ಅರಿವಾಗಿದೆ.ನಮ್ಮ ಸ್ತ್ರೀದೇವತೆಗಳ ಬಗ್ಗೆ ಹೇಳುವುದಾದರೆ ಅವರು ದೇವರಬಳಿ ನಮ್ಮ ಒಳಿತಿಗಾಗಿ ಬಿನ್ನಹ ಮಾಡುತ್ತಾರೆ.ನೀನು ಅವರನ್ನು ಒಪ್ಪಿಕೊಂಡಿರುವುದರಿಂದ ನಾವೂ ನಿನ್ನನ್ನು ಬೆಂಬಲಿಸಲು ಇಚ್ಚಿಸುತ್ತೇವೆ" ಎಂದರು .ಇದು ಸುರಾ 53/19-20 ರಲ್ಲಿ ನಿರೂಪಿತವಾಗಿದೆ.
ಆದರೆ ಅವರಿಂದ ಇನ್ನೇನನ್ನೋ ನಿರೀಕ್ಷಿಸಿದ್ದ ಮಹಮದನಿಗೆ ಅವರ ಈ ಮಾತುಗಳು ತೃಪ್ತಿಹುಟ್ಟಿಸಲಿಲ್ಲ ಹೀಗಾಗಿ ಖಿನ್ನನಾಗಿ ಆತ ಮನೆಗೆ ಮರಳಿದ.ಅಂದೆ ಸಂಜೆ ಯಕ್ಷ ಗೇಬ್ರಿಯಲ್'ನ ಪುನರ್'ದರ್ಶನ ಅವನಿಗೆ ದೊರೆಯಿತು.ಅವತ್ತು ದೊರಕಿದ ದೈವವಾಣಿಯನ್ನು ಮಹಮದ್ ಅವನಿಗೆ ಅರುಹಿದ,ಅದನ್ನು ಕೇಳಿದ್ದೆ ಆತಂಕಿತನಾದ ಯಕ್ಷ "ನಾನು ಹೇಳದೆ ಇರುವ ಹಾಡುಹರಟೆಗಳನ್ನೆಲ್ಲ ಜನರ ಮುಂದಿರಿಸಿದ್ದೆಯಲ್ಲ! ನಾನು ಹೇಳಿದ್ದೇನು? ನೀನು ಮಾಡಿದ್ದೇನು?" ಎಂದಾಗ ಮಹಮದ್ ಸಂಕಟದಿಂದ ನರಳಿದ.ದೇವರದಲ್ಲದ ಆ ಸಾಲುಗಳನ್ನ ತಾನು ಬಿತ್ತರಿಸಿರುವುದಕ್ಕೆ ಏನು ಕೇಡಾಗುವುದೊ ಎಂದಾತ ಹೆದರಿದ.ಆದರೆ ಗೇಬ್ರಿಯಲ್ ಆತನನ್ನು ಸಂತೈಸಿದ.ಅವನ ಭಯವನ್ನು ನಿವಾರಿಸುತ್ತಾ ಆ ಅಪ್ರಾಮಾಣಿಕ ಸುರಾಗಳನ್ನೆಲ್ಲ ಆತ ಕೂಡಲೆ ರದ್ದು ಪಡಿಸಿದ! ಮತ್ತು ಹೊಸತಾಗಿ ಸುರಾ 24/52, 35/14;39,17/26ಗಳ ಮೂಲಕ ಈಗಿರುವಂತೆ ಹೊಸ ಪದ್ಯಗಳನ್ನು ಸೃಷ್ಟಿಸಿದ.ಈ ಹೊಸ ಸಾಲುಗಳನ್ನು ಕೇಳಿದ್ದೆ ತಡ ಖುರೈಷಿಗಳ ದುಗುಡ ಮತ್ತಷ್ಟು ಹೆಚ್ಚಿತು.ನೆನ್ನೆಯಷ್ಟೆ ತಮ್ಮ ದೇವಾನುದೇವತೆಗಳ ಬಗ್ಗೆ ಸಹಾನುಭೂತಿಯ ಒಳ್ಳೆಯ ನುಡಿಗಳನ್ನಾಡಿದ್ದ ಮಹಮದ್ ಈಗ ಅದಕ್ಕೆ ಸಂಪೂರ್ಣ ವ್ಯತಿರಿಕ್ತವಾದ ಸಾಲುಗಳನ್ನೆ ಉದ್ಗರಿಸುತ್ತಿರುವುದು ಅವರನ್ನು ಇನ್ನಷ್ಟು ಕೆರಳಿಸಿತು.
ಇದೆ ಸಮಯದಲ್ಲಿ ಅಬಿಸೀನಿಯಕ್ಕೆ ವಲಸೆ ಹೋಗಿದ್ದವರು ಮೆಕ್ಕಾದ ಖುರೈಷಿಗಳು ಮಹಮದನ ನೂತನ ಧರ್ಮಕ್ಕೆ ಮತಾಂತರಿತವಾಗಿದ್ದಾರೆ ಎಂಬ ಗಾಳಿಸುದ್ದಿ ಕೇಳಿ ಹಿಂದಿರುಗಲಾರಂಭಿಸಿದ್ದರು.ಆದರೆ ಇಲ್ಲಿನ ವ್ಯತಿರಿಕ್ತ ಸ್ಥಿತಿ ಕಂಡು ಅವರಿಗೆ ಆಘಾತವಾಯಿತು.ಮಹಮದ್ ಖುರೈಶಿಗಳಿಗೆ ಪ್ರಕಟಿಸಿದ್ದ ರಿಯಾಯತಿಗಳನ್ನು ಹಿಂತೆಗೆದುಕೊಂಡಿದ್ದ.ಪುನಃಪುನಃ ವಿಗ್ರಹಾರಾಧನೆಗಳನ್ನು ಕಟುವಾಗಿ ಖಂಡಿಸಿ ಏಕದೇವತಾರಾಧನೆಗೆ ಕರೆಕೊಡಲಾರಂಭಿಸಿದ್ದ.ಖುರೈಷಿಗಳ ದೇವತೆಗಳನ್ನೆಲ್ಲ ಆತ ನಿರಾಕರಿಸಿದ್ದ.ತಮ್ಮ ಬಂಧು-ಮಿತ್ರರ ಸಹಕಾರಗಳಿಂದ ಈ ವಲಸೆಗಾರರು ಮರಳಿ ತಮ್ಮ ಹಳೆ ನಿವಾಸಗಳಲ್ಲಿ ನೆಲೆಸಲು ಪ್ರಯತ್ನಿಸಿದರೂ ಅದು ಹೆಚ್ಚುಕಾಲ ಸಾಗಲಿಲ್ಲ.ಮೊದಲಿಗಿಂತ ದುಪ್ಪಟ್ಟು ಹಿಂಸೆ,ಕಿರುಕುಳಗಳಿಂದ ಕೂಡಿದ ಖುರೈಷಿಗಳ ವೈರವನ್ನವರು ಇದೀಗ ಎದುರಿಸಬೇಕಾಯಿತು.ಈ ಪೀಡೆಯಿಂದ ಪಾರಾಗಲು ಮಹಮದ್ ಅವರನ್ನೆಲ್ಲ ಮರಳಿ ಅಬಿಸೀನಿಯಕ್ಕೆ ವಲಸೆ ಹೋಗುವಂತೆ ಪುಸಲಾಯಿಸಿ ಅದರಲ್ಲಿ ಯಶಸ್ವಿಯೂ ಆದ.ಈ ಬಾರಿ ನವ ಮತಾಂತರಿತ ಸುಮಾರು ನೂರು ಮಂದಿ ಹೀಗೆ ವಲಸೆಹೋದರು ಎನ್ನುತ್ತಾನೆ ಇತಿಹಾಸ ತಜ್ಞ ಕ್ಯಾರೆನ್ ಅರ್ಮೆಸ್ಟ್ರಾಂಗ್.
(ಇನ್ನೂ ಇದೆ....)
ಸ್ವರ್ಗ ಮತ್ತು ನರಕಗಳ ವಿವರಣೆಗಳೊಂದಿಗೆ ಮಹಮದ್ ನಿರ್ಣಾಯಕ ದಿನದಂದು ಕಾದಿರುವ ಭಯಂಕರ ತೀರ್ಪಿನ ಬಗ್ಗೆಯೂ ಅರಬರಿಗೆ ದಿಗಿಲು ಹುಟ್ಟಿಸುವ ಸಂದೇಶಗಳನ್ನು ಸಾರಿದ.ಅವನ ಈ ಸಂದೇಶವನ್ನು ಆಲಿಸಿದ ಮೆಕ್ಕಾದ ಮಂದಿ ಸಂದೇಹಗೊಂಡು ಆ ಅಂತಿಮ ದಿನದ ಗಡುವು ಎಂದು ಸಮೀಪಿಸುವುದು ಯಾವಾಗ? ಎಂದು ಪ್ರಶ್ನಿಸಿದಾಗ 'ಅದು ತನಗೆ ಗೊತ್ತಿಲ್ಲ ದೇವರಿಗೆ ಮಾತ್ರ ಗೊತ್ತು!' ಎಂದು ಸುರಾ 27/65 ರ ಮೂಲಕ ಉತ್ತರಿಸಿದ.ಹೀಗೆ ಖುರಾನಿನಲ್ಲಿ ಕಂಡು ಬರುವ ಅನೇಕ ಸಾಲುಗಳ ಬಗ್ಗೆ ಮೆಕ್ಕಾದ ಮಂದಿಯ ಮನದಲ್ಲಿ ಎದ್ದ ಅಪನಂಬಿಕೆ,ಅಸಹನೆಗಳ ಬಗ್ಗೆ ಹಾಗೂ ಸತ್ತು ಮಣ್ಣಾದವರು ಪುನರುತ್ಥಾನದ ದಿನದಂದು ಮತ್ತೆ ಎದ್ದು ಬರುತ್ತಾರೆ ಎಂಬೆಲ್ಲ ಹೇಳಿಕೆಗಳ ವಿರುದ್ಧ ಎದ್ದ ಅವರ ಅಸಹನೆಗಳನ್ನು ತನ್ನದೆ ಆದ ವಾದ,ತರ್ಕ-ವಿಮರ್ಶೆಗಳ ಮೂಲಕ ತೊಡೆದು ಹಾಕಲು ಮಹಮದ್ ಯತ್ನಿಸಿದ.ಸುರಾ 67/24-27 29/1 69ಗಳ ಮೂಲಕ ಕ್ರಮೇಣ ಈ ಬಗ್ಗೆ ಉದ್ರೇಕಕಾರಿಯಾಗಿ ಪ್ರಚೋದನೆ ನೀಡುತ್ತ ತನ್ನನ್ನು ಪ್ರವಾದಿಯೆಂದು ನಂಬಿದ ಮತಬಾಂಧವರನ್ನು ಬಡಿದೆಬ್ಬಿ ಅವರು ಕಾರ್ಯಪ್ರವರ್ತರಾಗುವಂತೆ ಮಾಡಲು ಆತ ಆರಂಭಿಸಿದ.ಇತಿಹಾಸಕಾರ ಸಿಮೊನ್ ವೆಲ್ ಹೀಗೆ ಇನ್ನೊಬ್ಬರನ್ನು ಪ್ರಚೋದನೆಗೆ ಒಳಪಡಿಸಿ ಬಡಿದೆಬ್ಬಿಸುವುದು ಒಂದು ಕಲೆ ಎನ್ನುತ್ತಾನೆ.ಮೆಕ್ಕಾದ ಖುರೈಷಿಗಳ ಕೊನೆಗಾಣದ ಮೊದಲಿಕೆ,ಅಪಹಾಸ್ಯ ಹಾಗು ಕುಚೋದ್ಯದ ನುಡಿಗಳಿಗೂ ಮಹಮದ್ ತನ್ನ ಸುರಾಗಳ ಮೂಲಕವೆ ಇದಿರೇಟು ನೀಡಲಾರಂಭಿಸಿದ.ಸುರಾ 5/57 62,29/1,69ಗಳಲ್ಲಿ ಇವನ್ನು ಧಾರಾಳವಾಗಿ ಗಮನಿಸಬಹುದು.
ವಿರೋಧಿಗಳ ಈ ಎಲ್ಲಾ ಬಿರುನುಡಿಗಳಿಗೆ ಸಹನೆ ಶಾಂತಿಯಿಂದಿರುವಂತೆ ಮಹಮದ್ ಭೋದಿಸಿದ.ನೆಜ್ರಾನ್ ಎಂಬಲ್ಲಿ ಯಹೂದಿಗಳು ಕ್ರೈಸ್ತರನ್ನು ಹಿಂದೆ ಬೆಂಕಿಯ ಹೊಂಡದಲ್ಲಿ ಹಾಕಿ ಜೀವಂತ ಸುಟ್ಟ ಸಂಗತಿಯನ್ನ ಉದಾಹರಿಸುತ್ತಾ ತನ್ನ ಹಿತವಚನಗಳನ್ನು ಅವರು ಒಪ್ಪುವಂತೆ ಸುರಾ 85/1-22 ರಲ್ಲಿ ಸಾರಿದ.'ಇಸ್ಲಾಂ' ಎಂದರೆ ದೇವರಿಗೆ ತನ್ನನ್ನು ತಾನೇ ಸಂಪೂರ್ಣ ಅರ್ಪಿಸಿಕೊಳ್ಳುವುದು ಹಾಗೆ ಮಾಡುವವನೆ ಮತಶ್ರದ್ಧೆಯುಳ್ಳವನು ಅಥವಾ 'ಮುಸ್ಲೀಂ' ಎಂದ.ಯಾರು ತಾನು ಸಾರುವ ಏಕದೈವವಾಣಿಯನ್ನು ಆಲೈಸಿಯೂ ಬಹುದೇವರನ್ನೂ ಗುಟ್ಟಾಗಿ ಆರಾಧಿಸುವರೊ ಅವರೆ 'ಮುಶಿಕೀನ್'ಗಳೆನ್ನಿಸಿಕೊಳ್ಳುವರು.ತನ್ನ ದೈವವಾಣಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಎಲ್ಲರೂ 'ಕಾಫಿರಿನ್'ಗಳೆಂದು ಕರೆಸಿಕೊಳ್ಳುತ್ತಾರೆ.ಈ ಕಾಫಿರಿನ್ ಹಾಗೂ ಮುಶಿಕೀನ್'ಗಳು ಯಾವ ಹಂತದಲ್ಲೂ ತನಗೆ ವಿರೋಧಿಗಳೆ ಎಂದಾತ ಸಾರಿದ.ಈ ಬಗ್ಗೆ ಪ್ರಸಿದ್ಧ ಇತಿಹಾಸಕಾರರಾದ ಅಲ್ ವಾಕಿಡಿ ಹಾಗೂ ಅಲ್ ತಬರಿ ಜೋಡಿ ಹೀಗೊಂದು ಕಥಾರೂಪದ ವಿವರಣೆ ನೀಡುತ್ತಾರೆ.ಅದರಂತೆ ಕ್ರಿಸ್ತಶಕ 615ರ ಸುಮಾರಿಗೆ ತನ್ನ ಬುಡಕಟ್ಟಿನವರ ಆತ್ಮೋದ್ಧಾರ ಮಾಡುವ ಸಲುವಾಗಿ ತಾನು ಆರಂಭಿಸಿದ ನೂತನ ಧರ್ಮದಲ್ಲಿ ಖುರೈಷಿಗಳ ಪ್ರಬಲ ವಿರೋಧದ ಕಾರಣ ಅಂದುಕೊಂಡ ಸಫಲತೆ ಕಂಡುಬಾರದೆ ಇದ್ದುದು,ತನ್ನೆಲ್ಲಾ ಪರಿಶ್ರಮದ ಹೊರತಾಗಿಯೂ ತಾನು ಕೇವಲ ನಲವತ್ತರಿಂದ ಐವತ್ತು ಮಂದಿಯ ಮನವೊಲಿಸಲು ಮಾತ್ರ ಶಕ್ತನಾಗಿದ್ದು,ಅದೆ ಪ್ರಯತ್ನದಲ್ಲಿ ಇಡಿ ಖುರೈಷಿಕುಲವನ್ನೆ ಎದುರು ಹಾಕಿಕೊಂಡದ್ದು ಇವೆಲ್ಲ ಮಹಮದನ ಮನಸ್ಸನ್ನು ತೀವೃವಾಗಿ ಘಾಸಿಗೊಳಿಸಿತು.ಇದೆ ಕಾರಣಕ್ಕೆ ಆತನ ಆತ್ಮ ನಲುಗಿ,ಭಾವನೆಗಳಿಗೆ ಬಲವಾದ ಪೆಟ್ಟುಬಿದ್ದಿತ್ತು.ಹಿಂದೊಮ್ಮೆ ಪ್ರೀತಿಪಾತ್ರರಾಗಿದ್ದ ಖುರೈಷಿ ಮುಖಂಡರ ವೈರತ್ವ ಅವನ ಹೃದಯ ಹಿಂಡಿತ್ತು.ದುಃಖಪೀಡಿತನಾದ ಮಹಮದ್ ಹೀಗಾಗಿ ಅವರೊಂದಿಗೆ ಸಂಧಾನಕ್ಕಾಗಿ ಹಾತೊರೆದ.
ಒಂದು ಮುಂಜಾನೆ ಕಾಬಾದ ಬಳಿ ಖುರೈಷಿ ಪ್ರಮುಖರು ಕೂತು ಅದೇನನ್ನೂ ಚರ್ಚಿಸುತ್ತಿರುವಾಗ ಮಹಮದ್ ಕೂಡ ಅಲ್ಲಿಗೆ ಬಂದು ಅವರ ಸನಿಹದಲ್ಲೆ ಕುಳಿತುಕೊಂಡ.ಅವನು ಅಲ್ಲಿಯೆ ಆಗಷ್ಟೆ ತನಗೆ ಪ್ರೇರಣೆಯಾದ ಹೊಸ ಸುರಾದ ಸಾಲುಗಳನ್ನ ಪಠಿಸತೊಡಗಿದ.ಈ ರೀತಿ ಅವನ ಮಣಮಣ ಸಾಗಿದ್ದಾಗ ಒಂದು ದೆವ್ವ ಅವನ ಹೃದಯವನ್ನು ಹೊಕ್ಕಿತು ಎನ್ನುತ್ತಾರೆ ಅವರಿಬ್ಬರೂ.ಆ ದೆವ್ವ ಅದಾಗಲೆ ಅವನ ಮನದಲ್ಲಿ ಮನೆ ಮಾಡಿದ್ದ ಹೊಂದಾಣಿಕೆಯ ಸೂತ್ರಗಳೂ ಸುರಾದ ಮೂಲಕವೆ ಹೊರ ಬರುವಂತೆ ಮಾಡಿತು.ಅಲ್-ಲಾಟ್ ಸುರಾ 53/52ರ ಪ್ರಕಾರ ಹೆಣ್ಣುದೇವತೆಯರನ್ನೂ ಏಕದೈವದೊಂದಿಗೆ ಆರಾಧಿಸುವಂತೆ ಹೇಳಿ ಬಹುದೇವತಾರಾಧನೆಗಳ ಬಗ್ಗೆ ಅನುಕಂಪದ ನುಡಿಯನ್ನೆ ಹೊರ ಹೊಮ್ಮಿಸಿತಂತೆ.ಉಜ್ವಲ ಸ್ತ್ರೀಯರ ಮಧ್ಯಸ್ಥಿಕೆಯ ಕುರಿತ ಒಂದು ಸಾಲೂ ಈ ಸುರಾದಲ್ಲಿ ಸೇರಿತ್ತು.ಮಹಮದನ ಈ ಹೊಸ ವಿಮರ್ಶಾವಿಧಿ ಆಲಿಸಿದ ಖುರೈಶಿಗಳಿಗೆ ನಿಜಕ್ಕೂ ಆಶ್ಚರ್ಯವಾಯಿತು.ಮಹಮದ್ ತಮ್ಮ ದೇವದೇವತೆಗಳ ಗುಣಗಳನ್ನು ಕೀರ್ತಿಸುವುದನ್ನು ಅವರಂತೂ ನಿರೀಕ್ಷಿಸಿರಲಿಲ್ಲ.ಅದನ್ನು ಕೇಳಿದ್ದೆ ಅಲ್ಲಿಯೆ ಅವರು ನೆಲಕ್ಕೆ ಬಾಗಿ ದೇವರಿಗೆ ಸ್ವಸ್ತಿ ಸಲ್ಲಿಸಿದರು.ಆಗ ಒಕ್ಕೊರಲಿನಿಂದ ಅವರೆಲ್ಲರೂ "ಜನ್ಮವನ್ನು ನೀಡಿ ಅದನ್ನು ಹಿಂತಿರುಗಿ ತೆಗೆದುಕೊಳ್ಳುವವನು ದೇವನೊಬ್ಬನೆ.ಅವನೆ ಸೃಷ್ಟಿಕರ್ತ-ಸಂರಕ್ಷಕ ಎಂಬುದೀಗ ನಮಗೆ ಅರಿವಾಗಿದೆ.ನಮ್ಮ ಸ್ತ್ರೀದೇವತೆಗಳ ಬಗ್ಗೆ ಹೇಳುವುದಾದರೆ ಅವರು ದೇವರಬಳಿ ನಮ್ಮ ಒಳಿತಿಗಾಗಿ ಬಿನ್ನಹ ಮಾಡುತ್ತಾರೆ.ನೀನು ಅವರನ್ನು ಒಪ್ಪಿಕೊಂಡಿರುವುದರಿಂದ ನಾವೂ ನಿನ್ನನ್ನು ಬೆಂಬಲಿಸಲು ಇಚ್ಚಿಸುತ್ತೇವೆ" ಎಂದರು .ಇದು ಸುರಾ 53/19-20 ರಲ್ಲಿ ನಿರೂಪಿತವಾಗಿದೆ.
ಆದರೆ ಅವರಿಂದ ಇನ್ನೇನನ್ನೋ ನಿರೀಕ್ಷಿಸಿದ್ದ ಮಹಮದನಿಗೆ ಅವರ ಈ ಮಾತುಗಳು ತೃಪ್ತಿಹುಟ್ಟಿಸಲಿಲ್ಲ ಹೀಗಾಗಿ ಖಿನ್ನನಾಗಿ ಆತ ಮನೆಗೆ ಮರಳಿದ.ಅಂದೆ ಸಂಜೆ ಯಕ್ಷ ಗೇಬ್ರಿಯಲ್'ನ ಪುನರ್'ದರ್ಶನ ಅವನಿಗೆ ದೊರೆಯಿತು.ಅವತ್ತು ದೊರಕಿದ ದೈವವಾಣಿಯನ್ನು ಮಹಮದ್ ಅವನಿಗೆ ಅರುಹಿದ,ಅದನ್ನು ಕೇಳಿದ್ದೆ ಆತಂಕಿತನಾದ ಯಕ್ಷ "ನಾನು ಹೇಳದೆ ಇರುವ ಹಾಡುಹರಟೆಗಳನ್ನೆಲ್ಲ ಜನರ ಮುಂದಿರಿಸಿದ್ದೆಯಲ್ಲ! ನಾನು ಹೇಳಿದ್ದೇನು? ನೀನು ಮಾಡಿದ್ದೇನು?" ಎಂದಾಗ ಮಹಮದ್ ಸಂಕಟದಿಂದ ನರಳಿದ.ದೇವರದಲ್ಲದ ಆ ಸಾಲುಗಳನ್ನ ತಾನು ಬಿತ್ತರಿಸಿರುವುದಕ್ಕೆ ಏನು ಕೇಡಾಗುವುದೊ ಎಂದಾತ ಹೆದರಿದ.ಆದರೆ ಗೇಬ್ರಿಯಲ್ ಆತನನ್ನು ಸಂತೈಸಿದ.ಅವನ ಭಯವನ್ನು ನಿವಾರಿಸುತ್ತಾ ಆ ಅಪ್ರಾಮಾಣಿಕ ಸುರಾಗಳನ್ನೆಲ್ಲ ಆತ ಕೂಡಲೆ ರದ್ದು ಪಡಿಸಿದ! ಮತ್ತು ಹೊಸತಾಗಿ ಸುರಾ 24/52, 35/14;39,17/26ಗಳ ಮೂಲಕ ಈಗಿರುವಂತೆ ಹೊಸ ಪದ್ಯಗಳನ್ನು ಸೃಷ್ಟಿಸಿದ.ಈ ಹೊಸ ಸಾಲುಗಳನ್ನು ಕೇಳಿದ್ದೆ ತಡ ಖುರೈಷಿಗಳ ದುಗುಡ ಮತ್ತಷ್ಟು ಹೆಚ್ಚಿತು.ನೆನ್ನೆಯಷ್ಟೆ ತಮ್ಮ ದೇವಾನುದೇವತೆಗಳ ಬಗ್ಗೆ ಸಹಾನುಭೂತಿಯ ಒಳ್ಳೆಯ ನುಡಿಗಳನ್ನಾಡಿದ್ದ ಮಹಮದ್ ಈಗ ಅದಕ್ಕೆ ಸಂಪೂರ್ಣ ವ್ಯತಿರಿಕ್ತವಾದ ಸಾಲುಗಳನ್ನೆ ಉದ್ಗರಿಸುತ್ತಿರುವುದು ಅವರನ್ನು ಇನ್ನಷ್ಟು ಕೆರಳಿಸಿತು.
ಇದೆ ಸಮಯದಲ್ಲಿ ಅಬಿಸೀನಿಯಕ್ಕೆ ವಲಸೆ ಹೋಗಿದ್ದವರು ಮೆಕ್ಕಾದ ಖುರೈಷಿಗಳು ಮಹಮದನ ನೂತನ ಧರ್ಮಕ್ಕೆ ಮತಾಂತರಿತವಾಗಿದ್ದಾರೆ ಎಂಬ ಗಾಳಿಸುದ್ದಿ ಕೇಳಿ ಹಿಂದಿರುಗಲಾರಂಭಿಸಿದ್ದರು.ಆದರೆ ಇಲ್ಲಿನ ವ್ಯತಿರಿಕ್ತ ಸ್ಥಿತಿ ಕಂಡು ಅವರಿಗೆ ಆಘಾತವಾಯಿತು.ಮಹಮದ್ ಖುರೈಶಿಗಳಿಗೆ ಪ್ರಕಟಿಸಿದ್ದ ರಿಯಾಯತಿಗಳನ್ನು ಹಿಂತೆಗೆದುಕೊಂಡಿದ್ದ.ಪುನಃಪುನಃ ವಿಗ್ರಹಾರಾಧನೆಗಳನ್ನು ಕಟುವಾಗಿ ಖಂಡಿಸಿ ಏಕದೇವತಾರಾಧನೆಗೆ ಕರೆಕೊಡಲಾರಂಭಿಸಿದ್ದ.ಖುರೈಷಿಗಳ ದೇವತೆಗಳನ್ನೆಲ್ಲ ಆತ ನಿರಾಕರಿಸಿದ್ದ.ತಮ್ಮ ಬಂಧು-ಮಿತ್ರರ ಸಹಕಾರಗಳಿಂದ ಈ ವಲಸೆಗಾರರು ಮರಳಿ ತಮ್ಮ ಹಳೆ ನಿವಾಸಗಳಲ್ಲಿ ನೆಲೆಸಲು ಪ್ರಯತ್ನಿಸಿದರೂ ಅದು ಹೆಚ್ಚುಕಾಲ ಸಾಗಲಿಲ್ಲ.ಮೊದಲಿಗಿಂತ ದುಪ್ಪಟ್ಟು ಹಿಂಸೆ,ಕಿರುಕುಳಗಳಿಂದ ಕೂಡಿದ ಖುರೈಷಿಗಳ ವೈರವನ್ನವರು ಇದೀಗ ಎದುರಿಸಬೇಕಾಯಿತು.ಈ ಪೀಡೆಯಿಂದ ಪಾರಾಗಲು ಮಹಮದ್ ಅವರನ್ನೆಲ್ಲ ಮರಳಿ ಅಬಿಸೀನಿಯಕ್ಕೆ ವಲಸೆ ಹೋಗುವಂತೆ ಪುಸಲಾಯಿಸಿ ಅದರಲ್ಲಿ ಯಶಸ್ವಿಯೂ ಆದ.ಈ ಬಾರಿ ನವ ಮತಾಂತರಿತ ಸುಮಾರು ನೂರು ಮಂದಿ ಹೀಗೆ ವಲಸೆಹೋದರು ಎನ್ನುತ್ತಾನೆ ಇತಿಹಾಸ ತಜ್ಞ ಕ್ಯಾರೆನ್ ಅರ್ಮೆಸ್ಟ್ರಾಂಗ್.
(ಇನ್ನೂ ಇದೆ....)
21 October 2011
ವಲಿ....(ಭಾಗ-5)
ಮಹಮದನ ನೂತನ ಧರ್ಮದ ವಿರುದ್ಧ ನಡೆದ ಅನೇಕ ಆರಂಭಿಕ ದ್ವೇಶಪೂರಿತ ಹೋರಾಟಗಳು ಇತಿಹಾಸಕಾರರಿಂದ ದಾಖಲಿಸಲ್ಪಟ್ಟಿವೆ.ಅವುಗಳಲ್ಲಿ ಪ್ರಸಿದ್ಧಿ ಪಡೆದ ಕಥೆಯೊಂದು ಹೀಗಿದೆ....'ಮುಸಬ್ ಇಬ್ನ ಒಮೈರ್' ಎಂಬ ಪ್ರಸಿದ್ಧ ಖುರೈಷಿ ಬುಡಕಟ್ಟಿನ ಯುವವ್ಯಕ್ತಿಯೊಬ್ಬ ಅಲ್ ಅಕ್ರಮನ ಮನೆಯಲ್ಲಿ ನಡೆಯುತ್ತಿದ್ದ ಮಹಮದನ ಮತಭೋದನೆಯಿಂದ ಪ್ರಭಾವಿತನಾಗಿ ಅವನ ಧರ್ಮಕ್ಕೆ ಮತಾಂತರಗೊಂಡ.ಅವನ ಈ ಉದ್ಧಟ ನಡುವಳಿಕೆಯಿಂದ ಕುಪಿತಗೊಂಡ ಅವನ ಹತ್ತಿರದ ಸಂಬಂಧಿಕರು ಅವನ ವಿರುದ್ಧ ಬಹಿಷ್ಕಾರ ಹಾಕಿದರು,ಅದರಲ್ಲೂ ಈ ಬಗ್ಗೆ ವಿಪರೀತ ನೊಂದುಕೊಂಡ ಆತನ ತಾಯಿ ತನ್ನ ನಿಲುವಿಗೆ ವಿರುದ್ಧವಾಗಿ ಮಗ ಮತಾಂತರಗೊಂಡದ್ದರಿಂದ ಮಗ ಹಾಗೂ ಮಹಮದನ ಮೇಲೆ ಕೆರಳಿ ಕೆಂಡವಾದಳು.ಅವಳ ಈ ಕೋಪ ಮಗನನ್ನು ಗೃಹಬಂಧನದಲ್ಲಿರುವ ಮೂಲಕ ಪರ್ಯಾವಸನಗೊಂಡಿತು.ಆದ್ರೆ ಆತ ಅದು ಹೇಗೊ ಅಲ್ಲಿಂದ ತಪ್ಪಿಸಿಕೊಂಡು ಹೋಗಿ ಅಬಿಸೀನಿಯಕ್ಕೆ ಓಡಿಹೋದ.ಅಲ್ಲಿಂದ ಕೆಲಕಾಲದ ಬಳಿಕ ಆತ ಮೆಕ್ಕಾಗೆ ಹಿಂದಿರುಗಿದಾಗ ಆತನ ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ತೀರಾ ಶೋಚನೀಯವಾಗಿತ್ತು.ಆದರೆ ಮಗನ ಬಗ್ಗೆ ಕಠಿಣ ನಿಲುವು ತೆಳೆದಿದ್ದ ತಾಯಿ ಆತನನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲಿಲ್ಲ,ಹೀಗಾಗಿ ವಿಧಿಯಿಲ್ಲದೆ ಆತ ಕ್ಯಾರವಾನ್ ಒಂದರ ಹಿಂದೆ ಅಲೆಮಾರಿಯಾಗಿ ಎತ್ತಲೊ ಹೋಗಬೇಕಾಯಿತು.ಇದಾಗಿ ಎರಡುವರ್ಷಗಳ ನಂತರ ಆತ ಮರಳಿ ಮೆಕ್ಕಾಕ್ಕೆ ಬಂದ.ಆಗಲೂ ಅವನ ಪರಿಸ್ಥಿತಿ ಹೆಚ್ಚು ಸುಧಾರಿಸಿರಲಿಲ್ಲ.ಈ ಸಾರಿ ಆತನ ಕಡೆಗೆ ಕೊಂಚ ಮೃದುವಾಗಿದ್ದ ಆತನ ತಾಯಿ ಹಳೆಯ ಮಮತೆಯಿಂದ "ಈಗಲೂ ನೀನು ಸ್ವ-ಮತ ಭ್ರಷ್ಟನಾಗಿದ್ದೀಯ?" ಎಂದು ಪ್ರಶ್ನಿಸಿದಳು.ಆತ "ನಾನು ಸತ್ಯಧರ್ಮವಾದ ಇಸ್ಲಾಮನ್ನು ಹಾಗೂ ಪ್ರವಾದಿಯನ್ನು ಹಿಂಬಾಲಿಸುತ್ತಿದ್ದೇನೆ!" ಎಂದು ಉತ್ತರಿಸಿದ."ಬಾಳಿನ ಉದ್ದಕ್ಕೂ ಹೀಗೆಯೆ ಶೋಚನೀಯ ಸ್ಥಿತಿಯಲ್ಲೆ ಕಾಲ ಹಾಕಬೇಕೆನ್ನುವುದೆ ನಿನ್ನ ಅಂತಿಮ ನಿರ್ಧಾರವ?" ಎಂದಾಕೆ ಮರಳಿ ಪ್ರಶ್ನಿಸಿದಳು.ತನ್ನನ್ನು ಈಕೆ ಮತ್ತೆ ಗೃಹ ಬಂಧನಕ್ಕೆ ಒಳಪಡಿಸಬಹುದು ಎಂಬ ಆತಂಕಕ್ಕೆ ಒಳಗಾದ ಆತ "ಏನು ಒಬ್ಬ ಶ್ರದ್ಧಾವಂತ ಮುಸ್ಲೀಮನನ್ನು ಧರ್ಮ ತ್ಯಜಿಸಲು ನೀನು ಆಮಿಷ ಒಡ್ಡುತ್ತಿದ್ದೀಯ! ಹಾಗೊಂದು ವೇಳೆ ನನ್ನನ್ನು ಇಚ್ಛೆಗೆ ವಿರುದ್ಧವಾಗಿ ಬಂಧನಕ್ಕೆ ಒಳಪಡಿಸಿದೆಯಾದಲ್ಲಿ ನಾನು ನಿನ್ನನ್ನು ಕೊಲ್ಲಲೂ ಹೇಸುವುದಿಲ್ಲ?!" ಎಂದು ಆವೇಶದಿಂದ ಕೂಗಿದ.ತಾಯಿಯೂ ಕನಲಿ "ತೊಲಗು! ಹಾಗಿದ್ದಲ್ಲಿ ಕ್ಷಣ ಮಾತ್ರವೂ ನನ್ನೆದುರು ನಿಲ್ಲಬೇಡ!!" ಎಂದು ಕೂಗಿದಳು.ಆತ ದುಃಖತಪ್ತನಾಗಿ " ಅಮ್ಮಾ,ನಿನಗೆ ಕರುಣಾಮೃತವಾದ ಉಪದೇಶ ನೀಡುತ್ತೇನೆ ಕೇಳು.ದೇವರೊಬ್ಬನೇ ಮಹಮದ್ ಆತನ ಸೇವಕ ಹಾಗೂ ಪ್ರವಾದಿ ಎನ್ನುವುದನ್ನ ನುಡಿದು ನರಕದಿಂದ ಪಾರಾಗು" ಎಂದು ನುಡಿದಾಗ ಆಕೆಗೆ ಕೋಪ ಕಟ್ಟೆಯೊಡೆದು " ನಿನ್ನ ಸೈತಾನಧರ್ಮಕ್ಕೆ ಸೇರುವ ಬೆಪ್ಪಳಾಗಲಾರೆ! ತೊಲಗು ಇಲ್ಲಿಂದ, ಇಂದಿಗೆ ನೀ ನನ್ನ ಪಾಲಿಗೆ ಸತ್ತೆ" ಎಂದು ಚೀರಿದಳು.
ಮಹಮದ್ ಆರಂಭದಲ್ಲಿ ಆರ್ಥಿಕವಾಗಿ ಹಿಂದುಳಿದಿದ್ದ ಸಮಾಜದ ಕೆಳವರ್ಗದ ಮಂದಿಯನ್ನ ತನ್ನ ಪ್ರಭಾವಲಯದೊಳಗೆ ಮೆಕ್ಕಾದ ಸುತ್ತಮುತ್ತ ಸೆಳೆದುಕೊಳ್ಳುವ ಪ್ರಯತ್ನಮಾಡಿದ.ಅನಂತರ ಖುರೈಶಿಗಳಲ್ಲಿ ಪ್ರತಿಷ್ಠಿತವಾದವರತ್ತ ತನ್ನ ಮೋಹಜಾಲ ಬೀಸಲು ಆರಂಭಿಸಿದ.ಹೀಗೊಮ್ಮೆ ಖುರೈಶಿಗಳಲ್ಲೇ ಉನ್ನತ ವರ್ಗದವನಾಗಿದ್ದ ಅಲ್ ವಾಲಿಬನೊಡನೆ ಧಾರ್ಮಿಕ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗ ಅಬ್ದುಲ್ಲಾ ಇಬ್ನ ಉಮ್ಜ್ ಮಕ್ತೂಮ್ ಎಂಬ ಅಂಧ ವ್ಯಕ್ತಿಯೊಬ್ಬ ನಡುವೆ ಬಾಯಿಹಾಕಿ ತನಗೂ ಖುರಾನನ್ನು ತಿಳಿಹೇಳಬೇಕೆಂದು ಕೋರಿದ.ಆದರೆ ಆ ಕ್ಷಣ ಕೋಪಕ್ಕೆ ತುತ್ತಾದ ಮಹಮದ್ ಅವನ್ನು ಕಡೆಗಣಿಸಿ ಗಡುಸಾಗಿ ಮಾರುತ್ತರವನ್ನಿತ್ತ.ಆದರೆ ಕೆಲಹೊತ್ತಿನ ನಂತರ ತನ್ನ ಈ ಹೀನ ನಡುವಳಿಕೆಗೆ ಸ್ವತಃ ನಾಚಿಕೆಪಟ್ಟುಕೊಂಡು 'ಯಾವ ದೇವರು ಒಬ್ಬ ಕುರುಡನನ್ನು ಸೃಷ್ಠಿಸಿದ್ದಾನೊ ಅವನನ್ನು ನಾನು ಕಡೆಗಣಿಸಿದ್ದು ತಪ್ಪು,ತೋರಿಕೆಯ ಸಿರಿವಂತನ ಎದುರು ಅವನನ್ನು ಅನಾದರಿಸಬಾರದಿತ್ತು ಎಂದು ಗೋಳಾಡಿದಾಗ ಸಂತೈಸುವ ದೈವವಾಣಿ ಅವನಿಂದಲೆ ಹೊರಬಂತು.ಹಾಗೆ ಹೊರ ಹೊಮ್ಮಿದ್ದೆ ಸುರಾ 80/1-11 ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಈ ಘಟನೆಯ ಮುಖಾಂತರ ದೀನ ದಲಿತರ ಬಗ್ಗೆ ಉದಾತ್ತ ಭಾವನೆಯೊಂದು ಮಹಮದನ ಹೃದಯವನ್ನು ಹೊಕ್ಕು ಪ್ರಕಾಶಿಸಿತು ಎನ್ನಬಹುದು.
ಇದೆ ಸಮಯದಲ್ಲಿ ಆತನ ಮತಪ್ರಚಾರದ ದಿಕ್ಕು ಅರಬೇತರರಾದ ಗ್ರೀಕ್ ಸಮುದಾಯಕ್ಕೆ ಸೇರಿದ ಕ್ರೈಸ್ತರ ಕಡೆಗೆ ತಿರುಗಿತು.ಗುಲಾಮನಾಗಿ ಅರಬ್ಬಿ ಬೆದಾವಿನ್ ಬುಡಕಟ್ಟಿಗೆ ಮಾರಲ್ಪಟ್ಟಿದ್ದ ಸಿನಾನನ ಮಗ ಸಾಹೇಬ್ ಎಂಬ ಗ್ರೀಕನೊಬ್ಬ ಈ ಹೊತ್ತಿಗೆ ಇಸ್ಲಾಂ ಸ್ವೀಕರಿಸಿದ.ಮೆಕ್ಕಾದ ಪ್ರಮುಖ ವ್ಯಕ್ತಿಯಾಗಿದ್ದ ಇಬ್ನ ಜುಡಾನನ ಗುಲಾಮನಾಗಿದ್ದ ಅಪ್ಪಟ ಬಿಳಿಯ ಜನಾಂಗದ ಇವನಿಂದ ಕ್ರೈಸ್ತಧರ್ಮದ ಹಲವು ಒಳಮರ್ಮಗಳನ್ನು ಮಹಮದ್ ಅರಿತು ಬಳಸಿಕೊಳ್ಳಲು ಸಾಧ್ಯವಾಯಿತು,ಅದನ್ನೆ ಸುರಾ 4/164-183ರಲ್ಲಿ ಕಾಣಬಹುದು ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಕುರಾನಿನಲ್ಲಿ ಒಟ್ಟು ಇಪ್ಪತೈದು ಪ್ರವಾದಿಗಳ ಹೆಸರು ಪ್ರಸ್ತಾಪವಾಗಿದೆ.ಅವರಲ್ಲಿ ಮಹಮದ್,ನೂರ್.ಇಬ್ರಾಹಿಮ್,ಜೀಸಸ್ ಹಾಗೂ ಮೂಸಾ ಈ ಐವರಿಗೆ ಪ್ರಬಲ ಆತ್ಮಸ್ಥೈರ್ಯವಿರುತ್ತದೆ ಎನ್ನಲಾಗಿದೆ.
ದಿನಕಳೆದಂತೆ ಹೊಸತಾಗಿ ಮತಾಂತರಿತವಾಗಿದ್ದ ದೀನ,ದಲಿತ ಹಾಗೂ ಗುಲಾಮರ ಮೇಲೆ ಧರ್ಮನಿಷ್ಠ ಖುರೈಷಿಗಳ ಕೆಂಗಣ್ಣು ಬಿಟ್ಟು.ಅವರನ್ನು ಹಿಡಿದು ದೈಹಿಕವಾಗಿ ಹಿಂಸಿಸುವುದು,ಸೆರೆಮನೆಗೆ ತಳ್ಳುವುದು,ಹನಿನೀರನ್ನೂ ಕೊಡದೆ ಸುಡುಬಿಸಿಲಿನಲ್ಲಿ ನಿಲ್ಲಿಸಿ ವಿಧಿಯಿಲ್ಲದೆ ಮರಳಿ ಮಾತೃಧರ್ಮಕ್ಕೆ ಬರುವಂತೆ ಮಾಡುವುದು ಹೀಗೆ ಅನೇಕ ಕುಟಿಲೋಪಾಯಗಳನ್ನು ಅವರು ಹೂಡತೊಡಗಿದರು.ಈ ಬಗೆಯ ಹಿಂಸೆ ಅನುಭವಿಸಿದವರಲ್ಲಿ ಒಬ್ಬನಾಗಿದ್ದ ಬಿಲಾಲ್ ಎಂಬ ಗುಲಾಮ ಮಾತ್ರ ಸುತಾರಾಂ ಅದಕ್ಕೆ ಒಪ್ಪದೆ 'ಅಹಾದ್ ಅಹಾದ್' ಅಂದರೆ ಅರಬ್ಬಿಯಲ್ಲಿ 'ದೇವರೊಬ್ಬನೆ...ಒಬ್ಬನೇ ದೇವರು' ಎಂದು ಕಷ್ಟದಲ್ಲಿದ್ದರೂ ಜಪಿಸಹತ್ತಿದ.ಅವನ ಬಾಯಿಯಿಂದ ಹೊರಬರುತ್ತಿದ್ದ ಈ ಶಬ್ದಗಳನ್ನು ಆಲಿಸಿದ ಅದೆ ದಾರಿಯಲ್ಲಿ ಸಾಗುತ್ತಿದ್ದ ಅಬು ಬಕರ್ ಈ ಶೋಷಣೆಗೆ ಮನನೊಂದು ಕರುಣೆಯಿಂದ ಅವನ ಒತ್ತೆಹಣ ಪಾವತಿಸಿ ಅವನನ್ನು ಗುಲಾಮಗಿರಿಯಿಂದ ಬಿಡಿಸಿದ.
ಇತ್ತ ಮಹಮದನ ಮತಾನುಯಾಯಿಗಳ ಪರಿಸ್ಥಿತಿ ಹೀಗೆ ಹದಗೆಡುತ್ತಿದ್ದರೆ ಅತ್ತ ಮಹಮದ್ ಮಾತ್ರ ಕ್ಷೇಮದಿಂದಿದ್ದ.ಅವನ ದೊಡ್ಡಪ್ಪ ಅಬು ತಾಲಿಬನ ರಕ್ಷಣೆಯಲ್ಲಿ ಅವನನ್ನು ಮುಟ್ಟುವ ಧೈರ್ಯ ಯಾವ ಖುರೈಶಿಗಳಿಗೂ ಹುಟ್ಟಿರಲಿಲ್ಲ.ಅಬು ತಾಲಿಬ್ ವಯಕ್ತಿಕವಾಗಿ ಇಸ್ಲಾಮಿಗೆ ಮತಾಂತರಿತನಾಗಿರದಿದ್ದರೂ ಮಹಮದನ ಪ್ರಭಾವಕ್ಕೆ ಒಳಗಾಗಿದ್ದಂತೂ ಸತ್ಯ.ಅಲ್ಲದೆ ಅನಾಥನಾಗಿದ್ದ ಮಹಮದನ ಮೇಲೆ ಆತನಿಗೆ ಪ್ರೀತಿ ವಾತ್ಸಲ್ಯ ಅಪಾರವಾಗಿದ್ದ ಕಾರಣ ಆತನ ರಕ್ಷಣೆ ತನ್ನ ಹೊಣೆಗಾರಿಕೆ ಎಂಬಂತೆ ಆತ ವರ್ತಿಸುತ್ತಿದ್ದ.ಅದೆ ರೀತಿ ಪ್ರತಿಷ್ಠಿತ ಖುರೈಶಿವರ್ಗಗಳ ಭರ್ತ್ಸನೆಗಳಿಂದ ಅಬು ಬಕರ್ ಮಹಮದನನ್ನು ಪಾರುಮಾಡುತ್ತಿದ್ದ.ಒಂದು ಕುಟುಂಬ ಮತಾಂತರಿತವಾದರೆ ಇಷ್ಟವೋ-ನಷ್ಟವೋ ಅವರ ಸಂಬಂಧಿ ಕುಟುಂಬಸ್ತರು ಒಲ್ಲದ ಮನಸ್ಸಿನಿಂದಲಾದರೂ ನೆರವು ಸಹಕಾರಗಳನ್ನು ಜಾರಿಯಲ್ಲಿ ಇಟ್ಟುಕೊಂಡೆ ಇರುತ್ತಿದ್ದರು.ಆದರೆ ಒಂದಿಡಿ ಬುಡಕಟ್ಟಿಗೆ ಬುಡಕಟ್ಟೆ ಮತಾಂತರವಾದರೆ ಮಾತ್ರ ಅದರ ವಿರೋಧಿ ಬುಡಕಟ್ಟಿನವರಿಂದ ಹಲ್ಲೆಗೆ ಒಳಗಾಗುವ ಸಂದರ್ಭಗಳೆ ಹೆಚ್ಚಾಗಿದ್ದವು.ಹೀಗಾಗಿ ಸ್ವತಃ ತಾನು ಸುರಕ್ಷಿತನಾಗಿದ್ದರೂ ತನ್ನನ್ನು ನಂಬಿ ಬಂದವರ ಸುರಕ್ಷತೆಯ ಬಗ್ಗೆ ಸಹಜವಾಗಿ ಮಹಮದ್ ಆತಂಕಿತನಾಗಿದ್ದ.ಹೀಗಾಗಿ ಅವರಲ್ಲಿ ಆನೇಕರಿಗೆ ಸುರಕ್ಷತೆಯ ದೃಷ್ಟಿಯಿಂದ ಪ್ರಾಣವುಳಿಸಿಕೊಳ್ಳಲು ಅಬಿಸೀನಿಯಾಕ್ಕೆ ವಲಸೆ ಹೋಗುವ ಸಲಹೆ ನೀಡಿದ.ಆಗಿನ ಕಾಲದ ಅಬಿಸೀನಿಯದಲ್ಲಿ ಧಾರ್ಮಿಕ ಸಹಿಷ್ಣುತೆ ನೆಲೆಸಿದ್ದುದೆ ಅದಕ್ಕೆ ಕಾರಣ.ಅಲ್ಲದೆ ಅಲ್ಲಿಗೆ ವಲಸೆ ಹೋಗುವುದು ಸಾಮಾನು ಸರಂಜಾಮುಗಳ ಸಾಗಣೆಯ ದೃಷ್ಟಿಯಿಂದ ಸುಲಭದ್ದಾಗಿತ್ತು.ಹೀಗೆ ಆತನ ಆದೇಶದಂತೆ ಆರಂಭದಲ್ಲಿ ಮಹಮದನ ಸ್ವಂತ ಪುತ್ರಿ ರೋಕೈಯಾ ಹಾಗೂ ಆಕೆಯ ಪತಿ ಒತ್ಥಮಾನನೂ ಸೇರಿದಂತೆ ಹನ್ನೊಂದು ಮಂದಿ ವಲಸೆಹೋದರು.ಇದೆ ಮೊತ್ತ ಮೊದಲ 'ಹಿಜ್ರಾ' ಎಂದು ಕರೆಯಲಾಯಿತು ಎನ್ನುತ್ತಾನೆ ಇತಿಹಾಸಕಾರ ಅಲ್ ಮುಬಾರಕಿ.
ಈ ವಲಸೆ ಆರಂಭವಾದ ಮೊದಲ ನಾಲ್ಕು ವರ್ಷಗಳಲ್ಲಿ ಮಹಮದನಿಗೆ ಕುರಾನ್ ಸಂದೇಶಗಳು ಸುಮಾರು ಇಪ್ಪತ್ತು ಸುರಾಗಳ ಮೂಲಕ ಹೊರಬಂದವು ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಈ ಎಲ್ಲಾ ಸುರಾಗಳಲ್ಲಿ ಮಹಮದ್ 'ಸ್ವರ್ಗ-ನರಕಗಳ ಸ್ಥಿತಿಗತಿಗಳು,ಪುನರುತ್ಥಾನ (ಇಸ್ಲಾಮಿನಲ್ಲಿ ಪುನರ್ ಜನ್ಮದ ಕಲ್ಪನೆ ಇಲ್ಲ ಅನ್ನುವುದನ್ನು ಗಮನಿಸಿ),ಅಂತಿಮ ತೀರ್ಪಿನ ದಿನ,ಧರ್ಮಬದ್ಧರು-ನೀಚರು,ಯಕ್ಷ-ಬೇತಾಳ-ಪಿಶಾಚಿಗಳು ಮಹಮದನ ಉದ್ದೇಶಕ್ಕೆ ಅನುಗುಣವಾಗಿ ಚಾಕಚಾಕ್ಯತೆಯಿಂದ ನುಡಿಯುವ ಚಿತ್ರಣದ ವಿವರಣೆ ತುಂಬಿದೆಅನ್ನುತ್ತಾನೆ' ಇತಿಹಾಸಕಾರ ಮ್ಯೂರ್.
(ಇನ್ನೂ ಇದೆ...)
ಮಹಮದ್ ಆರಂಭದಲ್ಲಿ ಆರ್ಥಿಕವಾಗಿ ಹಿಂದುಳಿದಿದ್ದ ಸಮಾಜದ ಕೆಳವರ್ಗದ ಮಂದಿಯನ್ನ ತನ್ನ ಪ್ರಭಾವಲಯದೊಳಗೆ ಮೆಕ್ಕಾದ ಸುತ್ತಮುತ್ತ ಸೆಳೆದುಕೊಳ್ಳುವ ಪ್ರಯತ್ನಮಾಡಿದ.ಅನಂತರ ಖುರೈಶಿಗಳಲ್ಲಿ ಪ್ರತಿಷ್ಠಿತವಾದವರತ್ತ ತನ್ನ ಮೋಹಜಾಲ ಬೀಸಲು ಆರಂಭಿಸಿದ.ಹೀಗೊಮ್ಮೆ ಖುರೈಶಿಗಳಲ್ಲೇ ಉನ್ನತ ವರ್ಗದವನಾಗಿದ್ದ ಅಲ್ ವಾಲಿಬನೊಡನೆ ಧಾರ್ಮಿಕ ಚರ್ಚೆಯಲ್ಲಿ ತೊಡಗಿಕೊಂಡಿದ್ದಾಗ ಅಬ್ದುಲ್ಲಾ ಇಬ್ನ ಉಮ್ಜ್ ಮಕ್ತೂಮ್ ಎಂಬ ಅಂಧ ವ್ಯಕ್ತಿಯೊಬ್ಬ ನಡುವೆ ಬಾಯಿಹಾಕಿ ತನಗೂ ಖುರಾನನ್ನು ತಿಳಿಹೇಳಬೇಕೆಂದು ಕೋರಿದ.ಆದರೆ ಆ ಕ್ಷಣ ಕೋಪಕ್ಕೆ ತುತ್ತಾದ ಮಹಮದ್ ಅವನ್ನು ಕಡೆಗಣಿಸಿ ಗಡುಸಾಗಿ ಮಾರುತ್ತರವನ್ನಿತ್ತ.ಆದರೆ ಕೆಲಹೊತ್ತಿನ ನಂತರ ತನ್ನ ಈ ಹೀನ ನಡುವಳಿಕೆಗೆ ಸ್ವತಃ ನಾಚಿಕೆಪಟ್ಟುಕೊಂಡು 'ಯಾವ ದೇವರು ಒಬ್ಬ ಕುರುಡನನ್ನು ಸೃಷ್ಠಿಸಿದ್ದಾನೊ ಅವನನ್ನು ನಾನು ಕಡೆಗಣಿಸಿದ್ದು ತಪ್ಪು,ತೋರಿಕೆಯ ಸಿರಿವಂತನ ಎದುರು ಅವನನ್ನು ಅನಾದರಿಸಬಾರದಿತ್ತು ಎಂದು ಗೋಳಾಡಿದಾಗ ಸಂತೈಸುವ ದೈವವಾಣಿ ಅವನಿಂದಲೆ ಹೊರಬಂತು.ಹಾಗೆ ಹೊರ ಹೊಮ್ಮಿದ್ದೆ ಸುರಾ 80/1-11 ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಈ ಘಟನೆಯ ಮುಖಾಂತರ ದೀನ ದಲಿತರ ಬಗ್ಗೆ ಉದಾತ್ತ ಭಾವನೆಯೊಂದು ಮಹಮದನ ಹೃದಯವನ್ನು ಹೊಕ್ಕು ಪ್ರಕಾಶಿಸಿತು ಎನ್ನಬಹುದು.
ಇದೆ ಸಮಯದಲ್ಲಿ ಆತನ ಮತಪ್ರಚಾರದ ದಿಕ್ಕು ಅರಬೇತರರಾದ ಗ್ರೀಕ್ ಸಮುದಾಯಕ್ಕೆ ಸೇರಿದ ಕ್ರೈಸ್ತರ ಕಡೆಗೆ ತಿರುಗಿತು.ಗುಲಾಮನಾಗಿ ಅರಬ್ಬಿ ಬೆದಾವಿನ್ ಬುಡಕಟ್ಟಿಗೆ ಮಾರಲ್ಪಟ್ಟಿದ್ದ ಸಿನಾನನ ಮಗ ಸಾಹೇಬ್ ಎಂಬ ಗ್ರೀಕನೊಬ್ಬ ಈ ಹೊತ್ತಿಗೆ ಇಸ್ಲಾಂ ಸ್ವೀಕರಿಸಿದ.ಮೆಕ್ಕಾದ ಪ್ರಮುಖ ವ್ಯಕ್ತಿಯಾಗಿದ್ದ ಇಬ್ನ ಜುಡಾನನ ಗುಲಾಮನಾಗಿದ್ದ ಅಪ್ಪಟ ಬಿಳಿಯ ಜನಾಂಗದ ಇವನಿಂದ ಕ್ರೈಸ್ತಧರ್ಮದ ಹಲವು ಒಳಮರ್ಮಗಳನ್ನು ಮಹಮದ್ ಅರಿತು ಬಳಸಿಕೊಳ್ಳಲು ಸಾಧ್ಯವಾಯಿತು,ಅದನ್ನೆ ಸುರಾ 4/164-183ರಲ್ಲಿ ಕಾಣಬಹುದು ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಕುರಾನಿನಲ್ಲಿ ಒಟ್ಟು ಇಪ್ಪತೈದು ಪ್ರವಾದಿಗಳ ಹೆಸರು ಪ್ರಸ್ತಾಪವಾಗಿದೆ.ಅವರಲ್ಲಿ ಮಹಮದ್,ನೂರ್.ಇಬ್ರಾಹಿಮ್,ಜೀಸಸ್ ಹಾಗೂ ಮೂಸಾ ಈ ಐವರಿಗೆ ಪ್ರಬಲ ಆತ್ಮಸ್ಥೈರ್ಯವಿರುತ್ತದೆ ಎನ್ನಲಾಗಿದೆ.
ದಿನಕಳೆದಂತೆ ಹೊಸತಾಗಿ ಮತಾಂತರಿತವಾಗಿದ್ದ ದೀನ,ದಲಿತ ಹಾಗೂ ಗುಲಾಮರ ಮೇಲೆ ಧರ್ಮನಿಷ್ಠ ಖುರೈಷಿಗಳ ಕೆಂಗಣ್ಣು ಬಿಟ್ಟು.ಅವರನ್ನು ಹಿಡಿದು ದೈಹಿಕವಾಗಿ ಹಿಂಸಿಸುವುದು,ಸೆರೆಮನೆಗೆ ತಳ್ಳುವುದು,ಹನಿನೀರನ್ನೂ ಕೊಡದೆ ಸುಡುಬಿಸಿಲಿನಲ್ಲಿ ನಿಲ್ಲಿಸಿ ವಿಧಿಯಿಲ್ಲದೆ ಮರಳಿ ಮಾತೃಧರ್ಮಕ್ಕೆ ಬರುವಂತೆ ಮಾಡುವುದು ಹೀಗೆ ಅನೇಕ ಕುಟಿಲೋಪಾಯಗಳನ್ನು ಅವರು ಹೂಡತೊಡಗಿದರು.ಈ ಬಗೆಯ ಹಿಂಸೆ ಅನುಭವಿಸಿದವರಲ್ಲಿ ಒಬ್ಬನಾಗಿದ್ದ ಬಿಲಾಲ್ ಎಂಬ ಗುಲಾಮ ಮಾತ್ರ ಸುತಾರಾಂ ಅದಕ್ಕೆ ಒಪ್ಪದೆ 'ಅಹಾದ್ ಅಹಾದ್' ಅಂದರೆ ಅರಬ್ಬಿಯಲ್ಲಿ 'ದೇವರೊಬ್ಬನೆ...ಒಬ್ಬನೇ ದೇವರು' ಎಂದು ಕಷ್ಟದಲ್ಲಿದ್ದರೂ ಜಪಿಸಹತ್ತಿದ.ಅವನ ಬಾಯಿಯಿಂದ ಹೊರಬರುತ್ತಿದ್ದ ಈ ಶಬ್ದಗಳನ್ನು ಆಲಿಸಿದ ಅದೆ ದಾರಿಯಲ್ಲಿ ಸಾಗುತ್ತಿದ್ದ ಅಬು ಬಕರ್ ಈ ಶೋಷಣೆಗೆ ಮನನೊಂದು ಕರುಣೆಯಿಂದ ಅವನ ಒತ್ತೆಹಣ ಪಾವತಿಸಿ ಅವನನ್ನು ಗುಲಾಮಗಿರಿಯಿಂದ ಬಿಡಿಸಿದ.
ಇತ್ತ ಮಹಮದನ ಮತಾನುಯಾಯಿಗಳ ಪರಿಸ್ಥಿತಿ ಹೀಗೆ ಹದಗೆಡುತ್ತಿದ್ದರೆ ಅತ್ತ ಮಹಮದ್ ಮಾತ್ರ ಕ್ಷೇಮದಿಂದಿದ್ದ.ಅವನ ದೊಡ್ಡಪ್ಪ ಅಬು ತಾಲಿಬನ ರಕ್ಷಣೆಯಲ್ಲಿ ಅವನನ್ನು ಮುಟ್ಟುವ ಧೈರ್ಯ ಯಾವ ಖುರೈಶಿಗಳಿಗೂ ಹುಟ್ಟಿರಲಿಲ್ಲ.ಅಬು ತಾಲಿಬ್ ವಯಕ್ತಿಕವಾಗಿ ಇಸ್ಲಾಮಿಗೆ ಮತಾಂತರಿತನಾಗಿರದಿದ್ದರೂ ಮಹಮದನ ಪ್ರಭಾವಕ್ಕೆ ಒಳಗಾಗಿದ್ದಂತೂ ಸತ್ಯ.ಅಲ್ಲದೆ ಅನಾಥನಾಗಿದ್ದ ಮಹಮದನ ಮೇಲೆ ಆತನಿಗೆ ಪ್ರೀತಿ ವಾತ್ಸಲ್ಯ ಅಪಾರವಾಗಿದ್ದ ಕಾರಣ ಆತನ ರಕ್ಷಣೆ ತನ್ನ ಹೊಣೆಗಾರಿಕೆ ಎಂಬಂತೆ ಆತ ವರ್ತಿಸುತ್ತಿದ್ದ.ಅದೆ ರೀತಿ ಪ್ರತಿಷ್ಠಿತ ಖುರೈಶಿವರ್ಗಗಳ ಭರ್ತ್ಸನೆಗಳಿಂದ ಅಬು ಬಕರ್ ಮಹಮದನನ್ನು ಪಾರುಮಾಡುತ್ತಿದ್ದ.ಒಂದು ಕುಟುಂಬ ಮತಾಂತರಿತವಾದರೆ ಇಷ್ಟವೋ-ನಷ್ಟವೋ ಅವರ ಸಂಬಂಧಿ ಕುಟುಂಬಸ್ತರು ಒಲ್ಲದ ಮನಸ್ಸಿನಿಂದಲಾದರೂ ನೆರವು ಸಹಕಾರಗಳನ್ನು ಜಾರಿಯಲ್ಲಿ ಇಟ್ಟುಕೊಂಡೆ ಇರುತ್ತಿದ್ದರು.ಆದರೆ ಒಂದಿಡಿ ಬುಡಕಟ್ಟಿಗೆ ಬುಡಕಟ್ಟೆ ಮತಾಂತರವಾದರೆ ಮಾತ್ರ ಅದರ ವಿರೋಧಿ ಬುಡಕಟ್ಟಿನವರಿಂದ ಹಲ್ಲೆಗೆ ಒಳಗಾಗುವ ಸಂದರ್ಭಗಳೆ ಹೆಚ್ಚಾಗಿದ್ದವು.ಹೀಗಾಗಿ ಸ್ವತಃ ತಾನು ಸುರಕ್ಷಿತನಾಗಿದ್ದರೂ ತನ್ನನ್ನು ನಂಬಿ ಬಂದವರ ಸುರಕ್ಷತೆಯ ಬಗ್ಗೆ ಸಹಜವಾಗಿ ಮಹಮದ್ ಆತಂಕಿತನಾಗಿದ್ದ.ಹೀಗಾಗಿ ಅವರಲ್ಲಿ ಆನೇಕರಿಗೆ ಸುರಕ್ಷತೆಯ ದೃಷ್ಟಿಯಿಂದ ಪ್ರಾಣವುಳಿಸಿಕೊಳ್ಳಲು ಅಬಿಸೀನಿಯಾಕ್ಕೆ ವಲಸೆ ಹೋಗುವ ಸಲಹೆ ನೀಡಿದ.ಆಗಿನ ಕಾಲದ ಅಬಿಸೀನಿಯದಲ್ಲಿ ಧಾರ್ಮಿಕ ಸಹಿಷ್ಣುತೆ ನೆಲೆಸಿದ್ದುದೆ ಅದಕ್ಕೆ ಕಾರಣ.ಅಲ್ಲದೆ ಅಲ್ಲಿಗೆ ವಲಸೆ ಹೋಗುವುದು ಸಾಮಾನು ಸರಂಜಾಮುಗಳ ಸಾಗಣೆಯ ದೃಷ್ಟಿಯಿಂದ ಸುಲಭದ್ದಾಗಿತ್ತು.ಹೀಗೆ ಆತನ ಆದೇಶದಂತೆ ಆರಂಭದಲ್ಲಿ ಮಹಮದನ ಸ್ವಂತ ಪುತ್ರಿ ರೋಕೈಯಾ ಹಾಗೂ ಆಕೆಯ ಪತಿ ಒತ್ಥಮಾನನೂ ಸೇರಿದಂತೆ ಹನ್ನೊಂದು ಮಂದಿ ವಲಸೆಹೋದರು.ಇದೆ ಮೊತ್ತ ಮೊದಲ 'ಹಿಜ್ರಾ' ಎಂದು ಕರೆಯಲಾಯಿತು ಎನ್ನುತ್ತಾನೆ ಇತಿಹಾಸಕಾರ ಅಲ್ ಮುಬಾರಕಿ.
ಈ ವಲಸೆ ಆರಂಭವಾದ ಮೊದಲ ನಾಲ್ಕು ವರ್ಷಗಳಲ್ಲಿ ಮಹಮದನಿಗೆ ಕುರಾನ್ ಸಂದೇಶಗಳು ಸುಮಾರು ಇಪ್ಪತ್ತು ಸುರಾಗಳ ಮೂಲಕ ಹೊರಬಂದವು ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.ಈ ಎಲ್ಲಾ ಸುರಾಗಳಲ್ಲಿ ಮಹಮದ್ 'ಸ್ವರ್ಗ-ನರಕಗಳ ಸ್ಥಿತಿಗತಿಗಳು,ಪುನರುತ್ಥಾನ (ಇಸ್ಲಾಮಿನಲ್ಲಿ ಪುನರ್ ಜನ್ಮದ ಕಲ್ಪನೆ ಇಲ್ಲ ಅನ್ನುವುದನ್ನು ಗಮನಿಸಿ),ಅಂತಿಮ ತೀರ್ಪಿನ ದಿನ,ಧರ್ಮಬದ್ಧರು-ನೀಚರು,ಯಕ್ಷ-ಬೇತಾಳ-ಪಿಶಾಚಿಗಳು ಮಹಮದನ ಉದ್ದೇಶಕ್ಕೆ ಅನುಗುಣವಾಗಿ ಚಾಕಚಾಕ್ಯತೆಯಿಂದ ನುಡಿಯುವ ಚಿತ್ರಣದ ವಿವರಣೆ ತುಂಬಿದೆಅನ್ನುತ್ತಾನೆ' ಇತಿಹಾಸಕಾರ ಮ್ಯೂರ್.
(ಇನ್ನೂ ಇದೆ...)
20 October 2011
ಕಡೆಯದೊಂದು ನಿರೀಕ್ಷೆಯ ಹನಿಯಿದೆ....
ಚಿತ್ತ ಕದಡುವ ಮಾತೇಕೆ? ಅದ ಬಿಡು
ಮೌನದ ನಾವೆಯಲ್ಲೆ ಇನ್ನೊಂದು ಸುತ್ತು....
ಸುಮ್ಮನೆ ಸಾಗೋಣ,
ನೀ ನನ್ನ ಹೀಗೆ ನೋಡುತ್ತಿರು....
ನನ್ನ ಕಣ್ಣ ಕನ್ನಡಿಯಲ್ಲಿ ಎಂದಿಗೂ ನೀನೆ ಕಾಣುತ್ತಿರು,
ಮತ್ತೆ ಒಂದಾಗಿ ದೂರ ಸರಿಯೋಣ ಬಾ....!/
ಎದೆಯ ಅಂಗಳದಲ್ಲಿ ಬಿಡಿಸಿದ ಚಿತ್ತಾರಗಳೆಲ್ಲ
ನಿನ್ನೊಂದು ನುಡಿಗೆ ಕದಡಿಹೋದಾಗ....
ನಾನು ನಿಜವಾಗಿಯೂ ಬಾಳಲ್ಲಿ ಸೋತೆ,
ಇನ್ನುಳಿದುದಿರಲಿ ಕನಿಷ್ಠ ನಿನ್ನೊಲವನ್ನೂ ಗಟ್ಟಿ ಮಾಡಿಕೊಳ್ಳುವ ಯೋಗ್ಯತೆಯಿಲ್ಲದೆ
ತಿರುಕನಂತೆ ಕಂಡಿದ್ದ ಕನಸುಗಳನ್ನೆಲ್ಲ ನೋವಿನ ಜೊತೆ ಗತದ ಗೋರಿಯಲ್ಲಿ ನಗುತಲೆ ಹೂತೆ....!//
ಮೌನವ ತೋಯಿಸುವ ನೆನಪುಗಳ ಸಿಂಚನಕ್ಕೆ
ಒಡ್ಡಿಕೊಂಡ ಮನದ ಮಾಡಿನಿಂದ ....
ಎದೆಯಂಗಳಕ್ಕೆ ಇಳಿಯುತ್ತಿರುವ ಪ್ರತಿ ಹನಿಯಲ್ಲೂ,
ಆಳದಲ್ಲಿ ನಿನ್ನದೇ ಪಿಸುದನಿಯಿದೆ/
ಅದೇನೆ ಮರೆತೆನೆಂದು ಕಳ್ಳ ಸಮಾಧಾನ ನನಗೆ ನಾನೆ ಹೇಳಿಕೊಂಡರೂ...
ನಿನ್ನೊಲವ ಮಳೆ ನಿಂತಿದ್ದರೂನು,
ಅದೆಲ್ಲೊ ಕಣ್ಣಿನಾಳದಲ್ಲಿ ಕನಸ ಸೂರಿನಿಂದ ತೊಟ್ಟಿಕ್ಕುತ್ತಿರುವ
ಕಡೆಯದೊಂದು ನಿರೀಕ್ಷೆಯ ಹನಿಯಿದೆ//
ಸತ್ತ ಭಾವಗಳ ಗೋರಿ ಕಾಯುತ
ಅವ್ಯಕ್ತ ವಾಂಛೆಗಳ ಬಚ್ಚಿಟ್ಟುಕೊಂಡ....
ನನ್ನ ನಿರ್ಜೀವ ಕಂಗಳಲ್ಲಿ ನೀನೊಂದು ಹೊಳಪು ಮಾತ್ರ,
ನಾ ಬಯಸಿದರೂ ಅಳಿಸಿ ಹಾಕಲಾಗದ ನಮ್ಮಿಬ್ಬರ ಗತದ ನೆನಪುಗಳಲ್ಲಿ
ಹುದುಗಿರುವ ನೀನು ಈ ಬಾಳಲ್ಲಿ ಅಚ್ಚಳಿಯದ ಒಂದು ಪಾತ್ರ/
ನಿರೀಕ್ಷೆ ಸತ್ತ ಖಾಲಿ ಕನಸಿನ ಹಾದಿಯಲ್ಲಿ....
ನೀನಿಲ್ಲದೆ ನನ್ನದು ಕುರುಡು ಪಯಣ,
ನೋವಂತೂ ವಿವರಿಸಲಾಗದಷ್ಟು ಭೀಕರ
ಒಡೆದಿದೆ ಹೃದಯದಲ್ಲಿ ನೀ ಮೊಳಕೆಯೊಡೆಸಿದ್ದ....
ಒಂಟಿತನ ಮಾಗಿಸಿರುವ ನೋವಿನ ವೃಣ//
ಕನಸುಗಳ ಸಾಲ ನೀ ಕೊಟ್ಟಿದ್ದೆ
ಅದರ ಬಡ್ಡಿಯನ್ನೂ ಕಟ್ಟಲಾಗದೆ....
ನಾನಾದೆ ವಿಫಲ ಸಾಲಗಾರ,
ಮೌನದ ಹೆಣ ಕಾಯುವ ವೀರಬಾಹುವಿನ ನೌಕರಿ ಸಾಕು ಸಾಕಾಗಿದೆ....
ಬೇಕಿದೆ ಇನ್ನಷ್ಟು ನಿನ್ನ ಪ್ರೀತಿಯ ಪಗಾರ/
ಕನಸ ಕೊಲೆಯಾದ ನಂತರವೂ
ಮನಸು ಅರಳೋದು ತಾನೆ ಹೇಗೆ?,
ನಿರಂತರ ನಿರೀಕ್ಷೆಗಳ ಸುಡುತ್ತಿರುವಾಗ ಬಾಳಿನುದ್ದ
ನೀನಿಲ್ಲದ ವಿರಹದ ಬೇಗೆ//
ಮೌನದ ನಾವೆಯಲ್ಲೆ ಇನ್ನೊಂದು ಸುತ್ತು....
ಸುಮ್ಮನೆ ಸಾಗೋಣ,
ನೀ ನನ್ನ ಹೀಗೆ ನೋಡುತ್ತಿರು....
ನನ್ನ ಕಣ್ಣ ಕನ್ನಡಿಯಲ್ಲಿ ಎಂದಿಗೂ ನೀನೆ ಕಾಣುತ್ತಿರು,
ಮತ್ತೆ ಒಂದಾಗಿ ದೂರ ಸರಿಯೋಣ ಬಾ....!/
ಎದೆಯ ಅಂಗಳದಲ್ಲಿ ಬಿಡಿಸಿದ ಚಿತ್ತಾರಗಳೆಲ್ಲ
ನಿನ್ನೊಂದು ನುಡಿಗೆ ಕದಡಿಹೋದಾಗ....
ನಾನು ನಿಜವಾಗಿಯೂ ಬಾಳಲ್ಲಿ ಸೋತೆ,
ಇನ್ನುಳಿದುದಿರಲಿ ಕನಿಷ್ಠ ನಿನ್ನೊಲವನ್ನೂ ಗಟ್ಟಿ ಮಾಡಿಕೊಳ್ಳುವ ಯೋಗ್ಯತೆಯಿಲ್ಲದೆ
ತಿರುಕನಂತೆ ಕಂಡಿದ್ದ ಕನಸುಗಳನ್ನೆಲ್ಲ ನೋವಿನ ಜೊತೆ ಗತದ ಗೋರಿಯಲ್ಲಿ ನಗುತಲೆ ಹೂತೆ....!//
ಮೌನವ ತೋಯಿಸುವ ನೆನಪುಗಳ ಸಿಂಚನಕ್ಕೆ
ಒಡ್ಡಿಕೊಂಡ ಮನದ ಮಾಡಿನಿಂದ ....
ಎದೆಯಂಗಳಕ್ಕೆ ಇಳಿಯುತ್ತಿರುವ ಪ್ರತಿ ಹನಿಯಲ್ಲೂ,
ಆಳದಲ್ಲಿ ನಿನ್ನದೇ ಪಿಸುದನಿಯಿದೆ/
ಅದೇನೆ ಮರೆತೆನೆಂದು ಕಳ್ಳ ಸಮಾಧಾನ ನನಗೆ ನಾನೆ ಹೇಳಿಕೊಂಡರೂ...
ನಿನ್ನೊಲವ ಮಳೆ ನಿಂತಿದ್ದರೂನು,
ಅದೆಲ್ಲೊ ಕಣ್ಣಿನಾಳದಲ್ಲಿ ಕನಸ ಸೂರಿನಿಂದ ತೊಟ್ಟಿಕ್ಕುತ್ತಿರುವ
ಕಡೆಯದೊಂದು ನಿರೀಕ್ಷೆಯ ಹನಿಯಿದೆ//
ಸತ್ತ ಭಾವಗಳ ಗೋರಿ ಕಾಯುತ
ಅವ್ಯಕ್ತ ವಾಂಛೆಗಳ ಬಚ್ಚಿಟ್ಟುಕೊಂಡ....
ನನ್ನ ನಿರ್ಜೀವ ಕಂಗಳಲ್ಲಿ ನೀನೊಂದು ಹೊಳಪು ಮಾತ್ರ,
ನಾ ಬಯಸಿದರೂ ಅಳಿಸಿ ಹಾಕಲಾಗದ ನಮ್ಮಿಬ್ಬರ ಗತದ ನೆನಪುಗಳಲ್ಲಿ
ಹುದುಗಿರುವ ನೀನು ಈ ಬಾಳಲ್ಲಿ ಅಚ್ಚಳಿಯದ ಒಂದು ಪಾತ್ರ/
ನಿರೀಕ್ಷೆ ಸತ್ತ ಖಾಲಿ ಕನಸಿನ ಹಾದಿಯಲ್ಲಿ....
ನೀನಿಲ್ಲದೆ ನನ್ನದು ಕುರುಡು ಪಯಣ,
ನೋವಂತೂ ವಿವರಿಸಲಾಗದಷ್ಟು ಭೀಕರ
ಒಡೆದಿದೆ ಹೃದಯದಲ್ಲಿ ನೀ ಮೊಳಕೆಯೊಡೆಸಿದ್ದ....
ಒಂಟಿತನ ಮಾಗಿಸಿರುವ ನೋವಿನ ವೃಣ//
ಕನಸುಗಳ ಸಾಲ ನೀ ಕೊಟ್ಟಿದ್ದೆ
ಅದರ ಬಡ್ಡಿಯನ್ನೂ ಕಟ್ಟಲಾಗದೆ....
ನಾನಾದೆ ವಿಫಲ ಸಾಲಗಾರ,
ಮೌನದ ಹೆಣ ಕಾಯುವ ವೀರಬಾಹುವಿನ ನೌಕರಿ ಸಾಕು ಸಾಕಾಗಿದೆ....
ಬೇಕಿದೆ ಇನ್ನಷ್ಟು ನಿನ್ನ ಪ್ರೀತಿಯ ಪಗಾರ/
ಕನಸ ಕೊಲೆಯಾದ ನಂತರವೂ
ಮನಸು ಅರಳೋದು ತಾನೆ ಹೇಗೆ?,
ನಿರಂತರ ನಿರೀಕ್ಷೆಗಳ ಸುಡುತ್ತಿರುವಾಗ ಬಾಳಿನುದ್ದ
ನೀನಿಲ್ಲದ ವಿರಹದ ಬೇಗೆ//
19 October 2011
ವಲಿ....(ಭಾಗ-4)
ಈ ಧಾರ್ಮಿಕ ಗುಪ್ತಸಂಘದ ಸದಸ್ಯರು ತಾವು ಕೇವಲ ಧಾರ್ಮಿಕ ಕಾರಣಗಳಿಂದ ಮಾತ್ರ ಹೀಗೆ ಮತಾಂತರಿತಗೊಂಡಿದ್ದೇವೆ ಎಂದು ಬಿಂಬಿಸುತ್ತಿದ್ದರೂ ಗುಲಾಮಗಿರಿಯೆಂಬ ನರಕದಿಂದ ಪಾರಾಗುವುದೆ ಬಹುತೇಕರ ಒಳ ಉದ್ದೇಶವಾಗಿತ್ತು.ಅಲ್ಲದೆ ಇಸ್ಲಾಮಿನಲ್ಲಿ ಪಾಪ-ಪುಣ್ಯಗಳಿಗೆ ಅತಿ ಹೆಚ್ಚಿನ ಮಹತ್ವವನ್ನು ನೀಡಿ,ಪುಣ್ಯವಂತರು ಸ್ವರ್ಗವಾಸಿಗಳಾಗುತ್ತಾರೆ ಹಾಗೂ ಪಾಪಿಗಳು ನರಕದ ಉರಿಜ್ವಾಲೆಯಲ್ಲಿ ಬೆಂದುಹೋಗುತ್ತಾರೆ ಎಂದು ನಂಬಿಕೆ ಹುಟ್ಟಿಸಿದ್ದು ಕೂಡ ಅತಿಹೆಚ್ಚಿನ ಸಂಖ್ಯೆಯ ಧರ್ಮಬೀರುಗಳು ಮತಾಂತರವಾಗಿ ನರಕದ ಜ್ವಾಲೆಯಿಂದ ಪಾರಾಗಲು ಮಾಡಿದ್ದ ಲೌಕಿಕ ಪ್ರಯತ್ನವೆ ಅನ್ನುವುದು ಇತಿಹಾಸಗಾರ ಮಾರ್ಗೊಲಿಯತ್ತನ್ನ ಅನಿಸಿಕೆ.ಮಹಮದ್ ತನ್ನ ನೂತನ ಧರ್ಮಾನುಯಾಯಿಗಳಿಗೆ 'ಸಲಾಂ ಆಲೈಕುಂ' ಅಂದರೆ ಅರಬ್ಬಿಯಲ್ಲಿ 'ಶಾಂತಿಯಿರಲಿ ನಿನ್ನ ಮೇಲೆ"ಎಂಬ ಪರಸ್ಪರ ಹಾರೈಕೆಗಳ ವಿನಿಮಯದ ಆಚರಣೆ ಜಾರಿಗೆ ತರಲು ಅದಾಗಲೆ ಅಂತಹ ಹಾರೈಕೆಗಳ ಹಿನ್ನೆಲೆಯಿದ್ದ ಯಹೂದಿ ಹಾಗೂ ಕ್ರೈಸ್ತ ಧರ್ಮಗಳ ಪ್ರಭಾವದ ಕಾರಣದಿಂದಲೆ ಅನ್ನುವುದು ಮಾರ್ಗೊಲಿಯತ್ತನ್ನ ಹೇಳಿಕೆ.
ಮಹಮದನ ಇಸ್ಲಾಮನ್ನು ಅಪ್ಪಿಕೊಂಡವರನ್ನ 'ಮುಸ್ಲಿಂ' ಇಲ್ಲವೆ 'ಹನೀಫಾ'ರೆಂದು ಕರೆಯಲಾಯಿತು.ಹೀಬ್ರೂ ಭಾಷೆಯಲ್ಲಿ 'ಹನೀಫಾ' ಎಂದರೆ 'ಆಷಾಢಭೂತಿ' ಎಂದೂ ಸಿರಿಯಾಕ್ ಭಾಷೆಯಲ್ಲಿ 'ಪಾಷಂಡಿ' ಎಂಬರ್ಥ ಬರುತ್ತದೆ,ಸಿರಿಯಾಕಿನಲ್ಲಿ 'ಮುಸ್ಲಿಂ' ಎಂದರೆ 'ವಿಶ್ವಾಸಘಾತುಕ' ಎಂದರ್ಥ! ಹಾಗೆ ನೋಡಿದರೆ ಇಸ್ಲಾಮಿಗಿಂತಲೂ ಹಿಂದೆಯೆ ಅರೇಬಿಯಾದಲ್ಲಿ ಏಕದೈವಾರಾಧಕರಿದ್ದು ಅವರನ್ನೂ ಸಹ 'ಹನೀಫಾ'ರೆಂದೆ ಕರೆಯಲಾಗುತ್ತಿತ್ತು,ಅನಂತರ ಇಸ್ಲಾಂ ಅನುಯಾಯಿಗಳಿಗೂ ಇದೆ ಹಣೆಪಟ್ಟಿ ಮುಂದುವರೆಯಿತಷ್ಟೆ.ಇದು ಮಹಮದನ ಧರ್ಮವಿರೋಧಿಗಳು ಕುಚೋದ್ಯದಿಂದ ಗೇಲಿಮಾಡಲು ಕೊಟ್ಟಿರಬಹುದಾದ ಹೆಸರಾಗಿರುವ ಸಾಧ್ಯತೆಯೂ ಇದೆ ಎನ್ನುವ ಇತಿಹಾಸಕಾರ ಮೂಯಿರ್ ಹಂಗಿಸುವ ಅರ್ಥದಲ್ಲಿ ಹೀಗೆ ಕರೆಯಲಾಯಿತು ಎಂದಿದ್ದಾನೆ.ಆದರೆ ಮುಂದಿನ ದಿನಗಳಲ್ಲಿ ಮಹಮದ್ ಅದನ್ನೇ ಮುಸಲ್-ಉಲ್-ಇಮಾನ್ ಎಂದು ಉಚ್ಚರಿಸಿ ಹೊಸತೆ ಗೌರವಾರ್ಹವಾದ ಅರ್ಥಕಲ್ಪಿಸುವುದರಲ್ಲಿ ಸಫಲನಾದ.ಒಂದುದಿನ ಧೈರ್ಯ ಮಾಡಿ ಮಹಮದ್ ಕಾಬಾದ ಬಳಿಯೆ ನಿಂತು ಬಹಿರಂಗವಾಗಿ ತನ್ನ ಮತಪ್ರಚಾರವನ್ನು ಆರಂಭಿಸಿದ.ಅಲ್ಲಿ ನೆರೆದ ಜನರ-ಜಂಗುಳಿಯನ್ನು ಉದ್ದೇಶಿಸಿ "ಅಲ್ಲಾ ಒಬ್ಬನೆ ನಿಜವಾದ ದೈವ,ಅವನ ವಿನಃ ಇನ್ಯಾವ ದೈವವಿಲ್ಲ" (ಅಲ್ಲಾ ಹೋ ಅಕ್ಬರ್) ಎಂದು ನಿರಂತರವಾಗಿ ಕೂಗಿಕೂಗಿ ಹೇಳಲು ಆರಂಭಿಸಿದ.ಅವನ ಮಾತಿನಿಂದ ರೊಚ್ಚಿಗೆದ್ದ ಅಲ್ಲಿ ನೆರೆದಿದ್ದ ಬಹುಮಂದಿ ಅವನ ಮೇಲೆ ಹಲ್ಲೆ ನಡೆಸಲು ಶುರುವಿಟ್ಟರು.ಹೀಗೆ ಆತ ಆಪತ್ತಿನಲ್ಲಿ ಸಿಲುಕಿಕೊಂಡಿರುವ ಸಂಗತಿ ಖತೀಜಾ ಕುಟುಂಬಕ್ಕೆ ತಲುಪಿತು.ಆಕೆಯ ಮೊದಲ ಗಂಡ ಅಬು ಹಾಲತ್'ನ ಮಗ ಅಲ್ ಹಾರುಥ್ ತನ್ನ ಮಲತಂದೆಯ ರಕ್ಷಣೆಗಾಗಿ ಕೂಡಲೆ ಧಾವಿಸಿದ.ನಡೆದ ಕಾದಾಟದಲ್ಲಿ ವಿರೋಧಿಗಳು ಅವನನ್ನು ಅಲ್ಲಿಯೆ ಹೊಡೆದುಕೊಂದರು.ಹೀಗಾಗಿ ಅವನು ಇಸ್ಲಾಮಿನ ಪ್ರಪ್ರಥಮ 'ಹುತಾತ್ಮ'ನ ಪಟ್ಟ ಗಳಿಸಿಕೊಂಡ ಅನ್ನುತ್ತಾನೆ ಇತಿಹಾಸಕಾರ ಮಾರ್ಗೊಲಿಯತ್.
"ತಾನು ದೇವದೂತ,ಹೊಸ ಮತವೊಂದರ ಆರಂಭಕ್ಕೆ ದೇವರು ಪ್ರೇರೇಪಿಸಿ ತನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ" ಎಂಬ ಮಹಮದನ ಪ್ರಚಾರವನ್ನ ಕಾಬಾದ ಹುಬಾಬ್ ಸಹಿತ ಇನ್ನುಳಿದ 360 ದೇವರ ಅಚಲ ವಿಶ್ವಾಸಿಗಳಾಗಿದ್ದ ಬಹುತೇಕ ಮೆಕ್ಕಾ ನಿವಾಸಿಗಳು ಬಲವಾಗಿ ವಿರೋಧಿಸಲು ಆರಂಭಿಸಿದರು.ತಮಾಷೆಯೆಂದರೆ ಅವರು ಆರಾಧಿಸುತ್ತಿದ್ದ ಹುಬಾಬ್ ಹೊರತುಪಡಿಸಿದ ಇನ್ನುಳಿದ ಮೂರ್ತಿಗಳಲ್ಲಿ ಅಲ್ಲಾನದ್ದೂ ಒಂದು ಪ್ರತಿಮೆ ಇತ್ತು.ಅದಕ್ಕೂ ನಿತ್ಯ ಪೂಜೆ ಸಲ್ಲುತ್ತಿತ್ತು! ಜನರು ಮಹಮದನಿಗೆ ಜಿನ್ ಅಂದರೆ ದೆವ್ವ ಮೆಟ್ಟಿಕೊಂಡಿದೆ ಎಂದು ತಲೆಗೊಬ್ಬರಂತೆ ಆಡಿಕೊಳ್ಳಲು ಆರಂಭಿಸಿದರು.ಅವರ ಈ ಆಪಾದನೆ ಮಹಮದನನ್ನು ತೀವ್ರವಾಗಿ ಘಾಸಿಗೊಳಿಸಿತು. ಇದರಿಂದ ಅವನು ಬೇಸರಕ್ಕೆ ತುತ್ತಾದ.ಅದನ್ನೆ ಅವನು ಕುರಾನಿನ ಸುರಾಗಳ ಮೂಲಕ (ಸುರಾ 67/24-27) ತೋಡಿಕೊಂಡ ಎನ್ನುತ್ತಾನೆ ಇತಿಹಾಸಕಾರ ಅಲ್ ಮುಬಾರಕಿ.ಸುಮಾರು ಹತ್ತುವರ್ಷಗಳವರೆಗೆ ಹೀಗೆಯೆ ವಿರೋಧಿಗಳ ನಡುವೆ ಮೆಕ್ಕಾದಲ್ಲಿಯೆ ಬಾಳಿ ಬದುಕಿದ ಮಹಮದ್ ತನ್ನ ಮತಪ್ರಚಾರ ಯಶಸ್ವಿಯಾಗಿ ಕೈಗೊಳ್ಳಲು ಮಹಮದನ ಪತ್ನಿ ಖತೀಜಳ ಅರ್ಪಣಾ ಭಾವದಿಂದ ಕೂಡಿದ ಭಕ್ತಿ ಹಾಗೂ ಆಕೆಯ ಸಂಪತ್ತಿನ ಪ್ರಭಾವದಿಂದ,ಅಲ್ಲದೆ ದೊಡ್ಡಪ್ಪ ಅಬು ತಾಲಿಬ್'ನ ಪ್ರೀತಿ ಒಲುಮೆ ವಿಶ್ವಾಸ ಹಾಗೂ ಅಬು ಬಾಕರ್'ನ ಪ್ರೇರೇಪಣಾಗುಣದಿಂದ ಹಾಗೂ ಅಂಧ ವಿಶ್ವಾಸಗಳಿಂದ ಮಾತ್ರ ಸಾಧ್ಯವಾಯಿತು ಅನ್ನೋದು ಇತಿಹಾಸಕಾರ ಮ್ಯೂರನ ಅಂಬೋಣ.
ದೊಡ್ಡಪ್ಪ ಅಬುತಾಲೀಬನ ಸಮಯಪ್ರಜ್ಞೆಯಿಂದ ಅನೇಕಬಾರಿ ಖುರೈಷಿಗಳಿಂದ ಒದಗಿಬರಬಹುದಾಗಿದ್ದ ಅತಿ ಹಿಂಸೆ ಅಥವಾ ಪ್ರಾಣಹಾನಿಯಿಂದ ಮಹಮದ್ ತಪ್ಪಿಸಿಕೊಂಡ.ಆದರೆ ಅಪರೂಪವಾಗಿ ಇಸ್ಲಾಮಿಗೆ ಮತಾಂತರವಾದ ಖುರೈಶಿಗಳಲ್ಲಿ ಕೆಲವರು ತಾವು ಅಪ್ಪಿದ ಹೊಸ ಧರ್ಮಕ್ಕಾಗಿ ಸ್ವಂತ ಹೆತ್ತವರ-ಒಡಹುಟ್ಟಿದವರ ವಿರುದ್ಧವೇ ಹೋರಾಡಿದ ನಿದರ್ಶನಗಳೂ ಕಂಡುಬಂದವು.ಧರ್ಮಪ್ರಚಾರದ ಹೊತ್ತಲ್ಲಿ ಪ್ರವಚನ,ಭಾಷಣ ಇಲ್ಲವೆ ಜನರನ್ನು ಉದ್ದೇಶಿಸಿ ಮಾತನಾಡಲು ಉಧ್ಯುಕ್ತನಾಗುತ್ತಿದ್ದ ಸಂದರ್ಭಗಳಲ್ಲಿ ಮಹಮದನ ಕೆನ್ನೆ ಕೆಂಪಗಾಗುತ್ತಿತ್ತು ಮತ್ತು ಧ್ವನಿ ತಾರಕಕ್ಕೆ ಏರುತ್ತಿತ್ತು.ಆ ಕ್ಷಣ ಸ್ವಭಾವ ಉಗ್ರವಾಗುತ್ತಿತ್ತು.ಆತ ಎಷ್ಟು ಪ್ರಬಲ ಭಾಷಣಕಾರನಾಗಿದ್ದನೊ ಅಷ್ಟೆ ಕೆಟ್ಟ ಚರ್ಚಾಪಟುವಾಗಿದ್ದನು.ತನ್ನ ಈ ನ್ಯೂನತೆಯನ್ನು ಬಹಳ ಚೆನ್ನಾಗಿ ಅರಿತಿದ್ದ ಆತ ಅಂತಹ ಪರಿಸ್ಥಿತಿಗಳಲ್ಲಿ ದೈವವಾಣಿಯ ಮೊರೆ ಹೋಗುತ್ತಿದ್ದ.ಅವಿಶ್ವಾಸಿಗಳ ಪ್ರಶ್ನೆಗಳಿಗೆ ತರ್ಕಬದ್ದ ಉತ್ತರ ನೀಡಲಾರದೆ ಅವರು ಅಲ್ಲಿಂದ ನಿರ್ಗಮಿಸುವಂತೆ ಸುರಾದ ಆಜ್ಞೆ ಪಡೆದುಕೊಂಡು ಅದನ್ನ ಪಾಲಿಸಿ ಪಾರಾಗುತ್ತಿದ್ದ ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.
ಮುಂದಿನ ನಾಲ್ಕು ವರ್ಷಗಳಲ್ಲಿ ಕೇವಲ ನಲವತ್ತು ಮಂದಿಯಷ್ಟೆ ಇಸ್ಲಾಮಿಗೆ ಪರವಶವಾದರು.ಮೊದಮೊದಲು ಈ ಬಗ್ಗೆ ಉದಾಸೀನರಾಗಿದ್ದ ಮೆಕ್ಕಾದ ಖುರೈಷಿಗಳು ಕ್ರಮೇಣ ಅದನ್ನ ಅಸಹನೆಗೆ ತಿರುಗಿಸಿಕೊಂಡರು.ಅರೇಬಿಯಾದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಬಾದ ಪ್ರಾಮುಖ್ಯತೆ ಮಹಮದನ ಧರ್ಮೊಪದೇಶದಿಂದ ಮುಕ್ಕಾದೀತು ಎಂಬ ಆತಂಕ ಅವರದ್ದಾಗಿತ್ತು.ಹೀಗೆಯೆ ಮುಂದುವರೆಯಲು ಬಿಟ್ಟರೆ ಕಾಬಾದ ಅಸ್ತಿತ್ವಕ್ಕೆ ಖಂಡಿತ ಸಂಚಕಾರ ಬರಲಿದೆ ಎಂಬುದನ್ನು ಅರಿತ ಖುರೈಷಿಗಳು ಹಿಂಸಾತ್ಮಕವಾಗಿ ಮಹಮದನ ಧರ್ಮಪ್ರಚಾರಕ್ಕೆ ಎದಿರೇಟು ಕೊಡಲು ಆರಂಭಿಸಿದರು.ಮತಾಂತರಗೊಂಡ ಒಬ್ಬನ ವಿರುದ್ಧ ಅವರು ದೌರ್ಜನ್ಯ ಎಸಗುತ್ತಿದ್ದಾಗ ಬಿಡಿಸಿಕೊಳ್ಳಲು ಬರುವ ನೆಂಟರೂ ಅವರ ಹಿಂಸೆಗೆ ತುತ್ತಾಗಬೇಕಾಗುತ್ತಿತ್ತು,ಯಾರೊಬ್ಬರ ನೈತಿಕ ಬೆಂಬಲವೂ ಸಿಗದ ಗುಲಾಮರ ಪರಿಸ್ಥಿತಿಯಂತೂ ತೀರಾ ಶೋಚನೀಯವಾಗಿದ್ದಿತು.
ಹೀಗೆ ಶುರುವಾದ ಖುರೈಷಿಗಳ ಹಿಂಸಾ ವಿನೋದದ ವಿರುದ್ಧವಾಗಿ ನೂತನ ಧರ್ಮಾನುಯಾಯಿಗಳು ಆತ್ಮರಕ್ಷಣೆಗೆ ಮುಂದಾದರು.ಅವರೂ ಹಿಂಸಾಚಾರಕ್ಕಿಳಿದರು.ಮಹಮದ್ ಹಾಗೂ ಆತನ ಅನುಯಾಯಿಗಳಿಗೆ ಅದು ಕ್ರಮೇಣ ರೂಢಿಯಾಗಿ ಸಹನೆ,ತಾಳ್ಮೆಗಳನ್ನೆಲ್ಲ ಕಿತ್ತೊಗೆದು ವಿರೋಧಿಗಳ ವಿರುದ್ಧ ನೇರಕಾರ್ಯಾಚರಣೆಗೆ ಅವರಿಳಿಯಲು ಇದರಿಂದ ಮೊದಲಾಯಿತು.ಕ್ರಿಸ್ತಶಕ 613ರ ಸುಮಾರಿಗೆ ಅದೂವರೆಗೂ ಗುಪ್ತವಾಗಿ ಸಾಗುತ್ತಿದ್ದ ಮಹಮದನ ಮತಪ್ರಚಾರ ತೀರ ಬಹಿರಂಗಗೊಂಡಿತು.ಆತ ಖುರೈಷಿಗಳ ವಿಗ್ರಹಾರಾಧನೆಯನ್ನ ಕಟುವಾಗಿ ಖಂಡಿಸಿದ.ಅವರ ಪಿತೃಗಳೂ ವಿಗ್ರಹಾರಾಧಕರಾಗಿ ಆತ್ಮನಾಶಕ್ಕೀಡಾಗಿದ್ದಾರೆ ಎಂದು ಆತ ಹೇಳಿದಾಗ ಖುರೈಷಿಗಳು ಕೆರಳಿ ನಿಂತರು.ಮೆಕ್ಕಾದ ಹೊರವಲಯದಲ್ಲಿ ಮಹಮದನ ಬಂಟ ಸಾದ್ ಬಹಿರಂಗವಾಗಿ ನಮಾಜ್ ಮಾಡುತ್ತಿದ್ದಾಗ ಅದನ್ನು ಕಂಡು ಕೋಪಗೊಂಡ ಖುರೈಷಿಗಳು ಕಲಹಕ್ಕೆ ನಾಂದಿ ಹಾಡಿದರು,ಜಗಳ ರಕ್ತಪಾತಕ್ಕೆ ತಿರುಗಿ ಒಂಟೆಯನ್ನು ಹೊಡೆಯುವ ಮೊನೆಗೋಲಿನಿಂದ ಸಾದ್ ವಿರೋಧಿಯೋಬ್ಬನನ್ನು ಅಲ್ಲಿಯೆ ಹೊಡೆದುಸಾಯಿಸಿದ.ಇತಿಹಾಸಕಾರ ತಮ್ಮಿಮಿಯ ಪ್ರಕಾರ ಇದು 'ಇಸ್ಲಾಮಿಗಾಗಿ ಚಲ್ಲಿದ ಮೊತ್ತ ಮೊದಲನೆಯ ರಕ್ತ'.
ಇದೆ ಸಮಯದಲ್ಲಿ ಪ್ರಾಯಶಃ ಮಹಮದ್ ನೂತನವಾಗಿ ಮತಾಂತರವಾಗಿದ್ದ ಅಕ್ರಂ ಎಂಬಾತನ ಮನೆಯನ್ನ ಆಶ್ರಯಕ್ಕಾಗಿ ಪಡೆದುಕೊಂಡು ಅಲ್ಲಿದ್ದುಕೊಂಡೆ ಮತಪ್ರಚಾರವನ್ನು ಮುಂದುವರೆಸಿದ.ಅದು ಕಾಬಾ ಗುಡಿಯ ಹತ್ತಿರದಲ್ಲೆ ಇದ್ದು ಅಲ್ಲಿಗೆ ಹೋಗಿ ಬರುವ ಯಾತ್ರಿಕರು ಸಾಗುವ ದಾರಿಯಲ್ಲೆ ಇದ್ದುದರಿಂದ ಜನಸಾಂದ್ರತೆ ಸಹಜವಾಗಿ ಹೆಚ್ಚಿದ್ದು ಪ್ರಚಾರಕ್ಕೆ ಹೆಚ್ಚಿನ ಅವಕಾಶಗಳು ಅಲ್ಲಿದ್ದವು.ಮುಂದೆ ಇದೆ 'ಇಸ್ಲಾಮಿನ ಮನೆ' ಎಂಬ ಪಟ್ಟ ಪಡೆಯಿತು.
(ಇನ್ನೂ ಇದೆ....)
ಮಹಮದನ ಇಸ್ಲಾಮನ್ನು ಅಪ್ಪಿಕೊಂಡವರನ್ನ 'ಮುಸ್ಲಿಂ' ಇಲ್ಲವೆ 'ಹನೀಫಾ'ರೆಂದು ಕರೆಯಲಾಯಿತು.ಹೀಬ್ರೂ ಭಾಷೆಯಲ್ಲಿ 'ಹನೀಫಾ' ಎಂದರೆ 'ಆಷಾಢಭೂತಿ' ಎಂದೂ ಸಿರಿಯಾಕ್ ಭಾಷೆಯಲ್ಲಿ 'ಪಾಷಂಡಿ' ಎಂಬರ್ಥ ಬರುತ್ತದೆ,ಸಿರಿಯಾಕಿನಲ್ಲಿ 'ಮುಸ್ಲಿಂ' ಎಂದರೆ 'ವಿಶ್ವಾಸಘಾತುಕ' ಎಂದರ್ಥ! ಹಾಗೆ ನೋಡಿದರೆ ಇಸ್ಲಾಮಿಗಿಂತಲೂ ಹಿಂದೆಯೆ ಅರೇಬಿಯಾದಲ್ಲಿ ಏಕದೈವಾರಾಧಕರಿದ್ದು ಅವರನ್ನೂ ಸಹ 'ಹನೀಫಾ'ರೆಂದೆ ಕರೆಯಲಾಗುತ್ತಿತ್ತು,ಅನಂತರ ಇಸ್ಲಾಂ ಅನುಯಾಯಿಗಳಿಗೂ ಇದೆ ಹಣೆಪಟ್ಟಿ ಮುಂದುವರೆಯಿತಷ್ಟೆ.ಇದು ಮಹಮದನ ಧರ್ಮವಿರೋಧಿಗಳು ಕುಚೋದ್ಯದಿಂದ ಗೇಲಿಮಾಡಲು ಕೊಟ್ಟಿರಬಹುದಾದ ಹೆಸರಾಗಿರುವ ಸಾಧ್ಯತೆಯೂ ಇದೆ ಎನ್ನುವ ಇತಿಹಾಸಕಾರ ಮೂಯಿರ್ ಹಂಗಿಸುವ ಅರ್ಥದಲ್ಲಿ ಹೀಗೆ ಕರೆಯಲಾಯಿತು ಎಂದಿದ್ದಾನೆ.ಆದರೆ ಮುಂದಿನ ದಿನಗಳಲ್ಲಿ ಮಹಮದ್ ಅದನ್ನೇ ಮುಸಲ್-ಉಲ್-ಇಮಾನ್ ಎಂದು ಉಚ್ಚರಿಸಿ ಹೊಸತೆ ಗೌರವಾರ್ಹವಾದ ಅರ್ಥಕಲ್ಪಿಸುವುದರಲ್ಲಿ ಸಫಲನಾದ.ಒಂದುದಿನ ಧೈರ್ಯ ಮಾಡಿ ಮಹಮದ್ ಕಾಬಾದ ಬಳಿಯೆ ನಿಂತು ಬಹಿರಂಗವಾಗಿ ತನ್ನ ಮತಪ್ರಚಾರವನ್ನು ಆರಂಭಿಸಿದ.ಅಲ್ಲಿ ನೆರೆದ ಜನರ-ಜಂಗುಳಿಯನ್ನು ಉದ್ದೇಶಿಸಿ "ಅಲ್ಲಾ ಒಬ್ಬನೆ ನಿಜವಾದ ದೈವ,ಅವನ ವಿನಃ ಇನ್ಯಾವ ದೈವವಿಲ್ಲ" (ಅಲ್ಲಾ ಹೋ ಅಕ್ಬರ್) ಎಂದು ನಿರಂತರವಾಗಿ ಕೂಗಿಕೂಗಿ ಹೇಳಲು ಆರಂಭಿಸಿದ.ಅವನ ಮಾತಿನಿಂದ ರೊಚ್ಚಿಗೆದ್ದ ಅಲ್ಲಿ ನೆರೆದಿದ್ದ ಬಹುಮಂದಿ ಅವನ ಮೇಲೆ ಹಲ್ಲೆ ನಡೆಸಲು ಶುರುವಿಟ್ಟರು.ಹೀಗೆ ಆತ ಆಪತ್ತಿನಲ್ಲಿ ಸಿಲುಕಿಕೊಂಡಿರುವ ಸಂಗತಿ ಖತೀಜಾ ಕುಟುಂಬಕ್ಕೆ ತಲುಪಿತು.ಆಕೆಯ ಮೊದಲ ಗಂಡ ಅಬು ಹಾಲತ್'ನ ಮಗ ಅಲ್ ಹಾರುಥ್ ತನ್ನ ಮಲತಂದೆಯ ರಕ್ಷಣೆಗಾಗಿ ಕೂಡಲೆ ಧಾವಿಸಿದ.ನಡೆದ ಕಾದಾಟದಲ್ಲಿ ವಿರೋಧಿಗಳು ಅವನನ್ನು ಅಲ್ಲಿಯೆ ಹೊಡೆದುಕೊಂದರು.ಹೀಗಾಗಿ ಅವನು ಇಸ್ಲಾಮಿನ ಪ್ರಪ್ರಥಮ 'ಹುತಾತ್ಮ'ನ ಪಟ್ಟ ಗಳಿಸಿಕೊಂಡ ಅನ್ನುತ್ತಾನೆ ಇತಿಹಾಸಕಾರ ಮಾರ್ಗೊಲಿಯತ್.
"ತಾನು ದೇವದೂತ,ಹೊಸ ಮತವೊಂದರ ಆರಂಭಕ್ಕೆ ದೇವರು ಪ್ರೇರೇಪಿಸಿ ತನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ" ಎಂಬ ಮಹಮದನ ಪ್ರಚಾರವನ್ನ ಕಾಬಾದ ಹುಬಾಬ್ ಸಹಿತ ಇನ್ನುಳಿದ 360 ದೇವರ ಅಚಲ ವಿಶ್ವಾಸಿಗಳಾಗಿದ್ದ ಬಹುತೇಕ ಮೆಕ್ಕಾ ನಿವಾಸಿಗಳು ಬಲವಾಗಿ ವಿರೋಧಿಸಲು ಆರಂಭಿಸಿದರು.ತಮಾಷೆಯೆಂದರೆ ಅವರು ಆರಾಧಿಸುತ್ತಿದ್ದ ಹುಬಾಬ್ ಹೊರತುಪಡಿಸಿದ ಇನ್ನುಳಿದ ಮೂರ್ತಿಗಳಲ್ಲಿ ಅಲ್ಲಾನದ್ದೂ ಒಂದು ಪ್ರತಿಮೆ ಇತ್ತು.ಅದಕ್ಕೂ ನಿತ್ಯ ಪೂಜೆ ಸಲ್ಲುತ್ತಿತ್ತು! ಜನರು ಮಹಮದನಿಗೆ ಜಿನ್ ಅಂದರೆ ದೆವ್ವ ಮೆಟ್ಟಿಕೊಂಡಿದೆ ಎಂದು ತಲೆಗೊಬ್ಬರಂತೆ ಆಡಿಕೊಳ್ಳಲು ಆರಂಭಿಸಿದರು.ಅವರ ಈ ಆಪಾದನೆ ಮಹಮದನನ್ನು ತೀವ್ರವಾಗಿ ಘಾಸಿಗೊಳಿಸಿತು. ಇದರಿಂದ ಅವನು ಬೇಸರಕ್ಕೆ ತುತ್ತಾದ.ಅದನ್ನೆ ಅವನು ಕುರಾನಿನ ಸುರಾಗಳ ಮೂಲಕ (ಸುರಾ 67/24-27) ತೋಡಿಕೊಂಡ ಎನ್ನುತ್ತಾನೆ ಇತಿಹಾಸಕಾರ ಅಲ್ ಮುಬಾರಕಿ.ಸುಮಾರು ಹತ್ತುವರ್ಷಗಳವರೆಗೆ ಹೀಗೆಯೆ ವಿರೋಧಿಗಳ ನಡುವೆ ಮೆಕ್ಕಾದಲ್ಲಿಯೆ ಬಾಳಿ ಬದುಕಿದ ಮಹಮದ್ ತನ್ನ ಮತಪ್ರಚಾರ ಯಶಸ್ವಿಯಾಗಿ ಕೈಗೊಳ್ಳಲು ಮಹಮದನ ಪತ್ನಿ ಖತೀಜಳ ಅರ್ಪಣಾ ಭಾವದಿಂದ ಕೂಡಿದ ಭಕ್ತಿ ಹಾಗೂ ಆಕೆಯ ಸಂಪತ್ತಿನ ಪ್ರಭಾವದಿಂದ,ಅಲ್ಲದೆ ದೊಡ್ಡಪ್ಪ ಅಬು ತಾಲಿಬ್'ನ ಪ್ರೀತಿ ಒಲುಮೆ ವಿಶ್ವಾಸ ಹಾಗೂ ಅಬು ಬಾಕರ್'ನ ಪ್ರೇರೇಪಣಾಗುಣದಿಂದ ಹಾಗೂ ಅಂಧ ವಿಶ್ವಾಸಗಳಿಂದ ಮಾತ್ರ ಸಾಧ್ಯವಾಯಿತು ಅನ್ನೋದು ಇತಿಹಾಸಕಾರ ಮ್ಯೂರನ ಅಂಬೋಣ.
ದೊಡ್ಡಪ್ಪ ಅಬುತಾಲೀಬನ ಸಮಯಪ್ರಜ್ಞೆಯಿಂದ ಅನೇಕಬಾರಿ ಖುರೈಷಿಗಳಿಂದ ಒದಗಿಬರಬಹುದಾಗಿದ್ದ ಅತಿ ಹಿಂಸೆ ಅಥವಾ ಪ್ರಾಣಹಾನಿಯಿಂದ ಮಹಮದ್ ತಪ್ಪಿಸಿಕೊಂಡ.ಆದರೆ ಅಪರೂಪವಾಗಿ ಇಸ್ಲಾಮಿಗೆ ಮತಾಂತರವಾದ ಖುರೈಶಿಗಳಲ್ಲಿ ಕೆಲವರು ತಾವು ಅಪ್ಪಿದ ಹೊಸ ಧರ್ಮಕ್ಕಾಗಿ ಸ್ವಂತ ಹೆತ್ತವರ-ಒಡಹುಟ್ಟಿದವರ ವಿರುದ್ಧವೇ ಹೋರಾಡಿದ ನಿದರ್ಶನಗಳೂ ಕಂಡುಬಂದವು.ಧರ್ಮಪ್ರಚಾರದ ಹೊತ್ತಲ್ಲಿ ಪ್ರವಚನ,ಭಾಷಣ ಇಲ್ಲವೆ ಜನರನ್ನು ಉದ್ದೇಶಿಸಿ ಮಾತನಾಡಲು ಉಧ್ಯುಕ್ತನಾಗುತ್ತಿದ್ದ ಸಂದರ್ಭಗಳಲ್ಲಿ ಮಹಮದನ ಕೆನ್ನೆ ಕೆಂಪಗಾಗುತ್ತಿತ್ತು ಮತ್ತು ಧ್ವನಿ ತಾರಕಕ್ಕೆ ಏರುತ್ತಿತ್ತು.ಆ ಕ್ಷಣ ಸ್ವಭಾವ ಉಗ್ರವಾಗುತ್ತಿತ್ತು.ಆತ ಎಷ್ಟು ಪ್ರಬಲ ಭಾಷಣಕಾರನಾಗಿದ್ದನೊ ಅಷ್ಟೆ ಕೆಟ್ಟ ಚರ್ಚಾಪಟುವಾಗಿದ್ದನು.ತನ್ನ ಈ ನ್ಯೂನತೆಯನ್ನು ಬಹಳ ಚೆನ್ನಾಗಿ ಅರಿತಿದ್ದ ಆತ ಅಂತಹ ಪರಿಸ್ಥಿತಿಗಳಲ್ಲಿ ದೈವವಾಣಿಯ ಮೊರೆ ಹೋಗುತ್ತಿದ್ದ.ಅವಿಶ್ವಾಸಿಗಳ ಪ್ರಶ್ನೆಗಳಿಗೆ ತರ್ಕಬದ್ದ ಉತ್ತರ ನೀಡಲಾರದೆ ಅವರು ಅಲ್ಲಿಂದ ನಿರ್ಗಮಿಸುವಂತೆ ಸುರಾದ ಆಜ್ಞೆ ಪಡೆದುಕೊಂಡು ಅದನ್ನ ಪಾಲಿಸಿ ಪಾರಾಗುತ್ತಿದ್ದ ಎನ್ನುತ್ತಾನೆ ಇತಿಹಾಸಕಾರ ಮ್ಯೂರ್.
ಮುಂದಿನ ನಾಲ್ಕು ವರ್ಷಗಳಲ್ಲಿ ಕೇವಲ ನಲವತ್ತು ಮಂದಿಯಷ್ಟೆ ಇಸ್ಲಾಮಿಗೆ ಪರವಶವಾದರು.ಮೊದಮೊದಲು ಈ ಬಗ್ಗೆ ಉದಾಸೀನರಾಗಿದ್ದ ಮೆಕ್ಕಾದ ಖುರೈಷಿಗಳು ಕ್ರಮೇಣ ಅದನ್ನ ಅಸಹನೆಗೆ ತಿರುಗಿಸಿಕೊಂಡರು.ಅರೇಬಿಯಾದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಬಾದ ಪ್ರಾಮುಖ್ಯತೆ ಮಹಮದನ ಧರ್ಮೊಪದೇಶದಿಂದ ಮುಕ್ಕಾದೀತು ಎಂಬ ಆತಂಕ ಅವರದ್ದಾಗಿತ್ತು.ಹೀಗೆಯೆ ಮುಂದುವರೆಯಲು ಬಿಟ್ಟರೆ ಕಾಬಾದ ಅಸ್ತಿತ್ವಕ್ಕೆ ಖಂಡಿತ ಸಂಚಕಾರ ಬರಲಿದೆ ಎಂಬುದನ್ನು ಅರಿತ ಖುರೈಷಿಗಳು ಹಿಂಸಾತ್ಮಕವಾಗಿ ಮಹಮದನ ಧರ್ಮಪ್ರಚಾರಕ್ಕೆ ಎದಿರೇಟು ಕೊಡಲು ಆರಂಭಿಸಿದರು.ಮತಾಂತರಗೊಂಡ ಒಬ್ಬನ ವಿರುದ್ಧ ಅವರು ದೌರ್ಜನ್ಯ ಎಸಗುತ್ತಿದ್ದಾಗ ಬಿಡಿಸಿಕೊಳ್ಳಲು ಬರುವ ನೆಂಟರೂ ಅವರ ಹಿಂಸೆಗೆ ತುತ್ತಾಗಬೇಕಾಗುತ್ತಿತ್ತು,ಯಾರೊಬ್ಬರ ನೈತಿಕ ಬೆಂಬಲವೂ ಸಿಗದ ಗುಲಾಮರ ಪರಿಸ್ಥಿತಿಯಂತೂ ತೀರಾ ಶೋಚನೀಯವಾಗಿದ್ದಿತು.
ಹೀಗೆ ಶುರುವಾದ ಖುರೈಷಿಗಳ ಹಿಂಸಾ ವಿನೋದದ ವಿರುದ್ಧವಾಗಿ ನೂತನ ಧರ್ಮಾನುಯಾಯಿಗಳು ಆತ್ಮರಕ್ಷಣೆಗೆ ಮುಂದಾದರು.ಅವರೂ ಹಿಂಸಾಚಾರಕ್ಕಿಳಿದರು.ಮಹಮದ್ ಹಾಗೂ ಆತನ ಅನುಯಾಯಿಗಳಿಗೆ ಅದು ಕ್ರಮೇಣ ರೂಢಿಯಾಗಿ ಸಹನೆ,ತಾಳ್ಮೆಗಳನ್ನೆಲ್ಲ ಕಿತ್ತೊಗೆದು ವಿರೋಧಿಗಳ ವಿರುದ್ಧ ನೇರಕಾರ್ಯಾಚರಣೆಗೆ ಅವರಿಳಿಯಲು ಇದರಿಂದ ಮೊದಲಾಯಿತು.ಕ್ರಿಸ್ತಶಕ 613ರ ಸುಮಾರಿಗೆ ಅದೂವರೆಗೂ ಗುಪ್ತವಾಗಿ ಸಾಗುತ್ತಿದ್ದ ಮಹಮದನ ಮತಪ್ರಚಾರ ತೀರ ಬಹಿರಂಗಗೊಂಡಿತು.ಆತ ಖುರೈಷಿಗಳ ವಿಗ್ರಹಾರಾಧನೆಯನ್ನ ಕಟುವಾಗಿ ಖಂಡಿಸಿದ.ಅವರ ಪಿತೃಗಳೂ ವಿಗ್ರಹಾರಾಧಕರಾಗಿ ಆತ್ಮನಾಶಕ್ಕೀಡಾಗಿದ್ದಾರೆ ಎಂದು ಆತ ಹೇಳಿದಾಗ ಖುರೈಷಿಗಳು ಕೆರಳಿ ನಿಂತರು.ಮೆಕ್ಕಾದ ಹೊರವಲಯದಲ್ಲಿ ಮಹಮದನ ಬಂಟ ಸಾದ್ ಬಹಿರಂಗವಾಗಿ ನಮಾಜ್ ಮಾಡುತ್ತಿದ್ದಾಗ ಅದನ್ನು ಕಂಡು ಕೋಪಗೊಂಡ ಖುರೈಷಿಗಳು ಕಲಹಕ್ಕೆ ನಾಂದಿ ಹಾಡಿದರು,ಜಗಳ ರಕ್ತಪಾತಕ್ಕೆ ತಿರುಗಿ ಒಂಟೆಯನ್ನು ಹೊಡೆಯುವ ಮೊನೆಗೋಲಿನಿಂದ ಸಾದ್ ವಿರೋಧಿಯೋಬ್ಬನನ್ನು ಅಲ್ಲಿಯೆ ಹೊಡೆದುಸಾಯಿಸಿದ.ಇತಿಹಾಸಕಾರ ತಮ್ಮಿಮಿಯ ಪ್ರಕಾರ ಇದು 'ಇಸ್ಲಾಮಿಗಾಗಿ ಚಲ್ಲಿದ ಮೊತ್ತ ಮೊದಲನೆಯ ರಕ್ತ'.
ಇದೆ ಸಮಯದಲ್ಲಿ ಪ್ರಾಯಶಃ ಮಹಮದ್ ನೂತನವಾಗಿ ಮತಾಂತರವಾಗಿದ್ದ ಅಕ್ರಂ ಎಂಬಾತನ ಮನೆಯನ್ನ ಆಶ್ರಯಕ್ಕಾಗಿ ಪಡೆದುಕೊಂಡು ಅಲ್ಲಿದ್ದುಕೊಂಡೆ ಮತಪ್ರಚಾರವನ್ನು ಮುಂದುವರೆಸಿದ.ಅದು ಕಾಬಾ ಗುಡಿಯ ಹತ್ತಿರದಲ್ಲೆ ಇದ್ದು ಅಲ್ಲಿಗೆ ಹೋಗಿ ಬರುವ ಯಾತ್ರಿಕರು ಸಾಗುವ ದಾರಿಯಲ್ಲೆ ಇದ್ದುದರಿಂದ ಜನಸಾಂದ್ರತೆ ಸಹಜವಾಗಿ ಹೆಚ್ಚಿದ್ದು ಪ್ರಚಾರಕ್ಕೆ ಹೆಚ್ಚಿನ ಅವಕಾಶಗಳು ಅಲ್ಲಿದ್ದವು.ಮುಂದೆ ಇದೆ 'ಇಸ್ಲಾಮಿನ ಮನೆ' ಎಂಬ ಪಟ್ಟ ಪಡೆಯಿತು.
(ಇನ್ನೂ ಇದೆ....)
ವಲಿ..... (ಭಾಗ-3)
ತನ್ನ ವಯಸ್ಸು ನಲವತ್ತರ ಸಮೀಪ ಮುಟ್ಟುತ್ತಿದ್ದ ಹಾಗೆ ಮಹಮದನ ಒಳಮನಸು ತೀವ್ರವಾಗಿ ಚಡಪಡಿಸಲು ಆರಂಭಿಸಿತ್ತು.ಸ್ವಭಾವತಃ ಅಂತರ್ಮುಖಿಯಾಗಿದ್ದ ಆತ ಈಗ ಹಿಂದಿಗಿಂತಲೂ ಹೆಚ್ಚಾಗಿ ಯೋಚನಾಪರನಾಗಿ ಕಾಲ ಕಳೆಯಹತ್ತಿದ್ದ.ಈ ಪರಿಯ ಆತ್ಮಾವಲೋಕನದ ಸಮಯದಲ್ಲಿ ಆತನಿಗೆ ದೈವತ್ವ ಹಾಗೂ ಧರ್ಮದ ಕುರಿತು ಜಿಜ್ಞಾಸೆ ಒಳಗೊಳಗೆ ಮೂಡಲುಆರಂಭಿಸಿತ್ತು.ಹೀಗೆ ಮುಕ್ಕಾದ ಸುತ್ತಲಿನ ಪರ್ವತದ ಕಣಿವೆಗಳಲ್ಲಿರುವ ಗುಹೆಗಳಲ್ಲಿ ದೀರ್ಘಕಾಲ ಏಕಾಂತದಲ್ಲಿದ್ದು ಚಿಂತಿಸಲು ಆತ ತೊಡಗಿದ.ಹೀರಾ ಪರ್ವತದಲ್ಲಿದ್ದ ಒಂದು ಗುಹೆ ಆತನಿಗೆ ಆಪ್ತವಾದ ಸ್ಥಳವಾಗಿದ್ದಿತು.ಹೀಗೆ ಏಕಾಂತದಲ್ಲಿ ಚಿಂತಿಸುತ್ತಾ ಧ್ಯಾನಾಸಕ್ತನಾಗಿ ಬಹು ಸಮಯವನ್ನ ಅಲ್ಲಿಯೆ ಕಳೆಯಲು ಆರಂಭಿಸಿದ ಕೆಲದಿನಗಳ ನಂತರ ಒಮ್ಮೆ ಅಲ್ಲಿಯೆ ತಿರುಗಾಡುತ್ತಿದ್ದಾಗ ಆಗಸದಿಂದ ಒಬ್ಬ ಯಕ್ಷನ ಗಟ್ಟಿಧ್ವನಿಯೊಂದು ಮಹಮದನಿಗೆ ಕೇಳಿಸಿದಂತಾಗಿ ಆತ ಗಾಬರಿಯಾದ.ತಲೆಯೆತ್ತಿ ನೋಡಿದಾಗ ಅತಿಮಾನುಷ ಯಕ್ಷನ ದರ್ಶನ ಅವನಿಗಾಯಿತು.ಮನೆಗೆ ಹಿಂದಿರುಗಿದ ಆತ ಪತ್ನಿ ಖತೀಜಳಲ್ಲಿ ಈ ವಿಷಯವನ್ನ ಅರಹುತ್ತಾ "ವಿಗ್ರಹಾರಾಧನೆ ಹಾಗು ಭವಿಷ್ಯವಾಣಿ ನುಡಿಯುವುದನ್ನ ನಂಬದಿರುವ ಹಾಗೂ ಅಸಹ್ಯ ಪಡುವ ನಾನೆ ಈಗ ನನಗರಿವಿಲ್ಲದ ಹಾಗೆ ಭವಿಷ್ಯ ನುಡಿವ ಜೋತಿಷಿಯಾಗುತ್ತಿದ್ದಿನೇನೊ!" ಎನ್ನುತ್ತಾ ವಿಹ್ವಲನಾದ. ಆದರೆ ಆತನ ಈ ಮಾತಿಗೆ ಸೊಪ್ಪು ಹಾಕದೆ ಖತೀಜಾ 'ಖಂಡಿತಾ ಇಲ್ಲ! ದೇವರು ನಿನಗೆ ಹಾಗಾಗಲು ಬಿಡನು" ಎಂದು ಸಮಾಧಾನಿಸಿ ಈ ಸಂಗತಿಯನ್ನ ತನ್ನ ಹಿರಿಯ ಸಂಬಂಧಿಕ ವರಾಕನಿಗೆ ತಿಳಿಸುತ್ತಾಳೆ.ಇದನ್ನು ಕೇಳಿ ಹರ್ಷಿತನಾದ ವರಾಕ "ಸಂಶಯವಿಲ್ಲ ಇದೆಲ್ಲ ಒಳ್ಳೆಯದರ ಆರಂಭ! ಆತ ದೇವರ ದಯದಿಂದ ಸತ್ಯವನ್ನಷ್ಟೆ ನುದಿಯುತ್ತಿದ್ದಾನೆ" ಎಂದು ಪ್ರತಿಕ್ರಿಯಿಸಿದ.
ಅಲ್ ವಾಕಿಡಿ,ಇಬ್ನ ಹಿಶಾಮ್ ಹಾಗೂ ಅಲ್ ತಾಬರಿಯಂತಹ ಇತಿಹಾಸಕಾರರು ಮಹಮದ್ ಯಕ್ಷ ಗೇಬ್ರಿಯಲ್'ನಿಂದ ಅಪೌರುಷೇಯವಾದ ದಿವ್ಯಜ್ಞಾನ ಪಡೆದಿದ್ದನ್ನು ದಾಖಲಿಸಿದ್ದಾರೆ.ಇವರನ್ನೆ ಉದಾಹರಿಸುತ್ತ ಇತಿಹಾಸಕಾರ ಸರ್ ವಿಲಿಯಂ ಮೊಯಿರ್ ತಮ್ಮ ಗ್ರಂಥದಲ್ಲಿ ಕೊಡುವ ಸಾರಾಂಶ ಇಷ್ಟು "ಮಹಮದ್ ತನ್ನ ಕುಟುಂಬಸ್ಥರೊಂದಿಗೆ ಒಂದೊಮ್ಮೆ ಹೀರಾಪರ್ವತದ ಗುಹೆಯಲ್ಲಿ ನಿದ್ರಿಸುತ್ತಿದ್ದಾಗ ಅಲ್ಲಿಗೆ ಗೇಬ್ರಿಯಲ್ಲನ ಪ್ರವೇಶವಾಗುತ್ತದೆ.ಅವನ ಕೈಯಲ್ಲಿ ಒಂದು ರೇಷ್ಮೆಯ ತುಂಡಿದ್ದು ಅದರಲ್ಲಿ ಅದೇನೂ ಬರೆದಿರುತ್ತದೆ.ಯಕ್ಷ ಮಹಮದನನ್ನು ಗಟ್ಟಿಯಾಗಿ ಹಿಡಿದುಕೊಂಡು 'ಓದು' ಎಂದು ಆದೇಶಿಸುತ್ತಾನೆ.ಆದರೆ ಅನಕ್ಷರಸ್ಥನಾಗಿದ್ದ ಮಹಮದ್ ಓದಲಾಗದೆ ಯಕ್ಷನ ಬಿಗಿಹಿಡಿತದಿಂದ ವೇದನೆ ಅನುಭವಿಸುತ್ತಾ 'ಏನನ್ನು ಓದಲಿ?' ಎಂದು ಕೇಳಲು...ಗೇಬ್ರಿಯಲ್ ದೇವರ ಹೆಸರಲ್ಲಿ ಓದು ಎಂದಾಗ ಹುಟ್ಟುವುದೆ ಖುರಾನಿನ 96ರಿಂದ 5ರವರೆಗಿನ ಸುರಾಗಳು.ಅವುಗಳನ್ನಾತ ಗಟ್ಟಿಯಾಗಿ ನುಡಿದ ನಂತರ ಯಕ್ಷ ಅಲ್ಲಿಂದ ನಿರ್ಗಮಿಸಿದ ;ಅವಷ್ಟೂ ಸುರಾಗಳೂ ಮಹಮದನ ಹೃದಯದಲ್ಲಿ ಅಚ್ಚು ಹಾಕಿದಂತೆ ಅನುಭವವಾಯಿತು"
ಹೀಗೆ ಕುರಾನಿನ 96ನೆ ಸುರಾದಲ್ಲಿದ್ದ 15 ಪದ್ಯಗಳು ಮಹಮದನಿಗೆ ಮೊದಲು ವ್ಯಕ್ತವಾದದ್ದು ಅಪೌರುಷೇಯವಾಣಿಯೊಂದರಿಂದ.ಹೀಗೆ ಕೆಲತಿಂಗಳುಗಳು ಕಳೆದ ನಂತರ ಯಕ್ಷ ಗೇಬ್ರಿಯಲ್ಲನ ಪುನರಾಗಮನವಾಯಿತು.ಈ ಹಂತದಲ್ಲಿ ಆದ ಮಾನಸಿಕ ತಳಮಳ ಹಾಗು ಆಂತರಿಕ ಹತಾಶೆಯಿಂದ ಮಹಮದ್ ಹತಾಶನಾಗಿಹೋಗಿ ಆತ್ಮಹತ್ಯೆಗೂ ಯೋಚಿಸಿದ್ದ ದಿನಗಳವು! ಆದರೆ ಇದ್ದಕ್ಕಿದಂತೆ ಒಂದು ದಿನ ಆಗಸದಲ್ಲಿ ಸಿಂಹಾಸನದಲ್ಲಿ ಕೂತಿದ್ದ ಗೇಬ್ರಿಯಲ್ಲನ ದರ್ಶನ ಅವನಿಗಾಯಿತು.ಯಕ್ಷ "ಓ ಮಹಮದ್! ನೀನೀಗ ದೇವರ ಪ್ರವಾದಿ ಹಾಗೂ ನಾನು ಯಕ್ಷನಾದ ಗೇಬ್ರಿಯಲ್...ಇದು ಸತ್ಯ!" ಎಂದು ಸಾರಿದ್ದನ್ನು ಮಹಮದ್ ಆಲಿಸಬೇಕಾಯಿತು.ಅವನೊಳಗೆ ಅಡಗಿದ್ದ ಗೊಂದಲಗಳನ್ನೆಲ್ಲಾ ಗೇಬ್ರಿಯಲ್ ಒಂದೊಂದಾಗಿ ಪರಿಹರಿಸಿ ಅವನನ್ನು ಮಾನಸಿಕವಾಗಿ ತಣಿಸಿದ.ಧೃಡಗೊಂಡ ಮನಸ್ಸಿನಿಂದ ಮುಂದಿನ ದಿನಗಳಲ್ಲಿ ಮಹಮದ್ ಮರಳಿ ಮರಳಿ ದೈವವಾಣಿಯ ಸಾರುವಿಕೆಯನ್ನ ಆರಂಭಿಸಿದ್ದು ಹೀಗೆ.ಇದೆ ಮುಂದೆ 'ಖುರಾನ್' ಎಂದು ಪ್ರಸಿದ್ಧವಾದ ಧರ್ಮಗ್ರಂಥವಾಯಿತು.
'ತನಗೆ ದೈವವಾಣಿಯ ಸಾಕ್ಷಾತ್ಕಾರವಾಗಿದೆ,ತಾನಿನ್ನು ಅಲ್ಲಾನ ಪ್ರವಾದಿ' ಎಂದು ಆರಂಭಿಸಿದ ಮಹಮದನ ಮತಪ್ರಚಾರಕ್ಕೆ ಮೊದಲು ಸಮ್ಮತಿಸಿ ಆತನ ಶಿಷ್ಯೆಯಾದವಳು ಸ್ವತಃ ಆತನ ಮಡದಿ ಖತೀಜಾ.ಆಕೆ ಗಂಡನನ್ನು ಪ್ರವಾದಿ ಎಂದು ಒಪ್ಪಿಕೊಂಡ ಮೇಲೆ ನಿಧಾನವಾಗಿ ಸಂಬಂಧಿಕರು,ಸ್ನೇಹಿತರು ಕುಟುಂಬದ ಆತ್ಮೀಯರು ಹೀಗೆ ಒಬ್ಬೊಬ್ಬರಾಗಿ ಆಕೆಯನ್ನು ಹಿಂಬಾಲಿಸಲಾರಂಭಿಸಿದರು.ಕುಟುಂಬದ ಸದಸ್ಯರಲ್ಲಿ ಪ್ರಮುಖವಾಗಿ ಮಹಮದನ ಸಾಕು ಮಗ ಜೈದ್,ದೊಡ್ಡಪ್ಪನ ಮಗ ಆಲಿ,ಪತ್ನಿ ಖತೀಜಾಳ ಬಂಧು ವರಾಕಾ,ಆಪ್ತ ಸ್ನೇಹಿತ ಅಬು ಬಕರ್ ಪ್ರಮುಖರು.ಅಬು ಬಕರ್ ಮಹಮದನಿಗಿಂತ ಕೇವಲ ಎರಡುವರ್ಷಕ್ಕೆ ಕಿರಿಯನಾಗಿದ್ದು ಆತನ ವಿಧೇಯ ಚುರುಕು ಬುದ್ದಿಯ ಆಪ್ತಮಿತ್ರನಾಗಿದ್ದ.ಪ್ರವಾದಿಯೊಂದಿಗೆ ಸಲುಗೆಯ ನಿಕಟ ಬಾಂಧವ್ಯ ಹೊಂದಿದ್ದ ಆತನನ್ನು ಮುಸ್ಲಿಂ ಪ್ರಪಂಚ 'ಅಸ್ ಸಿದ್ಧಿಕಿ' ಎಂದೆ ಗುರುತಿಸುತ್ತದೆ,ಅರಬ್ಬಿಯಲ್ಲಿ ಹಾಗೆಂದರೆ ಸತ್ಯವಂತ ಎಂದರ್ಥ.ವಾಸ್ತವವಾಗಿ ಅವನ ಅಸಲಿ ಹೆಸರು 'ಅಬ್ದುಲ್ಲಾ ಇಬ್ನ ಒತ್ಹಾಮನ್ ಅಬು ಕುಹಾಫಾ' ಎಂದಾಗಿದ್ದರೂ ಒಂಟೆಗಳ ಮೇಲೆ ಅವನಿಗಿದ್ದ ವಿಪರೀತ ಮೋಹ ಹಾಗೂ ಕಾಳಜಿಯ ಕಾರಣದಿಂದ ಆತನಿಗೆ ಅಬು ಬಕರ್ ಎಂಬ ಅಡ್ಡ ಹೆಸರು ಇಡಲಾಗಿತ್ತು ಅನ್ನುತ್ತಾನೆ ಇತಿಹಾಸಗಾರ ಮ್ಯೂರ್.ವ್ಯವಹಾರಸ್ಥನಾಗಿ ಅಪಾರ ಹಣಗಳಿಸಿದ್ದ ಅಬು ಬಕರ್ ತನ್ನ ಹಿತಮಿತ ಹಾಗೂ ಸೌಜನ್ಯಯುತ ಸಂಭಾಷಣೆಗಳಿಂದ ಜನಮನ ಗೆದ್ದಿದ್ದ.ತನ್ನ ನ್ಯಾಯಯುತ ನಡುವಳಿಕೆಗಳಿಂದ ತನ್ನ ಖುರೈಷಿ ಬುಡಕಟ್ಟಿನ ಮುಖಂಡರ ಸ್ನೇಹ ಗೌರವ ಸಂಪಾದಿಸಿದ್ದ.ಒಬ್ಬ ವೀರ ಪೂಜಕನಾಗಿದ್ದ ಆತ ತನ್ನ ಕೊನೆಯ ಉಸಿರಿರುವವರೆಗೂ ತಾನು ನಂಬಿದ ನಾಯಕನನ್ನು ಅತ್ಯಂತ ವಿಧೇಯನಾಗಿ ಆರಾಧಿಸಿದ.ಇಂತಹ ಅಬು ಬಕರ್'ನ ಶ್ರದ್ಧಾಪೂರ್ಣ ನಂಬಿಕೆಗೆ ಪಾತ್ರನಾದದ್ದು ಮತಪ್ರಚಾರದ ದೃಷ್ಟಿಯಿಂದ ಮಹಮದ್ ಸಾಧಿಸಿದ ಮೊತ್ತಮೊದಲ ವಿಜಯವಾಗಿತ್ತು.ಅಬು ಬಕರ್'ನ ಪ್ರಭಾವದಿಂದಲೆ ಮುಂದೆ ಐವರು ಪ್ರಮುಖ ಖುರೈಷಿ ಪ್ರಮುಖರು ನೂತನ ಧರ್ಮಾನುಯಾಯಿಗಳಾಗಳು ಸಾಧ್ಯವಾಯಿತು.ಅವರೆಂದರೆ ತನ್ನ ಹದಿನಾರನೆ ವಯಸ್ಸಿನಲ್ಲಿಯೆ ಹೊಸಧರ್ಮಕ್ಕೆ ಸೇರಿದ ಸಾದ್ ಎಂಬ ಯುವಕ,ಅಲ್ ಗುಬೈರ್ ಎಂಬ ಖತೀಜಾ ಹಾಗೂ ಮಹಮದನ ನಿಕಟ ಸಂಬಂಧಿ,ಮುಂದೆ ಮಹಮದನ ಮಗಳು ರೋಕೈಯಾಳ ಎರಡನೆ ಪತಿಯಾದ 'ಒತ್ಹಮನ್' ಎಂಬ ಯುವಕ ( ಅದಾಗಲೆ ಒತ್ವಾನನ್ನು ವಿವಾಹವಾಗಿದ್ದ ರೋಕೈಯಾ ಮುಂದೆ ಆತನಿಂದ ವಿಚ್ಚೇದಿತೆಯಾಗಿ ಈ ಒತ್ಹಮನ್'ನನ್ನು ಮರುವಿವಾಹವಾದಳು).ತಲ್ಹಾ ಎಂಬ ಅಬು ಬಕರನ ಸಂಬಂಧಿ ಹಾಗೂ ಮಹಾಮದನಿಗಿಂತ ವಯಸ್ಸಿನಲ್ಲಿ ಹತ್ತುವರ್ಷ ಕಿರಿಯನಾಗಿದ್ದ ಅಬ್ದುಲ್ ರೆಹಮಾನ್ ಎಂಬ ಯುವಕ.
ಗುಲಾಮಗಿರಿಯಿಂದ ವಿಮೋಚಿತರಾಗುವ ಆಕರ್ಷಣೆಯಿಂದ ಹಲವಾರು ಗುಲಾಮರು ಮತಾಂತರಗೊಂಡರು.ಆ ಪೈಕಿ ಅಬಿಸೀನಿಯಾ ದೇಶದ ಗುಲಾಮ ಬಿಲಾಲ್ ಪ್ರಮುಖನಾದವ,ಅಬು ಬಾಕರ್ ಆತನನ್ನು ಒತ್ತೆಹಣ ನೀಡಿ ಗುಲಾಮಗಿರಿಯಿಂದ ಬಿಡಿಸಿದ ಮೇಲೆ ಆತನನ್ನು ಸಂತೋಷದಿಂದಲೆ ಮಹಮದ್ ತನ್ನ ಧರ್ಮಕ್ಕೆ ಬರಮಾಡಿಕೊಂಡ.ಇದೆ ಬಿಲಾಲ್ ಮುಂದೆ ಇಸ್ಲಾಮಿಕ್ ಪ್ರಪಂಚದ ಮೊತ್ತಮೊದಲ 'ಮುಯಾಜಿನ್' ಎಂದು ಕರೆಸಿಕೊಂಡ.ಮುಯಾಜಿನ್ ಅಂದರೆ ಅರಬ್ಬಿಯಲ್ಲಿ 'ಪ್ರಾರ್ಥನೆಗೆ ಕರೆನೀಡುವ ವ್ಯಕ್ತಿ' ಎಂದು ಅರ್ಥ ಬರುತ್ತದೆ.ಅಬ್ದುಲ್ಲಾ ಇಬ್ನ ಮಸೂದ್ ಎಂಬ ಇನ್ನೊಬ್ಬ ಮತಾಂತರಿತ ಗುಲಾಮ ಮುಂದೆ ಮಹಮದನ ಆಪ್ತಸೇವಕನಾಗಿ ಪ್ರಸಿದ್ಧಿಗಳಿಸಿದ.ಕಾಬ್ದಾಲ್ ಎಂಬ ಇನ್ನೊಬ್ಬ ಗುಲಾಮನನ್ನೂ ಈ ಪಟ್ಟಿಯಲ್ಲಿ ಹೆಸರಿಸಬಹುದು.ಈ ಬಹುತೇಕ ಮತಾಂತರಿತ ಗುಲಾಮರು ಮೂಲದಲ್ಲಿ ಒಂದೋ ಯಹೂದಿ ಅಥವಾ ಸಿರಿಯನ್ ಕ್ರೈಸ್ತರಾಗಿದ್ದು ತಮ್ಮ ಕೆಟ್ಟ ನಸೀಬಿನಿಂದ ಪಾರಾಗಿ ಗುಲಾಮಗಿರಿಯಿಂದ ಮುಕ್ತರಾಗಲು ಮತಾಂತರವಾದದ್ದು ಸಹಜ ಎನ್ನುತ್ತಾನೆ ಇತಿಹಾಸಕಾರ ಅಲ ಹಾಜ್ ಕಾಸಿಂ ಅಲಿ ಜೈರಾಜಬಿ.
ಹೀಗೆ ಸ್ಥಾಪಿತವಾಗಿದ್ದ ಮಹಮದನ ನೂತನ ಧರ್ಮ ಸಾಮಾಜಿಕ ಭೀತಿಯಿಂದ ಆರಂಭದಲ್ಲಿ ಒಂದು 'ಗುಪ್ತ ಸಂಘ'ವಾಗಿದ್ದಿತು.ಅತ್ಯಂತ ಗೌಪ್ಯವಾಗಿ ಮತಪ್ರಚಾರದ ಕಾರ್ಯಕೈಗೊಳ್ಳಲಾಗುತ್ತಿತ್ತು.ಕ್ರಮೇಣ ಇಸ್ಲಾಂ ಬಲಗೊಂಡಾದ ಮೇಲೆ ಗುಪ್ತ ಪ್ರಚಾರದ ನಿಯಮಗಳನ್ನೆಲ್ಲಾ ಬದಿಗೊತ್ತಿ ಬಹಿರಂಗ ಪ್ರಚಾರಕ್ಕೆ ಹೆಚ್ಚು ಒತ್ತುಕೊಡಲಾಯಿತು ಎನ್ನುತ್ತಾನೆ ಇತಿಹಾಸಕಾರ ಮೋಯಿರ್.ಒಮ್ಮೆ ಯಾರಾದರೂ ಈ ಸಂಘದ ಸದಸ್ಯರಾದರೆ ಅನಂತರ ಕೊನೆಯುಸಿರು ಇರುವವರೆಗೂ ಅವರು ಅಲ್ಲಿನ ಅಜೀವ ಸದಸ್ಯರಾಗಿಯೆ ಬಾಳುವುದು ಕಡ್ಡಾಯವಾಗಿತ್ತು.ಹಾಗೊಂದುವೇಳೆ ಇನ್ಯಾವುದೊ ಹೊಸ ನಂಬಿಕೆಗೆ ಮಾರುಹೋದರೆ ಜೀವ ತೆರಬೇಕಾಗಿದ್ದಿತು.ಇಂದಿಗೂ ಇಸ್ಲಾಮಿನಲ್ಲಿ ಈ ನಿಯಮಪಾಲನೆಯನ್ನು ಕಾಣಬಹುದಾಗಿದೆ.ಒಮ್ಮೆ ಮುಸ್ಲೀಮನಾಗಿ ಮತಾಂತರವಾದವನ ಪುನರ್ ಮತಾಂತರ ದುಸ್ಸಾಧ್ಯ!
( ಇನ್ನೂ ಇದೆ...)
ಅಲ್ ವಾಕಿಡಿ,ಇಬ್ನ ಹಿಶಾಮ್ ಹಾಗೂ ಅಲ್ ತಾಬರಿಯಂತಹ ಇತಿಹಾಸಕಾರರು ಮಹಮದ್ ಯಕ್ಷ ಗೇಬ್ರಿಯಲ್'ನಿಂದ ಅಪೌರುಷೇಯವಾದ ದಿವ್ಯಜ್ಞಾನ ಪಡೆದಿದ್ದನ್ನು ದಾಖಲಿಸಿದ್ದಾರೆ.ಇವರನ್ನೆ ಉದಾಹರಿಸುತ್ತ ಇತಿಹಾಸಕಾರ ಸರ್ ವಿಲಿಯಂ ಮೊಯಿರ್ ತಮ್ಮ ಗ್ರಂಥದಲ್ಲಿ ಕೊಡುವ ಸಾರಾಂಶ ಇಷ್ಟು "ಮಹಮದ್ ತನ್ನ ಕುಟುಂಬಸ್ಥರೊಂದಿಗೆ ಒಂದೊಮ್ಮೆ ಹೀರಾಪರ್ವತದ ಗುಹೆಯಲ್ಲಿ ನಿದ್ರಿಸುತ್ತಿದ್ದಾಗ ಅಲ್ಲಿಗೆ ಗೇಬ್ರಿಯಲ್ಲನ ಪ್ರವೇಶವಾಗುತ್ತದೆ.ಅವನ ಕೈಯಲ್ಲಿ ಒಂದು ರೇಷ್ಮೆಯ ತುಂಡಿದ್ದು ಅದರಲ್ಲಿ ಅದೇನೂ ಬರೆದಿರುತ್ತದೆ.ಯಕ್ಷ ಮಹಮದನನ್ನು ಗಟ್ಟಿಯಾಗಿ ಹಿಡಿದುಕೊಂಡು 'ಓದು' ಎಂದು ಆದೇಶಿಸುತ್ತಾನೆ.ಆದರೆ ಅನಕ್ಷರಸ್ಥನಾಗಿದ್ದ ಮಹಮದ್ ಓದಲಾಗದೆ ಯಕ್ಷನ ಬಿಗಿಹಿಡಿತದಿಂದ ವೇದನೆ ಅನುಭವಿಸುತ್ತಾ 'ಏನನ್ನು ಓದಲಿ?' ಎಂದು ಕೇಳಲು...ಗೇಬ್ರಿಯಲ್ ದೇವರ ಹೆಸರಲ್ಲಿ ಓದು ಎಂದಾಗ ಹುಟ್ಟುವುದೆ ಖುರಾನಿನ 96ರಿಂದ 5ರವರೆಗಿನ ಸುರಾಗಳು.ಅವುಗಳನ್ನಾತ ಗಟ್ಟಿಯಾಗಿ ನುಡಿದ ನಂತರ ಯಕ್ಷ ಅಲ್ಲಿಂದ ನಿರ್ಗಮಿಸಿದ ;ಅವಷ್ಟೂ ಸುರಾಗಳೂ ಮಹಮದನ ಹೃದಯದಲ್ಲಿ ಅಚ್ಚು ಹಾಕಿದಂತೆ ಅನುಭವವಾಯಿತು"
ಹೀಗೆ ಕುರಾನಿನ 96ನೆ ಸುರಾದಲ್ಲಿದ್ದ 15 ಪದ್ಯಗಳು ಮಹಮದನಿಗೆ ಮೊದಲು ವ್ಯಕ್ತವಾದದ್ದು ಅಪೌರುಷೇಯವಾಣಿಯೊಂದರಿಂದ.ಹೀಗೆ ಕೆಲತಿಂಗಳುಗಳು ಕಳೆದ ನಂತರ ಯಕ್ಷ ಗೇಬ್ರಿಯಲ್ಲನ ಪುನರಾಗಮನವಾಯಿತು.ಈ ಹಂತದಲ್ಲಿ ಆದ ಮಾನಸಿಕ ತಳಮಳ ಹಾಗು ಆಂತರಿಕ ಹತಾಶೆಯಿಂದ ಮಹಮದ್ ಹತಾಶನಾಗಿಹೋಗಿ ಆತ್ಮಹತ್ಯೆಗೂ ಯೋಚಿಸಿದ್ದ ದಿನಗಳವು! ಆದರೆ ಇದ್ದಕ್ಕಿದಂತೆ ಒಂದು ದಿನ ಆಗಸದಲ್ಲಿ ಸಿಂಹಾಸನದಲ್ಲಿ ಕೂತಿದ್ದ ಗೇಬ್ರಿಯಲ್ಲನ ದರ್ಶನ ಅವನಿಗಾಯಿತು.ಯಕ್ಷ "ಓ ಮಹಮದ್! ನೀನೀಗ ದೇವರ ಪ್ರವಾದಿ ಹಾಗೂ ನಾನು ಯಕ್ಷನಾದ ಗೇಬ್ರಿಯಲ್...ಇದು ಸತ್ಯ!" ಎಂದು ಸಾರಿದ್ದನ್ನು ಮಹಮದ್ ಆಲಿಸಬೇಕಾಯಿತು.ಅವನೊಳಗೆ ಅಡಗಿದ್ದ ಗೊಂದಲಗಳನ್ನೆಲ್ಲಾ ಗೇಬ್ರಿಯಲ್ ಒಂದೊಂದಾಗಿ ಪರಿಹರಿಸಿ ಅವನನ್ನು ಮಾನಸಿಕವಾಗಿ ತಣಿಸಿದ.ಧೃಡಗೊಂಡ ಮನಸ್ಸಿನಿಂದ ಮುಂದಿನ ದಿನಗಳಲ್ಲಿ ಮಹಮದ್ ಮರಳಿ ಮರಳಿ ದೈವವಾಣಿಯ ಸಾರುವಿಕೆಯನ್ನ ಆರಂಭಿಸಿದ್ದು ಹೀಗೆ.ಇದೆ ಮುಂದೆ 'ಖುರಾನ್' ಎಂದು ಪ್ರಸಿದ್ಧವಾದ ಧರ್ಮಗ್ರಂಥವಾಯಿತು.
'ತನಗೆ ದೈವವಾಣಿಯ ಸಾಕ್ಷಾತ್ಕಾರವಾಗಿದೆ,ತಾನಿನ್ನು ಅಲ್ಲಾನ ಪ್ರವಾದಿ' ಎಂದು ಆರಂಭಿಸಿದ ಮಹಮದನ ಮತಪ್ರಚಾರಕ್ಕೆ ಮೊದಲು ಸಮ್ಮತಿಸಿ ಆತನ ಶಿಷ್ಯೆಯಾದವಳು ಸ್ವತಃ ಆತನ ಮಡದಿ ಖತೀಜಾ.ಆಕೆ ಗಂಡನನ್ನು ಪ್ರವಾದಿ ಎಂದು ಒಪ್ಪಿಕೊಂಡ ಮೇಲೆ ನಿಧಾನವಾಗಿ ಸಂಬಂಧಿಕರು,ಸ್ನೇಹಿತರು ಕುಟುಂಬದ ಆತ್ಮೀಯರು ಹೀಗೆ ಒಬ್ಬೊಬ್ಬರಾಗಿ ಆಕೆಯನ್ನು ಹಿಂಬಾಲಿಸಲಾರಂಭಿಸಿದರು.ಕುಟುಂಬದ ಸದಸ್ಯರಲ್ಲಿ ಪ್ರಮುಖವಾಗಿ ಮಹಮದನ ಸಾಕು ಮಗ ಜೈದ್,ದೊಡ್ಡಪ್ಪನ ಮಗ ಆಲಿ,ಪತ್ನಿ ಖತೀಜಾಳ ಬಂಧು ವರಾಕಾ,ಆಪ್ತ ಸ್ನೇಹಿತ ಅಬು ಬಕರ್ ಪ್ರಮುಖರು.ಅಬು ಬಕರ್ ಮಹಮದನಿಗಿಂತ ಕೇವಲ ಎರಡುವರ್ಷಕ್ಕೆ ಕಿರಿಯನಾಗಿದ್ದು ಆತನ ವಿಧೇಯ ಚುರುಕು ಬುದ್ದಿಯ ಆಪ್ತಮಿತ್ರನಾಗಿದ್ದ.ಪ್ರವಾದಿಯೊಂದಿಗೆ ಸಲುಗೆಯ ನಿಕಟ ಬಾಂಧವ್ಯ ಹೊಂದಿದ್ದ ಆತನನ್ನು ಮುಸ್ಲಿಂ ಪ್ರಪಂಚ 'ಅಸ್ ಸಿದ್ಧಿಕಿ' ಎಂದೆ ಗುರುತಿಸುತ್ತದೆ,ಅರಬ್ಬಿಯಲ್ಲಿ ಹಾಗೆಂದರೆ ಸತ್ಯವಂತ ಎಂದರ್ಥ.ವಾಸ್ತವವಾಗಿ ಅವನ ಅಸಲಿ ಹೆಸರು 'ಅಬ್ದುಲ್ಲಾ ಇಬ್ನ ಒತ್ಹಾಮನ್ ಅಬು ಕುಹಾಫಾ' ಎಂದಾಗಿದ್ದರೂ ಒಂಟೆಗಳ ಮೇಲೆ ಅವನಿಗಿದ್ದ ವಿಪರೀತ ಮೋಹ ಹಾಗೂ ಕಾಳಜಿಯ ಕಾರಣದಿಂದ ಆತನಿಗೆ ಅಬು ಬಕರ್ ಎಂಬ ಅಡ್ಡ ಹೆಸರು ಇಡಲಾಗಿತ್ತು ಅನ್ನುತ್ತಾನೆ ಇತಿಹಾಸಗಾರ ಮ್ಯೂರ್.ವ್ಯವಹಾರಸ್ಥನಾಗಿ ಅಪಾರ ಹಣಗಳಿಸಿದ್ದ ಅಬು ಬಕರ್ ತನ್ನ ಹಿತಮಿತ ಹಾಗೂ ಸೌಜನ್ಯಯುತ ಸಂಭಾಷಣೆಗಳಿಂದ ಜನಮನ ಗೆದ್ದಿದ್ದ.ತನ್ನ ನ್ಯಾಯಯುತ ನಡುವಳಿಕೆಗಳಿಂದ ತನ್ನ ಖುರೈಷಿ ಬುಡಕಟ್ಟಿನ ಮುಖಂಡರ ಸ್ನೇಹ ಗೌರವ ಸಂಪಾದಿಸಿದ್ದ.ಒಬ್ಬ ವೀರ ಪೂಜಕನಾಗಿದ್ದ ಆತ ತನ್ನ ಕೊನೆಯ ಉಸಿರಿರುವವರೆಗೂ ತಾನು ನಂಬಿದ ನಾಯಕನನ್ನು ಅತ್ಯಂತ ವಿಧೇಯನಾಗಿ ಆರಾಧಿಸಿದ.ಇಂತಹ ಅಬು ಬಕರ್'ನ ಶ್ರದ್ಧಾಪೂರ್ಣ ನಂಬಿಕೆಗೆ ಪಾತ್ರನಾದದ್ದು ಮತಪ್ರಚಾರದ ದೃಷ್ಟಿಯಿಂದ ಮಹಮದ್ ಸಾಧಿಸಿದ ಮೊತ್ತಮೊದಲ ವಿಜಯವಾಗಿತ್ತು.ಅಬು ಬಕರ್'ನ ಪ್ರಭಾವದಿಂದಲೆ ಮುಂದೆ ಐವರು ಪ್ರಮುಖ ಖುರೈಷಿ ಪ್ರಮುಖರು ನೂತನ ಧರ್ಮಾನುಯಾಯಿಗಳಾಗಳು ಸಾಧ್ಯವಾಯಿತು.ಅವರೆಂದರೆ ತನ್ನ ಹದಿನಾರನೆ ವಯಸ್ಸಿನಲ್ಲಿಯೆ ಹೊಸಧರ್ಮಕ್ಕೆ ಸೇರಿದ ಸಾದ್ ಎಂಬ ಯುವಕ,ಅಲ್ ಗುಬೈರ್ ಎಂಬ ಖತೀಜಾ ಹಾಗೂ ಮಹಮದನ ನಿಕಟ ಸಂಬಂಧಿ,ಮುಂದೆ ಮಹಮದನ ಮಗಳು ರೋಕೈಯಾಳ ಎರಡನೆ ಪತಿಯಾದ 'ಒತ್ಹಮನ್' ಎಂಬ ಯುವಕ ( ಅದಾಗಲೆ ಒತ್ವಾನನ್ನು ವಿವಾಹವಾಗಿದ್ದ ರೋಕೈಯಾ ಮುಂದೆ ಆತನಿಂದ ವಿಚ್ಚೇದಿತೆಯಾಗಿ ಈ ಒತ್ಹಮನ್'ನನ್ನು ಮರುವಿವಾಹವಾದಳು).ತಲ್ಹಾ ಎಂಬ ಅಬು ಬಕರನ ಸಂಬಂಧಿ ಹಾಗೂ ಮಹಾಮದನಿಗಿಂತ ವಯಸ್ಸಿನಲ್ಲಿ ಹತ್ತುವರ್ಷ ಕಿರಿಯನಾಗಿದ್ದ ಅಬ್ದುಲ್ ರೆಹಮಾನ್ ಎಂಬ ಯುವಕ.
ಗುಲಾಮಗಿರಿಯಿಂದ ವಿಮೋಚಿತರಾಗುವ ಆಕರ್ಷಣೆಯಿಂದ ಹಲವಾರು ಗುಲಾಮರು ಮತಾಂತರಗೊಂಡರು.ಆ ಪೈಕಿ ಅಬಿಸೀನಿಯಾ ದೇಶದ ಗುಲಾಮ ಬಿಲಾಲ್ ಪ್ರಮುಖನಾದವ,ಅಬು ಬಾಕರ್ ಆತನನ್ನು ಒತ್ತೆಹಣ ನೀಡಿ ಗುಲಾಮಗಿರಿಯಿಂದ ಬಿಡಿಸಿದ ಮೇಲೆ ಆತನನ್ನು ಸಂತೋಷದಿಂದಲೆ ಮಹಮದ್ ತನ್ನ ಧರ್ಮಕ್ಕೆ ಬರಮಾಡಿಕೊಂಡ.ಇದೆ ಬಿಲಾಲ್ ಮುಂದೆ ಇಸ್ಲಾಮಿಕ್ ಪ್ರಪಂಚದ ಮೊತ್ತಮೊದಲ 'ಮುಯಾಜಿನ್' ಎಂದು ಕರೆಸಿಕೊಂಡ.ಮುಯಾಜಿನ್ ಅಂದರೆ ಅರಬ್ಬಿಯಲ್ಲಿ 'ಪ್ರಾರ್ಥನೆಗೆ ಕರೆನೀಡುವ ವ್ಯಕ್ತಿ' ಎಂದು ಅರ್ಥ ಬರುತ್ತದೆ.ಅಬ್ದುಲ್ಲಾ ಇಬ್ನ ಮಸೂದ್ ಎಂಬ ಇನ್ನೊಬ್ಬ ಮತಾಂತರಿತ ಗುಲಾಮ ಮುಂದೆ ಮಹಮದನ ಆಪ್ತಸೇವಕನಾಗಿ ಪ್ರಸಿದ್ಧಿಗಳಿಸಿದ.ಕಾಬ್ದಾಲ್ ಎಂಬ ಇನ್ನೊಬ್ಬ ಗುಲಾಮನನ್ನೂ ಈ ಪಟ್ಟಿಯಲ್ಲಿ ಹೆಸರಿಸಬಹುದು.ಈ ಬಹುತೇಕ ಮತಾಂತರಿತ ಗುಲಾಮರು ಮೂಲದಲ್ಲಿ ಒಂದೋ ಯಹೂದಿ ಅಥವಾ ಸಿರಿಯನ್ ಕ್ರೈಸ್ತರಾಗಿದ್ದು ತಮ್ಮ ಕೆಟ್ಟ ನಸೀಬಿನಿಂದ ಪಾರಾಗಿ ಗುಲಾಮಗಿರಿಯಿಂದ ಮುಕ್ತರಾಗಲು ಮತಾಂತರವಾದದ್ದು ಸಹಜ ಎನ್ನುತ್ತಾನೆ ಇತಿಹಾಸಕಾರ ಅಲ ಹಾಜ್ ಕಾಸಿಂ ಅಲಿ ಜೈರಾಜಬಿ.
ಹೀಗೆ ಸ್ಥಾಪಿತವಾಗಿದ್ದ ಮಹಮದನ ನೂತನ ಧರ್ಮ ಸಾಮಾಜಿಕ ಭೀತಿಯಿಂದ ಆರಂಭದಲ್ಲಿ ಒಂದು 'ಗುಪ್ತ ಸಂಘ'ವಾಗಿದ್ದಿತು.ಅತ್ಯಂತ ಗೌಪ್ಯವಾಗಿ ಮತಪ್ರಚಾರದ ಕಾರ್ಯಕೈಗೊಳ್ಳಲಾಗುತ್ತಿತ್ತು.ಕ್ರಮೇಣ ಇಸ್ಲಾಂ ಬಲಗೊಂಡಾದ ಮೇಲೆ ಗುಪ್ತ ಪ್ರಚಾರದ ನಿಯಮಗಳನ್ನೆಲ್ಲಾ ಬದಿಗೊತ್ತಿ ಬಹಿರಂಗ ಪ್ರಚಾರಕ್ಕೆ ಹೆಚ್ಚು ಒತ್ತುಕೊಡಲಾಯಿತು ಎನ್ನುತ್ತಾನೆ ಇತಿಹಾಸಕಾರ ಮೋಯಿರ್.ಒಮ್ಮೆ ಯಾರಾದರೂ ಈ ಸಂಘದ ಸದಸ್ಯರಾದರೆ ಅನಂತರ ಕೊನೆಯುಸಿರು ಇರುವವರೆಗೂ ಅವರು ಅಲ್ಲಿನ ಅಜೀವ ಸದಸ್ಯರಾಗಿಯೆ ಬಾಳುವುದು ಕಡ್ಡಾಯವಾಗಿತ್ತು.ಹಾಗೊಂದುವೇಳೆ ಇನ್ಯಾವುದೊ ಹೊಸ ನಂಬಿಕೆಗೆ ಮಾರುಹೋದರೆ ಜೀವ ತೆರಬೇಕಾಗಿದ್ದಿತು.ಇಂದಿಗೂ ಇಸ್ಲಾಮಿನಲ್ಲಿ ಈ ನಿಯಮಪಾಲನೆಯನ್ನು ಕಾಣಬಹುದಾಗಿದೆ.ಒಮ್ಮೆ ಮುಸ್ಲೀಮನಾಗಿ ಮತಾಂತರವಾದವನ ಪುನರ್ ಮತಾಂತರ ದುಸ್ಸಾಧ್ಯ!
( ಇನ್ನೂ ಇದೆ...)
Subscribe to:
Posts (Atom)